ನಮ್ಮೂರ ಸುದ್ದಿ

ವಿದ್ಯುತ್ ಸಮಸ್ಯೆ ಪರಿಹಾರಕ್ಕೆ ಏನು ಮಾಡಬಹುದು ? ಬಾಳಿಲದಲ್ಲಿ ನಡೆಯಿತು ಚರ್ಚೆ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಬಾಳಿಲ:  ನಮ್ಮೂರಿನ ವಿದ್ಯುತ್ ಸಮಸ್ಯೆ ಪರಿಹಾರಕ್ಕೆ ಏನು ಮಾಡಬಹುದು ? ಹೀಗೊಂದು ಚರ್ಚೆ ಬಾಳಿಲದಲ್ಲಿ ಮಂಗಳವಾರ ನಡೆಯಿತು.

Advertisement
Advertisement

ಭಾರತೀಯ ಕಿಸಾನ್ ಸಂಘ ಸುಳ್ಯ ತಾಲೂಕು ಸಮಿತಿಯ ವತಿಯಿಂದ ಬಾಳಿಲ ವಿದ್ಯಾಬೋಧಿನಿ ಪ್ರೌಢಶಾಲೆಯಲ್ಲಿ  ನಡೆದ ಬೆಳ್ಳಾರೆ ವಿದ್ಯುತ್ ಸಬ್‍ಸ್ಟೇಷನ್ ವ್ಯಾಪ್ತಿಯ ವಿದ್ಯುತ್ ಗ್ರಾಹಕರ ಸಮಾವೇಶದಲ್ಲಿ ವಿವಿಧ ಮಂದಿ ಅಭಿಪ್ರಾಯ ವ್ಯಕ್ತಪಡಿಸಿದರು.

ಕೃಷಿಕ ಡಾ| ಪಿ.ಆರ್ ಭಟ್ ಮಾತನಾಡಿ, ವಿದ್ಯುತ್ ಸಮಸ್ಯೆ ತಾಲೂಕಿನ ಒಂದು ಮೂಲಭೂತವಾದ ಸಮಸ್ಯೆಯಾಗಿದೆ. ಜನಪ್ರತಿನಿಧಿಗಳ ಮೇಲೆ ಸತತವಾಗಿ ಒತ್ತಡ ಹೇರುವುದರಿಂದ ಸಮಸ್ಯೆಯನ್ನು ಬಗೆಹರಿಸಲು ಸಾಧ್ಯವಿದೆ.  ಅಸಮರ್ಪಕ ವಿದ್ಯುತ್ ಪೂರೈಕೆಯಿಂದ ಕೃಷಿಕರು ಕಂಗಾಲಾಗಿದ್ದಾರೆ. ಜೊತೆಗೆ ಕುಡಿಯುವ ನೀರಿನ ಪೂರೈಕೆಗೆ ತೀವ್ರ ತೊಂದರೆಯಾಗುತ್ತಿದೆ ಎಂದರು. ಇದಕ್ಕಾಗಿ ನಾವೆಲ್ಲರೂ ದೊಡ್ಡ ಮಟ್ಟದಲ್ಲಿ ಹೋರಾಟ ನಡೆಸಿ ಸರಕಾರದ ಗಮನವನ್ನು ನಮ್ಮೂರಿನ ವಿದ್ಯುತ್ ಕೊರತೆ ಕಡೆಗೆ ಸೆಳೆಯಬೇಕು ಎಂದು  ಹೇಳಿದರು.

ಮಾಹಿತಿ ಹಕ್ಕುಗಳ ಬಗ್ಗೆ ಕರ್ವಂಕಲ್ಲು ಗೋಪಾಲಕೃಷ್ಣ ಭಟ್ ಹಾಗೂ ಇಲಾಖಾ ಮಾಹಿತಿಯನ್ನು ಪಂಜ ಉಪವಿಭಾಗದ ಜೂನಿಯರ್ ಇಂಜಿನಿಯರ್ ಪ್ರಸನ್ನ ನೀಡಿದರು.

ಬಳಕೆದಾರರ ವತಿಯಿಂದ ಸರಕಾರ ಹಾಗೂ ಸಂಬಂಧಿಸಿದ ಸಚಿವರಿಗೆ ಸಲ್ಲಿಸಿದ ದೂರು ಮತ್ತು ದೊರೆತ ಪ್ರತಿಕ್ರಿಯೆ ಪ್ರತಿಯನ್ನು ಭಾರತೀಯ ಕಿಸಾನ್ ಸಂಘದ ರಾಜ್ಯ ಸಂಚಾಲಕ ಎಂ.ಜಿ ಸತ್ಯನಾರಾಯಣ ವಾಚಿಸಿದರು.

