Advertisement
ಸುದ್ದಿಗಳು

ವಿದ್ಯಾರ್ಥಿಗಳು ಸದಾ ಉತ್ಸಾಹದಿಂದಿರಬೇಕು: ಪುತ್ತೂರಿನ ವಿವೇಕಾನಂದ ಕಾನೂನು ಕಾಲೇಜಿನಲ್ಲಿ ನ್ಯಾಯಾಧೀಶರಾದ ಜಾನ್ ಮೈಕಲ್ ಕುನ್ಹ

Share

ಪುತ್ತೂರು: ಕಾನೂನು ಕಾಲೇಜಿನ ವಿದ್ಯಾರ್ಥಿಗಳು ಅಣಕು ನ್ಯಾಯಾಲಯ ಸ್ಪರ್ಧೆಗಳಲ್ಲಿ ಉತ್ಸಾಹದಿಂದ ಪಾಲ್ಗೊಳ್ಳಬೇಕು. ಇದರಿಂದ ವಕೀಲ ವೃತ್ತಿಯ ಹಲವು ವಿಚಾರಗಳನ್ನು ಪಡೆದುಕೊಳ್ಳಲು ಸಹಕಾರಿಯಾಗುತ್ತದೆ. ಅದೇ ರೀತಿ ಈ ರೀತಿಯ ಉತ್ಸಾಹವನ್ನು ತಮ್ಮ ಮುಂದಿನ ಜೀವನದಲ್ಲೂ ಅಳವಡಿಸಿಕೊಳ್ಳಬೇಕು ಎಂದು ಕರ್ನಾಟಕ ರಾಜ್ಯ ಉಚ್ಛ ನ್ಯಾಯಾಲಯದ ಗೌರವಾನ್ವಿತ ನ್ಯಾಯಾಧೀಶರಾದ ಜಾನ್ ಮೈಕಲ್ ಕುನ್ಹ ಹೇಳಿದರು.

