Advertisement
ಸುದ್ದಿಗಳು

ವಿಪತ್ತು ನಿರ್ವಹಣಾ ಸಭೆಗೆ ಜನಪ್ರತಿನಿಧಿಗಳ ಕರೆದಿಲ್ಲ ಎಂಬ ಆಕ್ಷೇಪ- ಮಾತಿನ ಚಕಮಕಿ

Share

ಸುಳ್ಯ:ವಿಪತ್ತು ರಕ್ಷಣೆ ಕುರಿತ ಸಭೆಗೆ ಜನಪ್ರತಿನಿಧಿಗಳನ್ನು ಕರೆದಿಲ್ಲ ಎಂದು ಬಿಜೆಪಿ ಮುಖಂಡರೋರ್ವರು ಆಕ್ಷೇಪ ವ್ಯಕ್ತಪಡಿಸಿದ ಮತ್ತು ಇದಕ್ಕೆ ಸಭೆಯಲ್ಲಿದ್ದವರು ಅಸಮಾಧಾನ ವ್ಯಕ್ತಪಡಿಸಿ ಮಾತಿನ ಚಕಮಕಿ ಉಂಟಾದ ಪ್ರಸಂಗ ತಾಲೂಕು ಕಚೇರಿಯಲ್ಲಿ ನಡೆದ ಸಭೆಯಲ್ಲಿ ಕೆಲಕಾಲ ಗೊಂದಲದ ವಾತಾವರಣ ಸೃಷ್ಠಿಸಿತು.

ಇಂದು ನಡೆದ ಸಭೆಗೆ ಜನಪ್ರತಿನಿಧಿಗಳನ್ನು ಯಾಕೆ ಕರೆದಿಲ್ಲ, ತಾಲೂಕು ಪಂಚಾಯತ್ ಅಧ್ಯಕ್ಷರಿಗೆ ಮಾಹಿತಿಯೇ ಇರಲಿಲ್ಲ ಎಂದು ಬಿಜೆಪಿ ಮಂಡಲ ಸಮಿತಿ ಪ್ರಧಾನ ಕಾರ್ಯದರ್ಶಿ ಸುಬೋದ್ ಶೆಟ್ಟಿ ಮೇನಾಲ ಸಭೆಯಲ್ಲಿ ಆಕ್ಷೇಪ ವ್ಯಕ್ತಪಡಿಸಿದರು.

ಇದಕ್ಕೆ ಉತ್ತರ ನೀಡಿದ ಕೆ.ಎಲ್.ಪ್ರದೀಪ್ ಕುಮಾರ್ ಜನಪ್ರತಿನಿಧಿಗಳು ಮಾಡಬೇಕಾದ ಕೆಲಸವನ್ನು ಅಧಿಕಾರಿಗಳೇ ಮಾಡುತ್ತಿದ್ದಾರೆ. ಶಾಸಕಾಂಗ ನಿಷ್ಕ್ರಿಯವಾದ ಕಾರಣ ಅತೀ ಅಗತ್ಯವಾಗಿ ಆಗಬೇಕಾದ ಕಾರ್ಯವನ್ನು ಕಾರ್ಯಾಂಗವೇ ಮುಂದೆ ನಿಂತು ಮಾಡುತಿದೆ ಅದಕ್ಕೆ ತಕರಾರು ಯಾಕೆ ಎಂದು ಪ್ರಶ್ನಿಸಿದರು.

ಜನಪ್ರತಿನಿಧಿಗಳು ಒಮ್ಮೆಯೂ ಪ್ರಕೃತಿ ವಿಕೋಪ ರಕ್ಷಣೆ ಕುರಿತಾದ ಸಭೆ ಯಾಕೆ ಕರೆದಿಲ್ಲ, ಈ ಕುರಿತು ತೀವ್ರ ನಿರ್ಲಕ್ಷ್ಯ ವಹಿಸಲಾಗಿದೆ ಎಂದು ಸಭೆಯಲ್ಲಿದ್ದ ಇತರರೂ ಹೇಳಿದಾಗ ಸಭೆಯಲ್ಲಿ ಮಾತಿನ ಚಕಮಕಿ ನಡೆದು ಕೆಲಕಾಲ ಗೊಂದಲದ ವಾತಾವರಣ ನಿರ್ಮಾಣವಾಯಿತು.

ಈ ಸಂದರ್ಭದಲ್ಲಿ ಮಧ್ಯ ಪ್ರವೇಶಿಸಿದ ತಹಶೀಲ್ದಾರ್ ಕುಂಞಿ ಅಹಮ್ಮದ್ ಇದು ಜನಪ್ರತಿನಿಧಿಗಳ ಸಭೆ ಅಲ್ಲ. ಪ್ರಕೃತಿ ವಿಕೋಪ ಎದುರಿಸುವ ಕುರಿತು ಕೈ ಜೋಡಿಸುವ ಸಂಘ ಸಂಸ್ಥೆಗಳ ಪದಾಧಿಕಾರಿಗಳ ಸಭೆ ಕರೆಯಲಾಗಿತ್ತು. ದಯವಿಟ್ಟು ಇದರಲ್ಲಿ ರಾಜಕೀಯ ಬೆರೆಸಬೇಡಿ ಎಂದು ಹೇಳಿದರು.

