ಬೆಳ್ಳಾರೆ:ವಿದ್ಯೆ ಕಲಿಕೆಯು ಮನುಷ್ಯನ ವ್ಯಕ್ತಿತ್ವವನ್ನು ರೂಪಿಸುತ್ತದೆ. ಮಾನವನ ಗುಣ ನಡತೆಯನ್ನು ವಿದ್ಯೆಯು ಶ್ರೇಷ್ಠತೆಯತ್ತ ಕೊಂಡೊಯ್ಯಬಲ್ಲದು ಎಂದು ಬೆಳ್ಳಾರೆ ಝಕರಿಯಾ ಜುಮಾ ಮಸೀದಿಯ ಮುದರ್ರಿಸ್ ತಾಜುದ್ದೀನ್ ರಹ್ಮಾನಿ ಹೇಳಿದರು.
2019-20ನೇ ಸಾಲಿನ ಝಕರಿಯಾ ಜುಮಾ ಮಸೀದಿಯ ಹಿದಾಯತುಲ್ ಇಸ್ಲಾಂ ಹೈಯರ್ ಸೆಕೆಂಡರಿ ಮದರಸದ ಪ್ರಾರಂಭೋತ್ಸವವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಉತ್ತಮ ವಿದ್ಯೆಯಿಂದ ಬದುಕು ಸಾರ್ಥಕತೆಯನ್ನು ಪಡೆದುಕೊಳ್ಳುತ್ತದೆ. ಇಸ್ಲಾಂ ವಿದ್ಯೆಗೆ ಮಹತ್ವ ಕೊಟ್ಟ ಧರ್ಮವಾಗಿದ್ದು, ಬದುಕಿನ ಗುರಿಯೆಡೆಗಿನ ಸ್ಪಷ್ಟತೆಯನ್ನು ತೋರಿಸಿಕೊಡುತ್ತದೆ ಎಂದು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಸೀದಿಯ ಉಪಾಧ್ಯಕ್ಷ ಯು.ಹೆಚ್ ಅಬೂಬಕ್ಕರ್ ವಹಿಸಿದ್ದರು.ವೇದಿಕೆಯಲ್ಲಿ ಮಸೀದಿಯ ಆಡಳಿತ ಮಂಡಳಿ ಸದಸ್ಯರು, ಮದರಸ ಅಧ್ಯಾಪಕರುಗಳಾದ ಸುಲೈಮಾನ್ ಮುಸ್ಲಿಯಾರ್, ಝೈನುದ್ದೀನ್ ಮುಸ್ಲಿಯಾರ್ ಹಾಗು ಸಭೆಯಲ್ಲಿ ವಿದ್ಯಾರ್ಥಿಗಳ ಹೆತ್ತವರು ಉಪಸ್ಥಿತರಿದ್ದರು.
ಹಿದಾಯತುಲ್ ಇಸ್ಲಾಂ ಹೈಯರ್ ಸೆಕೆಂಡರಿ ಮದರಸದ ಮುಅಲ್ಲಿಂ ಮುಹಮ್ಮದ್ ಮುಸ್ಲಿಯಾರ್ ಮುಂಡೋಳೆ ಸ್ವಾಗತಿಸಿ, ವಿದ್ಯಾರ್ಥಿಗಳಿಗೆ ಪ್ರತಿಜ್ಞಾವಿಧಿ ಬೋಧಿಸಿದರು. ಅಧ್ಯಾಪಕ ಹಸೈನಾರ್ ಮುಸ್ಲಿಯಾರ್ ವಂದಿಸಿದರು.
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…
ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…
ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…