Advertisement
ಕಾರ್ಯಕ್ರಮಗಳು

ವಿದ್ಯಾರ್ಥಿಗಳಿಗೆ ಪ್ಲಾಸ್ಟಿಕ್ ನಿರ್ಮೂಲನ ಜಾಗೃತಿ: ಶ್ರೀ ರಾಮಕುಂಜೇಶ್ವರ ಕನ್ನಡ ಮಾಧ್ಯಮ ಪ್ರೌಢಶಾಲೆಯಲ್ಲಿ ವಿಶಿಷ್ಟ ಶೈಲಿಯ ಕಾರ್ಯಕ್ರಮ

Share
ಕಡಬ: ಮನೆಯಿಂದ ಒಂದು ಕೆ.ಜಿ ಪ್ಲಾಸ್ಟಿಕ್ ತೆಗೆದುಕೊಂಡು ಬಂದರೆ ಒಂದು ಕೆ.ಜಿ ಕುಚ್ಚಲು ಅಕ್ಕಿ ಉಚಿತ ವಿತರಣೆ.. ಇಂತಹ ವಿಷಯಾಧರಿಸಿದ ಕಾರ್ಯಕ್ರಮವೊಂದು  ಶ್ರೀ ರಾಮಕುಂಜೇಶ್ವರ ಕನ್ನಡ ಮಾಧ್ಯಮ ಪ್ರೌಢಶಾಲೆಯಲ್ಲಿ ಭಾನುವಾರ ಕಾರ್ಯರೂಪಕ್ಕೆ ತಂದು ವಿದ್ಯಾರ್ಥಿಗಳಲ್ಲಿ ಪ್ಲಾಸ್ಟಿಕ್ ನಿರ್ಮೂಲನ ಜಾಗೃತಿ ಮೂಡಿಸಲಾಯಿತು.
ಪ್ಲಾಸ್ಟಿಕ್ ಪರಿಸರಕ್ಕೆ ಮಾರಕ ಎನ್ನುವ ವಿಚಾರದಲ್ಲಿ ಜನರಿಗೆ ಸಂಘ ಸಂಸ್ಥೆಗಳು ಜಾಗೃತಿ ಮೂಡಿಸುವ ಕಾರ್ಯ ನಡೆಯುತ್ತಿದೆ. ಇಂತಹ ಜಾಗೃತಿ ಕಾರ್ಯಕ್ರಮಕ್ಕೆ ಬಿನ್ನವಾಗಿ ಪ್ರೌಢಶಾಲೆ, ಅಮರ ಸಂಘಟನಾ ಸಮಿತಿ ಅಮರ ಮುಡ್ನೂರು-ಪಡ್ನೂರು , ರಾಮಕುಂಜ ಗ್ರಾಮ ಪಂಚಾಯಿತಿ ಸಹಯೋಗದಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಸ್ಪರ್ಧೆಯ ರೂಪದಲ್ಲಿ ಜಾಗೃತಿ
ಮೂಡಿಸುವಲ್ಲಿ ಸಫಲವಾಗಿದೆ. ಸುಮಾರು 200 ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಒಟ್ಟು 280 ಕೆ ಜಿ ಪ್ಲಾಸ್ಟಿಕ್ ಸಂಗ್ರವಾಯಿತು. ಶಾಲಾ ಹತ್ತನೇ ತರಗತಿಯ ರಿತಿಕ್ 27 ಕೆ.ಜಿ ಸಂಗ್ರಹಿಸಿ ಪ್ರಥಮ, 8 ನೇ ತರಗತಿಯ ದೀಕ್ಷಿತ್ 23 ಕೆ.ಜಿ ದ್ವಿತೀಯ ಸ್ಥಾನ ಪಡೆದುಕೊಂಡು ಕೆ.ಜಿ ಗೆ ಸರಿಸಮನವಾಗಿ ಅಕ್ಕಿ ಪಡೆದುಕೊಂಡರು. ಇನ್ನುಳಿದಂತೆ ವಿದ್ಯಾರ್ಥಿಗಳು ಕೆ.ಜಿ ಅಳತೆಯಲ್ಲಿ ಸಂಗ್ರಹಿಸಿದ ಪ್ಲಾಸ್ಟಿಕ್ಗೆ  ಅಕ್ಕಿ ವಿತರಿಸಲಾಯಿತು. ಸಂಗ್ರಹಿಸಿದ ಪ್ಲಾಸ್ಟಿಕ್ ನ್ನು ರಾಮಕುಂಜ ಗ್ರಾಮ ಪಂಚಾಯಿತಿಗೆ ಹಸ್ತಾಂತರಿಸಲಾಯಿತು.
