Advertisement
MIRROR FOCUS

ವಿದ್ಯಾರ್ಥಿಗಳು ತಪ್ಪು ಮಾಡಿದರೆ ಗಿಡ ನೆಡುವ ಪಾಠ…..! ಹೀಗೊಂದು ಪರಿಸರ ಕಾಳಜಿ…

Share

ಶಾಲೆಯಲ್ಲಿ ವಿದ್ಯಾರ್ಥಿಗಳು ತಪ್ಪು ಮಾಡಿದರೆ ತರಗತಿಯಿಂದ ಹೊರಗೆ ನಿಲ್ಲಿಸುವುದು, ಹೆತ್ತವರನ್ನು ಕರೆತರುವುದು  ಇತ್ಯಾದಿ ಇದ್ದೇ ಇದೆ. ಆದರೆ ಗುಜರಾತ್ ನ ಶಿಕ್ಷಣ ಸಂಸ್ಥೆಯೊಂದರಲ್ಲಿ ವಿದ್ಯಾರ್ಥಿಗಳು ತಪ್ಪು ಮಾಡಿದರೆ ಗಿಡವನ್ನೂ ನೆಡಬೇಕು..!. ಈ ಕಡೆಗೆ ನಮ್ಮ ಫೋಕಸ್…


ಎಲ್ಲರಿಗೂ ಮಾದರಿ ಎನಿಸುವ ಪರಿಸರ ಸ್ನೇಹಿಯಾದ ಕ್ರಮವನ್ನು ತೆಗೆದುಕೊಂಡಿರುವ ಗುಜರಾತ್ ವಿಶ್ವವಿದ್ಯಾನಿಲಯದ ಅಧೀನದಲ್ಲಿರುವ ಶೈಕ್ಷಣಿಕ ಸಂಸ್ಥೆಯೊಂದು, ತನ್ನ ಆವರಣದಲ್ಲಿ ತಪ್ಪು ಮಾಡುವ ವಿದ್ಯಾರ್ಥಿಗಳಿಗೆ ಗಿಡ ನೆಡುವ ಶಿಕ್ಷೆಯನ್ನು ನೀಡುತ್ತಿದೆ.

ಶ್ರೀ ಗಿಜುಭಾಯ್ ಛಗನ್ಭಾಯ್ ಪಟೇಲ್ ಇನ್ಸ್ಟಿಟ್ಯೂಟ್ ಆಫ್ ಆರ್ಕಿಟೆಕ್ಚರ್, ಇಂಟೀರಿಯರ್ ಡಿಸೈನ್ ಆ್ಯಂಡ್ ಫೈನ್ ಆರ್ಟ್ಸ್­ನ ವಾಸ್ತುಶಿಲ್ಪ ವಿಭಾಗದ ವಿದ್ಯಾರ್ಥಿಗಳು ಗಿಡ ನೆಡುವ ಮೂಲಕ ತಮ್ಮ ತಪ್ಪಿಗೆ ಪ್ರಾಯಶ್ಚಿತ್ತವನ್ನು ಕಂಡುಕೊಳ್ಳಬೇಕಾಗಿದೆ. ಈ ಮೂಲಕ ಪ್ರಕೃತಿಯನ್ನು ಉಳಿಸಲು ಕೊಡುಗೆಯನ್ನು ನೀಡಬೇಕಾಗಿದೆ.

ತರಗತಿಗಳಿಗೆ ತಡವಾಗಿ ಬಂದಾಗ ಅಥವಾ ಅಸೈನ್ಮೆಂಟ್ ಅನ್ನು ಸಮಯಕ್ಕೆ ಸರಿಯಾಗಿ ಸಲ್ಲಿಕೆ ಮಾಡದಿದ್ದಾಗ ಶಿಕ್ಷೆಯ ಭಾಗವಾಗಿ ಗಿಡವನ್ನು ನೆಡುವುದು ಕಡ್ಡಾಯವಾಗಿದೆ.

