Advertisement
ಸುದ್ದಿಗಳು

ವಿದ್ಯುತ್ ಸಂಪರ್ಕ ಕಡಿತಕ್ಕೆ ವಿರೋಧ : ರೈತ ಬಳಗ, ಕಾಫಿ ಉತ್ಪಾದಕರ ಕೂಟದಿಂದ ಪ್ರತಿಭಟನೆ

Share

ಮಡಿಕೇರಿ :ಕೃಷಿ ಉತ್ಪಾದನೆಗೆ ತಾತ್ಕಾಲಿಕವಾಗಿ ಬಳಕೆಯಾದ ವಿದ್ಯುತ್ ಸಂಪರ್ಕದ ಶುಲ್ಕವನ್ನು ಬಲತ್ಕಾರವಾಗಿ ವಸೂಲಿ ಮಾಡಲು ಮುಂದಾಗಿರುವುದಲ್ಲದೆ ತುಂತುರು ನೀರಾವರಿ ಪಂಪ್‍ಸೆಟ್‍ಗಳ ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸಲು ಮುಂದಾಗಿರುವ ಚೆಸ್ಕಾಂ ಕ್ರಮವನ್ನು ವಿರೋಧಿಸಿ ರೈತ ಸಮುದಾಯಗಳ ಬಳಗ ಮತ್ತು ಕಾಫಿ ಕೃಷಿಕರ ಉತ್ಪಾದಕರ ಕೂಟ ನಗರದಲ್ಲಿ ಪ್ರತಿಭಟನೆ ನಡೆಸಿದವು.

ಜಿಲ್ಲಾಧಿಕಾರಿಗಳ ಕಚೇರಿ ಎದುರು ಜಮಾಯಿಸಿದ ಜಿಲ್ಲೆಯ ವಿವಿಧೆಡೆಗಳ ರೈತರು ಹಾಗೂ ಬೆಳೆಗಾರರು ಚೆಸ್ಕಾಂ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.  ಮಂಡ್ಯ, ಹಾಸನ, ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಕೃಷಿ ಉತ್ಪಾದನೆಗೆ ವಿದ್ಯುತ್ ಶುಲ್ಕವನ್ನು ಕೈಬಿಟ್ಟಿರುವ ಸರಕಾರ, ಕೊಡಗಿನ ಬಗ್ಗೆ ಮಲತಾಯಿ ಧೋರಣೆ ತಾಳಿದೆ. ಕಳೆದ 2 ವರ್ಷಗಳಿಂದ ಅತಿವೃಷ್ಟಿಯಿಂದ ಬೆಳೆಗಾರರು ಕಂಗಾಲಾಗಿದ್ದಾರೆ. ಕಾಫಿ, ಕರಿಮೆಣಸು ಫಸಲು ಕೈಕೊಟ್ಟಿದೆ, ಮತ್ತೊಂದೆಡೆ ದರ ಕುಸಿತದಿಂದ ರೈತರ ಬದುಕು ಅತಂತ್ರವಾಗಿದೆ. ಹೀಗಿದ್ದರೂ ಸರಕಾರ ಕೊಡಗಿನ ಕಾಫಿ ಬೆಳೆಗಾರರು ಕೇವಲ 3 ತಿಂಗಳ ಕಾಲ ಬಳಸುವ ಪಂಪ್‍ಸೆಟ್‍ನ ವಿದ್ಯುತ್ ಶುಲ್ಕವನ್ನು ವಸೂಲಿ ಮಾಡುವುದು ಸರಿಯಲ್ಲ ಎಂದು ಪ್ರಮುಖರು ಆಕ್ಷೇಪ ವ್ಯಕ್ತಪಡಿಸಿದರು.
ವಾರ್ಷಿಕ ಮೂರು ಬೆಳೆ ಬೆಳೆಯುವ ಹೊರ ಜಿಲ್ಲೆಯ ರೈತರಿಗೆ ವಿದ್ಯುತ್ ಶುಲ್ಕದಲ್ಲಿ ವಿನಾಯಿತಿ ನೀಡುವ ಸರ್ಕಾರ, ಕೊಡಗಿನ ಬೆಳೆಗಾರರಿಗೆ ಯಾಕೆ ಬರೆ ಹಾಕುತ್ತಿದೆ ಎಂದು ಪ್ರಶ್ನಿಸಿದರು.
ಕಳೆದ ವರ್ಷ ಕೂಡ ಚೆಸ್ಕಾಂ ಅಧಿಕಾರಿಗಳು ಇದೇ ರೀತಿ ಕಿರುಕುಳ ನೀಡಿದ್ದರು ಎಂದು ಆರೋಪಿಸಿದ ಪ್ರತಿಭಟನಾಕಾರರು ಇದೀಗ ರೈತರು ಹಾಗೂ ಬೆಳೆಗಾರರು ಸಂಕಷ್ಟದಲ್ಲಿರುವಾಗಲೇ ವಿದ್ಯುತ್ ಸಂಪರ್ಕ ಕಡಿತ ಮತ್ತು ಬಲವಂತದ ಶುಲ್ಕ ವಸೂಲಾತಿಗೆ ಮುಂದಾಗಿರುವುದು ಖಂಡನೀಯವೆಂದರು.

