Advertisement
ನಮ್ಮೂರ ಸುದ್ದಿ

ವಿದ್ಯುತ್ ಸಮಸ್ಯೆ ಪರಿಹಾರಕ್ಕೆ ಏನು ಮಾಡಬಹುದು ? ಬಾಳಿಲದಲ್ಲಿ ನಡೆಯಿತು ಚರ್ಚೆ

Share

ಬಾಳಿಲ:  ನಮ್ಮೂರಿನ ವಿದ್ಯುತ್ ಸಮಸ್ಯೆ ಪರಿಹಾರಕ್ಕೆ ಏನು ಮಾಡಬಹುದು ? ಹೀಗೊಂದು ಚರ್ಚೆ ಬಾಳಿಲದಲ್ಲಿ ಮಂಗಳವಾರ ನಡೆಯಿತು.

Advertisement
Advertisement
Advertisement
Advertisement

ಭಾರತೀಯ ಕಿಸಾನ್ ಸಂಘ ಸುಳ್ಯ ತಾಲೂಕು ಸಮಿತಿಯ ವತಿಯಿಂದ ಬಾಳಿಲ ವಿದ್ಯಾಬೋಧಿನಿ ಪ್ರೌಢಶಾಲೆಯಲ್ಲಿ  ನಡೆದ ಬೆಳ್ಳಾರೆ ವಿದ್ಯುತ್ ಸಬ್‍ಸ್ಟೇಷನ್ ವ್ಯಾಪ್ತಿಯ ವಿದ್ಯುತ್ ಗ್ರಾಹಕರ ಸಮಾವೇಶದಲ್ಲಿ ವಿವಿಧ ಮಂದಿ ಅಭಿಪ್ರಾಯ ವ್ಯಕ್ತಪಡಿಸಿದರು.

Advertisement

ಕೃಷಿಕ ಡಾ| ಪಿ.ಆರ್ ಭಟ್ ಮಾತನಾಡಿ, ವಿದ್ಯುತ್ ಸಮಸ್ಯೆ ತಾಲೂಕಿನ ಒಂದು ಮೂಲಭೂತವಾದ ಸಮಸ್ಯೆಯಾಗಿದೆ. ಜನಪ್ರತಿನಿಧಿಗಳ ಮೇಲೆ ಸತತವಾಗಿ ಒತ್ತಡ ಹೇರುವುದರಿಂದ ಸಮಸ್ಯೆಯನ್ನು ಬಗೆಹರಿಸಲು ಸಾಧ್ಯವಿದೆ.  ಅಸಮರ್ಪಕ ವಿದ್ಯುತ್ ಪೂರೈಕೆಯಿಂದ ಕೃಷಿಕರು ಕಂಗಾಲಾಗಿದ್ದಾರೆ. ಜೊತೆಗೆ ಕುಡಿಯುವ ನೀರಿನ ಪೂರೈಕೆಗೆ ತೀವ್ರ ತೊಂದರೆಯಾಗುತ್ತಿದೆ ಎಂದರು. ಇದಕ್ಕಾಗಿ ನಾವೆಲ್ಲರೂ ದೊಡ್ಡ ಮಟ್ಟದಲ್ಲಿ ಹೋರಾಟ ನಡೆಸಿ ಸರಕಾರದ ಗಮನವನ್ನು ನಮ್ಮೂರಿನ ವಿದ್ಯುತ್ ಕೊರತೆ ಕಡೆಗೆ ಸೆಳೆಯಬೇಕು ಎಂದು  ಹೇಳಿದರು.

ಮಾಹಿತಿ ಹಕ್ಕುಗಳ ಬಗ್ಗೆ ಕರ್ವಂಕಲ್ಲು ಗೋಪಾಲಕೃಷ್ಣ ಭಟ್ ಹಾಗೂ ಇಲಾಖಾ ಮಾಹಿತಿಯನ್ನು ಪಂಜ ಉಪವಿಭಾಗದ ಜೂನಿಯರ್ ಇಂಜಿನಿಯರ್ ಪ್ರಸನ್ನ ನೀಡಿದರು.

