Advertisement
ಸುದ್ದಿಗಳು

ವಿದ್ಯಾರ್ಥಿಗಳಲ್ಲಿ ಸ್ವಯಂ ಶಿಸ್ತು – ದೇರಣ್ಣ ಗೌಡ ಕರೆ

Share

ಸುಳ್ಯ: ಪ್ರತಿಯೊಬ್ಬ ವಿಧ್ಯಾರ್ಥಿಯು ಕಲಿಕೆಯ ಜೊತೆಗೆ ಸ್ವಯಂ ಶಿಸ್ತನ್ನು ಬೆಳೆಸಿಕೊಳ್ಳಬೇಕು. ಇದಕ್ಕಾಗಿ ಕೆಟ್ಟ ನಡವಳಿಕೆಯನ್ನು ಬಿಟ್ಟುಬಿಡಬೇಕು. ದೇಶಕ್ಕಾಗಿ ಅದೆಷ್ಟೊ ಸೈನಿಕರು ಪ್ರಾಣತ್ಯಾಗ ಮಾಡುತ್ತಿರುವಾಗ ನಮ್ಮಿಂದಾದ ದೇಶಸೇವೆಯನ್ನು ನಾವು ಮಾಡಲೇಬೇಕು. ಸ್ಟೂಡೆಂಟ್ ಪೋಲಿಸ್ ಕ್ಯಾಡೆಟ್ ನ ಸದಸ್ಯನಾಗುವ ಮೂಲಕ ಶಿಸ್ತು ಪರಿಶ್ರಮ ನಿಸ್ವಾರ್ಥ ಸೇವೆ ಹಾಗೂ ಸ್ವಯಂ ಆರೋಗ್ಯದ ಪರಿಕಲ್ಪನೆಯನ್ನು ಮೈಗೂಡಿಸಿಕೊಳ್ಳಬೇಕೆಂದು ನಿವೃತ್ತ ಸೇನಾ ಅಧಿಕಾರಿ ಅಡ್ಡಂತಡ್ಕ ದೇರಣ್ಣ ಗೌಡ ಹೇಳಿದ್ದಾರೆ.

ಸರಕಾರಿ ಪ್ರೌಢಶಾಲೆ ಎಲಿಮಲೆ ಇಲ್ಲಿ ಸ್ಟೂಡೆಂಟ್ ಪೋಲಿಸ್ ಕ್ಯಾಡೆಟ್ ನ್ನು ಉದ್ಗಾಟಿಸಿ ಅವರು ಮಾತನಾಡಿದರು. ಮುಖ್ಯ ಅತಿಥಿಗಳಾದ ಸುಬ್ರಹ್ಮಣ್ಯ ಪೋಲಿಸ್ ಠಾಣೆಯ ಪ್ರಭಾರ ಸಬ್ ಇನ್ಸ್ಪೆಕ್ಟರ್ ಚಂದಪ್ಪ ಮಾತನಾಡಿ ಶಿಕ್ಷಣ ಮತ್ತು ರಕ್ಷಣೆ ವಿಧ್ಯಾರ್ಥಿಗಳ ಪ್ರಮುಖ ಆದ್ಯತೆ ಯಾಗಬೇಕು. ಆ ಮೂಲಕ ವಿದ್ಯಾರ್ಥಿಗಳು ಜೀವನ ಪಾಠ ಕಲಿಯಬೇಕು. ಆಧುನಿಕ ಜಗತ್ತಿನಲ್ಲಿ ಮೊಬೈಲ್ ಬಳಕೆ ಅವಶ್ಯಕತೆಗೆ ತಕ್ಕಂತ ಇರಲಿ ಹಾಗು ಸ್ಟೂಡೆಂಟ್ ಪೋಲಿಸ್ ಕ್ಯಾಡೆಟ್ ಸೇರುವ ಮೂಲಕ ಹಲವಾರು ಸಾಧನೆಯನ್ನು ಮಾಡುವ ಅವಕಾಶ ಇದೆ ಎಂದು ತಿಳಿಸಿದರು.

