Advertisement
ಸುದ್ದಿಗಳು

ವಿದ್ಯುತ್ ಸಂಪರ್ಕ ಕಡಿತಕ್ಕೆ ವಿರೋಧ : ರೈತ ಬಳಗ, ಕಾಫಿ ಉತ್ಪಾದಕರ ಕೂಟದಿಂದ ಪ್ರತಿಭಟನೆ

Share

ಮಡಿಕೇರಿ :ಕೃಷಿ ಉತ್ಪಾದನೆಗೆ ತಾತ್ಕಾಲಿಕವಾಗಿ ಬಳಕೆಯಾದ ವಿದ್ಯುತ್ ಸಂಪರ್ಕದ ಶುಲ್ಕವನ್ನು ಬಲತ್ಕಾರವಾಗಿ ವಸೂಲಿ ಮಾಡಲು ಮುಂದಾಗಿರುವುದಲ್ಲದೆ ತುಂತುರು ನೀರಾವರಿ ಪಂಪ್‍ಸೆಟ್‍ಗಳ ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸಲು ಮುಂದಾಗಿರುವ ಚೆಸ್ಕಾಂ ಕ್ರಮವನ್ನು ವಿರೋಧಿಸಿ ರೈತ ಸಮುದಾಯಗಳ ಬಳಗ ಮತ್ತು ಕಾಫಿ ಕೃಷಿಕರ ಉತ್ಪಾದಕರ ಕೂಟ ನಗರದಲ್ಲಿ ಪ್ರತಿಭಟನೆ ನಡೆಸಿದವು.

ಜಿಲ್ಲಾಧಿಕಾರಿಗಳ ಕಚೇರಿ ಎದುರು ಜಮಾಯಿಸಿದ ಜಿಲ್ಲೆಯ ವಿವಿಧೆಡೆಗಳ ರೈತರು ಹಾಗೂ ಬೆಳೆಗಾರರು ಚೆಸ್ಕಾಂ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.  ಮಂಡ್ಯ, ಹಾಸನ, ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಕೃಷಿ ಉತ್ಪಾದನೆಗೆ ವಿದ್ಯುತ್ ಶುಲ್ಕವನ್ನು ಕೈಬಿಟ್ಟಿರುವ ಸರಕಾರ, ಕೊಡಗಿನ ಬಗ್ಗೆ ಮಲತಾಯಿ ಧೋರಣೆ ತಾಳಿದೆ. ಕಳೆದ 2 ವರ್ಷಗಳಿಂದ ಅತಿವೃಷ್ಟಿಯಿಂದ ಬೆಳೆಗಾರರು ಕಂಗಾಲಾಗಿದ್ದಾರೆ. ಕಾಫಿ, ಕರಿಮೆಣಸು ಫಸಲು ಕೈಕೊಟ್ಟಿದೆ, ಮತ್ತೊಂದೆಡೆ ದರ ಕುಸಿತದಿಂದ ರೈತರ ಬದುಕು ಅತಂತ್ರವಾಗಿದೆ. ಹೀಗಿದ್ದರೂ ಸರಕಾರ ಕೊಡಗಿನ ಕಾಫಿ ಬೆಳೆಗಾರರು ಕೇವಲ 3 ತಿಂಗಳ ಕಾಲ ಬಳಸುವ ಪಂಪ್‍ಸೆಟ್‍ನ ವಿದ್ಯುತ್ ಶುಲ್ಕವನ್ನು ವಸೂಲಿ ಮಾಡುವುದು ಸರಿಯಲ್ಲ ಎಂದು ಪ್ರಮುಖರು ಆಕ್ಷೇಪ ವ್ಯಕ್ತಪಡಿಸಿದರು.
ವಾರ್ಷಿಕ ಮೂರು ಬೆಳೆ ಬೆಳೆಯುವ ಹೊರ ಜಿಲ್ಲೆಯ ರೈತರಿಗೆ ವಿದ್ಯುತ್ ಶುಲ್ಕದಲ್ಲಿ ವಿನಾಯಿತಿ ನೀಡುವ ಸರ್ಕಾರ, ಕೊಡಗಿನ ಬೆಳೆಗಾರರಿಗೆ ಯಾಕೆ ಬರೆ ಹಾಕುತ್ತಿದೆ ಎಂದು ಪ್ರಶ್ನಿಸಿದರು.
ಕಳೆದ ವರ್ಷ ಕೂಡ ಚೆಸ್ಕಾಂ ಅಧಿಕಾರಿಗಳು ಇದೇ ರೀತಿ ಕಿರುಕುಳ ನೀಡಿದ್ದರು ಎಂದು ಆರೋಪಿಸಿದ ಪ್ರತಿಭಟನಾಕಾರರು ಇದೀಗ ರೈತರು ಹಾಗೂ ಬೆಳೆಗಾರರು ಸಂಕಷ್ಟದಲ್ಲಿರುವಾಗಲೇ ವಿದ್ಯುತ್ ಸಂಪರ್ಕ ಕಡಿತ ಮತ್ತು ಬಲವಂತದ ಶುಲ್ಕ ವಸೂಲಾತಿಗೆ ಮುಂದಾಗಿರುವುದು ಖಂಡನೀಯವೆಂದರು.

ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರಿಗೆ ಮನವಿ ಸಲ್ಲಿಸಿದ ಪ್ರಮುಖರು ಇತರ ಜಿಲ್ಲೆಗಳಲ್ಲಿ 10 ಹೆಚ್‍ಪಿ ಪಂಪ್‍ಸೆಟ್‍ಗೆ ನೀಡುತ್ತಿರುವ ವಿನಾಯಿತಿಯನ್ನು ಪ್ರವಾಹ ಪೀಡಿತ ಕೊಡಗಿನ ಕಾಫಿ ಬೆಳೆಗಾರರಿಗೂ ನೀಡಬೇಕು. ಈ ಬಗ್ಗೆ ಸರಕಾರಕ್ಕೆ ಶಿಫಾರಸ್ಸು ಮಾಡಬೇಕೆಂದರು. ಸಣ್ಣ ಬೆಳೆಗಾರರಿಗೂ ಲಕ್ಷಾಂತರ ರೂ. ವಿದ್ಯುತ್ ಬಿಲ್ ಪಾವತಿಸುವಂತೆ ಒತ್ತಡ ಹೇರಲಾಗುತ್ತಿದೆ, ಈ ಬೆಳವಣಿಗೆಯನ್ನು ತಡೆಯಬೇಕೆಂದು ಒತ್ತಾಯಿಸಿದರು.

ಪ್ರತಿಭಟನಾಕಾರರ ಮನವಿಗೆ ಸ್ಪಂದಿಸಿದ ಜಿಲ್ಲಾಧಿಕಾರಿಗಳು ಚೆಸ್ಕಾಂ, ಕಾಫಿ ಮಂಡಳಿ, ತೋಟಗಾರಿಕಾ ಇಲಾಖೆ ಸೇರಿದಂತೆ ಸಂಬಂಧಿಸಿದ ಇಲಾಖಾಧಿಕಾರಿಗಳ ಸಮ್ಮುಖದಲ್ಲಿ ಬೆಳೆಗಾರರ ಹಾಗೂ ರೈತರ ಸಭೆ ನಡೆಸಿ ಚರ್ಚಿಸಿದರು.

ಈ ಸಂದರ್ಭ ಕಳೆದ ಎರಡು ವರ್ಷಗಳಿಂದ ಅತಿವೃಷ್ಟಿ ಹಾನಿಯಿಂದ ಅನುಭವಿಸುತ್ತಿರುವ ಸಂಕಷ್ಟದ ಬಗ್ಗೆ ರೈತರು ಹಾಗೂ ಬೆಳೆಗಾರರು ವಿವರಿಸಿದರು. ಕೇವಲ ಮೂರು ತಿಂಗಳು ಪಂಪ್ ಸೆಟ್‍ಗಳಿಗೆ ವಿದ್ಯುತ್ ಸಂಪರ್ಕ ಪಡೆಯುವ ನಮಗೆ ಇತರ ಜಿಲ್ಲೆಗಳಂತೆ ಯಾಕೆ ವಿನಾಯಿತಿ ನೀಡುತ್ತಿಲ್ಲವೆಂದು ಪ್ರಶ್ನಿಸಿದರು.

