ಸುದ್ದಿಗಳು

ವಿದ್ಯುತ್ ಸಂಪರ್ಕ ಕಡಿತಕ್ಕೆ ವಿರೋಧ : ರೈತ ಬಳಗ, ಕಾಫಿ ಉತ್ಪಾದಕರ ಕೂಟದಿಂದ ಪ್ರತಿಭಟನೆ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಮಡಿಕೇರಿ :ಕೃಷಿ ಉತ್ಪಾದನೆಗೆ ತಾತ್ಕಾಲಿಕವಾಗಿ ಬಳಕೆಯಾದ ವಿದ್ಯುತ್ ಸಂಪರ್ಕದ ಶುಲ್ಕವನ್ನು ಬಲತ್ಕಾರವಾಗಿ ವಸೂಲಿ ಮಾಡಲು ಮುಂದಾಗಿರುವುದಲ್ಲದೆ ತುಂತುರು ನೀರಾವರಿ ಪಂಪ್‍ಸೆಟ್‍ಗಳ ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸಲು ಮುಂದಾಗಿರುವ ಚೆಸ್ಕಾಂ ಕ್ರಮವನ್ನು ವಿರೋಧಿಸಿ ರೈತ ಸಮುದಾಯಗಳ ಬಳಗ ಮತ್ತು ಕಾಫಿ ಕೃಷಿಕರ ಉತ್ಪಾದಕರ ಕೂಟ ನಗರದಲ್ಲಿ ಪ್ರತಿಭಟನೆ ನಡೆಸಿದವು.

Advertisement

ಜಿಲ್ಲಾಧಿಕಾರಿಗಳ ಕಚೇರಿ ಎದುರು ಜಮಾಯಿಸಿದ ಜಿಲ್ಲೆಯ ವಿವಿಧೆಡೆಗಳ ರೈತರು ಹಾಗೂ ಬೆಳೆಗಾರರು ಚೆಸ್ಕಾಂ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.  ಮಂಡ್ಯ, ಹಾಸನ, ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಕೃಷಿ ಉತ್ಪಾದನೆಗೆ ವಿದ್ಯುತ್ ಶುಲ್ಕವನ್ನು ಕೈಬಿಟ್ಟಿರುವ ಸರಕಾರ, ಕೊಡಗಿನ ಬಗ್ಗೆ ಮಲತಾಯಿ ಧೋರಣೆ ತಾಳಿದೆ. ಕಳೆದ 2 ವರ್ಷಗಳಿಂದ ಅತಿವೃಷ್ಟಿಯಿಂದ ಬೆಳೆಗಾರರು ಕಂಗಾಲಾಗಿದ್ದಾರೆ. ಕಾಫಿ, ಕರಿಮೆಣಸು ಫಸಲು ಕೈಕೊಟ್ಟಿದೆ, ಮತ್ತೊಂದೆಡೆ ದರ ಕುಸಿತದಿಂದ ರೈತರ ಬದುಕು ಅತಂತ್ರವಾಗಿದೆ. ಹೀಗಿದ್ದರೂ ಸರಕಾರ ಕೊಡಗಿನ ಕಾಫಿ ಬೆಳೆಗಾರರು ಕೇವಲ 3 ತಿಂಗಳ ಕಾಲ ಬಳಸುವ ಪಂಪ್‍ಸೆಟ್‍ನ ವಿದ್ಯುತ್ ಶುಲ್ಕವನ್ನು ವಸೂಲಿ ಮಾಡುವುದು ಸರಿಯಲ್ಲ ಎಂದು ಪ್ರಮುಖರು ಆಕ್ಷೇಪ ವ್ಯಕ್ತಪಡಿಸಿದರು.
ವಾರ್ಷಿಕ ಮೂರು ಬೆಳೆ ಬೆಳೆಯುವ ಹೊರ ಜಿಲ್ಲೆಯ ರೈತರಿಗೆ ವಿದ್ಯುತ್ ಶುಲ್ಕದಲ್ಲಿ ವಿನಾಯಿತಿ ನೀಡುವ ಸರ್ಕಾರ, ಕೊಡಗಿನ ಬೆಳೆಗಾರರಿಗೆ ಯಾಕೆ ಬರೆ ಹಾಕುತ್ತಿದೆ ಎಂದು ಪ್ರಶ್ನಿಸಿದರು.
ಕಳೆದ ವರ್ಷ ಕೂಡ ಚೆಸ್ಕಾಂ ಅಧಿಕಾರಿಗಳು ಇದೇ ರೀತಿ ಕಿರುಕುಳ ನೀಡಿದ್ದರು ಎಂದು ಆರೋಪಿಸಿದ ಪ್ರತಿಭಟನಾಕಾರರು ಇದೀಗ ರೈತರು ಹಾಗೂ ಬೆಳೆಗಾರರು ಸಂಕಷ್ಟದಲ್ಲಿರುವಾಗಲೇ ವಿದ್ಯುತ್ ಸಂಪರ್ಕ ಕಡಿತ ಮತ್ತು ಬಲವಂತದ ಶುಲ್ಕ ವಸೂಲಾತಿಗೆ ಮುಂದಾಗಿರುವುದು ಖಂಡನೀಯವೆಂದರು.

ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರಿಗೆ ಮನವಿ ಸಲ್ಲಿಸಿದ ಪ್ರಮುಖರು ಇತರ ಜಿಲ್ಲೆಗಳಲ್ಲಿ 10 ಹೆಚ್‍ಪಿ ಪಂಪ್‍ಸೆಟ್‍ಗೆ ನೀಡುತ್ತಿರುವ ವಿನಾಯಿತಿಯನ್ನು ಪ್ರವಾಹ ಪೀಡಿತ ಕೊಡಗಿನ ಕಾಫಿ ಬೆಳೆಗಾರರಿಗೂ ನೀಡಬೇಕು. ಈ ಬಗ್ಗೆ ಸರಕಾರಕ್ಕೆ ಶಿಫಾರಸ್ಸು ಮಾಡಬೇಕೆಂದರು. ಸಣ್ಣ ಬೆಳೆಗಾರರಿಗೂ ಲಕ್ಷಾಂತರ ರೂ. ವಿದ್ಯುತ್ ಬಿಲ್ ಪಾವತಿಸುವಂತೆ ಒತ್ತಡ ಹೇರಲಾಗುತ್ತಿದೆ, ಈ ಬೆಳವಣಿಗೆಯನ್ನು ತಡೆಯಬೇಕೆಂದು ಒತ್ತಾಯಿಸಿದರು.

ಪ್ರತಿಭಟನಾಕಾರರ ಮನವಿಗೆ ಸ್ಪಂದಿಸಿದ ಜಿಲ್ಲಾಧಿಕಾರಿಗಳು ಚೆಸ್ಕಾಂ, ಕಾಫಿ ಮಂಡಳಿ, ತೋಟಗಾರಿಕಾ ಇಲಾಖೆ ಸೇರಿದಂತೆ ಸಂಬಂಧಿಸಿದ ಇಲಾಖಾಧಿಕಾರಿಗಳ ಸಮ್ಮುಖದಲ್ಲಿ ಬೆಳೆಗಾರರ ಹಾಗೂ ರೈತರ ಸಭೆ ನಡೆಸಿ ಚರ್ಚಿಸಿದರು.

ಈ ಸಂದರ್ಭ ಕಳೆದ ಎರಡು ವರ್ಷಗಳಿಂದ ಅತಿವೃಷ್ಟಿ ಹಾನಿಯಿಂದ ಅನುಭವಿಸುತ್ತಿರುವ ಸಂಕಷ್ಟದ ಬಗ್ಗೆ ರೈತರು ಹಾಗೂ ಬೆಳೆಗಾರರು ವಿವರಿಸಿದರು. ಕೇವಲ ಮೂರು ತಿಂಗಳು ಪಂಪ್ ಸೆಟ್‍ಗಳಿಗೆ ವಿದ್ಯುತ್ ಸಂಪರ್ಕ ಪಡೆಯುವ ನಮಗೆ ಇತರ ಜಿಲ್ಲೆಗಳಂತೆ ಯಾಕೆ ವಿನಾಯಿತಿ ನೀಡುತ್ತಿಲ್ಲವೆಂದು ಪ್ರಶ್ನಿಸಿದರು.

Advertisement

ಸರಕಾರದ ಮುಂದಿನ ಆದೇಶದವರೆಗೆ ವಿದ್ಯುತ್ ಸಂಪರ್ಕ ಕಡಿತಕ್ಕೆ ಮುಂದಾಗುವುದಿಲ್ಲವೆಂದು ಚೆಸ್ಕಾಂ ಅಧಿಕಾರಿಗಳು ಭರವಸೆ ನೀಡಿದರು.ವಿದ್ಯುತ್ ಶುಲ್ಕದ ವಿನಾಯಿತಿಯಿಂದ ಚೆಸ್ಕಾಂಗೆ ಆಗುವ ನಷ್ಟದ ಮೊತ್ತದ ವಿವರವನ್ನು ಕಾಫಿ ಮಂಡಳಿಗೆ ಸಲ್ಲಿಸಬೇಕು, ಚೆಸ್ಕಾಂ ನೀಡುವ ಪ್ರಸ್ತಾವನೆಗೆ ಅನುಗುಣವಾಗಿ ಅನುದಾನವನ್ನು ಸರಕಾರದ ಬಜೆಟ್ ಮೂಲಕ ಪಡೆದು ಚೆಸ್ಕಾಂಗೆ ಭರ್ತಿ ಮಾಡುವಂತೆ ಜಿಲ್ಲಾಧಿಕಾರಿ ಇದೇ ಸಂದರ್ಭ ಅಧಿಕಾರಿಗಳಿಗೆ ಸಲಹೆ ನೀಡಿದರು.