Advertisement

ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರಿಗೆ ಮನವಿ ಸಲ್ಲಿಸಿದ ಪ್ರಮುಖರು ಇತರ ಜಿಲ್ಲೆಗಳಲ್ಲಿ 10 ಹೆಚ್‍ಪಿ ಪಂಪ್‍ಸೆಟ್‍ಗೆ ನೀಡುತ್ತಿರುವ ವಿನಾಯಿತಿಯನ್ನು ಪ್ರವಾಹ ಪೀಡಿತ ಕೊಡಗಿನ ಕಾಫಿ ಬೆಳೆಗಾರರಿಗೂ ನೀಡಬೇಕು. ಈ ಬಗ್ಗೆ ಸರಕಾರಕ್ಕೆ ಶಿಫಾರಸ್ಸು ಮಾಡಬೇಕೆಂದರು. ಸಣ್ಣ ಬೆಳೆಗಾರರಿಗೂ ಲಕ್ಷಾಂತರ ರೂ. ವಿದ್ಯುತ್ ಬಿಲ್ ಪಾವತಿಸುವಂತೆ ಒತ್ತಡ ಹೇರಲಾಗುತ್ತಿದೆ, ಈ ಬೆಳವಣಿಗೆಯನ್ನು ತಡೆಯಬೇಕೆಂದು ಒತ್ತಾಯಿಸಿದರು.

ಪ್ರತಿಭಟನಾಕಾರರ ಮನವಿಗೆ ಸ್ಪಂದಿಸಿದ ಜಿಲ್ಲಾಧಿಕಾರಿಗಳು ಚೆಸ್ಕಾಂ, ಕಾಫಿ ಮಂಡಳಿ, ತೋಟಗಾರಿಕಾ ಇಲಾಖೆ ಸೇರಿದಂತೆ ಸಂಬಂಧಿಸಿದ ಇಲಾಖಾಧಿಕಾರಿಗಳ ಸಮ್ಮುಖದಲ್ಲಿ ಬೆಳೆಗಾರರ ಹಾಗೂ ರೈತರ ಸಭೆ ನಡೆಸಿ ಚರ್ಚಿಸಿದರು.

Advertisement

ಈ ಸಂದರ್ಭ ಕಳೆದ ಎರಡು ವರ್ಷಗಳಿಂದ ಅತಿವೃಷ್ಟಿ ಹಾನಿಯಿಂದ ಅನುಭವಿಸುತ್ತಿರುವ ಸಂಕಷ್ಟದ ಬಗ್ಗೆ ರೈತರು ಹಾಗೂ ಬೆಳೆಗಾರರು ವಿವರಿಸಿದರು. ಕೇವಲ ಮೂರು ತಿಂಗಳು ಪಂಪ್ ಸೆಟ್‍ಗಳಿಗೆ ವಿದ್ಯುತ್ ಸಂಪರ್ಕ ಪಡೆಯುವ ನಮಗೆ ಇತರ ಜಿಲ್ಲೆಗಳಂತೆ ಯಾಕೆ ವಿನಾಯಿತಿ ನೀಡುತ್ತಿಲ್ಲವೆಂದು ಪ್ರಶ್ನಿಸಿದರು.

ಸರಕಾರದ ಮುಂದಿನ ಆದೇಶದವರೆಗೆ ವಿದ್ಯುತ್ ಸಂಪರ್ಕ ಕಡಿತಕ್ಕೆ ಮುಂದಾಗುವುದಿಲ್ಲವೆಂದು ಚೆಸ್ಕಾಂ ಅಧಿಕಾರಿಗಳು ಭರವಸೆ ನೀಡಿದರು.ವಿದ್ಯುತ್ ಶುಲ್ಕದ ವಿನಾಯಿತಿಯಿಂದ ಚೆಸ್ಕಾಂಗೆ ಆಗುವ ನಷ್ಟದ ಮೊತ್ತದ ವಿವರವನ್ನು ಕಾಫಿ ಮಂಡಳಿಗೆ ಸಲ್ಲಿಸಬೇಕು, ಚೆಸ್ಕಾಂ ನೀಡುವ ಪ್ರಸ್ತಾವನೆಗೆ ಅನುಗುಣವಾಗಿ ಅನುದಾನವನ್ನು ಸರಕಾರದ ಬಜೆಟ್ ಮೂಲಕ ಪಡೆದು ಚೆಸ್ಕಾಂಗೆ ಭರ್ತಿ ಮಾಡುವಂತೆ ಜಿಲ್ಲಾಧಿಕಾರಿ ಇದೇ ಸಂದರ್ಭ ಅಧಿಕಾರಿಗಳಿಗೆ ಸಲಹೆ ನೀಡಿದರು.