ಸಭಾ ಕಾರ್ಯಕ್ರಮ: ಶಾಲಾ ಸಭಾಂಗಣದಲ್ಲಿ ನಡೆದ  ಸಭಾ ಕಾರ್ಯಕ್ರಮವನ್ನು ರಾಮಕುಂಜ ಗ್ರಾಮ ಪಂಚಾಯಿತಿ ಪಿಡಿಓ ಜೆರಾಲ್ಡ್ ಮಸ್ಕರೆನಸ್ ಉದ್ಘಾಟಿಸಿದರು.  ಗ್ರಾಮ ಪಂಚಾಯಿತಿ ಅಧ್ಯಕ್ಷ ಪ್ರಶಾಂತ್ ಆರ್ ಕೆ ಅಧ್ಯಕ್ಷತೆ ವಹಿಸಿದ್ದರು. ಅಮರ  ಸಂಘಟನಾ ಸಮಿತಿ ಅಮರ ಮುಡ್ನೂರು-ಪಡ್ನೂರು ಅಧ್ಯಕ್ಷ ಶಿವಪ್ರಸಾದ್, ಶ್ರೀ ರಾಮಕುಂಜೇಶ್ವರ ವಿದ್ಯಾವರ್ದಕ ಸಭಾ ಕಾರ್ಯದರ್ಶಿ ರಾಧಕೃಷ್ಣ ಕುವೆಚ್ಚಾರು ಉಪಸ್ಥಿತರಿದ್ದರು. ಶಿಕ್ಷಕ ಬಾಲಚಂದ್ರ ಮುಂಚಿತ್ತಾಯ ಪ್ಲಾಸ್ಟಿಕ್ ದುಶ್ಪರಿಣಾಮದ ಬಗ್ಗೆ ಮಾಹಿತಿ ನೀಡಿದರು. ಪ್ರೌಢಶಾಲಾ ಮುಖ್ಯಗುರು ಸತೀಶ್ ಭಟ್ ಪ್ರಸ್ತಾವಿಸಿದರು. ಅಮರ  ಸಂಘಟನಾ ಸಮಿತಿ ಅಮರ ಮುಡ್ನೂರು-ಪಡ್ನೂರು ಪ್ರಮುಖರಾದ ರಕ್ಷಿತ್ ಸ್ವಾಗತಿಸಿದರು. ಶಿವಪ್ರಸಾದ್ ವಂದಿಸಿದರು.
ರಂಜಿತ್ ನಿರೂಪಿಸಿದರು.
ಶ್ರೀ ರಾಮಕುಂಜೇಶ್ವರ ವಿದ್ಯಾವರ್ದಕ ಸಭಾ ವಿದ್ಯಾರ್ಥಿಗಳಲ್ಲಿ ಪ್ಲಾಸ್ಟಿಕ್ ನಿರ್ಮೂಲನೆ  ಅರಿವು  ಮೂಡಿಸುವ ವಿಶಿಷ್ಟ ಕಾರ್ಯಕ್ರಮ ಇದಾಗಿತ್ತು. ವಿದ್ಯಾರ್ಥಗಳು ಉತ್ಸಾಹದಿಂದ ಪಾಲ್ಗೊಂಡು ಯಶಸ್ವಿಗೊಳಿಸಿದ್ದಾರೆ. ಇಂತಹ ಕಾರ್ಯಕ್ರಮ ಅಯೋಜಿಸಲು ಕೈಜೋಡಿಸಿರುವ ಅಮರ ಸಂಘಟನಾ ಸಮಿತಿ ಸುಳ್ಯ , ರಾಮಕುಂಜ ಗ್ರಾಮ ಪಂಚಾಯಿತಿಗೆ  ಕೃತಜ್ಞತೆಗಳು. – ರಾಧಕೃಷ್ಣ ಕುವೆಚ್ಚಾರು, ಕಾರ್ಯದರ್ಶಿ

