ಧಾರ್ಮಿಕ

ವಿದ್ಯಾರ್ಥಿಗಳಿಗೆ ಈಜುಗಾರಿಕೆಯ ತಂತ್ರವನ್ನು ಕಲಿಸುವ ಕೇಶವಕೃಪಾ ವೇದಪಾಠ ಶಾಲೆ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಸುಳ್ಯ:ವೇದಾಧ್ಯಯನಕ್ಕೆ ಕುಳಿತರೆ  ತುಟಿಯಲ್ಲಿ ಇಂಪಾದ ವೇದಮಂತ್ರಗಳನ್ನು ಪಠಿಸುತ್ತಾ ಅಪ್ಪಟ ವೈದಿಕ ಉಡುಗೆಯಲ್ಲೇ ಕಣ್ಣು ಸೆಳೆಯುವ ಪುಟಾಣಿಗಳು ನೀರಿಗಿಳಿದರೆ  ಈಜುಪಟುಗಳಂತೆ ಈಜುತ್ತಾರೆ. ಈ ದೃಶ್ಯ ಕಾಣುವುದು  ಸುಳ್ಯದ ಶ್ರೀಕೇಶವ ಕೃಪಾ ವೇದ ಮತ್ತು ಕಲಾ ಪ್ರತಿಷ್ಠಾನದಲ್ಲಿ.
ಒಂದು ಮಗುವಿನ ವಿಕಾಸ ಪ್ರಕ್ರಿಯೆಯು ಎರಡು ಹಂತದಲ್ಲಿ ನಡೆಯುತ್ತವೆ. ಮೊದಲನೆಯದ್ದು ಅಂತರಂಗವಾಗಿ ಎರಡನೆಯದ್ದು ಬಹಿರಂಗವಾಗಿ. ನೈತಿಕತೆ, ಮಾನವೀಯ ಮೌಲ್ಯಗಳು, ಸಭ್ಯತೆ ಸಂಸ್ಕಾರಗಳು, ಶಿಸ್ತು ಸಂಯಮ, ಬೌದ್ಧಿಕ ವಿಚಾರಗಳು, ಭಾವನಾತ್ಮಕ ಬದಲಾವಣೆ ಇತ್ಯಾದಿಗಳಿಗೆ ಸಂಬಂಧಿಸಿದ ಬೆಳವಣಿಗೆಗಳೆಲ್ಲಾ ಅಂತರಂಗದ ವಿಕಸನಕ್ಕೆ ಸಂಬಂಧಿಸಿದ್ದಾದರೆ, ಕ್ರೀಡೆ, ವ್ಯಾಯಾಮ, ಯೋಗ, ಕುಸ್ತಿ, ಕರಾಟೆ ಮುಂತಾದ ಶಾರೀರಿಕ ಚಟುವಟಿಕೆಗಳ ಮೂಲಕ ಭೌತಿಕ ದೇಹದ ಬೆಳವಣಿಗೆಗೆ ಪೂರಕ ವಾತಾವರಣ ಕಲ್ಪಿಸಿಕೊಡುವುದನ್ನು ಬಹಿರಂಗದ ವಿಕಸನದ ಪ್ರಕ್ರಿಯೆ ಎನ್ನಬಹುದು.ಇಂತಹ ಭೌತಿಕ ದೇಹದ ಬೆಳವಣಿಗೆಗೆ ಪೂರಕವಾದ ಒಂದು ಪ್ರಾಚೀನ ಕಲೆ ಈಜುಗಾರಿಕೆ.

Advertisement

ಈಜುಗಾರಿಕೆ ಅನ್ನುವುದು ಒಂದು ಕಲೆಯೂ ಹೌದು ಕ್ರೀಡೆಯೂ ಹೌದು. ಸಾಮಾನ್ಯವಾಗಿ ಕೆಲವೊಂದು ಕ್ರೀಡೆಗಳು ಕೇವಲ ಮನರಂಜನೆಯನ್ನು ಮಾತ್ರ ಕೊಡುತ್ತವೆ, ಇನ್ನು ಕೆಲವು ಕ್ರೀಡೆಗಳು ಕೇವಲ ಸ್ಫರ್ಧೆಗಳಿಗಷ್ಟೇ ಸೀಮಿತವಾಗಿರುತ್ತವೆ. ಹಾಗೆ ನೋಡಿದರೆ ಈಜುಗಾರಿಕೆ ಅನ್ನುವಂತದ್ದು ಎಲ್ಲಾ ಮಜಲುಗಳಲ್ಲೂ ನಮಗೆ ಲಾಭದಾಯಕವೇ ಸರಿ. ನದಿ ಕೆರೆಗಳಲ್ಲಿ ಆಕಸ್ಮಿಕವಾಗಿ ಸಂಭವಿಸುವ ಅಪಾಯದ ಸಂದರ್ಭದಲ್ಲಿ ಈಜುಗಾರಿಕೆಯು ಜೀವರಕ್ಷಣೆಗೆ ನೆರವಾಗುತ್ತದೆ. ಇದು ಸ್ವ ರಕ್ಷಣೆ ಮತ್ತು ಪರರ ರಕ್ಷಣೆ ಎರಡೂ ದೃಷ್ಟಿಯಿಂದ ಮುಖ್ಯ.ಈಜು ಮೈನವಿರೇಳಿಸುವ ಸಾಹಸೀ ಕ್ರೀಡೆಯಾಗಿರುವ ಕಾರಣದಿಂದ ಮಕ್ಕಳಲ್ಲಿ ಸಾಹಸೀ ಪ್ರವೃತ್ತಿಯನ್ನು ಮೈಗೂಡಿಸಲು ನೆರವಾಗುತ್ತವೆ.