Advertisement

ಬಳಕೆದಾರರ ವತಿಯಿಂದ ಸರಕಾರ ಹಾಗೂ ಸಂಬಂಧಿಸಿದ ಸಚಿವರಿಗೆ ಸಲ್ಲಿಸಿದ ದೂರು ಮತ್ತು ದೊರೆತ ಪ್ರತಿಕ್ರಿಯೆ ಪ್ರತಿಯನ್ನು ಭಾರತೀಯ ಕಿಸಾನ್ ಸಂಘದ ರಾಜ್ಯ ಸಂಚಾಲಕ ಎಂ.ಜಿ ಸತ್ಯನಾರಾಯಣ ವಾಚಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಭಾರತೀಯ ಕಿಸಾನ್ ಸಂಘದ ಸುಳ್ಯ ತಾಲೂಕು ಅಧ್ಯಕ್ಷ ಎನ್.ಜಿ ಪ್ರಭಾಕರ ರೈ ವಹಿಸಿದರು. ವೇದಿಕೆಯಲ್ಲಿ ಬಾಳಿಲ ಗ್ರಾಮ ಪಂಚಾಯತ್ ಅಧ್ಯಕ್ಷ ಕೃಷ್ಣಪ್ಪ ಪೂಜಾರಿ, ರಮೇಶ್ ಕೋಟೆ, ಎ.ಇ ಇ ಹರೀಶ್ ಉಪಸ್ಥಿತರಿದ್ದರು.

Advertisement

ನಿಡ್ಮಾರು ರಾಜಾರಾಮ್ ಸ್ವಾಗತಿಸಿ, ಜಗನ್ನಾಥ ರೈ ವಂದಿಸಿದರು. ತಾಲೂಕು ಪ್ರಧಾನ ಕಾರ್ಯದರ್ಶಿ ಎನ್.ಗೋಪಾಲಕೃಷ್ಣ ಭಟ್ ಪ್ರಸ್ತಾವನೆಗೈದರು. ಎನ್.ಜಿ ಲೋಕನಾಥ ರೈ ಕಾರ್ಯಕ್ರಮ ನಿರೂಪಿಸಿದರು.

 

Advertisement

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಗ್ರಾಮೀಣ, ನಗರ ಪ್ರದೇಶದ ಕಟ್ಟೆಗಳ ಅಭಿವೃದ್ಧಿ – ಧಾರ್ಮಿಕ ಪರಂಪರೆ ಸಂರಕ್ಷಣೆ

ದೇಶಾದ್ಯಂತ ನಗರೀಕರಣ ಬೆಳವಣಿಗೆಯಾದಂತೆ ಸಮುದಾಯದ ಸ್ಥಳಗಳು ಕಣ್ಮರೆಯಾಗಿವೆ. ಕರಾವಳಿ ನಗರದಾದ್ಯಂತ  ಸುಮಾರು 250…

17 hours ago

ಮಾನವ-ವನ್ಯಜೀವಿ ಸಂಘರ್ಷ ತಗ್ಗಿಸಲು ಸಕಲ ಕ್ರಮ | ಮುಖ್ಯಮಂತ್ರಿ  ಸಿದ್ದರಾಮಯ್ಯ

ರಾಜ್ಯದ ಕಾಡಂಚಿನ ಪ್ರದೇಶದಲ್ಲಿ  ಮಾನವ ಮತ್ತು  ವನ್ಯಜೀವಿ ಸಂಘರ್ಷ ತಡೆಯುವ ನಿಟ್ಟಿನಲ್ಲಿ ಸರ್ಕಾರ…

17 hours ago

ಎಲ್ಲಾ ಕೃಷಿ ಉತ್ಪನ್ನಗಳಿಗೆ ಎಂಎಸ್‌ಪಿ ಕಾನೂನು ಜಾರಿಗೆ ರಾಜ್ಯ ರೈತ ಸಂಘಟನೆಗಳ ಮನವಿ

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ನಾಳೆ ಮಂಡಿಸಲಿರುವ ಕೇಂದ್ರ ಬಜೆಟ್ 2025…

17 hours ago

ಗ್ರೇಟರ್ ಹೆಸರಗಟ್ಟ ಹುಲ್ಲುಗಾವಲು ಸಂರಕ್ಷಣಾ ಮೀಸಲು ಪ್ರದೇಶ ಶುದ್ಧ ಪರಿಸರಕ್ಕೆ ಸಹಕಾರಿ | ಅರಣ್ಯ ಸಚಿವ ಈಶ್ವರ ಖಂಡ್ರೆ ಹೇಳಿಕೆ

ಬೆಂಗಳೂರಿನ ಯಲಹಂಕ ತಾಲ್ಲೂಕಿನ ಒಟ್ಟು 5678 ಎಕರೆ ಗುಂಟೆ ಪ್ರದೇಶವನ್ನು ಪರಿಸರ ಸಂರಕ್ಷಣೆ…

17 hours ago