Advertisement
ಸುದ್ದಿಗಳು

ವಿದ್ಯಾರ್ಥಿಗಳಲ್ಲಿ ಸ್ವಯಂ ಶಿಸ್ತು – ದೇರಣ್ಣ ಗೌಡ ಕರೆ

Share

ಸುಳ್ಯ: ಪ್ರತಿಯೊಬ್ಬ ವಿಧ್ಯಾರ್ಥಿಯು ಕಲಿಕೆಯ ಜೊತೆಗೆ ಸ್ವಯಂ ಶಿಸ್ತನ್ನು ಬೆಳೆಸಿಕೊಳ್ಳಬೇಕು. ಇದಕ್ಕಾಗಿ ಕೆಟ್ಟ ನಡವಳಿಕೆಯನ್ನು ಬಿಟ್ಟುಬಿಡಬೇಕು. ದೇಶಕ್ಕಾಗಿ ಅದೆಷ್ಟೊ ಸೈನಿಕರು ಪ್ರಾಣತ್ಯಾಗ ಮಾಡುತ್ತಿರುವಾಗ ನಮ್ಮಿಂದಾದ ದೇಶಸೇವೆಯನ್ನು ನಾವು ಮಾಡಲೇಬೇಕು. ಸ್ಟೂಡೆಂಟ್ ಪೋಲಿಸ್ ಕ್ಯಾಡೆಟ್ ನ ಸದಸ್ಯನಾಗುವ ಮೂಲಕ ಶಿಸ್ತು ಪರಿಶ್ರಮ ನಿಸ್ವಾರ್ಥ ಸೇವೆ ಹಾಗೂ ಸ್ವಯಂ ಆರೋಗ್ಯದ ಪರಿಕಲ್ಪನೆಯನ್ನು ಮೈಗೂಡಿಸಿಕೊಳ್ಳಬೇಕೆಂದು ನಿವೃತ್ತ ಸೇನಾ ಅಧಿಕಾರಿ ಅಡ್ಡಂತಡ್ಕ ದೇರಣ್ಣ ಗೌಡ ಹೇಳಿದ್ದಾರೆ.

Advertisement

ಸರಕಾರಿ ಪ್ರೌಢಶಾಲೆ ಎಲಿಮಲೆ ಇಲ್ಲಿ ಸ್ಟೂಡೆಂಟ್ ಪೋಲಿಸ್ ಕ್ಯಾಡೆಟ್ ನ್ನು ಉದ್ಗಾಟಿಸಿ ಅವರು ಮಾತನಾಡಿದರು. ಮುಖ್ಯ ಅತಿಥಿಗಳಾದ ಸುಬ್ರಹ್ಮಣ್ಯ ಪೋಲಿಸ್ ಠಾಣೆಯ ಪ್ರಭಾರ ಸಬ್ ಇನ್ಸ್ಪೆಕ್ಟರ್ ಚಂದಪ್ಪ ಮಾತನಾಡಿ ಶಿಕ್ಷಣ ಮತ್ತು ರಕ್ಷಣೆ ವಿಧ್ಯಾರ್ಥಿಗಳ ಪ್ರಮುಖ ಆದ್ಯತೆ ಯಾಗಬೇಕು. ಆ ಮೂಲಕ ವಿದ್ಯಾರ್ಥಿಗಳು ಜೀವನ ಪಾಠ ಕಲಿಯಬೇಕು. ಆಧುನಿಕ ಜಗತ್ತಿನಲ್ಲಿ ಮೊಬೈಲ್ ಬಳಕೆ ಅವಶ್ಯಕತೆಗೆ ತಕ್ಕಂತ ಇರಲಿ ಹಾಗು ಸ್ಟೂಡೆಂಟ್ ಪೋಲಿಸ್ ಕ್ಯಾಡೆಟ್ ಸೇರುವ ಮೂಲಕ ಹಲವಾರು ಸಾಧನೆಯನ್ನು ಮಾಡುವ ಅವಕಾಶ ಇದೆ ಎಂದು ತಿಳಿಸಿದರು.

