ಸುಳ್ಯ: ವಿದ್ಯಾರ್ಥಿಗಳು ದುಶ್ಚಟಗಳಿಂದ, ಸಾಮಾಜಿಕ ಜಾಲತಾಣಗಳಿಂದ ದೂರವಿರಿ . ಒಮ್ಮೆ ಅದಕ್ಕೆ ಬಲಿಯಾದರೆ ಜೀವನ ನಾಶವಾದಂತೆ. ಧನಾತ್ಮಕ ಉದ್ದೇಶ ಮತ್ತು ಸ್ವ-ಅರಿವನ್ನು ಹೊಂದಿ ಮುನ್ನಡೆಯಿರಿ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಜಿಲ್ಲಾ ಯುವ ಪರಿವರ್ತಕರಾದ ಶ್ರೀಕಾಂತ್ ಪೂಜಾರಿ ಬಿರವು ಹೇಳಿದರು.
ಅವರು ನೆಹರು ಮೆಮೋರಿಯಲ್ ಪಿ. ಯು ಕಾಲೇಜು, ಸುಳ್ಯ ಇಲ್ಲಿನ ವಿದ್ಯಾರ್ಥಿ ಸಂಘ ಮತ್ತು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮಂಗಳೂರು ಇದರ ಸಹಯೋಗದಲ್ಲಿ ನಡೆದ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದರು. ವಿದ್ಯಾರ್ಥಿಗಳು ಸ್ಪಷ್ಟ ಗುರಿಯನ್ನು ಹೊಂದಿ ಜೀವನ ಶೈಲಿ ರೂಪಿಸಿಕೊಳ್ಳಬೇಕು, ವಿದ್ಯಾರ್ಥಿ ಹಂತದಲ್ಲಿ ಚೆನ್ನಾಗಿ ಓದಿ, ಓದಿದ್ದನ್ನು ಮನನ ಮಾಡಿಕೊಳ್ಳಬೇಕು. ನಾವು ಆತ್ಮಗೌರವ ಹೊಂದಿರುವುದೇ ನಮ್ಮ ಸಾಧನೆಗೆ ಪ್ರಮುಖ ಅಸ್ತ್ರ ಎಂದು ಹೇಳಿದರು.
ಕಾಲೇಜಿನ ಪ್ರಾಂಶುಪಾಲರು ಹರಿಣಿ ಪುತ್ತೂರಾಯ ಅಧ್ಯಕ್ಷತೆ ವಹಿಸಿದ್ದರು. ಕಾಲೇಜಿನ ಉಪನ್ಯಾಸಕರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಲಕ್ಷ್ಮಣ್ ಏನೆಕಲ್ ಸ್ವಾಗತಿಸಿ ವಂದಿಸಿದರು.
ತೆಂಗಿನ ಗೆರಟೆಯು ಮೌಲ್ಯವರ್ಧನೆಯಾದಾಗ ತೆಂಗಿನ ಒಟ್ಟಾರೆ ಆದಾಯವೂ ಹೆಚ್ಚಾಗಲು ಸಾಧ್ಯವಿದೆ. ಸದ್ಯ ಸಣ್ಣ…
ಮುಂದಿನ ಎರಡು ದಿನಗಳ ಕಾಲ ಕರಾವಳಿ ಜಿಲ್ಲೆಯಲ್ಲಿ ಮಳೆಯ ತೀವ್ರತೆ ಹೆಚ್ಚಿರಲಿದೆ. ಹೀಗಾಗಿ…
2025 ರಲ್ಲಿ ಶನಿ ಮತ್ತು ಬುಧ ಗ್ರಹಗಳ ಸಂಯೋಜನೆಯಿಂದ ನಿರ್ಮಾಣವಾಗುತ್ತಿರುವ ನವಪಂಚಮ ರಾಜಯೋಗವು…
ವಿಕಸಿತ ಕೃಷಿ ಸಂಕಲ್ಪ ಅಭಿಯಾನ ಕಾರ್ಯಕ್ರಮ, ರಾಷ್ಟ್ರೀಯ ಕೃಷಿ ವಿಕಾಸ ಯೋಜನೆ ಹಾಗೂ…
ಎಲ್ಲಿ ಉಚಿತವೆಂಬ ಆಮಿಶ ಇದೆಯೋ ಅಲ್ಲಿ ತಳ್ಳಾಟವೂ ಇರುತ್ತದೆ. ಸರಕಾರಿ ಬಸ್ ಗಳಲ್ಲಿ…
ಕೊಡಗು ಜಿಲ್ಲೆಯಲ್ಲಿ ಮಳೆ ಹೆಚ್ಚಾಗುತ್ತಿದ್ದು, ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಹೆಚ್ಚಿನ ಗಾಳಿ-ಮಳೆ…