ಕೂಟದ ಪ್ರಮುಖರಾದ ಎನ್.ಸಿ.ಪೊನ್ನಪ್ಪ ಕ್ಲೈವಾ, ಎಂ.ಎ.ನಂದಾ ಬೆಳ್ಯಪ್ಪ, ಕೆಜಿಎಫ್ ಸಂಘದ ವಿಶ್ವನಾಥ್, ರಮೇಶ್ ದಾಸಂಡ, ಸತೀಶ್ ಜಿ.ಜಿ.ಗರಗಂದೂರು, ಅರ್ಪಿತ್ ಪೂವಣ್ಣ ಅಂದಗೋವೆ, ಚಂದ್ರಶೇಖರ್, ಗೌತಮ್ ಕಲ್ಲೂರು ಮತ್ತಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 10-07-2025 | ಮುಂದಿನ 10 ದಿನಗಳವರೆಗೂ ಸಾಮಾನ್ಯ ಮಳೆ | ಜು.16 ರಿಂದ ಎಲ್ಲೆಲ್ಲಿ ಮಳೆಯಾಗುವ ಸಾಧ್ಯತೆ..?

ಈಗಿನಂತೆ ಮುಂದಿನ 10 ದಿನಗಳವರೆಗೆ ಸಾಮಾನ್ಯ ಮಳೆ ಮುಂದುವರಿಯುವ ಲಕ್ಷಣಗಳಿದ್ದು, ಜುಲೈ 16ರಿಂದ…

3 hours ago

ಮುಂದಿನ 7 ದಿನಗಳ ಉತ್ತಮ ಮಳೆ – ಹವಾಮಾನ ಇಲಾಖೆ

ಮುಂದಿನ ಏಳು ದಿನಗಳ ಕಾಲ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಕೆಲವು ಕಡೆ ಭಾರೀ…

9 hours ago

ತೆಂಗು ಉತ್ಪಾದನೆ ಹೆಚ್ಚಿಸಲು‌ ಕೇರಳದಲ್ಲಿ ಪ್ಲಾನ್‌ | ಹೊಸ ಕೋರ್ಸ್‌ ಅಭಿವೃದ್ಧಿಪಡಿಸಲು ಚಿಂತನೆ |

ಇತಿಹಾಸದಲ್ಲಿ ಮೊದಲ ಬಾರಿಗೆ ಕೇರಳ ಕೊಬ್ಬರಿ ಆಮದು ಮಾಡಿಕೊಳ್ಳುವ ಸಾಧ್ಯತೆ ಇದೆ.ತೆಂಗಿನಕಾಯಿ ಉತ್ಪಾದನೆಯಲ್ಲಿ…

9 hours ago

ಶ್ರಾವಣ ಮಾಸದಲ್ಲಿ ಮೊಸರನ್ನು ತಿನ್ನಬಾರದಂತೆ ಯಾಕೆ?

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

10 hours ago

ಹೆದ್ದಾರಿಗಳಲ್ಲಿ ಹಸಿರು ಅಭಿಯಾನ | 4.78 ಕೋಟಿಗೂ ಹೆಚ್ಚು ಗಿಡಗಳ ನಾಟಿ

ದೇಶದಲ್ಲಿ ಇಂಗಾಲದ ಹೊರಸೂಸುವಿಕೆಯನ್ನು ಕಡಿಮೆ ಮಾಡಲು ಮತ್ತು ರಾಷ್ಟ್ರೀಯ ಹೆದ್ದಾರಿಗಳನ್ನು ಹೆಚ್ಚು ಪರಿಸರ…

19 hours ago

ಪ್ರತಿಯೊಂದು  ಗ್ರಾಮ ಪಂಚಾಯಿತಿಯಲ್ಲಿ  ಕರ್ನಾಟಕ ಪಬ್ಲಿಕ್ ಶಾಲೆ ನಿರ್ಮಾಣ

ಗ್ರಾಮೀಣ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ಒದಗಿಸಲು ಪ್ರತಿ ಗ್ರಾಮ ಪಂಚಾಯಿತಿಯಲ್ಲಿ ಆಧುನಿಕ ಮೂಲಭೂತ…

20 hours ago