ಕೆ ಯಸ್ ಆರ್ ಪಿ ವಿಭಾಗದ ಅನಿಲ್ ಕುಮಾರ್ ಇವರು ಘಟಕದ ಮಾಹಿತಿ ನೀಡುತ್ತಾ ದಕ ಜಿಲ್ಲೆಯ ಹತ್ತು ಶಾಲೆಗಳಲ್ಲಿ ಮಾತ್ರ ಈ ಘಟಕ ಪ್ರಾರಂಭವಾಗುತ್ತಿದ್ದು ಪ್ರತಿ ತಿಂಗಳು ಶನಿವಾರದಂದು 80 ನಿಮಿಷಗಳ ಅವಧಿಯಲ್ಲಿ ಪೇರೆಡ್ ಗಳು, ಅಪರಾದ ತಡೆಗಟ್ಟುವಿಕೆ, ಸಮಾಜದಲ್ಲಿ ಪೋಲಿಸರ ಪಾತ್ರ, ರಸ್ತೆ ಸುರಕ್ಷತೆ ಅರಿವು, ಸಾಮಾಜಿಕ ಪಿಡುಗುಗಳು, ಮಕ್ಕಳ ಮತ್ತು ಮಹಿಳೆಯರ ರಕ್ಷಣೆ, ಭ್ರಷ್ಟಾಚಾರ ವಿರುದ್ದ ಹೋರಾಟ, ಪ್ರಾಕೃತಿಕ ವಿಕೋಪ ನಿರ್ವಹಣೆ ಮತ್ತು ವಿವಿದ ಕ್ಷೇತ್ರಭೇಟಿ ಕಾರ್ಯಕ್ರಮಗಳನ್ನು ನಡೆಸಲಿದ್ದು ಇದರ ಪ್ರಯೋಜನ ಗಳನ್ನು ಪಡೆಯಲು ತಿಳಿಸಿದರು.

ಸಭಾಧ್ಯಕ್ಷತೆಯನ್ನು ಶಾಲಾಭಿವೃದ್ದಿ ಸಮಿತಿ ಕಾರ್ಯಾಧ್ಯಕ್ಷ ಪುರುಷೋತ್ತಮ ಕಜೆ ವಹಿಸಿದ್ದರು. ಮುಖ್ಯ ಅತಿಥಿಯಾಗಿ ಗ್ರಾಮ ಪಂಚಾಯತ್ ಸದಸ್ಯ ಶೈಲೇಶ್ ಅಂಬೆಕಲ್ ಹಾಗು ಸಮಿತಿ ಸದಸ್ಯರಾದ ರುಖಿಯಾ, ಕಮಲ ಭಾಗವಹಿಸಿದ್ದರು. ಮುಖ್ಯ ಶಿಕ್ಷಕ ಚಂದ್ರಶೇಖರ್ ಪೇರಾಲ್ ಇವರು ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ನೋಡಲ್ ಅಧಿಕಾರಿ ತಿರುಮಲೇಶ್ವರಿ ವಂದಿಸಿದರು. ಶಿಕ್ಷಕ ಗೋಪಿನಾಥ್ ಮೆತ್ತಡ್ಕ ಕಾರ್ಯಕ್ರಮ ನಿರೂಪಿಸಿದರು. ಶಿಕ್ಷಕರಾದ ವಸಂತ್ ನಾಯಕ್, ರಾಜೇಶ್ವರಿ, ಮುರಳೀಧರ,ಸುಂದರ, ಶಶಿಕಲಾ ಹಾಗು ವಿಜೇತ್ ಇವರು ಸಹಕರಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ರಸ್ತೆ ಬದಿ ಕಸ ಎಸೆದ್ರೆ ಜಾಗ್ರತೆ..! ದಂಡ ಕೊಡ್ಲಿಲ್ಲ ಅಂದ್ರೆ FIR ಫಿಕ್ಸ್..!

