ಸುಳ್ಯ: ಜಾಲ್ಸೂರು ಗ್ರಾಮದ ವಿನೋಬಾನಗರದ ವಿವೇಕಾನಂದ ವಿದ್ಯಾಸಂಸ್ಥೆಯಲ್ಲಿ ಎಂ.ಆರ್.ಪಿ.ಎಲ್. ಕೊಡುಗೆ ಅನುದಾನದಲ್ಲಿ ನಿರ್ಮಾಣಗೊಳ್ಳುತ್ತಿರುವ ನೂತನ ಶಾಲಾ ಕಟ್ಟಡದ ಭೂಮಿ ಪೂಜೆಯು ಶುಕ್ರವಾರ ಜರುಗಿತು.
ಸಂಸದ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಭೂಮಿಪೂಜೆ ನೆರವೇರಿಸಿದರು. ಗುಣಮಟ್ಟದ ಶಿಕ್ಷಣ ನೀಡುವ ಶಿಕ್ಷಣ ಸಂಸ್ಥೆಗಳ ಬೆಳವಣಿಗೆಗೆ ಎಲ್ಲಾ ರೀತಿಯ ನೆರವು, ಸಹಕಾರ ನೀಡುವುದಾಗಿ ಅವರು ಹೇಳಿದರು. ವಿವೇಕಾನಂದ ವಿದ್ಯಾಸಂಸ್ಥೆಗೆ ಸುಸಜ್ಜಿತ ಕ್ರೀಡಾಂಗಣ ನಿರ್ಮಾಣದ ಅಗತ್ಯವಿದೆ. ಅದಕ್ಕೆ ಪ್ರಯತ್ನ ನಡೆಸುವುದಾಗಿ ಅವರು ಹೇಳಿದರು.
ಶಾಸಕ ಎಸ್.ಅಂಗಾರ, ತಾ.ಪಂ. ಅಧ್ಯಕ್ಷ ಚನಿಯ ಕಲ್ತಡ್ಕ, ಜಿ.ಪಂ.ಸದಸ್ಯರಾದ ಪುಷ್ಪಾವತಿ ಬಾಳಿಲ, ಹರೀಶ್ ಕಂಜಿಪಿಲಿ, ಜಾಲ್ಸೂರು ಗ್ರಾ.ಪಂ. ಅಧ್ಯಕ್ಷೆ ಶಶಿಕಲಾ ಎಸ್.ನಾಯಕ್, ಎಂ.ಆರ್.ಪಿ.ಎಲ್.ಜನರಲ್ ಮ್ಯಾನೇಜರ್ ಸುಬ್ರಹ್ಮಣ್ಯ ಭಟ್, ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ನಿರ್ದೇಶಕ ನ.ಸೀತಾರಾಮ, ಶಾಲಾ ಸ್ಥಾಪಕಾಧ್ಯಕ್ಷ ಕೆ. ಉಪೇಂದ್ರ ಕಾಮತ್, ಶಾಲಾ ಸಂಚಾಲಕ ಕೆ. ಸುಧಾಕರ ಕಾಮತ್ ವಿನೋಬಾನಗರ, ವಿದ್ಯಾಸಂಸ್ಥೆಯ ಆಡಳಿತ ಮಂಡಳಿಯ ಅಧ್ಯಕ್ಷ ಶ್ಯಾಮ್ ಪ್ರಸಾದ್ ಅಡ್ಡಂತಡ್ಕ, ಕನಕಮಜಲು ಪ್ರಾ.ಕೃ.ಪ.ಸ.ಸಂಘದ ಅಧ್ಯಕ್ಷ ಡಾ.ಗೋಪಾಲಕೃಷ್ಣ ಭಟ್, ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಜೋಯಿಡಾದಲ್ಲಿ ನಡೆದ ಹಲಸು ಉತ್ಸವದಲ್ಲಿ 50ಕ್ಕೂ ಹೆಚ್ಚು ಮೌಲ್ಯವರ್ಧಿತ ಹಲಸಿನ ಉತ್ಪನ್ನಗಳು ಪ್ರದರ್ಶನಗೊಂಡು…
ಕ್ಯಾಂಪ್ಕೋ ಸಂಸ್ಥಾಪಕ ವಾರಣಾಶಿ ಸುಬ್ರಾಯ ಭಟ್ ಅವರ ಜನ್ಮಕ್ಕೆ 99 ವರ್ಷಗಳು ಪೂರ್ಣಗೊಂಡಿದ್ದು,…
ರಾಜ್ಯಕ್ಕೆ ಮುಂಗಾರು ಪ್ರವೇಶಿಸಿದರೂ ಅದರ ಬಲ ಇನ್ನೂ ದುರ್ಬಲವಾಗಿದೆ. ಕರಾವಳಿಯಲ್ಲಿ ಜೂನ್ 8ರಿಂದ…
ನಾರ್ವೆ ಚೆಸ್ 2026 ಟೂರ್ನಿಯನ್ನು ಗೆದ್ದ ಮೊದಲ ಭಾರತೀಯ ಆಟಗಾರ ಎಂಬ ಇತಿಹಾಸವನ್ನು…
ಆಸ್ಟ್ರೇಲಿಯಾದಲ್ಲಿ ವರೋವಾ ಮೈಟ್ ಹಾವಳಿಯಿಂದ ಜೇನುನೊಣಗಳ ಸಂಖ್ಯೆ ತೀವ್ರವಾಗಿ ಕುಸಿಯುತ್ತಿದ್ದು, ಆಹಾರ ಬೆಳೆಗಳ…
ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಜೂನ್ 6ರಂದು ಕಾಸರಗೋಡು ಜಿಲ್ಲೆಯ ಎಲ್ಲಾ ಶಿಕ್ಷಣ…