ಸರಕಾರದ ಮುಂದಿನ ಆದೇಶದವರೆಗೆ ವಿದ್ಯುತ್ ಸಂಪರ್ಕ ಕಡಿತಕ್ಕೆ ಮುಂದಾಗುವುದಿಲ್ಲವೆಂದು ಚೆಸ್ಕಾಂ ಅಧಿಕಾರಿಗಳು ಭರವಸೆ ನೀಡಿದರು.ವಿದ್ಯುತ್ ಶುಲ್ಕದ ವಿನಾಯಿತಿಯಿಂದ ಚೆಸ್ಕಾಂಗೆ ಆಗುವ ನಷ್ಟದ ಮೊತ್ತದ ವಿವರವನ್ನು ಕಾಫಿ ಮಂಡಳಿಗೆ ಸಲ್ಲಿಸಬೇಕು, ಚೆಸ್ಕಾಂ ನೀಡುವ ಪ್ರಸ್ತಾವನೆಗೆ ಅನುಗುಣವಾಗಿ ಅನುದಾನವನ್ನು ಸರಕಾರದ ಬಜೆಟ್ ಮೂಲಕ ಪಡೆದು ಚೆಸ್ಕಾಂಗೆ ಭರ್ತಿ ಮಾಡುವಂತೆ ಜಿಲ್ಲಾಧಿಕಾರಿ ಇದೇ ಸಂದರ್ಭ ಅಧಿಕಾರಿಗಳಿಗೆ ಸಲಹೆ ನೀಡಿದರು.

ಕೂಟದ ಪ್ರಮುಖರಾದ ಎನ್.ಸಿ.ಪೊನ್ನಪ್ಪ ಕ್ಲೈವಾ, ಎಂ.ಎ.ನಂದಾ ಬೆಳ್ಯಪ್ಪ, ಕೆಜಿಎಫ್ ಸಂಘದ ವಿಶ್ವನಾಥ್, ರಮೇಶ್ ದಾಸಂಡ, ಸತೀಶ್ ಜಿ.ಜಿ.ಗರಗಂದೂರು, ಅರ್ಪಿತ್ ಪೂವಣ್ಣ ಅಂದಗೋವೆ, ಚಂದ್ರಶೇಖರ್, ಗೌತಮ್ ಕಲ್ಲೂರು ಮತ್ತಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಯುವಕರ ಮೊದಲ ಆದ್ಯತೆ ಏನಿರಬೇಕು? ರಾಜಕೀಯವಲ್ಲ, ಆರ್ಥಿಕ ಸ್ವಾವಲಂಬನೆ!

ಯುವಕರ ಮೊದಲ ಆದ್ಯತೆ ರಾಜಕೀಯವಲ್ಲ, ಕೌಶಲ್ಯ ಮತ್ತು ಆರ್ಥಿಕ ಸ್ವಾವಲಂಬನೆ ಆಗಿರಬೇಕು ಎಂಬುದು…

22 hours ago

ಹವಾಮಾನ ವರದಿ | 15-07-2026 | ರಾಜ್ಯದಲ್ಲಿ ಮಳೆ ಯಾಕೆ ಕಡಿಮೆಯಾಗಿದೆ ? ಜುಲೈ 16 ರಿಂದ ಎಲ್ಲೆಲ್ಲಿ ಮಳೆ ಆರಂಭವಾಗಲಿದೆ?

ಜುಲೈ 16ರಿಂದ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ…

1 day ago

ಕರ್ನಾಟಕದ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್…! ಕಾರಣ..?

ರಾಜ್ಯದ ಕರಾವಳಿ ಹಾಗೂ ಒಳನಾಡಿನ ಕೆಲವು ಜಿಲ್ಲೆಗಳಿಗೆ IMD ಯೆಲ್ಲೋ ಅಲರ್ಟ್ ಘೋಷಿಸಿದೆ.…

2 days ago

ಕಸದ ತೆಂಗಿನಕಾಯಿಯೂ ಈಗ ರೈತರ ಸಂಪತ್ತು…! ಭುವನೇಶ್ವರದ ‘ವೇಸ್ಟ್ ಟು ವೆಲ್ತ್’ ಮಾದರಿ

ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…

3 days ago

ರಾಜ್ಯದಲ್ಲಿ ಬರದ ಛಾಯೆ- ರೈತರಿಗೆ ಎಕರೆಗೆ ₹50 ಸಾವಿರ ಪರಿಹಾರ ನೀಡಿ

ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…

3 days ago

ಹುಲಿ-ಚಿರತೆ ಹಾವಳಿ ನಿಯಂತ್ರಣಕ್ಕೆ ಆಗ್ರಹ – ಚಾಮರಾಜನಗರದಲ್ಲಿ ಅರಣ್ಯ ಇಲಾಖೆ ವಿರುದ್ಧ ರೈತ ಸಂಘಟನೆಗಳ ಪ್ರತಿಭಟನೆ

ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…

3 days ago