Advertisement

ಕೂಟದ ಪ್ರಮುಖರಾದ ಎನ್.ಸಿ.ಪೊನ್ನಪ್ಪ ಕ್ಲೈವಾ, ಎಂ.ಎ.ನಂದಾ ಬೆಳ್ಯಪ್ಪ, ಕೆಜಿಎಫ್ ಸಂಘದ ವಿಶ್ವನಾಥ್, ರಮೇಶ್ ದಾಸಂಡ, ಸತೀಶ್ ಜಿ.ಜಿ.ಗರಗಂದೂರು, ಅರ್ಪಿತ್ ಪೂವಣ್ಣ ಅಂದಗೋವೆ, ಚಂದ್ರಶೇಖರ್, ಗೌತಮ್ ಕಲ್ಲೂರು ಮತ್ತಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ಕನಿಷ್ಠ ಆಮದು ಬೆಲೆ (MIP) ಪರಿಷ್ಕರಣೆ – ರೈತರ ಹಿತಾಸಕ್ತಿಗೆ ಕೇಂದ್ರ ಸರ್ಕಾರದ ತ್ವರಿತ ನೀತಿ ನಿರ್ಧಾರ ಅನಿವಾರ್ಯ

ಅಡಿಕೆ ಉತ್ಪಾದನಾ ವೆಚ್ಚ ಭಾರೀ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ಕನಿಷ್ಠ ಆಮದು ಬೆಲೆ (MIP)ಯನ್ನು…

13 hours ago

ಮುಂಗಾರು ಬೆಳೆ ವಿಮೆ ನೋಂದಣಿಗೆ ಆಗಸ್ಟ್‌ 14 ಕೊನೆಯ ದಿನ – ಭತ್ತ ಬೆಳೆಗಾರರು ತಪ್ಪದೇ ಹೆಸರು ನೋಂದಾಯಿಸಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂಗಾರು ಭತ್ತದ ಬೆಳೆ ವಿಮೆ ನೋಂದಣಿ ಆರಂಭವಾಗಿದ್ದು, ಆಗಸ್ಟ್‌…

14 hours ago

ಎಲ್ ನಿನೋ ಎಚ್ಚರಿಕೆ – ದೇಶದಲ್ಲಿ 43% ಮಳೆ ಕೊರತೆ, ಕರ್ನಾಟಕ ಸೇರಿ 12 ರಾಜ್ಯಗಳ 315 ಜಿಲ್ಲೆಗಳಿಗೆ ಕೇಂದ್ರದ ವಿಶೇಷ ಕೃಷಿ ಯೋಜನೆ

ದೇಶದಲ್ಲಿ 43% ಮಳೆ ಕೊರತೆ ದಾಖಲಾಗಿರುವ ಹಿನ್ನೆಲೆ ಎಲ್ ನಿನೋ ಪರಿಣಾಮ ಎದುರಿಸಲು…

1 day ago

ತೆಂಗು ಬೆಳೆಗೂ ಏರಿದ ಉತ್ಪಾದನಾ ವೆಚ್ಚ, ರೈತರು ಸಂಕಷ್ಟದಲ್ಲಿ – ತಮಿಳುನಾಡಿನಲ್ಲಿ ತೆಂಗು ಬೆಳೆಗಾರರಿಗೆ ಕಾರ್ಮಿಕರ ಕೊರತೆ

ತೆಂಗು ಬೆಳೆಗಾರರು ಕಾರ್ಮಿಕ ಕೊರತೆ ಮತ್ತು ಹೆಚ್ಚುತ್ತಿರುವ ಕೂಲಿ ವೆಚ್ಚದಿಂದ ಸಂಕಷ್ಟ ಎದುರಿಸುತ್ತಿದ್ದಾರೆ.…

1 day ago

ಮುಂಗಾರು ಮತ್ತಷ್ಟು ಚುರುಕು – ಕರಾವಳಿ ಕರ್ನಾಟಕದಲ್ಲಿ ಜೂನ್ 26 ರವರೆಗೆ ಭಾರೀ ಮಳೆ ಎಚ್ಚರಿಕೆ

ಕರಾವಳಿ ಕರ್ನಾಟಕದಲ್ಲಿ ಜೂನ್ 26ರವರೆಗೆ ಭಾರೀದಿಂದ ಅತಿ ಭಾರೀ ಮಳೆಯಾಗುವ ಸಾಧ್ಯತೆ ಇದೆ…

2 days ago

ಅಡಿಕೆ ಬೆಳೆಗಾರರ ಸಮಸ್ಯೆಗಳ ಪರಿಹಾರಕ್ಕೆ ತಕ್ಷಣ ಕ್ರಮ – ಸರ್ಕಾರಕ್ಕೆ ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ಒತ್ತಾಯ

ಅಡಿಕೆ ಬೆಳೆಗಾರರು ಎದುರಿಸುತ್ತಿರುವ ಕಾಪರ್ ಸಲ್ಫೇಟ್ ಕೊರತೆ, ಬೆಳೆ ವಿಮೆ ವಿಳಂಬ, ಕಳಪೆ…

3 days ago