ಸುಳ್ಯ: ಜಾಲ್ಸೂರು ಗ್ರಾಮದ ವಿನೋಬಾನಗರದ ವಿವೇಕಾನಂದ ವಿದ್ಯಾಸಂಸ್ಥೆಯಲ್ಲಿ ಎಂ.ಆರ್.ಪಿ.ಎಲ್. ಕೊಡುಗೆ ಅನುದಾನದಲ್ಲಿ ನಿರ್ಮಾಣಗೊಳ್ಳುತ್ತಿರುವ ನೂತನ ಶಾಲಾ ಕಟ್ಟಡದ ಭೂಮಿ ಪೂಜೆಯು ಶುಕ್ರವಾರ ಜರುಗಿತು.
ಸಂಸದ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಭೂಮಿಪೂಜೆ ನೆರವೇರಿಸಿದರು. ಗುಣಮಟ್ಟದ ಶಿಕ್ಷಣ ನೀಡುವ ಶಿಕ್ಷಣ ಸಂಸ್ಥೆಗಳ ಬೆಳವಣಿಗೆಗೆ ಎಲ್ಲಾ ರೀತಿಯ ನೆರವು, ಸಹಕಾರ ನೀಡುವುದಾಗಿ ಅವರು ಹೇಳಿದರು. ವಿವೇಕಾನಂದ ವಿದ್ಯಾಸಂಸ್ಥೆಗೆ ಸುಸಜ್ಜಿತ ಕ್ರೀಡಾಂಗಣ ನಿರ್ಮಾಣದ ಅಗತ್ಯವಿದೆ. ಅದಕ್ಕೆ ಪ್ರಯತ್ನ ನಡೆಸುವುದಾಗಿ ಅವರು ಹೇಳಿದರು.
ಶಾಸಕ ಎಸ್.ಅಂಗಾರ, ತಾ.ಪಂ. ಅಧ್ಯಕ್ಷ ಚನಿಯ ಕಲ್ತಡ್ಕ, ಜಿ.ಪಂ.ಸದಸ್ಯರಾದ ಪುಷ್ಪಾವತಿ ಬಾಳಿಲ, ಹರೀಶ್ ಕಂಜಿಪಿಲಿ, ಜಾಲ್ಸೂರು ಗ್ರಾ.ಪಂ. ಅಧ್ಯಕ್ಷೆ ಶಶಿಕಲಾ ಎಸ್.ನಾಯಕ್, ಎಂ.ಆರ್.ಪಿ.ಎಲ್.ಜನರಲ್ ಮ್ಯಾನೇಜರ್ ಸುಬ್ರಹ್ಮಣ್ಯ ಭಟ್, ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ನಿರ್ದೇಶಕ ನ.ಸೀತಾರಾಮ, ಶಾಲಾ ಸ್ಥಾಪಕಾಧ್ಯಕ್ಷ ಕೆ. ಉಪೇಂದ್ರ ಕಾಮತ್, ಶಾಲಾ ಸಂಚಾಲಕ ಕೆ. ಸುಧಾಕರ ಕಾಮತ್ ವಿನೋಬಾನಗರ, ವಿದ್ಯಾಸಂಸ್ಥೆಯ ಆಡಳಿತ ಮಂಡಳಿಯ ಅಧ್ಯಕ್ಷ ಶ್ಯಾಮ್ ಪ್ರಸಾದ್ ಅಡ್ಡಂತಡ್ಕ, ಕನಕಮಜಲು ಪ್ರಾ.ಕೃ.ಪ.ಸ.ಸಂಘದ ಅಧ್ಯಕ್ಷ ಡಾ.ಗೋಪಾಲಕೃಷ್ಣ ಭಟ್, ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಇಂಡೋನೇಷ್ಯಾದ ಸುಲವೆಸಿಯಲ್ಲಿ ಪತ್ತೆಯಾದ ಸುಮಾರು 25,000 ವರ್ಷಗಳ ಹಿಂದಿನ ಮಾನವ ಹಲ್ಲುಗಳಲ್ಲಿ ಅಡಿಕೆ…
‘ಹನುಮಾನ್ ಅಂಶ್’ ಸಿನಿಮಾ 40ನೇ ದಿನವೂ ₹8.25 ಕೋಟಿ ಗಳಿಸಿ ಬಾಕ್ಸ್ ಆಫೀಸ್ನಲ್ಲಿ…
ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…
ಕೋಲಾರದಿಂದ ಬೆಂಗಳೂರಿಗೆ ಸಾಗಿಸಲಾಗುತ್ತಿದ್ದ ಸುಮಾರು 10 ಟನ್ ಸಿಂಥೆಟಿಕ್ ಅಡಿಕೆಯನ್ನು ಅಧಿಕಾರಿಗಳು ವಶಪಡಿಸಿಕೊಂಡಿರುವುದಾಗಿ…
ಮಂಗಳೂರಿನಲ್ಲಿ ಸೆ.18ರಂದು ನಡೆಯಲಿರುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಅಡಿಕೆ ಬೆಳೆಗಾರರ ಸಮಸ್ಯೆಗಳಿಗೆ…