ಸುಬ್ರಹ್ಮಣ್ಯ : ಸುಬ್ರಹ್ಮಣ್ಯ ರೋಟರಿ ಕ್ಲಬ್ ವತಿಯಿಂದ ಬಂಟ್ರ ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ ಹಾಗೂ ವಿದ್ಯಾರ್ಥಿಗಳಿಗೆ ಟೈ ಬೆಲ್ಟ್ ಮತ್ತು ಗುರುತಿನ ಕಾರ್ಡು ವಿತರಣೆ ಕಾರ್ಯಕ್ರಮ ನಡೆಯಿತು.
ಆರಂಭದಲ್ಲಿ ವಿದ್ಯಾರ್ಥಿಗಳಿಂದ ವಿವಿಧ ಆಸನಗಳ ಯೋಗ ಪ್ರದರ್ಶನ ನಡೆಯಿತು ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ಅಂತರಾಷ್ಟ್ರೀಯ ರೋಟರಿ ಜಿಲ್ಲೆ 3181ರ ವಲಯ 5ರ ನಿಯೋಜಿತ ಅಸಿಸ್ಟೆಂಟ್ ಗವರ್ನರ್ ಕೇಶವ ಸುಳ್ಯ ಕಾರ್ಯಕ್ರಮ ಉದ್ಘಾಟಿಸಿದರು. ಬಂಟ್ರ ಗ್ರಾ.ಪಂ ಅಧ್ಯಕ್ಷೆ ಲತಾ ಅರ್ಧಯಕ್ಷತೆ ವಹಸಿದ್ದರು. ಕ್ಲಬ್ ಪೂರ್ವಾಧ್ಯಕ್ಷ ಉಮೇಶ್ ಕೆ.ಎನ್, ರಾಮಕೃಷ್ಣ ಮಲ್ಲಾರ, ನಿಯೋಜಿತ ಅಧ್ಯಕ್ಷ ಭರತ್ ನೆಕ್ರಾಜೆ, ಕ್ಲಬ್ನ ಪೂರ್ವಾಧ್ಯಕ್ಷ ಗಿರಿಧರ ಸ್ಕಂದ, ತಾ.ಪಂ ಸದಸ್ಯ ಕುಸುವi ಪಿ ವೈ, ಶಾಲಾ ಎಸ್ಡಿಎಂಸಿ ಅಧ್ಯಕ್ಷ ಗೋಪಿನಾಥ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಶಾಲಾ ಮುಖ್ಯ ಶಿಕ್ಷಕಿ ದೇವಕಿ ಸ್ವಾಗತಿಸಿ, ರಾಮಕೃಷ್ಣ ಮಲ್ಲಾರ ವಂದಿಸಿದರು. ಸಹಶಿಕ್ಷಕಿ ಸುಜಾತ ಕಾರ್ಯಕ್ರಮ ನಿರೂಪಿಸಿದರು. ಸಹಶಿಕ್ಷಕರಾದ ಜೀನಪ್ಪ, ಆಶಾಕುಮಾರಿ, ಸವಿತಾ, ಸಂಧ್ಯಾ, ಕಾರ್ಯಕ್ರಮದಲ್ಲಿ ಸಹಕರಿಸಿದರು.
ಮಂಗಳೂರು ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ₹500 ಮತ್ತು ಹಳೆ ಅಡಿಕೆ ₹555…
ರಸ್ತೆ ಬದಿ ಕಸ ಎಸೆಯುವವರಿಗೆ ದಂಡ ವಿಧಿಸಲಾಗುತ್ತದೆ, ಪಾವತಿಸದಿದ್ದರೆ FIR ದಾಖಲಾಗುತ್ತದೆ. ಗ್ರಾಮ…
ಕರಾವಳಿಯಲ್ಲಿ ಮಳೆಯ ಸಾಧ್ಯತೆ ಇದ್ದರೂ ಗಾಳಿಯ ಪ್ರಭಾವದಿಂದ ಅದು ಕಡಿಮೆಯಾಗಬಹುದು. ಉಳಿದ ಕರ್ನಾಟಕದಲ್ಲಿ…
ಅಡಿಕೆ ಮಾರುಕಟ್ಟೆ ಸ್ಥಿರದಿಂದ ಏರಿಕೆಯತ್ತ ಸಾಗುತ್ತಿದೆ. ಜೂನ್-ಜುಲೈನಲ್ಲಿ ಬೆಲೆ ಹೆಚ್ಚಾಗುವ ಸಾಧ್ಯತೆ ಇದೆ.
ಏಪ್ರಿಲ್ 1ರಿಂದ 15ರವರೆಗೆ ಸ್ವಯಂ-ಎಣಿಕೆ ಆರಂಭವಾಗಿದೆ. ಏಪ್ರಿಲ್ 16ರಿಂದ ಮನೆಗಳಿಗೆ ಭೇಟಿ ನೀಡಿ…
ಏಪ್ರಿಲ್ 4ರವರೆಗೆ ಮಳೆ ಮುಂದುವರಿಯಲಿದೆ, ಬಳಿಕ ತಾತ್ಕಾಲಿಕ ಕಡಿಮೆ. ಏಪ್ರಿಲ್ 10ರಿಂದ ಮತ್ತೆ…