ಸುಳ್ಯ: ವಿದ್ಯಾರ್ಥಿಗಳು ದುಶ್ಚಟಗಳಿಂದ, ಸಾಮಾಜಿಕ ಜಾಲತಾಣಗಳಿಂದ ದೂರವಿರಿ . ಒಮ್ಮೆ ಅದಕ್ಕೆ ಬಲಿಯಾದರೆ ಜೀವನ ನಾಶವಾದಂತೆ. ಧನಾತ್ಮಕ ಉದ್ದೇಶ ಮತ್ತು ಸ್ವ-ಅರಿವನ್ನು ಹೊಂದಿ ಮುನ್ನಡೆಯಿರಿ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಜಿಲ್ಲಾ ಯುವ ಪರಿವರ್ತಕರಾದ ಶ್ರೀಕಾಂತ್ ಪೂಜಾರಿ ಬಿರವು ಹೇಳಿದರು.
ಅವರು ನೆಹರು ಮೆಮೋರಿಯಲ್ ಪಿ. ಯು ಕಾಲೇಜು, ಸುಳ್ಯ ಇಲ್ಲಿನ ವಿದ್ಯಾರ್ಥಿ ಸಂಘ ಮತ್ತು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮಂಗಳೂರು ಇದರ ಸಹಯೋಗದಲ್ಲಿ ನಡೆದ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದರು. ವಿದ್ಯಾರ್ಥಿಗಳು ಸ್ಪಷ್ಟ ಗುರಿಯನ್ನು ಹೊಂದಿ ಜೀವನ ಶೈಲಿ ರೂಪಿಸಿಕೊಳ್ಳಬೇಕು, ವಿದ್ಯಾರ್ಥಿ ಹಂತದಲ್ಲಿ ಚೆನ್ನಾಗಿ ಓದಿ, ಓದಿದ್ದನ್ನು ಮನನ ಮಾಡಿಕೊಳ್ಳಬೇಕು. ನಾವು ಆತ್ಮಗೌರವ ಹೊಂದಿರುವುದೇ ನಮ್ಮ ಸಾಧನೆಗೆ ಪ್ರಮುಖ ಅಸ್ತ್ರ ಎಂದು ಹೇಳಿದರು.
ಕಾಲೇಜಿನ ಪ್ರಾಂಶುಪಾಲರು ಹರಿಣಿ ಪುತ್ತೂರಾಯ ಅಧ್ಯಕ್ಷತೆ ವಹಿಸಿದ್ದರು. ಕಾಲೇಜಿನ ಉಪನ್ಯಾಸಕರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಲಕ್ಷ್ಮಣ್ ಏನೆಕಲ್ ಸ್ವಾಗತಿಸಿ ವಂದಿಸಿದರು.
ಬಂಗಾಳಕೊಲ್ಲಿಯ ಆಂದ್ರಾ, ಒಡಿಶಾ ಕರಾವಳಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಆಗಸ್ಟ್ 18,19 ರಂದು…
ಗ್ರಾಮೀಣ ಮಟ್ಟದ ಆರ್ಥಿಕ ಸಹಕಾರ ಸಂಘಗಳ ಪ್ರಮುಖ ಚಟುವಟಿಕೆ ಎಂದರೆ ಸದಸ್ಯರಿಂದ ಠೇವಣಾತಿ…
ಶೀಘ್ರದಲ್ಲೇ ಜಿಲ್ಲಾ ಪಂಚಾಯತ್ ಹಾಗೂ ತಾಲ್ಲೂಕು ಪಂಚಾಯತಿಗಳಿಗೆ ಚುನಾವಣೆ ನಡೆಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ…
ಬೆಳಗಾವಿ ಜಿಲ್ಲೆ ಚಿಕ್ಕೋಡಿ ತಾಲ್ಲೂಕಿನ ರೈತರೊಬ್ಬರು ಶೂನ್ಯ ಬಂಡವಾಳದಲ್ಲಿ ಅತ್ಯುತ್ತಮ ಇಳುವರಿ ತೆಗೆಯುವ…
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಉಜಿರೆ ಗ್ರಾಮ ಪಂಚಾಯತ್ ಆತ್ಮನಿರ್ಭರ ಯೋಜನೆಯಡಿಯಲ್ಲಿ…
ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಕಾವೇರಿ ನದಿ ತೀರದಲ್ಲಿ ಅಸ್ತಿ ವಿಸರ್ಜನೆ ಮಾಡಿ ನದಿ…