ಇವರು ಪುತ್ತೂರಿನ ವಿವೇಕಾನಂದ ಕಾನೂನು ಕಾಲೇಜಿನಲ್ಲಿ ಫೆ.23ರಂದು ನಡೆದ ರಾಷ್ಟ್ರಮಟ್ಟದ ಅಣಕು ನ್ಯಾಯಾಲಯ ಸ್ಪರ್ಧೆಯ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿ, ನ್ಯಾಯ ತೀರ್ಮಾನಗಳನ್ನು ಮಾಡುವಾಗ ಒಂದೇ ರೀತಿಯ ಅಭಿಪ್ರಾಯಗಳನ್ನು ನ್ಯಾಯಾಧೀಶರು ಹೊಂದಿದ್ದರೆ ಉತ್ತಮ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಮತ್ತೋರ್ವ ಮುಖ್ಯ ಅತಿಥಿಯಾಗಿ ಭಾಗವಹಿಸಿದ ಕರ್ನಾಟಕ ರಾಜ್ಯ ಉಚ್ಛನ್ಯಾಯಾಲಯದ ಗೌರವಾನ್ವಿತ ನ್ಯಾಯಾಧೀಶರಾದ  ಇ. ಎಸ್ ಇಂದ್ರೇಶ್ ಮಾತನಾಡಿ, ನಮ್ಮ ದೇಶದಲ್ಲಿ ಕಾನೂನು ಕ್ಷೇತ್ರದ ಹಲವಾರು ಪ್ರಮುಖರಿದ್ದಾರೆ. ಹಲವಾರು ಪ್ರಮುಖ ನ್ಯಾಯಾಧೀಶರು ಈ ಭಾಗದಲ್ಲಿ ಇದ್ದಾರೆ. ಅದೇ ರೀತಿ ಹಲವು ಪರಿಣಿತ ಕಾನೂನು ಅಧ್ಯಾಪಕರಿದ್ದಾರೆ. ಹಾಗೆಯೇ ಹಲವು ಪ್ರಖ್ಯಾತ ನ್ಯಾಯವಾದಿಗಳು ಇದ್ದಾರೆ. ಇಲ್ಲಿನ ವಿದ್ಯಾರ್ಥಿಗಳು ಇಂತಹ ವ್ಯಕ್ತಿಗಳನ್ನು ರೋಲ್ ಮಾಡೆಲ್‍ಗಳನ್ನಾಗಿ ಮಾಡಿಕೊಳ್ಳಬೇಕು ಎಂದು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದ ಉಪ ಕುಲಪತಿಗಳಾದ ಪ್ರೊ. ಪಿ. ಈಶ್ವರ್ ಭಟ್ ಮಾತನಾಡಿ, ಕಾನೂನು ಕ್ಷೇತ್ರದಲ್ಲಿ ಕೆಲಸ ಮಾಡುವಾಗ ನೈತಿಕ ಮೌಲ್ಯಗಳಿಂದ ಜೊತೆಗೂಡಿಸಿಕೊಂಡು ಹೋಗಬೇಕು. ಆಗ ಮಾತ್ರ ಒಬ್ಬ ಒಳ್ಳೆಯ ವಕೀಲರಾಗಿ ಹೊರಹೊಮ್ಮಲು ಸಾಧ್ಯ. ಹಾಗೆಯೇ ಕಲಿಯುವಿಕೆ ಎಂಬುದು ನಿರಂತರ ಪ್ರಕ್ರಿಯೆ ಆಗಿದ್ದು, ವಿದ್ಯಾರ್ಥಿಗಳು ಇಂತಹ ಸ್ಪರ್ಧೆಗಳಿಂದ ಹಲವು ವಿಚಾರಗಳನ್ನು ಪಡೆದುಕೊಳ್ಳಬೇಕು ಎಂದು ಹೇಳಿದರು.  ಕಾನೂನು ಕಾಲೇಜಿನ ಆಡಳಿತ ಮಂಡಳಿಯ ಸಂಚಾಲಕರಾದ ವಿಶ್ವೇಶ್ವರ ಭಟ್ ಬಂಗಾರಡ್ಕ ಪ್ರಾಸ್ತಾವಿಕ ಮಾತುಗಳನ್ನಾಡಿ, ಈ ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದ ಎಲ್ಲರಿಗೂ ಗೌರವವನ್ನು ಅರ್ಪಿಸಿದರು. ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದ ಎಂ. ವಿ. ಶಂಕರ್ ಭಟ್, ಪಿ. ಜಿ ಜಗನ್ನೀವಾಸರಾವ್, ಮನೀಷ್ ಕೆ. ಸಾಲಿಯಾನ್ ಅವರನ್ನು ಸನ್ಮಾನಿಸಲಾಯಿತು.

ಕಾನೂನು ಕಾಲೇಜಿನ ಆಡಳಿತ ಮಂಡಳಿಯ ಸಂಚಾಲಕರಾದ ವಿಜಯನಾರಾಯಣ ಕೆ. ಎಂ., ಕಾಲೇಜಿನ ಕಾನೂನು ಅಧ್ಯಯನ ವಿಭಾಗದ ನಿರ್ದೇಶಕರಾದ ಡಾ. ಬಿ. ಕೆ ರವೀಂದ್ರ., ಕಾಲೇಜಿನ ಪ್ರಾಂಶುಪಾಲರಾದ ಅಕ್ಷತಾ ಎ. ಪಿ. ವೇದಿಕೆಯಲ್ಲಿ ಉಪಸ್ಥಿತರಿದ್ದರು. ಕಾಲೇಜಿನ ಆಡಳಿತ ಮಂಡಳಿಯ ಸದಸ್ಯರಾದ ಸುಬ್ರಹ್ಮಣ್ಯಕುಮಾರ್ ಅಗರ್ತ ಸ್ವಾಗತಿಸಿ, ಕಾನೂನು ಉಪನ್ಯಾಸಕಿ ಶ್ರೀರಕ್ಷಾ ವಂದಿಸಿದರು. ಮೂರು ದಿನಗಳ ಕಾಲ ನಡೆದ ಈ ರಾಷ್ಟ್ರಮಟ್ಟದ ಅಣಕು ನ್ಯಾಯಾಲಯ ಸ್ಪರ್ಧೆಯಲ್ಲಿ ದೇಶದ ಹಲವಾರು ಪ್ರತಿಷ್ಠಿತ ಕಾನೂನು ಕಾಲೇಜುಗಳ 28 ತಂಡಗಳು ಭಾಗವಹಿಸಿದ್ದವು. ಜೆ. ಎಸ್. ಎಸ್. ಕಾನೂನು ಕಾಲೇಜು, ಮೈಸೂರು ಪ್ರಥಮ ಸ್ಥಾನವನ್ನು ಪಡೆದುಕೊಂಡರೆ, ಕ್ರೈಸ್ಟ್ ವಿಶ್ವವಿದ್ಯಾಲಯ, ಬೆಂಗಳೂರು ದ್ವಿತೀಯ ಸ್ಥಾನವನ್ನು ಪಡೆದುಕೊಂಡಿತು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಸರಿಯಾದ ಆಹಾರ ಪದ್ಧತಿಯೇ ರೋಗಮುಕ್ತ ಜೀವನದ ಮೂಲ – ರಾಘವೇಶ್ವರ ಶ್ರೀ