“ಇದು ಪರಿಸರ ಸ್ನೇಹಿ ಶಿಕ್ಷೆಯಾಗಿರುವುದರಿಂದ ವಿದ್ಯಾರ್ಥಿಗಳು ಶಿಕ್ಷೆಯನ್ನು ಸಂತೋಷದಿಂದ ಸ್ವೀಕರಿಸಿದ್ದಾರೆ. ಪ್ರತಿ ತಪ್ಪಿಗೂ ಅವರು ಸಸಿ ನೆಡಬೇಕು ಮತ್ತು ಅದನ್ನು ಕಾಲೇಜು ತೊರೆಯುವವರೆಗೂ ನೋಡಿಕೊಳ್ಳಬೇಕು. ತಪ್ಪುಗಳನ್ನು ಮಾಡಿದ ವಿದ್ಯಾರ್ಥಿಗಳಿಗೆ ಈ ಅನನ್ಯ ಶಿಕ್ಷೆಯನ್ನು ನೀಡುವುದು ನನ್ನ ಆಶಯವಾಗಿತ್ತು” ಎಂದು ವಾಸ್ತುಶಿಲ್ಪ ವಿಭಾಗದ ಪ್ರೊಫೆಸರ್ ಮಹೇಶ್ ಪಟೇಲ್ ಹೇಳಿದ್ದಾರೆ.

“ನಾನು ಏನಾದರೂ ತಪ್ಪು ಮಾಡಿದರೆ ನಾನೇ ಇಲ್ಲಿ ಸಸಿಗಳನ್ನು ನೆಡುತ್ತೇನೆ. ಈ ಶಿಕ್ಷೆಯು ನಮ್ಮ ವಿದ್ಯಾರ್ಥಿಗಳಿಗೆ ಉತ್ತಮ ವ್ಯಕ್ತಿಯಾಗಬಲ್ಲ ಕೆಲವು ಪಾಠಗಳನ್ನು ನೀಡುತ್ತದೆ ಎಂದು ನಾನು ನಂಬುತ್ತೇನೆ. ಈ ಕ್ರಮವು ಚಿಕ್ಕ ವಯಸ್ಸಿನಿಂದಲೂ ಗಿಡಗಳನ್ನು ನೆಡುವ ಅಭ್ಯಾಸವನ್ನು ಬೆಳೆಸಿಕೊಳ್ಳಲು ಸಹಾಯ ಮಾಡುತ್ತದೆ” ಎಂದಿದ್ದಾರೆ.

ತಮ್ಮ ಕೋರ್ಸ್ ಪೂರ್ಣಗೊಂಡ ಬಳಿಕವೂ ಕೆಲವು ವಿದ್ಯಾರ್ಥಿಗಳು ಕ್ಯಾಂಪಸ್ಸಿಗೆ ಬಂದು ತಮ್ಮ ಸಸಿಗಳನ್ನು ನೋಡಿಕೊಂಡು ಹೋಗುತ್ತಾರೆ ಎಂದು ಅವರು ಹೇಳಿದ್ದಾರೆ.

“ಇದು ಶಿಕ್ಷೆಯಲ್ಲ ಒಂದು ಉತ್ತಮ ಕಾರ್ಯಕ್ರಮ. ನಾನು ನನ್ನ ಮೊಬೈಲ್ ಅನ್ನು ಸೈಲೆಂಟ್ ಮೋಡಿನಲ್ಲಿ ಇಡಲು ಮರೆತ ತಪ್ಪಿಗಾಗಿ ಸಸಿಯನ್ನು ನೆಟ್ಟಿದ್ದೇನೆ’ ಎಂದು ಸಂಸ್ಥೆಯ ವಿದ್ಯಾರ್ಥಿ ನಾಯಕ ಹೇಳಿಕೊಂಡಿದ್ದಾರೆ.