 

ಅಮರ ಮುಡ್ನೂರು-ಪಡ್ನೂರು ಸಂಘಟನೆಯ ಮೂಲಕ ವರ್ಷದಿಂದೀಚೆಗೆ ಹಲವಾರು ಸಮಾಜಮುಖಿ ಕಾರ್ಯಕ್ರಮಗಳನ್ನು ಜಿಲ್ಲೆಯ ವಿವಿದೆಡೆ ಹಮ್ಮಿಕೊಳ್ಳಲಾಗುತ್ತಿದೆ. ವಿಷಪೂರಿತ ಪ್ಲಾಸ್ಟಿಕ್ ನಿರ್ಮೂಲನೆಗೆ ಹಸಿವು ನೀಗಿಸುವ ಅಕ್ಕಿ ನೀಡುವಂತಹ  ಪ್ಲಾಸ್ಟಿಕ್ ನಿರ್ಮೂಲನೆಯ ಅರಿವು ಮೂಡಿಸಲು  ವಿಶೇಷ ಕಾರ್ಯಕ್ರಮವನ್ನು ಅಯೋಜಿಸುವ ಅಲೋಚನೆಯನ್ನು ಶ್ರೀ ರಾಮಕುಂಜೇಶ್ವರ ಕನ್ನಡ ಮಾಧ್ಯಮ ಪ್ರೌಢಶಾಲೆಯಲ್ಲಿ ಕಾರ್ಯರೂಪಕ್ಕೆ ತರಲಾಗಿದೆ. ಕಾರ್ಯಕ್ರಮಕ್ಕೆ ಉತ್ತಮ ಬೆಂಬಲ ಸಿಕ್ಕಿದೆ. ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿದಾಗ ಕಾರ್ಯಕ್ರಮ ಯಶಸ್ವಿ ಸಾದ್ಯ ಎಂಬುವುದು ನಮ್ಮ ಆಶಯವಾಗಿದೆ. – ರಜನಿಕಾಂತ್, ಗೌರವಾಧ್ಯಕ್ಷ, ಅಮರ  ಸಂಘಟನಾ ಸಮಿತಿ

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

25 ಸಾವಿರ ವರ್ಷಗಳ ಹಿಂದೆಯೇ ಅಡಿಕೆ ಬಳಕೆ ? ಪುರಾತನ ಹಲ್ಲುಗಳಲ್ಲಿ ಸಿಕ್ಕಿದ ಸುಳಿವು

ಇಂಡೋನೇಷ್ಯಾದ ಸುಲವೆಸಿಯಲ್ಲಿ ಪತ್ತೆಯಾದ ಸುಮಾರು 25,000 ವರ್ಷಗಳ ಹಿಂದಿನ ಮಾನವ ಹಲ್ಲುಗಳಲ್ಲಿ ಅಡಿಕೆ…

5 hours ago

“ಹನುಮಾನ್ ಅಂಶ್‌” ಬಾಕ್ಸ್ ಆಫೀಸ್ ದಾಖಲೆ – 40ನೇ ದಿನವೂ ₹8.25 ಕೋಟಿ – ಪಠಾಣ್‌, ಛಾವಾ, ಉರಿ ದಾಖಲೆ ಮೀರಿಸಿದ ಸಿನಿಮಾ

‘ಹನುಮಾನ್ ಅಂಶ್’ ಸಿನಿಮಾ 40ನೇ ದಿನವೂ ₹8.25 ಕೋಟಿ ಗಳಿಸಿ ಬಾಕ್ಸ್ ಆಫೀಸ್‌ನಲ್ಲಿ…

7 hours ago

ಮುಂಗಾರು ಹಿಂದೆ ಸರಿಯಲು ಸಜ್ಜು – ಸೆ.17ರಿಂದ ಪಶ್ಚಿಮ ರಾಜಸ್ಥಾನದಲ್ಲಿ ಆರಂಭವಾಗುವ ಸಾಧ್ಯತೆ

ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…

13 hours ago

ಹವಾಮಾನ ವರದಿ | 16-09-2026 | ಕರಾವಳಿಯಲ್ಲಿ ಸೆಖೆ, ಸಂಜೆ ಅಲ್ಲಲ್ಲಿ ಮಳೆ ನಿರೀಕ್ಷೆ

ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…

14 hours ago

ಕೋಲಾರ ಸಮೀಪ 10 ಟನ್ ಸಿಂಥೆಟಿಕ್‌ ಅಡಿಕೆ ವಶ…!?

ಕೋಲಾರದಿಂದ ಬೆಂಗಳೂರಿಗೆ ಸಾಗಿಸಲಾಗುತ್ತಿದ್ದ ಸುಮಾರು 10 ಟನ್ ಸಿಂಥೆಟಿಕ್‌ ಅಡಿಕೆಯನ್ನು ಅಧಿಕಾರಿಗಳು ವಶಪಡಿಸಿಕೊಂಡಿರುವುದಾಗಿ…

21 hours ago

ಮಂಗಳೂರಿನ ಸಚಿವ ಸಂಪುಟ ಸಭೆ | ‘ಅಡಿಕೆ ಜೈವಿಕ ಆರ್ಥಿಕತೆ ಮಿಷನ್’ ಘೋಷಣೆಗೆ ಆಗ್ರಹ

ಮಂಗಳೂರಿನಲ್ಲಿ ಸೆ.18ರಂದು ನಡೆಯಲಿರುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಅಡಿಕೆ ಬೆಳೆಗಾರರ ಸಮಸ್ಯೆಗಳಿಗೆ…

1 day ago