ಸುಳ್ಯ: ವಿದ್ಯಾರ್ಥಿಗಳು ದುಶ್ಚಟಗಳಿಂದ, ಸಾಮಾಜಿಕ ಜಾಲತಾಣಗಳಿಂದ ದೂರವಿರಿ . ಒಮ್ಮೆ ಅದಕ್ಕೆ ಬಲಿಯಾದರೆ ಜೀವನ ನಾಶವಾದಂತೆ. ಧನಾತ್ಮಕ ಉದ್ದೇಶ ಮತ್ತು ಸ್ವ-ಅರಿವನ್ನು ಹೊಂದಿ ಮುನ್ನಡೆಯಿರಿ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಜಿಲ್ಲಾ ಯುವ ಪರಿವರ್ತಕರಾದ ಶ್ರೀಕಾಂತ್ ಪೂಜಾರಿ ಬಿರವು ಹೇಳಿದರು.
ಅವರು ನೆಹರು ಮೆಮೋರಿಯಲ್ ಪಿ. ಯು ಕಾಲೇಜು, ಸುಳ್ಯ ಇಲ್ಲಿನ ವಿದ್ಯಾರ್ಥಿ ಸಂಘ ಮತ್ತು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮಂಗಳೂರು ಇದರ ಸಹಯೋಗದಲ್ಲಿ ನಡೆದ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದರು. ವಿದ್ಯಾರ್ಥಿಗಳು ಸ್ಪಷ್ಟ ಗುರಿಯನ್ನು ಹೊಂದಿ ಜೀವನ ಶೈಲಿ ರೂಪಿಸಿಕೊಳ್ಳಬೇಕು, ವಿದ್ಯಾರ್ಥಿ ಹಂತದಲ್ಲಿ ಚೆನ್ನಾಗಿ ಓದಿ, ಓದಿದ್ದನ್ನು ಮನನ ಮಾಡಿಕೊಳ್ಳಬೇಕು. ನಾವು ಆತ್ಮಗೌರವ ಹೊಂದಿರುವುದೇ ನಮ್ಮ ಸಾಧನೆಗೆ ಪ್ರಮುಖ ಅಸ್ತ್ರ ಎಂದು ಹೇಳಿದರು.
ಕಾಲೇಜಿನ ಪ್ರಾಂಶುಪಾಲರು ಹರಿಣಿ ಪುತ್ತೂರಾಯ ಅಧ್ಯಕ್ಷತೆ ವಹಿಸಿದ್ದರು. ಕಾಲೇಜಿನ ಉಪನ್ಯಾಸಕರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಲಕ್ಷ್ಮಣ್ ಏನೆಕಲ್ ಸ್ವಾಗತಿಸಿ ವಂದಿಸಿದರು.
ಬಿಹಾರದ ಯುರೆನ್ನಲ್ಲಿ ಪತ್ತೆಯಾದ 5 ಲಕ್ಷಕ್ಕೂ ಹೆಚ್ಚು ಸುಟ್ಟ ಬೀಜಗಳ ಅಧ್ಯಯನವು ಭಾರತದ…
ಶ್ರೀಕೃಷ್ಣನನ್ನು ಕೇವಲ ದೇವರ ಅವತಾರವಾಗಿ ನೋಡುವುದಕ್ಕಿಂತ, ಮನುಷ್ಯರ ನಡುವೆ ನಿಂತು ಉಪದೇಶಿಸಿದ ಮಾನವಶಿಕ್ಷಕನಾಗಿಯೂ…
ಮುಂಗಾರು ದುರ್ಬಲಗೊಂಡಿದ್ದರೂ ಸ್ಥಳೀಯ ಮೋಡಗಳ ಬೆಳವಣಿಗೆಯಿಂದ ಮಲೆನಾಡು ಹಾಗೂ ಒಳನಾಡಿನಲ್ಲಿ ಗುಡುಗು ಸಹಿತ…
2024ರಲ್ಲಿ ಭಾರತದಲ್ಲಿ ರೈತರು ಮತ್ತು ಕೃಷಿ ಕಾರ್ಮಿಕರು ಸೇರಿ 10,546 ಮಂದಿ ಆತ್ಮಹತ್ಯೆಯಿಂದ…
ಕರ್ನಾಟಕದಲ್ಲಿ ಈಗಾಗಲೇ 13,500 ಶಿಕ್ಷಕರ ನೇಮಕಾತಿ ನಡೆದಿದ್ದು, ಶಿಕ್ಷಣ ಇಲಾಖೆಯಲ್ಲಿ ಇನ್ನೂ 16…
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…