ರಸ್ತೆ ಬದಿ ಕಸ ಎಸೆಯುವವರಿಗೆ ದಂಡ ವಿಧಿಸಲಾಗುತ್ತದೆ, ಪಾವತಿಸದಿದ್ದರೆ FIR ದಾಖಲಾಗುತ್ತದೆ. ಗ್ರಾಮ…

3 hours ago

ಹವಾಮಾನ ವರದಿ | 02-04-2026 | ಕರಾವಳಿಯಲ್ಲಿ ಮಳೆ ಅನಿಶ್ಚಿತತೆ, ಒಳನಾಡಿನಲ್ಲಿ ಬಿಸಿಲು

ಕರಾವಳಿಯಲ್ಲಿ ಮಳೆಯ ಸಾಧ್ಯತೆ ಇದ್ದರೂ ಗಾಳಿಯ ಪ್ರಭಾವದಿಂದ ಅದು ಕಡಿಮೆಯಾಗಬಹುದು. ಉಳಿದ ಕರ್ನಾಟಕದಲ್ಲಿ…

21 hours ago

ಮಂಗಳೂರು ಅಡಿಕೆ ಮಾರುಕಟ್ಟೆ | ಸ್ಥಿರತೆಯಿಂದ ಏರಿಕೆಯತ್ತ ಮುಖ ಮಾಡಿದ ಧಾರಣೆ

ಅಡಿಕೆ ಮಾರುಕಟ್ಟೆ ಸ್ಥಿರದಿಂದ ಏರಿಕೆಯತ್ತ ಸಾಗುತ್ತಿದೆ. ಜೂನ್-ಜುಲೈನಲ್ಲಿ ಬೆಲೆ ಹೆಚ್ಚಾಗುವ ಸಾಧ್ಯತೆ ಇದೆ.

1 day ago

ಜನಗಣತಿ 2026 – ಏಪ್ರಿಲ್ 1ರಿಂದ ಸ್ವಯಂ-ಎಣಿಕೆ ಆರಂಭ – ಸಹಕರಿಸಲು ಜಿಲ್ಲಾಧಿಕಾರಿ ಕರೆ

ಏಪ್ರಿಲ್ 1ರಿಂದ 15ರವರೆಗೆ ಸ್ವಯಂ-ಎಣಿಕೆ ಆರಂಭವಾಗಿದೆ. ಏಪ್ರಿಲ್ 16ರಿಂದ ಮನೆಗಳಿಗೆ ಭೇಟಿ ನೀಡಿ…

1 day ago

ಹವಾಮಾನ ವರದಿ | 01-04-2026 | ಕರಾವಳಿ-ಮಲೆನಾಡಿನಲ್ಲಿ ಗುಡುಗು ಮಳೆ ಮುಂದುವರಿಕೆ – ಏ.10 ರಿಂದ ಮತ್ತೆ ಮಳೆ ಚುರುಕು ಸಾಧ್ಯತೆ!

ಏಪ್ರಿಲ್ 4ರವರೆಗೆ ಮಳೆ ಮುಂದುವರಿಯಲಿದೆ, ಬಳಿಕ ತಾತ್ಕಾಲಿಕ ಕಡಿಮೆ. ಏಪ್ರಿಲ್ 10ರಿಂದ ಮತ್ತೆ…

2 days ago

ಮಳೆಯ ನಡುವೆಯೂ ಉರಿಯುವ ಬಿಸಿಲು..! ಏಪ್ರಿಲ್–ಜೂನ್‌ನಲ್ಲಿ ಹವಾಮಾನ ಸವಾಲು..!

ಏಪ್ರಿಲ್‌ನಲ್ಲಿ ಮಳೆ ಹೆಚ್ಚಾದರೂ ಬಿಸಿಲು ಕಡಿಮೆಯಾಗುವುದಿಲ್ಲ ಎಂದು IMD ಎಚ್ಚರಿಸಿದೆ. ಏಪ್ರಿಲ್–ಜೂನ್ ಅವಧಿಯಲ್ಲಿ…

2 days ago