Advertisement
ಸುದ್ದಿಗಳು

ವಿಪತ್ತು ನಿರ್ವಹಣಾ ಸಭೆಗೆ ಜನಪ್ರತಿನಿಧಿಗಳ ಕರೆದಿಲ್ಲ ಎಂಬ ಆಕ್ಷೇಪ- ಮಾತಿನ ಚಕಮಕಿ

Share

ಸುಳ್ಯ:ವಿಪತ್ತು ರಕ್ಷಣೆ ಕುರಿತ ಸಭೆಗೆ ಜನಪ್ರತಿನಿಧಿಗಳನ್ನು ಕರೆದಿಲ್ಲ ಎಂದು ಬಿಜೆಪಿ ಮುಖಂಡರೋರ್ವರು ಆಕ್ಷೇಪ ವ್ಯಕ್ತಪಡಿಸಿದ ಮತ್ತು ಇದಕ್ಕೆ ಸಭೆಯಲ್ಲಿದ್ದವರು ಅಸಮಾಧಾನ ವ್ಯಕ್ತಪಡಿಸಿ ಮಾತಿನ ಚಕಮಕಿ ಉಂಟಾದ ಪ್ರಸಂಗ ತಾಲೂಕು ಕಚೇರಿಯಲ್ಲಿ ನಡೆದ ಸಭೆಯಲ್ಲಿ ಕೆಲಕಾಲ ಗೊಂದಲದ ವಾತಾವರಣ ಸೃಷ್ಠಿಸಿತು.

Advertisement
Advertisement

ಇಂದು ನಡೆದ ಸಭೆಗೆ ಜನಪ್ರತಿನಿಧಿಗಳನ್ನು ಯಾಕೆ ಕರೆದಿಲ್ಲ, ತಾಲೂಕು ಪಂಚಾಯತ್ ಅಧ್ಯಕ್ಷರಿಗೆ ಮಾಹಿತಿಯೇ ಇರಲಿಲ್ಲ ಎಂದು ಬಿಜೆಪಿ ಮಂಡಲ ಸಮಿತಿ ಪ್ರಧಾನ ಕಾರ್ಯದರ್ಶಿ ಸುಬೋದ್ ಶೆಟ್ಟಿ ಮೇನಾಲ ಸಭೆಯಲ್ಲಿ ಆಕ್ಷೇಪ ವ್ಯಕ್ತಪಡಿಸಿದರು.

Advertisement

ಇದಕ್ಕೆ ಉತ್ತರ ನೀಡಿದ ಕೆ.ಎಲ್.ಪ್ರದೀಪ್ ಕುಮಾರ್ ಜನಪ್ರತಿನಿಧಿಗಳು ಮಾಡಬೇಕಾದ ಕೆಲಸವನ್ನು ಅಧಿಕಾರಿಗಳೇ ಮಾಡುತ್ತಿದ್ದಾರೆ. ಶಾಸಕಾಂಗ ನಿಷ್ಕ್ರಿಯವಾದ ಕಾರಣ ಅತೀ ಅಗತ್ಯವಾಗಿ ಆಗಬೇಕಾದ ಕಾರ್ಯವನ್ನು ಕಾರ್ಯಾಂಗವೇ ಮುಂದೆ ನಿಂತು ಮಾಡುತಿದೆ ಅದಕ್ಕೆ ತಕರಾರು ಯಾಕೆ ಎಂದು ಪ್ರಶ್ನಿಸಿದರು.

ಜನಪ್ರತಿನಿಧಿಗಳು ಒಮ್ಮೆಯೂ ಪ್ರಕೃತಿ ವಿಕೋಪ ರಕ್ಷಣೆ ಕುರಿತಾದ ಸಭೆ ಯಾಕೆ ಕರೆದಿಲ್ಲ, ಈ ಕುರಿತು ತೀವ್ರ ನಿರ್ಲಕ್ಷ್ಯ ವಹಿಸಲಾಗಿದೆ ಎಂದು ಸಭೆಯಲ್ಲಿದ್ದ ಇತರರೂ ಹೇಳಿದಾಗ ಸಭೆಯಲ್ಲಿ ಮಾತಿನ ಚಕಮಕಿ ನಡೆದು ಕೆಲಕಾಲ ಗೊಂದಲದ ವಾತಾವರಣ ನಿರ್ಮಾಣವಾಯಿತು.

Advertisement

ಈ ಸಂದರ್ಭದಲ್ಲಿ ಮಧ್ಯ ಪ್ರವೇಶಿಸಿದ ತಹಶೀಲ್ದಾರ್ ಕುಂಞಿ ಅಹಮ್ಮದ್ ಇದು ಜನಪ್ರತಿನಿಧಿಗಳ ಸಭೆ ಅಲ್ಲ. ಪ್ರಕೃತಿ ವಿಕೋಪ ಎದುರಿಸುವ ಕುರಿತು ಕೈ ಜೋಡಿಸುವ ಸಂಘ ಸಂಸ್ಥೆಗಳ ಪದಾಧಿಕಾರಿಗಳ ಸಭೆ ಕರೆಯಲಾಗಿತ್ತು. ದಯವಿಟ್ಟು ಇದರಲ್ಲಿ ರಾಜಕೀಯ ಬೆರೆಸಬೇಡಿ ಎಂದು ಹೇಳಿದರು.