ಪ್ರಕೃತಿ ವಿಕೋಪ ಸಂದರ್ಭದಲ್ಲಿ ಸಾಕಷ್ಟು ಕೆಲಸ ಮಾಡಿದ್ದ ಸೇವಾ ಭಾರತಿ ಪದಾಧಿಕಾರಿಗಳನ್ನು ಕರೆದಿಲ್ಲ ಎಂದು ಸುಬೋದ್ ಶೆಟ್ಟಿ ಹೇಳಿದರು. ಸೇವಾ ಭಾರತಿ ಪದಾಧಿಕಾರಿಗಳನ್ನು ಸಭೆಗೆ ಕರೆಯಲಾಗಿದೆ, ಸುಳ್ಯದಲ್ಲಿ ಸೇವಾ ಭಾರತಿಯ ಕೆಲಸ ಆರಂಭಿಸಿದವರೇ ಸಭೆಯಲ್ಲಿ ಇದ್ದಾರೆ ಎಂದು ವಿನೋದ್ ಲಸ್ರಾದೋ ಮತ್ತಿತರರು ಹೇಳಿದರು.
ಸಭೆಗೆ ತಮಗೂ ಆಹ್ವಾನ ಇರಲಿಲ್ಲ ಎಂದು ಕೆಲವು ನಗರ ಪಂಚಾಯತ್ ಸದಸ್ಯರು ಸಭೆಯಲ್ಲಿ ಹೇಳುತ್ತಿದ್ದದು ಕೇಳಿ ಬಂತು.
ಮಳೆಗಾಲ ಆರಂಭವಾಗಿ ಎರಡೂವರೆ ತಿಂಗಳಾದರೂ ಶಾಸಕರ ನೇತೃತ್ವದಲ್ಲಿ ಒಮ್ಮೆಯೂ ಪ್ರಕೃತಿ ವಿಕೋಪ ಸಭೆ ಕುರಿತಾದ ನಡೆದಿಲ್ಲ ಯಾಕೆ ಎಂದು ಕೆಲವರು ಸಭೆಯಲ್ಲಿ ಪ್ರಶ್ನಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ದಾಖಲೆ: ಕಲಬುರಗಿ ಯುವ ರೈತನಿಗೆ ರಾಜ್ಯದ ಮೆಚ್ಚುಗೆ!

ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ಉತ್ತಮ ಇಳುವರಿ ಪಡೆದ ವಿಜಯಕುಮಾರ್ ಪಾಟೀಲ್ ಇತರ ರೈತರಿಗೆ…

8 hours ago

2026 ಮುಂಗಾರು ಮುನ್ಸೂಚನೆ – ಕೇರಳಕ್ಕೆ ನಿರೀಕ್ಷೆಗಿಂತ ಮುನ್ನವೇ ಆಗಮನ? – ಮಳೆ ಕಡಿಮೆಯಾಗುವ ಸಾಧ್ಯತೆ- ಕೃಷಿಗೆ ದೊಡ್ಡ ಸವಾಲು

2026ರ ಮುಂಗಾರು ಬೇಗ ಆರಂಭವಾಗುವ ಸಾಧ್ಯತೆ ಇದ್ದರೂ, ಮಳೆಯ ಪ್ರಮಾಣ ಕಡಿಮೆಯಾಗಬಹುದು. ಇದು…

10 hours ago

ಈರುಳ್ಳಿಯಲ್ಲಿ ಇಳುವರಿ ಹೆಚ್ಚಿಸುವ ರಹಸ್ಯ..! ಜೇನುನೊಣಗಳ ಪರಾಗಸ್ಪರ್ಶದಿಂದ ಡಬಲ್ ಲಾಭ

ಈರುಳ್ಳಿ ಬೆಳೆಯಲ್ಲಿ ಜೇನುನೊಣಗಳ ಪರಾಗಸ್ಪರ್ಶದಿಂದ ಇಳುವರಿ ಹೆಚ್ಚಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ. ರೈತರಿಗೆ…

12 hours ago

ಗ್ರಾಮೀಣ ಜಾಲಕ್ಕೆ ನೆಟ್ವರ್ಕ್ ಬೂಸ್ಟ್‌ – ಬಿಎಸ್ಎನ್ಎಲ್ ಸುಧಾರಣೆಗೆ ಕೇಂದ್ರದ ಆದ್ಯತೆ

ಗ್ರಾಮೀಣ ಪ್ರದೇಶಗಳಿಗೆ ಉತ್ತಮ ಸಂಪರ್ಕ ಒದಗಿಸಲು ಕೇಂದ್ರ ಸರ್ಕಾರ ಆದ್ಯತೆ ನೀಡುತ್ತಿದೆ.

12 hours ago

ಜಾಗತಿಕ ತಾಪಮಾನಕ್ಕೆ ಪರಿಹಾರ : ವೃಕ್ಷ ಸಂವರ್ಧನೆಗೆ ಒತ್ತು

ಜಾಗತಿಕ ತಾಪಮಾನ ನಿಯಂತ್ರಣಕ್ಕೆ ವೃಕ್ಷ ಸಂವರ್ಧನೆ ಮುಖ್ಯ ಎಂದು ಸಚಿವ ಈಶ್ವರ ಖಂಡ್ರೆ…

12 hours ago

ಕೃಷಿಗೆ ಹೊಸ ದಿಕ್ಕು – ICAR ಟಾಸ್ಕ್ ಫೋರ್ಸ್ ಘೋಷಣೆ – ರೈತರ ಆದಾಯ ಹೆಚ್ಚಳಕ್ಕೆ ಪ್ಲಾನ್

ICAR ಕೃಷಿ ಕ್ಷೇತ್ರವನ್ನು ಬಲಪಡಿಸಲು ಸ್ಪೆಷಲ್ ಟಾಸ್ಕ್ ಫೋರ್ಸ್ ರಚಿಸಿದೆ. ಹವಾಮಾನ ಸವಾಲುಗಳಿಗೆ…

20 hours ago