ಸುಳ್ಯ: ವಿದ್ಯಾರ್ಥಿಗಳು ದುಶ್ಚಟಗಳಿಂದ, ಸಾಮಾಜಿಕ ಜಾಲತಾಣಗಳಿಂದ ದೂರವಿರಿ . ಒಮ್ಮೆ ಅದಕ್ಕೆ ಬಲಿಯಾದರೆ ಜೀವನ ನಾಶವಾದಂತೆ. ಧನಾತ್ಮಕ ಉದ್ದೇಶ ಮತ್ತು ಸ್ವ-ಅರಿವನ್ನು ಹೊಂದಿ ಮುನ್ನಡೆಯಿರಿ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಜಿಲ್ಲಾ ಯುವ ಪರಿವರ್ತಕರಾದ ಶ್ರೀಕಾಂತ್ ಪೂಜಾರಿ ಬಿರವು ಹೇಳಿದರು.
ಅವರು ನೆಹರು ಮೆಮೋರಿಯಲ್ ಪಿ. ಯು ಕಾಲೇಜು, ಸುಳ್ಯ ಇಲ್ಲಿನ ವಿದ್ಯಾರ್ಥಿ ಸಂಘ ಮತ್ತು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮಂಗಳೂರು ಇದರ ಸಹಯೋಗದಲ್ಲಿ ನಡೆದ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದರು. ವಿದ್ಯಾರ್ಥಿಗಳು ಸ್ಪಷ್ಟ ಗುರಿಯನ್ನು ಹೊಂದಿ ಜೀವನ ಶೈಲಿ ರೂಪಿಸಿಕೊಳ್ಳಬೇಕು, ವಿದ್ಯಾರ್ಥಿ ಹಂತದಲ್ಲಿ ಚೆನ್ನಾಗಿ ಓದಿ, ಓದಿದ್ದನ್ನು ಮನನ ಮಾಡಿಕೊಳ್ಳಬೇಕು. ನಾವು ಆತ್ಮಗೌರವ ಹೊಂದಿರುವುದೇ ನಮ್ಮ ಸಾಧನೆಗೆ ಪ್ರಮುಖ ಅಸ್ತ್ರ ಎಂದು ಹೇಳಿದರು.
ಕಾಲೇಜಿನ ಪ್ರಾಂಶುಪಾಲರು ಹರಿಣಿ ಪುತ್ತೂರಾಯ ಅಧ್ಯಕ್ಷತೆ ವಹಿಸಿದ್ದರು. ಕಾಲೇಜಿನ ಉಪನ್ಯಾಸಕರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಲಕ್ಷ್ಮಣ್ ಏನೆಕಲ್ ಸ್ವಾಗತಿಸಿ ವಂದಿಸಿದರು.
ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ಉತ್ತಮ ಇಳುವರಿ ಪಡೆದ ವಿಜಯಕುಮಾರ್ ಪಾಟೀಲ್ ಇತರ ರೈತರಿಗೆ…
2026ರ ಮುಂಗಾರು ಬೇಗ ಆರಂಭವಾಗುವ ಸಾಧ್ಯತೆ ಇದ್ದರೂ, ಮಳೆಯ ಪ್ರಮಾಣ ಕಡಿಮೆಯಾಗಬಹುದು. ಇದು…
ಈರುಳ್ಳಿ ಬೆಳೆಯಲ್ಲಿ ಜೇನುನೊಣಗಳ ಪರಾಗಸ್ಪರ್ಶದಿಂದ ಇಳುವರಿ ಹೆಚ್ಚಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ. ರೈತರಿಗೆ…
ಗ್ರಾಮೀಣ ಪ್ರದೇಶಗಳಿಗೆ ಉತ್ತಮ ಸಂಪರ್ಕ ಒದಗಿಸಲು ಕೇಂದ್ರ ಸರ್ಕಾರ ಆದ್ಯತೆ ನೀಡುತ್ತಿದೆ.
ಜಾಗತಿಕ ತಾಪಮಾನ ನಿಯಂತ್ರಣಕ್ಕೆ ವೃಕ್ಷ ಸಂವರ್ಧನೆ ಮುಖ್ಯ ಎಂದು ಸಚಿವ ಈಶ್ವರ ಖಂಡ್ರೆ…
ICAR ಕೃಷಿ ಕ್ಷೇತ್ರವನ್ನು ಬಲಪಡಿಸಲು ಸ್ಪೆಷಲ್ ಟಾಸ್ಕ್ ಫೋರ್ಸ್ ರಚಿಸಿದೆ. ಹವಾಮಾನ ಸವಾಲುಗಳಿಗೆ…