ವಿವಿಧ ಬಗೆಯ ಉಪಯೋಗವಿರುವ ಇಂತಹ ಕಲೆಯನ್ನು ಎಳವೆಯಲ್ಲಿಯೇ ಮಕ್ಕಳಿಗೆ ಕರಗತ ಮಾಡಿಸಿಬಿಡಬೇಕೆಂದೇ ಸುಳ್ಯದ ಶ್ರೀ ಕೇಶವ ಕೃಪಾ ವೇದ ಮತ್ತು ಕಲಾ ಪ್ರತಿಷ್ಠಾನವು ಈ ದಿಕ್ಕಿನಲ್ಲಿ ಯೋಚಿಸಿ ಹೆಜ್ಜೆಯಿಟ್ಟಿದೆ.

ಹತ್ತಾರು ವರ್ಷಗಳಿಂದ ವೇದಶಿಬಿರ ಮತ್ತು ಸಂಸ್ಕಾರ ವಾಹಿನಿ ಶಿಬಿರಗಳ ಮೂಲಕ ಮಕ್ಕಳ ಅಂತರಂಗ ವಿಕಸನಕ್ಕೆ ಮಹತ್ತರ ಕಾಣಿಕೆ ನೀಡುತ್ತಿರುವ ಪ್ರತಿಷ್ಠಾನವು ಕಳೆದ ಕೆಲ ವರ್ಷಗಳಿಂದ ವೇದ ಶಿಬಿರದ ಜೊತೆಗೆ ಈಜು ತರಬೇತಿಯನ್ನು ಕೂಡಾ ಜೋಡಿಸಿಕೊಂಡು ಶಿಬಿರಾರ್ಥಿಗಳ ಭೌತಿಕ ವಿಕಸನಕ್ಕೆ ಮುಂದಡಿಯಿಟ್ಟಿದೆ.

Advertisement

ಈ ವರ್ಷದ ಈಜು ತರಬೇತಿ ಶಿಬಿರವು  ಶನಿವಾರ ತೂಗು ಸೇತುವೆಗಳ ಸರದಾರ ಪದ್ಮಶ್ರೀ ಗಿರೀಶ್ ಭಾರದ್ವಾಜ್ ಻ವರ ಖಾಸಗಿ ಸ್ಥಳ ಕೇರ್ಪಳದ ಶಿವಗಿರಿಯಲ್ಲಿ ಆರಂಭಗೊಂಡಿದ್ದು, ಕೇಶವಕೃಪಾ ಹಿರಿಯ ವಿದ್ಯಾರ್ಥಿ ಪರಿಷದ್ ಅಧ್ಯಕ್ಷ ಬಲರಾಮ ಭಟ್ ಶಿವನಿವಾಸ ಧ್ವಜ ಹಾರಿಸುವ ಮೂಲಕ ಉದ್ಘಾಟಿಸಿ, ಗಿರೀಶ್ ಭಾರದ್ವಾಜ್‍ ಅವರು ಮಕ್ಕಳಿಗೆ ಶುಭವನ್ನು ಹಾರೈಸಿದರು.

Advertisement

ತರಬೇತುದಾರರಾಗಿ ಶಿಬಿರದ ಯೋಗ ಅಧ್ಯಾಪಕರಾದ ಆರ್.ವಿ. ಭಂಡಾರಿ ಬೆಂಗಳೂರು, ಎಂ.ಎಸ್. ನಾಗರಾಜ್ ರಾವ್, ವೇ| ಮೂ| ಅಭಿರಾಮ ಭಟ್ ಸರಳಿಕುಂಜ, ವೇ| ಮೂ| ಪ್ರಕಾಶ್ ಭಟ್ ಬಲಿಪ ಹಾಗೂ ಹಿರಿಯ ವಿದ್ಯಾರ್ಥಿಗಳು ಸಹಕರಿಸಿದರು.