ಗೋಕರ್ಣದಲ್ಲಿ ನಡೆದ ಅನ್ನಬ್ರಹ್ಮ ಚಾತುರ್ಮಾಸ್ಯ ಧರ್ಮಸಭೆಯಲ್ಲಿ ಜಗದ್ಗುರು ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು…

37 minutes ago

ಹವಾಮಾನ ವರದಿ | 30-07-2026 | ಕರ್ನಾಟಕದಲ್ಲಿ ಇನ್ನೆರಡು ದಿನ ಉತ್ತಮ ಮಳೆ

ಮಧ್ಯಪ್ರದೇಶದಲ್ಲಿರುವ ವಾಯುಭಾರ ಕುಸಿತದ ಪರಿಣಾಮವಾಗಿ ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಹಲವು…

5 hours ago

ಸಮಾಜಕ್ಕೆ ಸರಿದಾರಿಯನ್ನು ತೋರುವುದು ಗುರುವಿನ ಕಾರ್ಯ : ರಾಘವೇಶ್ವರ ಶ್ರೀ

ಗೋಕರ್ಣದ ಅಶೋಕೆಯ ಮೂಲಮಠದಲ್ಲಿ 'ಅನ್ನಬ್ರಹ್ಮ ಚಾತುರ್ಮಾಸ್ಯ' ಆರಂಭಗೊಂಡಿದ್ದು, ಸಮಾಜಕ್ಕೆ ಸರಿಯಾದ ದಾರಿ ತೋರಿಸುವುದು…

14 hours ago

ಅಪೊಲೊ ಫಾರ್ಮಸಿಯಲ್ಲಿ ಉದ್ಯೋಗಾವಕಾಶ : ಆಗಸ್ಟ್‌ 1ರಂದು ಪುತ್ತೂರಿನಲ್ಲಿ ನೇರ ಸಂದರ್ಶನ

ಅಪೊಲೊ ಫಾರ್ಮಸಿ ವತಿಯಿಂದ ವಿವಿಧ ಹುದ್ದೆಗಳ ಭರ್ತಿಗಾಗಿ ಆಗಸ್ಟ್‌ 1ರಂದು ಪುತ್ತೂರಿನಲ್ಲಿ ನೇರ…

14 hours ago

ಹವಾಮಾನ ವರದಿ | 29-07-2026 | ಆ.2 ರಿಂದ ಮಳೆಯ ಸ್ಥಿತಿ ಏನಾಗಬಹುದು..?

ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನಲ್ಲಿ ಇನ್ನೂ ಬಿಟ್ಟುಬಿಟ್ಟು ಮಳೆ ಮುಂದುವರಿಯಲಿದೆ. ಆದರೆ…

1 day ago

ಆಸ್ಪತ್ರೆಗಳಲ್ಲಿ ಬಳಕೆಯಾಗದ ಔಷಧ ಮರುಬಳಕೆ – ಹಣವೂ ಉಳಿಯುತ್ತದೆ, ಪರಿಸರವೂ ಕಾಪಾಡುತ್ತದೆ..!

ಆಸ್ಪತ್ರೆಗಳಲ್ಲಿ ಬಳಕೆಯಾಗದೆ ಉಳಿಯುವ ಔಷಧಗಳನ್ನು ಸುರಕ್ಷಿತವಾಗಿ ಮರುಬಳಕೆ ಮಾಡಿದರೆ ಆರೋಗ್ಯ ಕ್ಷೇತ್ರದ ವೆಚ್ಚ…

2 days ago