ಕೆ ಯಸ್ ಆರ್ ಪಿ ವಿಭಾಗದ ಅನಿಲ್ ಕುಮಾರ್ ಇವರು ಘಟಕದ ಮಾಹಿತಿ ನೀಡುತ್ತಾ ದಕ ಜಿಲ್ಲೆಯ ಹತ್ತು ಶಾಲೆಗಳಲ್ಲಿ ಮಾತ್ರ ಈ ಘಟಕ ಪ್ರಾರಂಭವಾಗುತ್ತಿದ್ದು ಪ್ರತಿ ತಿಂಗಳು ಶನಿವಾರದಂದು 80 ನಿಮಿಷಗಳ ಅವಧಿಯಲ್ಲಿ ಪೇರೆಡ್ ಗಳು, ಅಪರಾದ ತಡೆಗಟ್ಟುವಿಕೆ, ಸಮಾಜದಲ್ಲಿ ಪೋಲಿಸರ ಪಾತ್ರ, ರಸ್ತೆ ಸುರಕ್ಷತೆ ಅರಿವು, ಸಾಮಾಜಿಕ ಪಿಡುಗುಗಳು, ಮಕ್ಕಳ ಮತ್ತು ಮಹಿಳೆಯರ ರಕ್ಷಣೆ, ಭ್ರಷ್ಟಾಚಾರ ವಿರುದ್ದ ಹೋರಾಟ, ಪ್ರಾಕೃತಿಕ ವಿಕೋಪ ನಿರ್ವಹಣೆ ಮತ್ತು ವಿವಿದ ಕ್ಷೇತ್ರಭೇಟಿ ಕಾರ್ಯಕ್ರಮಗಳನ್ನು ನಡೆಸಲಿದ್ದು ಇದರ ಪ್ರಯೋಜನ ಗಳನ್ನು ಪಡೆಯಲು ತಿಳಿಸಿದರು.

ಸಭಾಧ್ಯಕ್ಷತೆಯನ್ನು ಶಾಲಾಭಿವೃದ್ದಿ ಸಮಿತಿ ಕಾರ್ಯಾಧ್ಯಕ್ಷ ಪುರುಷೋತ್ತಮ ಕಜೆ ವಹಿಸಿದ್ದರು. ಮುಖ್ಯ ಅತಿಥಿಯಾಗಿ ಗ್ರಾಮ ಪಂಚಾಯತ್ ಸದಸ್ಯ ಶೈಲೇಶ್ ಅಂಬೆಕಲ್ ಹಾಗು ಸಮಿತಿ ಸದಸ್ಯರಾದ ರುಖಿಯಾ, ಕಮಲ ಭಾಗವಹಿಸಿದ್ದರು. ಮುಖ್ಯ ಶಿಕ್ಷಕ ಚಂದ್ರಶೇಖರ್ ಪೇರಾಲ್ ಇವರು ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ನೋಡಲ್ ಅಧಿಕಾರಿ ತಿರುಮಲೇಶ್ವರಿ ವಂದಿಸಿದರು. ಶಿಕ್ಷಕ ಗೋಪಿನಾಥ್ ಮೆತ್ತಡ್ಕ ಕಾರ್ಯಕ್ರಮ ನಿರೂಪಿಸಿದರು. ಶಿಕ್ಷಕರಾದ ವಸಂತ್ ನಾಯಕ್, ರಾಜೇಶ್ವರಿ, ಮುರಳೀಧರ,ಸುಂದರ, ಶಶಿಕಲಾ ಹಾಗು ವಿಜೇತ್ ಇವರು ಸಹಕರಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

SSLC ಪಾಸ್ ಮಾಡಿದವರಿಗೆ ಸುವರ್ಣಾವಕಾಶ..! ಮಂಗಳೂರಿನ ಜಿಟಿಟಿಸಿಯಲ್ಲಿ 100% ಉದ್ಯೋಗಾಧಾರಿತ ಡಿಪ್ಲೊಮಾ

