ಬೆಳ್ಳಾರೆ:ವಿದ್ಯೆ ಕಲಿಕೆಯು ಮನುಷ್ಯನ ವ್ಯಕ್ತಿತ್ವವನ್ನು ರೂಪಿಸುತ್ತದೆ. ಮಾನವನ ಗುಣ ನಡತೆಯನ್ನು ವಿದ್ಯೆಯು ಶ್ರೇಷ್ಠತೆಯತ್ತ ಕೊಂಡೊಯ್ಯಬಲ್ಲದು ಎಂದು ಬೆಳ್ಳಾರೆ ಝಕರಿಯಾ ಜುಮಾ ಮಸೀದಿಯ ಮುದರ್ರಿಸ್ ತಾಜುದ್ದೀನ್ ರಹ್ಮಾನಿ ಹೇಳಿದರು.
2019-20ನೇ ಸಾಲಿನ ಝಕರಿಯಾ ಜುಮಾ ಮಸೀದಿಯ ಹಿದಾಯತುಲ್ ಇಸ್ಲಾಂ ಹೈಯರ್ ಸೆಕೆಂಡರಿ ಮದರಸದ ಪ್ರಾರಂಭೋತ್ಸವವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಉತ್ತಮ ವಿದ್ಯೆಯಿಂದ ಬದುಕು ಸಾರ್ಥಕತೆಯನ್ನು ಪಡೆದುಕೊಳ್ಳುತ್ತದೆ. ಇಸ್ಲಾಂ ವಿದ್ಯೆಗೆ ಮಹತ್ವ ಕೊಟ್ಟ ಧರ್ಮವಾಗಿದ್ದು, ಬದುಕಿನ ಗುರಿಯೆಡೆಗಿನ ಸ್ಪಷ್ಟತೆಯನ್ನು ತೋರಿಸಿಕೊಡುತ್ತದೆ ಎಂದು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಸೀದಿಯ ಉಪಾಧ್ಯಕ್ಷ ಯು.ಹೆಚ್ ಅಬೂಬಕ್ಕರ್ ವಹಿಸಿದ್ದರು.ವೇದಿಕೆಯಲ್ಲಿ ಮಸೀದಿಯ ಆಡಳಿತ ಮಂಡಳಿ ಸದಸ್ಯರು, ಮದರಸ ಅಧ್ಯಾಪಕರುಗಳಾದ ಸುಲೈಮಾನ್ ಮುಸ್ಲಿಯಾರ್, ಝೈನುದ್ದೀನ್ ಮುಸ್ಲಿಯಾರ್ ಹಾಗು ಸಭೆಯಲ್ಲಿ ವಿದ್ಯಾರ್ಥಿಗಳ ಹೆತ್ತವರು ಉಪಸ್ಥಿತರಿದ್ದರು.
ಹಿದಾಯತುಲ್ ಇಸ್ಲಾಂ ಹೈಯರ್ ಸೆಕೆಂಡರಿ ಮದರಸದ ಮುಅಲ್ಲಿಂ ಮುಹಮ್ಮದ್ ಮುಸ್ಲಿಯಾರ್ ಮುಂಡೋಳೆ ಸ್ವಾಗತಿಸಿ, ವಿದ್ಯಾರ್ಥಿಗಳಿಗೆ ಪ್ರತಿಜ್ಞಾವಿಧಿ ಬೋಧಿಸಿದರು. ಅಧ್ಯಾಪಕ ಹಸೈನಾರ್ ಮುಸ್ಲಿಯಾರ್ ವಂದಿಸಿದರು.
ಬಂಗಾಳಕೊಲ್ಲಿಯ ಪಶ್ಚಿಮ ಬಂಗಾಳ ಕರಾವಳಿಯಲ್ಲಿ ಉಂಟಾಗಲಿರುವ ವಾಯುಭಾರ ಕುಸಿತವು ನಾಳೆ ಬಂಗ್ಲಾ ದೇಶದ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷ್ಗಳನ್ನು ಸಂಪರ್ಕಿಸಿ 9535156490
ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ…
ಮಳೆಯ ಕಾರಣದಿಂದ ಪೆರಿಯಾರ್ ನದಿಯ ನೀರಿನ ಮಟ್ಟ ಏರಿಕೆಯಾಗಿದೆ. ಹೀಗಾಗಿ ಆಲುವಾ ಶಿವ ದೇವಾಲಯದ…
ಬಂಗಾಳಕೊಲ್ಲಿಯ ಪಶ್ಚಿಮ ಬಂಗಾಳ ಕರಾವಳಿಯಲ್ಲಿ ಉಂಟಗಿರುವ ವಾಯುಭಾರ ಕುಸಿತವು ಮುಂದಿನ 3 ಅಥವಾ…
ಅಡಿಕೆಯ ಬಹು ಪಾಲು ಬೀಡ, ಸಿಹಿ ಸುಪಾರಿ, ಗುಟ್ಕಾ,ಪಾನ್ ಮಸಾಲ ಇತ್ಯಾದಿಗಳ ತಯಾರಿಯಲ್ಲಿ…