ಪ್ರಕೃತಿ ವಿಕೋಪ ಸಂದರ್ಭದಲ್ಲಿ ಸಾಕಷ್ಟು ಕೆಲಸ ಮಾಡಿದ್ದ ಸೇವಾ ಭಾರತಿ ಪದಾಧಿಕಾರಿಗಳನ್ನು ಕರೆದಿಲ್ಲ ಎಂದು ಸುಬೋದ್ ಶೆಟ್ಟಿ ಹೇಳಿದರು. ಸೇವಾ ಭಾರತಿ ಪದಾಧಿಕಾರಿಗಳನ್ನು ಸಭೆಗೆ ಕರೆಯಲಾಗಿದೆ, ಸುಳ್ಯದಲ್ಲಿ ಸೇವಾ ಭಾರತಿಯ ಕೆಲಸ ಆರಂಭಿಸಿದವರೇ ಸಭೆಯಲ್ಲಿ ಇದ್ದಾರೆ ಎಂದು ವಿನೋದ್ ಲಸ್ರಾದೋ ಮತ್ತಿತರರು ಹೇಳಿದರು.
ಸಭೆಗೆ ತಮಗೂ ಆಹ್ವಾನ ಇರಲಿಲ್ಲ ಎಂದು ಕೆಲವು ನಗರ ಪಂಚಾಯತ್ ಸದಸ್ಯರು ಸಭೆಯಲ್ಲಿ ಹೇಳುತ್ತಿದ್ದದು ಕೇಳಿ ಬಂತು.
ಮಳೆಗಾಲ ಆರಂಭವಾಗಿ ಎರಡೂವರೆ ತಿಂಗಳಾದರೂ ಶಾಸಕರ ನೇತೃತ್ವದಲ್ಲಿ ಒಮ್ಮೆಯೂ ಪ್ರಕೃತಿ ವಿಕೋಪ ಸಭೆ ಕುರಿತಾದ ನಡೆದಿಲ್ಲ ಯಾಕೆ ಎಂದು ಕೆಲವರು ಸಭೆಯಲ್ಲಿ ಪ್ರಶ್ನಿಸಿದರು.

Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ವೆದರ್‌ ಮಿರರ್‌ | 2.05.2024 | ಮೋಡದ ವಾತಾವರಣ | ಮತ್ತೆ ದೂರವಾದ ಮಳೆ…!| ಮತ್ತೆ ಹೆಚ್ಚಳವಾಗುತ್ತಿರುವ ತಾಪಮಾನ |

03.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…

6 hours ago

ಬಿದಿರು ಕೃಷಿ | ತರಕಾರಿ ಕೃಷಿಯಾಗಿ ಬಿದಿರು

ಬಿದಿರು ಕೃಷಿಯ ಬಗ್ಗೆ ಈಗ ಸಾಕಷ್ಟು ಅಧ್ಯಯನ ನಡೆಯುತ್ತಿದೆ. ಈ ನಡುವೆ ಪುತ್ತೂರು…

11 hours ago

ಅಡಿಕೆ ಹಳದಿ ಎಲೆರೋಗ – ಚುನಾವಣೆ

ಅಡಿಕೆ ಕೂಡಾ ಇಂದು ಬಹುಮುಖ್ಯವಾದ ಚುನಾವಣಾ ವಿಷಯ. ಹೀಗಾಗಿ ಅಡಿಕೆ ಹಳದಿ ಎಲೆರೋಗ…

11 hours ago

ವಾರದ ಅತಿಥಿ | ಸುಬ್ರಾಯ ಚೊಕ್ಕಾಡಿ ಮಾತು

https://youtu.be/Vh1tYlOKav0?si=M4grG9euj6dXmkE2 ರೂರಲ್ ಮಿರರ್‌ ವಾರದ ಅತಿಥಿಯಾಗಿ ಹಿರಿಯ ಕವಿ ಸುಬ್ರಾಯ ಚೊಕ್ಕಾಡಿ ಅವರು…

11 hours ago

ಮಕ್ಕಳ ಹಬ್ಬ…

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಪಂಜದಲ್ಲಿ ಮಕ್ಕಳ ಬೇಸಿಗೆ ಶಿಬಿರ ಮಕ್ಕಳ…

11 hours ago

ತಾಪಮಾನ – ಬರಗಾಲ – ಪೆನ್ ಡ್ರೈವ್ ಮತ್ತು ಸೆಕ್ಸ್… ಯಾವುದು ನಮ್ಮ ಆದ್ಯತೆಯಾಗಬೇಕು……. |

ಈ ಬಾರಿ ಆಗಿರುವ ತಾಪಮಾನದ ಹೆಚ್ಚಳವನ್ನು ಕನಿಷ್ಠ ಮುಂದಿನ ಕೆಲವು ವರ್ಷಗಳಲ್ಲಾದರು ನಿಯಂತ್ರಣ…

11 hours ago