ಇದು ಅತ್ಯುತ್ತಮವಾದ ಶಿಕ್ಷೆಯ ವಿಧಾನವಾಗಿದೆ. ಕಾಲೇಜಿನ ಆವರಣದೊಳಗಿರುವ ಅನೇಕ ಸಸಿಗಳನ್ನು ವಿದ್ಯಾರ್ಥಿಗಳೇ ನೆಟ್ಟಿದ್ದಾರೆ ಎಂದು ಇಲ್ಲಿನ ಬೋಧಕರು ಹೇಳುತ್ತಾರೆ.

(ಕೃಪೆ – ನ್ಯೂಸ್13)

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 29-07-2026 | ಆ.2 ರಿಂದ ಮಳೆಯ ಸ್ಥಿತಿ ಏನಾಗಬಹುದು..?

ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನಲ್ಲಿ ಇನ್ನೂ ಬಿಟ್ಟುಬಿಟ್ಟು ಮಳೆ ಮುಂದುವರಿಯಲಿದೆ. ಆದರೆ…

4 hours ago

ಆಸ್ಪತ್ರೆಗಳಲ್ಲಿ ಬಳಕೆಯಾಗದ ಔಷಧ ಮರುಬಳಕೆ – ಹಣವೂ ಉಳಿಯುತ್ತದೆ, ಪರಿಸರವೂ ಕಾಪಾಡುತ್ತದೆ..!

ಆಸ್ಪತ್ರೆಗಳಲ್ಲಿ ಬಳಕೆಯಾಗದೆ ಉಳಿಯುವ ಔಷಧಗಳನ್ನು ಸುರಕ್ಷಿತವಾಗಿ ಮರುಬಳಕೆ ಮಾಡಿದರೆ ಆರೋಗ್ಯ ಕ್ಷೇತ್ರದ ವೆಚ್ಚ…

11 hours ago

ಮಲೆನಾಡಿನಿಂದ ಬಯಲುನಾಡಿನತ್ತ ಅಡಿಕೆ ಬೆಳೆ ವಿಸ್ತರಣೆ : ರಾಣೆಬೆನ್ನೂರಿನಲ್ಲಿ ಹೆಚ್ಚಿದ ರೈತರ ಆಸಕ್ತಿ

ಹಾವೇರಿ ಜಿಲ್ಲೆಯ ರಾಣೆಬೆನ್ನೂರು ಭಾಗದಲ್ಲಿ ಅಡಿಕೆ ಬೆಳೆ ವೇಗವಾಗಿ ವಿಸ್ತರಿಸುತ್ತಿದ್ದು, ಉತ್ತಮ ಆದಾಯದ…

11 hours ago

ಕೊಂಬೆಯಲ್ಲ, ಕಾಂಡದಲ್ಲೇ ಗೊಂಚಲು ಗೊಂಚಲಾಗಿ ಹಣ್ಣು! ಪಶ್ಚಿಮ ಘಟ್ಟದ ಅಪರೂಪದ ‘ಕೋಳಿಜುಟ್ಟು’ ಹಣ್ಣಿನ ಕಥೆ

ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಕಾಡು ಹಣ್ಣು ಇದೀಗ ರೈತರ ತೋಟಗಳಲ್ಲೂ ಫಲ…

18 hours ago

ಕಾಡು ಹಣ್ಣು…. ಕೋಳಿ ಜುಟ್ಟು ಹಣ್ಣು…!

ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಹಣ್ಣು ಕಾಂಡದ ಮೇಲೆಯೇ ಗೊಂಚಲು ಗೊಂಚಲಾಗಿ ಬೆಳೆಯುವ…

20 hours ago

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಒಡಿಶಾದಲ್ಲಿ ಭಾರಿ ಮಳೆ, ಹಲವು ಜಿಲ್ಲೆಗಳಲ್ಲಿ ರೆಡ್ ಅಲರ್ಟ್

ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…

1 day ago