Advertisement
ಸುದ್ದಿಗಳು

ವಿಪತ್ತು ನಿರ್ವಹಣಾ ಸಭೆಗೆ ಜನಪ್ರತಿನಿಧಿಗಳ ಕರೆದಿಲ್ಲ ಎಂಬ ಆಕ್ಷೇಪ- ಮಾತಿನ ಚಕಮಕಿ

Share

ಸುಳ್ಯ:ವಿಪತ್ತು ರಕ್ಷಣೆ ಕುರಿತ ಸಭೆಗೆ ಜನಪ್ರತಿನಿಧಿಗಳನ್ನು ಕರೆದಿಲ್ಲ ಎಂದು ಬಿಜೆಪಿ ಮುಖಂಡರೋರ್ವರು ಆಕ್ಷೇಪ ವ್ಯಕ್ತಪಡಿಸಿದ ಮತ್ತು ಇದಕ್ಕೆ ಸಭೆಯಲ್ಲಿದ್ದವರು ಅಸಮಾಧಾನ ವ್ಯಕ್ತಪಡಿಸಿ ಮಾತಿನ ಚಕಮಕಿ ಉಂಟಾದ ಪ್ರಸಂಗ ತಾಲೂಕು ಕಚೇರಿಯಲ್ಲಿ ನಡೆದ ಸಭೆಯಲ್ಲಿ ಕೆಲಕಾಲ ಗೊಂದಲದ ವಾತಾವರಣ ಸೃಷ್ಠಿಸಿತು.

ಇಂದು ನಡೆದ ಸಭೆಗೆ ಜನಪ್ರತಿನಿಧಿಗಳನ್ನು ಯಾಕೆ ಕರೆದಿಲ್ಲ, ತಾಲೂಕು ಪಂಚಾಯತ್ ಅಧ್ಯಕ್ಷರಿಗೆ ಮಾಹಿತಿಯೇ ಇರಲಿಲ್ಲ ಎಂದು ಬಿಜೆಪಿ ಮಂಡಲ ಸಮಿತಿ ಪ್ರಧಾನ ಕಾರ್ಯದರ್ಶಿ ಸುಬೋದ್ ಶೆಟ್ಟಿ ಮೇನಾಲ ಸಭೆಯಲ್ಲಿ ಆಕ್ಷೇಪ ವ್ಯಕ್ತಪಡಿಸಿದರು.

ಇದಕ್ಕೆ ಉತ್ತರ ನೀಡಿದ ಕೆ.ಎಲ್.ಪ್ರದೀಪ್ ಕುಮಾರ್ ಜನಪ್ರತಿನಿಧಿಗಳು ಮಾಡಬೇಕಾದ ಕೆಲಸವನ್ನು ಅಧಿಕಾರಿಗಳೇ ಮಾಡುತ್ತಿದ್ದಾರೆ. ಶಾಸಕಾಂಗ ನಿಷ್ಕ್ರಿಯವಾದ ಕಾರಣ ಅತೀ ಅಗತ್ಯವಾಗಿ ಆಗಬೇಕಾದ ಕಾರ್ಯವನ್ನು ಕಾರ್ಯಾಂಗವೇ ಮುಂದೆ ನಿಂತು ಮಾಡುತಿದೆ ಅದಕ್ಕೆ ತಕರಾರು ಯಾಕೆ ಎಂದು ಪ್ರಶ್ನಿಸಿದರು.

ಜನಪ್ರತಿನಿಧಿಗಳು ಒಮ್ಮೆಯೂ ಪ್ರಕೃತಿ ವಿಕೋಪ ರಕ್ಷಣೆ ಕುರಿತಾದ ಸಭೆ ಯಾಕೆ ಕರೆದಿಲ್ಲ, ಈ ಕುರಿತು ತೀವ್ರ ನಿರ್ಲಕ್ಷ್ಯ ವಹಿಸಲಾಗಿದೆ ಎಂದು ಸಭೆಯಲ್ಲಿದ್ದ ಇತರರೂ ಹೇಳಿದಾಗ ಸಭೆಯಲ್ಲಿ ಮಾತಿನ ಚಕಮಕಿ ನಡೆದು ಕೆಲಕಾಲ ಗೊಂದಲದ ವಾತಾವರಣ ನಿರ್ಮಾಣವಾಯಿತು.

ಈ ಸಂದರ್ಭದಲ್ಲಿ ಮಧ್ಯ ಪ್ರವೇಶಿಸಿದ ತಹಶೀಲ್ದಾರ್ ಕುಂಞಿ ಅಹಮ್ಮದ್ ಇದು ಜನಪ್ರತಿನಿಧಿಗಳ ಸಭೆ ಅಲ್ಲ. ಪ್ರಕೃತಿ ವಿಕೋಪ ಎದುರಿಸುವ ಕುರಿತು ಕೈ ಜೋಡಿಸುವ ಸಂಘ ಸಂಸ್ಥೆಗಳ ಪದಾಧಿಕಾರಿಗಳ ಸಭೆ ಕರೆಯಲಾಗಿತ್ತು. ದಯವಿಟ್ಟು ಇದರಲ್ಲಿ ರಾಜಕೀಯ ಬೆರೆಸಬೇಡಿ ಎಂದು ಹೇಳಿದರು.

