Advertisement
ಸುದ್ದಿಗಳು

ವಿದ್ಯಾರ್ಥಿಗಳಲ್ಲಿ ಸ್ವಯಂ ಶಿಸ್ತು – ದೇರಣ್ಣ ಗೌಡ ಕರೆ

Share

ಸುಳ್ಯ: ಪ್ರತಿಯೊಬ್ಬ ವಿಧ್ಯಾರ್ಥಿಯು ಕಲಿಕೆಯ ಜೊತೆಗೆ ಸ್ವಯಂ ಶಿಸ್ತನ್ನು ಬೆಳೆಸಿಕೊಳ್ಳಬೇಕು. ಇದಕ್ಕಾಗಿ ಕೆಟ್ಟ ನಡವಳಿಕೆಯನ್ನು ಬಿಟ್ಟುಬಿಡಬೇಕು. ದೇಶಕ್ಕಾಗಿ ಅದೆಷ್ಟೊ ಸೈನಿಕರು ಪ್ರಾಣತ್ಯಾಗ ಮಾಡುತ್ತಿರುವಾಗ ನಮ್ಮಿಂದಾದ ದೇಶಸೇವೆಯನ್ನು ನಾವು ಮಾಡಲೇಬೇಕು. ಸ್ಟೂಡೆಂಟ್ ಪೋಲಿಸ್ ಕ್ಯಾಡೆಟ್ ನ ಸದಸ್ಯನಾಗುವ ಮೂಲಕ ಶಿಸ್ತು ಪರಿಶ್ರಮ ನಿಸ್ವಾರ್ಥ ಸೇವೆ ಹಾಗೂ ಸ್ವಯಂ ಆರೋಗ್ಯದ ಪರಿಕಲ್ಪನೆಯನ್ನು ಮೈಗೂಡಿಸಿಕೊಳ್ಳಬೇಕೆಂದು ನಿವೃತ್ತ ಸೇನಾ ಅಧಿಕಾರಿ ಅಡ್ಡಂತಡ್ಕ ದೇರಣ್ಣ ಗೌಡ ಹೇಳಿದ್ದಾರೆ.

ಸರಕಾರಿ ಪ್ರೌಢಶಾಲೆ ಎಲಿಮಲೆ ಇಲ್ಲಿ ಸ್ಟೂಡೆಂಟ್ ಪೋಲಿಸ್ ಕ್ಯಾಡೆಟ್ ನ್ನು ಉದ್ಗಾಟಿಸಿ ಅವರು ಮಾತನಾಡಿದರು. ಮುಖ್ಯ ಅತಿಥಿಗಳಾದ ಸುಬ್ರಹ್ಮಣ್ಯ ಪೋಲಿಸ್ ಠಾಣೆಯ ಪ್ರಭಾರ ಸಬ್ ಇನ್ಸ್ಪೆಕ್ಟರ್ ಚಂದಪ್ಪ ಮಾತನಾಡಿ ಶಿಕ್ಷಣ ಮತ್ತು ರಕ್ಷಣೆ ವಿಧ್ಯಾರ್ಥಿಗಳ ಪ್ರಮುಖ ಆದ್ಯತೆ ಯಾಗಬೇಕು. ಆ ಮೂಲಕ ವಿದ್ಯಾರ್ಥಿಗಳು ಜೀವನ ಪಾಠ ಕಲಿಯಬೇಕು. ಆಧುನಿಕ ಜಗತ್ತಿನಲ್ಲಿ ಮೊಬೈಲ್ ಬಳಕೆ ಅವಶ್ಯಕತೆಗೆ ತಕ್ಕಂತ ಇರಲಿ ಹಾಗು ಸ್ಟೂಡೆಂಟ್ ಪೋಲಿಸ್ ಕ್ಯಾಡೆಟ್ ಸೇರುವ ಮೂಲಕ ಹಲವಾರು ಸಾಧನೆಯನ್ನು ಮಾಡುವ ಅವಕಾಶ ಇದೆ ಎಂದು ತಿಳಿಸಿದರು.

ಕೆ ಯಸ್ ಆರ್ ಪಿ ವಿಭಾಗದ ಅನಿಲ್ ಕುಮಾರ್ ಇವರು ಘಟಕದ ಮಾಹಿತಿ ನೀಡುತ್ತಾ ದಕ ಜಿಲ್ಲೆಯ ಹತ್ತು ಶಾಲೆಗಳಲ್ಲಿ ಮಾತ್ರ ಈ ಘಟಕ ಪ್ರಾರಂಭವಾಗುತ್ತಿದ್ದು ಪ್ರತಿ ತಿಂಗಳು ಶನಿವಾರದಂದು 80 ನಿಮಿಷಗಳ ಅವಧಿಯಲ್ಲಿ ಪೇರೆಡ್ ಗಳು, ಅಪರಾದ ತಡೆಗಟ್ಟುವಿಕೆ, ಸಮಾಜದಲ್ಲಿ ಪೋಲಿಸರ ಪಾತ್ರ, ರಸ್ತೆ ಸುರಕ್ಷತೆ ಅರಿವು, ಸಾಮಾಜಿಕ ಪಿಡುಗುಗಳು, ಮಕ್ಕಳ ಮತ್ತು ಮಹಿಳೆಯರ ರಕ್ಷಣೆ, ಭ್ರಷ್ಟಾಚಾರ ವಿರುದ್ದ ಹೋರಾಟ, ಪ್ರಾಕೃತಿಕ ವಿಕೋಪ ನಿರ್ವಹಣೆ ಮತ್ತು ವಿವಿದ ಕ್ಷೇತ್ರಭೇಟಿ ಕಾರ್ಯಕ್ರಮಗಳನ್ನು ನಡೆಸಲಿದ್ದು ಇದರ ಪ್ರಯೋಜನ ಗಳನ್ನು ಪಡೆಯಲು ತಿಳಿಸಿದರು.

