Advertisement
ನಮ್ಮೂರ ಸುದ್ದಿ

ವಿದ್ಯುತ್ ಸಮಸ್ಯೆ ಪರಿಹಾರಕ್ಕೆ ಏನು ಮಾಡಬಹುದು ? ಬಾಳಿಲದಲ್ಲಿ ನಡೆಯಿತು ಚರ್ಚೆ

Share

ಬಾಳಿಲ:  ನಮ್ಮೂರಿನ ವಿದ್ಯುತ್ ಸಮಸ್ಯೆ ಪರಿಹಾರಕ್ಕೆ ಏನು ಮಾಡಬಹುದು ? ಹೀಗೊಂದು ಚರ್ಚೆ ಬಾಳಿಲದಲ್ಲಿ ಮಂಗಳವಾರ ನಡೆಯಿತು.

ಭಾರತೀಯ ಕಿಸಾನ್ ಸಂಘ ಸುಳ್ಯ ತಾಲೂಕು ಸಮಿತಿಯ ವತಿಯಿಂದ ಬಾಳಿಲ ವಿದ್ಯಾಬೋಧಿನಿ ಪ್ರೌಢಶಾಲೆಯಲ್ಲಿ  ನಡೆದ ಬೆಳ್ಳಾರೆ ವಿದ್ಯುತ್ ಸಬ್‍ಸ್ಟೇಷನ್ ವ್ಯಾಪ್ತಿಯ ವಿದ್ಯುತ್ ಗ್ರಾಹಕರ ಸಮಾವೇಶದಲ್ಲಿ ವಿವಿಧ ಮಂದಿ ಅಭಿಪ್ರಾಯ ವ್ಯಕ್ತಪಡಿಸಿದರು.

ಕೃಷಿಕ ಡಾ| ಪಿ.ಆರ್ ಭಟ್ ಮಾತನಾಡಿ, ವಿದ್ಯುತ್ ಸಮಸ್ಯೆ ತಾಲೂಕಿನ ಒಂದು ಮೂಲಭೂತವಾದ ಸಮಸ್ಯೆಯಾಗಿದೆ. ಜನಪ್ರತಿನಿಧಿಗಳ ಮೇಲೆ ಸತತವಾಗಿ ಒತ್ತಡ ಹೇರುವುದರಿಂದ ಸಮಸ್ಯೆಯನ್ನು ಬಗೆಹರಿಸಲು ಸಾಧ್ಯವಿದೆ.  ಅಸಮರ್ಪಕ ವಿದ್ಯುತ್ ಪೂರೈಕೆಯಿಂದ ಕೃಷಿಕರು ಕಂಗಾಲಾಗಿದ್ದಾರೆ. ಜೊತೆಗೆ ಕುಡಿಯುವ ನೀರಿನ ಪೂರೈಕೆಗೆ ತೀವ್ರ ತೊಂದರೆಯಾಗುತ್ತಿದೆ ಎಂದರು. ಇದಕ್ಕಾಗಿ ನಾವೆಲ್ಲರೂ ದೊಡ್ಡ ಮಟ್ಟದಲ್ಲಿ ಹೋರಾಟ ನಡೆಸಿ ಸರಕಾರದ ಗಮನವನ್ನು ನಮ್ಮೂರಿನ ವಿದ್ಯುತ್ ಕೊರತೆ ಕಡೆಗೆ ಸೆಳೆಯಬೇಕು ಎಂದು  ಹೇಳಿದರು.

ಮಾಹಿತಿ ಹಕ್ಕುಗಳ ಬಗ್ಗೆ ಕರ್ವಂಕಲ್ಲು ಗೋಪಾಲಕೃಷ್ಣ ಭಟ್ ಹಾಗೂ ಇಲಾಖಾ ಮಾಹಿತಿಯನ್ನು ಪಂಜ ಉಪವಿಭಾಗದ ಜೂನಿಯರ್ ಇಂಜಿನಿಯರ್ ಪ್ರಸನ್ನ ನೀಡಿದರು.

ಬಳಕೆದಾರರ ವತಿಯಿಂದ ಸರಕಾರ ಹಾಗೂ ಸಂಬಂಧಿಸಿದ ಸಚಿವರಿಗೆ ಸಲ್ಲಿಸಿದ ದೂರು ಮತ್ತು ದೊರೆತ ಪ್ರತಿಕ್ರಿಯೆ ಪ್ರತಿಯನ್ನು ಭಾರತೀಯ ಕಿಸಾನ್ ಸಂಘದ ರಾಜ್ಯ ಸಂಚಾಲಕ ಎಂ.ಜಿ ಸತ್ಯನಾರಾಯಣ ವಾಚಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಭಾರತೀಯ ಕಿಸಾನ್ ಸಂಘದ ಸುಳ್ಯ ತಾಲೂಕು ಅಧ್ಯಕ್ಷ ಎನ್.ಜಿ ಪ್ರಭಾಕರ ರೈ ವಹಿಸಿದರು. ವೇದಿಕೆಯಲ್ಲಿ ಬಾಳಿಲ ಗ್ರಾಮ ಪಂಚಾಯತ್ ಅಧ್ಯಕ್ಷ ಕೃಷ್ಣಪ್ಪ ಪೂಜಾರಿ, ರಮೇಶ್ ಕೋಟೆ, ಎ.ಇ ಇ ಹರೀಶ್ ಉಪಸ್ಥಿತರಿದ್ದರು.

ನಿಡ್ಮಾರು ರಾಜಾರಾಮ್ ಸ್ವಾಗತಿಸಿ, ಜಗನ್ನಾಥ ರೈ ವಂದಿಸಿದರು. ತಾಲೂಕು ಪ್ರಧಾನ ಕಾರ್ಯದರ್ಶಿ ಎನ್.ಗೋಪಾಲಕೃಷ್ಣ ಭಟ್ ಪ್ರಸ್ತಾವನೆಗೈದರು. ಎನ್.ಜಿ ಲೋಕನಾಥ ರೈ ಕಾರ್ಯಕ್ರಮ ನಿರೂಪಿಸಿದರು.

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ತಳಿಗಳ ಬಗ್ಗೆ ಹೊಸ ವೈಜ್ಞಾನಿಕ ಅಧ್ಯಯನ – ಅಡಿಕೆ ತಳಿಗಳಲ್ಲೂ ಆಲ್ಕಲಾಯ್ಡ್ ಪ್ರಮಾಣದಲ್ಲಿ ವ್ಯತ್ಯಾಸ

ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…

22 hours ago

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ – ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಯಲ್ಲಿ ಜು.25ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…

1 day ago

ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜುಲೈ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…

1 day ago

ರಸಗೊಬ್ಬರದಲ್ಲಿ ಆತ್ಮನಿರ್ಭರತೆ ಅನಿವಾರ್ಯ – ಸಂಕಷ್ಟದಿಂದ ಅವಕಾಶದತ್ತ ಭಾರತ ಸಾಗಬೇಕಿದೆ

ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…

2 days ago

ಹವಾಮಾನ ವರದಿ | 24-07-2026 | ಕರಾವಳಿಯಲ್ಲಿ ಮುಂದುವರಿಯುವ ಮಳೆ, ಜುಲೈ ಅಂತ್ಯದ ವೇಳೆಗೆ ಮುಂಗಾರು ಹೇಗೆ..?

ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…

2 days ago