ಶಿಬಿರದ ಸುಮಾರು 120ಕ್ಕಿಂತಲೂ ಅಧಿಕ ಸಂಖ್ಯೆಯ ವಿದ್ಯಾರ್ಥಿಗಳು ವಾರದ ನಿರ್ಧಿಷ್ಟ ದಿನಗಳಲ್ಲಿ ಸರದಿಯಂತೆ ಈಜು ತರಬೇತಿಯ ಸದುಪಯೋಗವನ್ನು ಪಡೆದುಕೊಳ್ಳಲಿದ್ದು ಮೇ 15ರಂದು ಈಜು ಸ್ಪರ್ಧೆ ನಡೆಯಲಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಆ.15 ರಿಂದ ದೇವಸ್ಥಾನಗಳಲ್ಲಿ ಪ್ಲಾಸ್ಟಿಕ್ ನಿಷೇಧಿಸಿ ಸರ್ಕಾರ ಆದೇಶ

ಮುಜರಾಯಿ ಇಲಾಖೆಯ ವ್ಯಾಪ್ತಿಯಲ್ಲಿ ಇರುವ ದೇವಾಲಯಗಳಲ್ಲಿ ಕಡ್ಡಾಯವಾಗಿ ನೀರಿನ ಬಾಟಲ್ ಸೇರಿದಂತೆ ಪ್ಲಾಸ್ಟಿಕ್ …

1 hour ago

15 ದಿನಗಳಿಗೊಮ್ಮೆ ಶಾಲೆ, ಅಂಗನವಾಡಿಗಳ ನೀರಿನ ತಪಾಸಣೆ – ಜಿ. ಪಂ ಸಿಇಒ ಸೂಚನೆ

ಪ್ರತಿ 15 ದಿನಗಳಿಗೊಮ್ಮೆ ಶಾಲೆ ಮತ್ತು ಅಂಗನವಾಡಿಗಳ ಕುಡಿಯುವ ನೀರನ್ನು ಪರೀಕ್ಷೆಗೊಳಪಡಿಸಿ  ತಪಾಸಣೆ…

3 hours ago

ಹವಾಮಾನ ವರದಿ | 13-08-2025 | ಆ.21 ರವರೆಗೆ ಮಳೆ ವಿಸ್ತರಣೆ ಎಲ್ಲಿ ? ವಾಯುಭಾರ ಕುಸಿತದ ಕಾರಣದಿಂದ ಮಳೆ ಎಲ್ಲೆಲ್ಲಾ ಇದೆ..?

ಬಂಗಾಳಕೊಲ್ಲಿಯ ಆಂದ್ರಾ ಕರಾವಳಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಒಡಿಸ್ಸಾ ಕರಾವಳಿ ತನಕ ಸಾಗಿ,…

9 hours ago

ತೋಟಗಾರಿಕಾ ಬೆಳೆಗಳ ಅಭಿವೃದ್ಧಿಗೆ ಸಹಾಯಧನ |ವಿವಿಧ ಕಾರ್ಯಕ್ರಮಗಳ ಮೂಲಕ ರೈತರಿಗೆ ನೆರವು

ರಾಜ್ಯದಲ್ಲಿ ತೋಟಗಾರಿಕಾ ಬೆಳೆಗಳ ಅಭಿವೃದ್ಧಿಗೆ ಹಲವು ಕಾರ್ಯಕ್ರಮಗಳನ್ನು ಜಾರಿಗೆ ತಂದಿದ್ದು, ತೋಟಗಾರಿಕಾ ಬೆಳೆಗಳಿಗೆ…

15 hours ago

ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮಳೆ | ಹವಾಮಾನ ಇಲಾಖೆ ಮುನ್ಸೂಚನೆ

ರಾಜ್ಯದ ಕರಾವಳಿಯಲ್ಲಿ ವ್ಯಾಪಕ ಮಳೆಯಾಗಿದೆ. ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಕರಾವಳಿ ಹಾಗೂ ಉತ್ತರ…

15 hours ago

ತುಳುವರ ಆಟಿ ತಿಂಗಳು | ಆಟಿಯ ಕೊನೆಗೆ ಆಟಿಗೊಂದು ಸುತ್ತು….

ತುಳುನಾಡಿನಲ್ಲಿ ಆಟಿ ಬಹಳ ಮಹತ್ವದ ತಿಂಗಳು. ಈ ಸಮಯದಲ್ಲಿ ವಿವಿಧ ಆಚರಣೆಗಳು ಇರುತ್ತವೆ.…

15 hours ago