ಎಸ್.ಎಸ್.ಎಲ್.ಸಿ ಪಾಸಾದವರಿಗೆ ಮಂಗಳೂರಿನ ಜಿಟಿಟಿಸಿಯಲ್ಲಿ 100% ಉದ್ಯೋಗಾಧಾರಿತ ಡಿಪ್ಲೊಮಾ ಕೋರ್ಸ್‌ಗಳಿಗೆ ಪ್ರವೇಶ ಆರಂಭವಾಗಿದೆ.…

6 hours ago

13 ಟನ್ ಅಕ್ರಮ ಅಡಿಕೆ ವಶ : ಕರಾವಳಿ ರಕ್ಷಣಾ ಪಡೆಯ ದಾಳಿ

ಸುಂದರ್‌ಬನ್ಸ್‌ನಲ್ಲಿ ಕರಾವಳಿ ರಕ್ಷಣಾ ಪಡೆ 13,320 ಕೆಜಿ ಅಕ್ರಮ ಅಡಿಕೆ ವಶಪಡಿಸಿಕೊಂಡಿದೆ. ‘ಶಿವ…

6 hours ago

ರಾಜ್ಯದಲ್ಲಿ ಬಿಸಿಲು ಬಿಸಿ ತೀವ್ರ : ಮೈಸೂರಿನಲ್ಲಿ ಸನ್ ಸ್ಟ್ರೋಕ್ ವಾರ್ಡ್ ಆರಂಭಿಸಿದ ಆಸ್ಪತ್ರೆ

ತಾಪಮಾನ ಏರಿಕೆಯಿಂದ ಮೈಸೂರಿನ ಕೆ.ಆರ್. ಆಸ್ಪತ್ರೆಯಲ್ಲಿ 30 ಹಾಸಿಗೆಗಳ ಸನ್ ಸ್ಟ್ರೋಕ್ ವಾರ್ಡ್…

22 hours ago

ರೈತರು ಇಂಧನದಾತರಾಗಬೇಕು – ಭೂಮಿ ಉಳಿಸಿ ಸಮ್ಮೇಳನದಲ್ಲಿ ಸಂದೇಶ

ಭೂಮಿ ಉಳಿಸಿ ಸಮ್ಮೇಳನದಲ್ಲಿ ನಿತಿನ್ ಗಡ್ಕರಿ, ರೈತರು ಇಂಧನ ಉತ್ಪಾದನೆಗೆ ಕೈಜೋಡಿಸಿದರೆ ಮಾಲಿನ್ಯ…

22 hours ago

ರೈತರ ಆದಾಯ ಹೆಚ್ಚಿಸಲು ಸಮಗ್ರ ಕೃಷಿ ಮಾದರಿ ಅಗತ್ಯ

ರೈತರಿಗೆ ಸರಳ ಹಣಕಾಸು ವ್ಯವಸ್ಥೆ ಅಗತ್ಯವಿದ್ದು, ಸಮಗ್ರ ಕೃಷಿ ಮಾದರಿಯಿಂದ ಆದಾಯ ಹೆಚ್ಚಿಸಬಹುದು…

23 hours ago

ಹವಾಮಾನ ವರದಿ | 23-04-2026 | ಏಪ್ರಿಲ್ 25 ರಿಂದ ಮಳೆಯ ಸಾಧ್ಯತೆ ಹೆಚ್ಚು

ರಾಜ್ಯದಲ್ಲಿ ಬಿಸಿಲು ಮುಂದುವರಿದರೂ, ಏಪ್ರಿಲ್ 25ರಿಂದ ಮಳೆಯ ಚಟುವಟಿಕೆ ಹೆಚ್ಚಾಗುವ ಸೂಚನೆ ಇದೆ.…

23 hours ago