Advertisement

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಭಾರತೀಯ ಕಿಸಾನ್ ಸಂಘದ ಸುಳ್ಯ ತಾಲೂಕು ಅಧ್ಯಕ್ಷ ಎನ್.ಜಿ ಪ್ರಭಾಕರ ರೈ ವಹಿಸಿದರು. ವೇದಿಕೆಯಲ್ಲಿ ಬಾಳಿಲ ಗ್ರಾಮ ಪಂಚಾಯತ್ ಅಧ್ಯಕ್ಷ ಕೃಷ್ಣಪ್ಪ ಪೂಜಾರಿ, ರಮೇಶ್ ಕೋಟೆ, ಎ.ಇ ಇ ಹರೀಶ್ ಉಪಸ್ಥಿತರಿದ್ದರು.

ನಿಡ್ಮಾರು ರಾಜಾರಾಮ್ ಸ್ವಾಗತಿಸಿ, ಜಗನ್ನಾಥ ರೈ ವಂದಿಸಿದರು. ತಾಲೂಕು ಪ್ರಧಾನ ಕಾರ್ಯದರ್ಶಿ ಎನ್.ಗೋಪಾಲಕೃಷ್ಣ ಭಟ್ ಪ್ರಸ್ತಾವನೆಗೈದರು. ಎನ್.ಜಿ ಲೋಕನಾಥ ರೈ ಕಾರ್ಯಕ್ರಮ ನಿರೂಪಿಸಿದರು.

 

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 12-06-2025 | ಮುಂದೂಡಿದ ಭಾರೀ ಮಳೆ..! | ಜೂ.13 ರಿಂದ ಮುಂದುವರಿಯುವ ಮಳೆ |

ಜೂನ್ 13ರಿಂದ ಗಾಳಿಯ ಚಲನೆಯು ನೈರುತ್ಯದಿಂದ ಈಶಾನ್ಯಕ್ಕೆ ಬದಲಾಗುವ ಸಾಧ್ಯತೆಗಳಿರುವುದರಿಂದ ರಾಜ್ಯದ ವಿವಿದೆಡೆ…

46 minutes ago

ತೆಂಗಿನ ಗೆರಟೆ ಮೌಲ್ಯವರ್ಧನೆ | ಇದು ಬರೀ “ಚಿಪ್ಪಿ”ಯಲ್ಲ ಇದರೊಳಗಿದೆ ಹಲವು ಬಗೆ..!

ತೆಂಗಿನ ಗೆರಟೆಯು ಮೌಲ್ಯವರ್ಧನೆಯಾದಾಗ ತೆಂಗಿನ ಒಟ್ಟಾರೆ ಆದಾಯವೂ ಹೆಚ್ಚಾಗಲು ಸಾಧ್ಯವಿದೆ. ಸದ್ಯ ಸಣ್ಣ…

4 hours ago

ಮಳೆ ಹಿನ್ನೆಲೆ | ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಶಾಲೆಗಳಿಗೆ ರಜೆ

ಮುಂದಿನ ಎರಡು ದಿನಗಳ ಕಾಲ ಕರಾವಳಿ ಜಿಲ್ಲೆಯಲ್ಲಿ ಮಳೆಯ ತೀವ್ರತೆ ಹೆಚ್ಚಿರಲಿದೆ. ಹೀಗಾಗಿ…

8 hours ago

ಶನಿ ಬುಧರಿಂದ ನವಪಂಚಮ ರಾಜಯೋಗ

2025 ರಲ್ಲಿ ಶನಿ ಮತ್ತು ಬುಧ ಗ್ರಹಗಳ ಸಂಯೋಜನೆಯಿಂದ ನಿರ್ಮಾಣವಾಗುತ್ತಿರುವ ನವಪಂಚಮ ರಾಜಯೋಗವು…

8 hours ago

ಸಂಪಾಜೆ ಗ್ರಾಮದಲ್ಲಿ ವಿಕಸಿತ ಕೃಷಿ ಸಂಕಲ್ಪ ಅಭಿಯಾನ

ವಿಕಸಿತ ಕೃಷಿ ಸಂಕಲ್ಪ ಅಭಿಯಾನ ಕಾರ್ಯಕ್ರಮ, ರಾಷ್ಟ್ರೀಯ ಕೃಷಿ ವಿಕಾಸ ಯೋಜನೆ ಹಾಗೂ…

17 hours ago

ಗೆದ್ದದ್ದು ಬೆಂಗಳೂರು ಅಲ್ಲ, ಇಂಗ್ಲೇಂಡಿನ ಡಿಯಾಜಿಯೋ ಕಂಪೆನಿ…!!! ಗೊತ್ತಾ..?

ಎಲ್ಲಿ  ಉಚಿತವೆಂಬ ಆಮಿಶ ಇದೆಯೋ  ಅಲ್ಲಿ ತಳ್ಳಾಟವೂ  ಇರುತ್ತದೆ. ಸರಕಾರಿ ಬಸ್ ಗಳಲ್ಲಿ…

17 hours ago