ಬೆಳ್ಳಾರೆ:ವಿದ್ಯೆ ಕಲಿಕೆಯು ಮನುಷ್ಯನ ವ್ಯಕ್ತಿತ್ವವನ್ನು ರೂಪಿಸುತ್ತದೆ. ಮಾನವನ ಗುಣ ನಡತೆಯನ್ನು ವಿದ್ಯೆಯು ಶ್ರೇಷ್ಠತೆಯತ್ತ ಕೊಂಡೊಯ್ಯಬಲ್ಲದು ಎಂದು ಬೆಳ್ಳಾರೆ ಝಕರಿಯಾ ಜುಮಾ ಮಸೀದಿಯ ಮುದರ್ರಿಸ್ ತಾಜುದ್ದೀನ್ ರಹ್ಮಾನಿ ಹೇಳಿದರು.
2019-20ನೇ ಸಾಲಿನ ಝಕರಿಯಾ ಜುಮಾ ಮಸೀದಿಯ ಹಿದಾಯತುಲ್ ಇಸ್ಲಾಂ ಹೈಯರ್ ಸೆಕೆಂಡರಿ ಮದರಸದ ಪ್ರಾರಂಭೋತ್ಸವವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಉತ್ತಮ ವಿದ್ಯೆಯಿಂದ ಬದುಕು ಸಾರ್ಥಕತೆಯನ್ನು ಪಡೆದುಕೊಳ್ಳುತ್ತದೆ. ಇಸ್ಲಾಂ ವಿದ್ಯೆಗೆ ಮಹತ್ವ ಕೊಟ್ಟ ಧರ್ಮವಾಗಿದ್ದು, ಬದುಕಿನ ಗುರಿಯೆಡೆಗಿನ ಸ್ಪಷ್ಟತೆಯನ್ನು ತೋರಿಸಿಕೊಡುತ್ತದೆ ಎಂದು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಸೀದಿಯ ಉಪಾಧ್ಯಕ್ಷ ಯು.ಹೆಚ್ ಅಬೂಬಕ್ಕರ್ ವಹಿಸಿದ್ದರು.ವೇದಿಕೆಯಲ್ಲಿ ಮಸೀದಿಯ ಆಡಳಿತ ಮಂಡಳಿ ಸದಸ್ಯರು, ಮದರಸ ಅಧ್ಯಾಪಕರುಗಳಾದ ಸುಲೈಮಾನ್ ಮುಸ್ಲಿಯಾರ್, ಝೈನುದ್ದೀನ್ ಮುಸ್ಲಿಯಾರ್ ಹಾಗು ಸಭೆಯಲ್ಲಿ ವಿದ್ಯಾರ್ಥಿಗಳ ಹೆತ್ತವರು ಉಪಸ್ಥಿತರಿದ್ದರು.
ಹಿದಾಯತುಲ್ ಇಸ್ಲಾಂ ಹೈಯರ್ ಸೆಕೆಂಡರಿ ಮದರಸದ ಮುಅಲ್ಲಿಂ ಮುಹಮ್ಮದ್ ಮುಸ್ಲಿಯಾರ್ ಮುಂಡೋಳೆ ಸ್ವಾಗತಿಸಿ, ವಿದ್ಯಾರ್ಥಿಗಳಿಗೆ ಪ್ರತಿಜ್ಞಾವಿಧಿ ಬೋಧಿಸಿದರು. ಅಧ್ಯಾಪಕ ಹಸೈನಾರ್ ಮುಸ್ಲಿಯಾರ್ ವಂದಿಸಿದರು.
ಚಿಕ್ಕಮಗಳೂರಿನ ರೈತ ಶಿವಪ್ರಸಾದ್ ಬೇವಿನ ಬೀಜ ಸಂಸ್ಕರಣೆಯ ಮೂಲಕ ಯಶಸ್ಸು ಕಂಡಿದ್ದಾರೆ. ಅವರ…
ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು ಭಾರತೀಯ ಕೃಷಿಗೆ ದೊಡ್ಡ ಹೊಡೆತವಾಗುವ…
ಯಾದಗಿರಿಯಲ್ಲಿ ಬಿಸಿಗಾಳಿ ಹೆಚ್ಚಾಗುವ ಸಾಧ್ಯತೆ ಹಿನ್ನೆಲೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಸಾರ್ವಜನಿಕರು ಹಾಗೂ…
ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ಉತ್ತಮ ಇಳುವರಿ ಪಡೆದ ವಿಜಯಕುಮಾರ್ ಪಾಟೀಲ್ ಇತರ ರೈತರಿಗೆ…
2026ರ ಮುಂಗಾರು ಬೇಗ ಆರಂಭವಾಗುವ ಸಾಧ್ಯತೆ ಇದ್ದರೂ, ಮಳೆಯ ಪ್ರಮಾಣ ಕಡಿಮೆಯಾಗಬಹುದು. ಇದು…
ಈರುಳ್ಳಿ ಬೆಳೆಯಲ್ಲಿ ಜೇನುನೊಣಗಳ ಪರಾಗಸ್ಪರ್ಶದಿಂದ ಇಳುವರಿ ಹೆಚ್ಚಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ. ರೈತರಿಗೆ…