ಸಭಾಧ್ಯಕ್ಷತೆಯನ್ನು ಶಾಲಾಭಿವೃದ್ದಿ ಸಮಿತಿ ಕಾರ್ಯಾಧ್ಯಕ್ಷ ಪುರುಷೋತ್ತಮ ಕಜೆ ವಹಿಸಿದ್ದರು. ಮುಖ್ಯ ಅತಿಥಿಯಾಗಿ ಗ್ರಾಮ ಪಂಚಾಯತ್ ಸದಸ್ಯ ಶೈಲೇಶ್ ಅಂಬೆಕಲ್ ಹಾಗು ಸಮಿತಿ ಸದಸ್ಯರಾದ ರುಖಿಯಾ, ಕಮಲ ಭಾಗವಹಿಸಿದ್ದರು. ಮುಖ್ಯ ಶಿಕ್ಷಕ ಚಂದ್ರಶೇಖರ್ ಪೇರಾಲ್ ಇವರು ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ನೋಡಲ್ ಅಧಿಕಾರಿ ತಿರುಮಲೇಶ್ವರಿ ವಂದಿಸಿದರು. ಶಿಕ್ಷಕ ಗೋಪಿನಾಥ್ ಮೆತ್ತಡ್ಕ ಕಾರ್ಯಕ್ರಮ ನಿರೂಪಿಸಿದರು. ಶಿಕ್ಷಕರಾದ ವಸಂತ್ ನಾಯಕ್, ರಾಜೇಶ್ವರಿ, ಮುರಳೀಧರ,ಸುಂದರ, ಶಶಿಕಲಾ ಹಾಗು ವಿಜೇತ್ ಇವರು ಸಹಕರಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 03-06-2026 | ಕರಾವಳಿಯಲ್ಲಿ ಮುಂಗಾರು ಚುರುಕು – ಜೂನ್ 8 ರಿಂದ ರಾಜ್ಯಾದ್ಯಂತ ಮಳೆಯ ಅಬ್ಬರ ಸಾಧ್ಯತೆ

ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆ ಚುರುಕುಗೊಳ್ಳುತ್ತಿದ್ದು, ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಆರಂಭವಾಗಿದೆ. ಜೂನ್…

1 day ago

ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶ ಸಾಧ್ಯತೆ – ಕರಾವಳಿ, ಉತ್ತರ ಒಳನಾಡಿನಲ್ಲಿ ಭಾರೀ ಮಳೆ ಎಚ್ಚರಿಕೆ

ಗುರುವಾರದ ವೇಳೆಗೆ ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ…

1 day ago

ಮಿಜೋರಾಂನಲ್ಲಿ ಅಡಿಕೆ ಕಳ್ಳಸಾಗಣೆ ವಿರುದ್ಧ ಕಠಿಣ ಕ್ರಮ | ₹24 ಕೋಟಿ ಮೌಲ್ಯದ ಅಡಿಕೆ ವಶ, 468 ಪ್ರಕರಣ ದಾಖಲು, 292 ಮಂದಿ ಬಂಧನ

ಮ್ಯಾನ್ಮಾರ್‌ನಿಂದ ಅಕ್ರಮವಾಗಿ ಸಾಗಾಟವಾಗುತ್ತಿದ್ದ ₹24 ಕೋಟಿ ಮೌಲ್ಯದ ಅಡಿಕೆಯನ್ನು ಮಿಜೋರಾಂ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.…

1 day ago

ಮಳೆ ಆರಂಭವಾಗುತ್ತಿದ್ದಂತೆಯೇ ಗಿಡಗಳ ನಾಟಿಗೆ ಸಿದ್ಧತೆ – ಅಡಿಕೆ ಗಿಡಗಳಿಗೆ ಬೇಡಿಕೆ ಹೆಚ್ಚಾಗುತ್ತಿದೆ…!

ರಾಜ್ಯಾದ್ಯಂತ ಅಡಿಕೆ ಗಿಡಗಳಿಗೆ ಭಾರೀ ಬೇಡಿಕೆ ವ್ಯಕ್ತವಾಗಿದ್ದು,ಕೆಲವು ಕಡೆ ಸಸಿಯ ಬೆಲೆ ₹100ಕ್ಕೆ…

2 days ago

ಕೇಂದ್ರ ಸರ್ಕಾರದ ಸೌಲಭ್ಯಗಳಿಗೆ ‘ಕೇಂದ್ರ ರೈತ ಐಡಿ’ ಕಡ್ಡಾಯ – ಮಂಗಳೂರು ತಾಲೂಕಿನ 14,520 ರೈತರು ಇನ್ನೂ ನೋಂದಣಿ ಬಾಕಿ

ಕೇಂದ್ರ ಸರ್ಕಾರದ ವಿವಿಧ ಕೃಷಿ ಸೌಲಭ್ಯಗಳನ್ನು ಪಡೆಯಲು ‘ಕೇಂದ್ರ ರೈತ ಐಡಿ’ ಕಡ್ಡಾಯವಾಗುತ್ತಿದೆ.…

2 days ago

ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಧಾರಣೆ ಏರಿಕೆ | ಮತ್ತೆ ಚೇತರಿಕೆಯ ಸಂಕೇತ ನೀಡಿದ ಅಡಿಕೆ ಧಾರಣೆ

ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಕೆಜಿಗೆ ₹5 ಏರಿಕೆ ದಾಖಲಾಗಿದ್ದು, ಹೊಸ ಅಡಿಕೆ…

2 days ago