ಪ್ರಕೃತಿ ವಿಕೋಪ ಸಂದರ್ಭದಲ್ಲಿ ಸಾಕಷ್ಟು ಕೆಲಸ ಮಾಡಿದ್ದ ಸೇವಾ ಭಾರತಿ ಪದಾಧಿಕಾರಿಗಳನ್ನು ಕರೆದಿಲ್ಲ ಎಂದು ಸುಬೋದ್ ಶೆಟ್ಟಿ ಹೇಳಿದರು. ಸೇವಾ ಭಾರತಿ ಪದಾಧಿಕಾರಿಗಳನ್ನು ಸಭೆಗೆ ಕರೆಯಲಾಗಿದೆ, ಸುಳ್ಯದಲ್ಲಿ ಸೇವಾ ಭಾರತಿಯ ಕೆಲಸ ಆರಂಭಿಸಿದವರೇ ಸಭೆಯಲ್ಲಿ ಇದ್ದಾರೆ ಎಂದು ವಿನೋದ್ ಲಸ್ರಾದೋ ಮತ್ತಿತರರು ಹೇಳಿದರು.
ಸಭೆಗೆ ತಮಗೂ ಆಹ್ವಾನ ಇರಲಿಲ್ಲ ಎಂದು ಕೆಲವು ನಗರ ಪಂಚಾಯತ್ ಸದಸ್ಯರು ಸಭೆಯಲ್ಲಿ ಹೇಳುತ್ತಿದ್ದದು ಕೇಳಿ ಬಂತು.
ಮಳೆಗಾಲ ಆರಂಭವಾಗಿ ಎರಡೂವರೆ ತಿಂಗಳಾದರೂ ಶಾಸಕರ ನೇತೃತ್ವದಲ್ಲಿ ಒಮ್ಮೆಯೂ ಪ್ರಕೃತಿ ವಿಕೋಪ ಸಭೆ ಕುರಿತಾದ ನಡೆದಿಲ್ಲ ಯಾಕೆ ಎಂದು ಕೆಲವರು ಸಭೆಯಲ್ಲಿ ಪ್ರಶ್ನಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ತೋಟಗಾರಿಕಾ ಬೆಳೆಗಾರರ ಪರ ಲೋಕಸಭೆಯಲ್ಲಿ ಧ್ವನಿ – ಹವಾಮಾನ ಆಧಾರಿತ ಬೆಳೆ ವಿಮೆ ಮರುಪರಿಷ್ಕರಣೆಗೆ ಕ್ಯಾ. ಚೌಟ ಒತ್ತಾಯ

ಅಡಿಕೆ, ತೆಂಗು, ಕೋಕೋ ಮತ್ತು ಸಾಂಬಾರು ಬೆಳೆಗಳಿಗೆ ಸ್ಥಳೀಯ ಹವಾಮಾನದಿಂದ ಉಂಟಾಗುವ ನೈಜ…

2 hours ago

ಅಡಿಕೆ ಅಕ್ರಮ ಆಮದು ಕಡಿವಾಣ – ರೋಸ್ಟೆಡ್ ಅಡಿಕೆಗೆ ₹351 ಕನಿಷ್ಠ ದರ – ಕಸ್ಟಮ್ಸ್‌ ನಿಗಾ ಎಂದ ಕೇಂದ್ರ

ರೋಸ್ಟೆಡ್ ಅಡಿಕೆಯ ಆಮದು ನೀತಿಯನ್ನು 2025ರ ಏಪ್ರಿಲ್‌ನಲ್ಲಿ ಬದಲಾಯಿಸಲಾಗಿದ್ದು, ಕೆ.ಜಿಗೆ ₹351 ಅಥವಾ…

11 hours ago

ತೆಂಗು ಬೆಳೆಗೆ ವಿಮೆ : ಕೇಂದ್ರದ ಮಹತ್ವದ ಉತ್ತರ

ತೆಂಗು ಬೆಳೆಯನ್ನು PMFBY ಅಥವಾ RWBCIS ಅಡಿಯಲ್ಲಿ ವಿಮಾ ವ್ಯಾಪ್ತಿಗೆ ತರುವ ಅಧಿಕಾರ…

11 hours ago

ಹವಾಮಾನ ವರದಿ | 11-08-2026 | ಕರ್ನಾಟಕದ ಹವಾಮಾನದಲ್ಲಿ ಮುಂದಿನ ದಿನಗಳಲ್ಲಿ ಏನು ಬದಲಾವಣೆ ?

ಕರಾವಳಿ ಜಿಲ್ಲೆಗಳಲ್ಲಿ ಮಳೆಯ ನಡುವೆ ಹೆಚ್ಚಿನ ಬಿಡುವಿನ ಅವಧಿಯೊಂದಿಗೆ ಬಿಸಿಲು–ಮೋಡದ ವಾತಾವರಣ ಮುಂದುವರಿಯಲಿದ್ದು,…

12 hours ago

ಬಿ.ಎಸ್‌ಸಿ. ಕೃಷಿ ನಂತರ ಏನು ? ಉದ್ಯೋಗ, ಉದ್ಯಮ ಮತ್ತು ಉನ್ನತ ಶಿಕ್ಷಣದ ಅತ್ಯುತ್ತಮ ಅವಕಾಶಗಳು ಇಲ್ಲಿವೆ

ಬಿ.ಎಸ್‌ಸಿ. ಕೃಷಿ ಪದವೀಧರರಿಗೆ ಸರ್ಕಾರಿ ಉದ್ಯೋಗ, ಖಾಸಗಿ ಕಂಪನಿಗಳು, ಬ್ಯಾಂಕಿಂಗ್, ಸಂಶೋಧನೆ ಮತ್ತು…

1 day ago

ಅಡಿಕೆ–ಕಾಳುಮೆಣಸು ಬೆಳೆ ವಿಮೆ: ರೈತರ ನೋಂದಣಿಗೆ ಆ.17 ಅಂತಿಮ ದಿನ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2026-27ನೇ ಸಾಲಿನ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯಡಿ ಅಡಿಕೆ…

1 day ago