ಸುಳ್ಯ: ವಿದ್ಯಾರ್ಥಿಗಳು ದುಶ್ಚಟಗಳಿಂದ, ಸಾಮಾಜಿಕ ಜಾಲತಾಣಗಳಿಂದ ದೂರವಿರಿ . ಒಮ್ಮೆ ಅದಕ್ಕೆ ಬಲಿಯಾದರೆ ಜೀವನ ನಾಶವಾದಂತೆ. ಧನಾತ್ಮಕ ಉದ್ದೇಶ ಮತ್ತು ಸ್ವ-ಅರಿವನ್ನು ಹೊಂದಿ ಮುನ್ನಡೆಯಿರಿ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಜಿಲ್ಲಾ ಯುವ ಪರಿವರ್ತಕರಾದ ಶ್ರೀಕಾಂತ್ ಪೂಜಾರಿ ಬಿರವು ಹೇಳಿದರು.
ಅವರು ನೆಹರು ಮೆಮೋರಿಯಲ್ ಪಿ. ಯು ಕಾಲೇಜು, ಸುಳ್ಯ ಇಲ್ಲಿನ ವಿದ್ಯಾರ್ಥಿ ಸಂಘ ಮತ್ತು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮಂಗಳೂರು ಇದರ ಸಹಯೋಗದಲ್ಲಿ ನಡೆದ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದರು. ವಿದ್ಯಾರ್ಥಿಗಳು ಸ್ಪಷ್ಟ ಗುರಿಯನ್ನು ಹೊಂದಿ ಜೀವನ ಶೈಲಿ ರೂಪಿಸಿಕೊಳ್ಳಬೇಕು, ವಿದ್ಯಾರ್ಥಿ ಹಂತದಲ್ಲಿ ಚೆನ್ನಾಗಿ ಓದಿ, ಓದಿದ್ದನ್ನು ಮನನ ಮಾಡಿಕೊಳ್ಳಬೇಕು. ನಾವು ಆತ್ಮಗೌರವ ಹೊಂದಿರುವುದೇ ನಮ್ಮ ಸಾಧನೆಗೆ ಪ್ರಮುಖ ಅಸ್ತ್ರ ಎಂದು ಹೇಳಿದರು.
ಕಾಲೇಜಿನ ಪ್ರಾಂಶುಪಾಲರು ಹರಿಣಿ ಪುತ್ತೂರಾಯ ಅಧ್ಯಕ್ಷತೆ ವಹಿಸಿದ್ದರು. ಕಾಲೇಜಿನ ಉಪನ್ಯಾಸಕರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಲಕ್ಷ್ಮಣ್ ಏನೆಕಲ್ ಸ್ವಾಗತಿಸಿ ವಂದಿಸಿದರು.
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಕಾಣಿಯೂರು, ಬೆಳ್ಳಾರೆ, ಪಂಜ ಸೇರಿದಂತೆ ಹಲವೆಡೆ…
ಕರ್ನಾಟಕದ ಕರಾವಳಿ, ಮಲೆನಾಡು ಮತ್ತು ಒಳನಾಡು ಜಿಲ್ಲೆಗಳಲ್ಲಿ ತುಂತುರು ಮಳೆ ಮತ್ತು ಮೋಡದ…
ಕರ್ನಾಟಕದ ವಿವಿಧ ಭಾಗಗಳಲ್ಲಿ ಫೆಬ್ರುವರಿ 25ರ ಬೆಳಿಗ್ಗೆ 8 ಗಂಟೆವರೆಗೆ ತುಂತುರು ಮಳೆ,…
ಕಡಬ ತಾಲೂಕಿನ ಸುರುಳಿ ಶ್ರೀ ಬಾಲಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಭಜನಾ ಮಂಡಳಿ ಉದ್ಘಾಟನೆ…
ಟೆಟಾನಸ್ ಮತ್ತು ಡಿಫ್ತೀರಿಯಾ ಲಸಿಕೆ ಬಿಡುಗಡೆ ವೇಳೆ ಭಾರತ ಲಸಿಕೆ ತಯಾರಿಕೆಯಲ್ಲಿ ಜಾಗತಿಕ…
ಮುಂದಿನ ವರ್ಷದಿಂದ ಕರ್ನಾಟಕದ 1ರಿಂದ 10ನೇ ತರಗತಿಯವರೆಗೆ ‘ನೈತಿಕ ವಿಜ್ಞಾನ’ ಪಠ್ಯ ಪರಿಚಯಿಸಲಾಗುವುದು…