Advertisement
MIRROR FOCUS

ವಿಪರೀತ ಬಿಸಿಲಿಗೆ ಬೀಳ್ತಾ ಇದೆ ಅಡಿಕೆ ನಳ್ಳಿ

Share

ಸುಳ್ಯ: ವಿಪರೀತ ಬಿಸಿಲು ಹಾಗೂ ಹವಾಮಾನದ ಏರಿಳಿತದ ಕಾರಣದಿಂದ ನಳ್ಳಿ ಮಾತ್ರವಲ್ಲ ಎಳೆ ಅಡಿಕೆ ಬೀಳ್ತಾ ಇದೆ.  ನೋಡ ನೋಡುತ್ತಿದ್ದಂತೆ ಏನೂ ಮಾಡಲಾಗದ ಸ್ಥಿತಿ ಇದೆ. ಮಳೆಗಾಲ ಕೊಳೆರೋಗವಾಯ್ತು, ಬೇಸಗೆ ಕಾಲ ಬಿಸಿಲಾಗಿ  ನಳ್ಳಿ ಬೀಳುವುದಾಯ್ತು. ಏನೇ ಆದರೂ ಅಡಿಕೆ  ಮಾತ್ರಾ ಕೆಳಗೆ…!

 

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ  ಈಗ ಹವಾಮಾನದ ಏರಿಳಿತ ವಿಪರೀತವಾಗಿದೆ. ಒಂದೇ ದಿನದಲ್ಲಿ  ಬಿಸಿಲು, ಮಳೆ ಹಾಗೂ ಶಾಖ ಗಿಡಗಳ ಮೇಲೆ ಪರಿಣಾಮ ಬೀರ್ತಾ ಇದೆ. ಒಮ್ಮೆಲೇ 38 ಡಿಗ್ರಿಯಿಂದ 40 ಡಿಗ್ರಿಯವರೆಗೆ ತಾಪಮಾನ ಏರುತ್ತದೆ, ಅದೇ ರೀತಿ ಸಂಜೆಯಾಗುತ್ತಿದ್ದಂತೆಯೇ 27 ರಿಂದ 30 ಡಿಗ್ರಿಗೆ ಇಳಿಯುತ್ತದೆ. ಇಂತಹದ್ದೊಂದು ಏರಿಳಿತ ಇತ್ತೀಚೆಗಿನ ವರ್ಷದಲ್ಲಿ ಹೆಚ್ಚಾಗುತ್ತಿದೆ. ಈ ಕಾರಣದಿಂದ ಎಳೆಯ ಅಡಿಕೆ ನಳ್ಳಿ ಬೀಳಲು ಶುರುವಾಗಿದೆ. ಇದಕ್ಕೇನು ಪರಿಹಾರ ಎಂಬ ಚಿಂತೆ ಬೆಳೆಗಾರರನ್ನು  ಕಾಡ್ತಾ ಇದೆ.

 

 

ಮಳೆಗಾಲ ಮಳೆಯ ಕಾರಣದಿಂದ ಕೊಳೆರೋಗ ಬಾಧಿಸಿದರೆ, ಬೇಸಗೆಯಲ್ಲಿ  ವಾತಾವರಣದ ಕಾರಣದಿಂದ ಎಳೆ ನಳ್ಳಿ ಬೀಳುತ್ತಿದೆ.  ಹೀಗಾಗಿ ಅಡಿಕೆ ಬೆಳೆಗಾರಿನಿಗೆ ಸಂಕಷ್ಟದ ಮೇಲೆ ಸಂಕಷ್ಟ ಬರಲಾರಂಭಿಸಿದೆ. ಈ ಬಾರಿ ಕೊಳೆರೋಗದ ಕಾರಣದಿಂದ ಸಾಕಷ್ಟು ಫಸಲು ನಾಶ  ಹೊಂದಿದ ಬೆಳೆಗಾರಿನಿಗೆ ಇದೀಗ ಅರಿವಿಲ್ಲದೆ ಅಡಿಕೆ ಫಸಲು ನಾಶವಾಗುತ್ತಿದೆ. ಇದರ ಫಲಿತಾಂಶ ಸಿಗುವುದು ಮಳೆಗಾಲದ ನಂತರವೇ.

ಜೂನ್ 6 ರ ನಂತರ ಮನಳೆಗಾಲ ಆರಂಭವಾಗುತ್ತದೆ ಎಂದು ಹವಾಮಾನ ಇಲಾಖೆ ಹೇಳಿದೆ. ಅದುವರೆಗೆ ಈ ಏರಿಳಿತ  ಇರುವ ಕಾರಣದಿಂದ ಸಹಿಸಿಕೊಳ್ಳಬೇಕಷ್ಟೇ.

 

 

ಆದರೆ ವೈಜ್ಞಾನಿಕವಾಗಿ ಇನ್ನೊಂದು ಮಾಹಿತಿ ಸಿಗುತ್ತದೆ, ಅಡಿಕೆ ಮರ 25 ಲೀಟರ್ ನಷ್ಟು ನೀರನ್ನು ಭೂಮಿಯಿಂದ ಹೀರಿಕೊಳ್ಳುತ್ತದೆ. ನೀರಿನ ಕೊರತೆ ಉಂಟಾದಾಗ ಸಹಜವಾಗಿಯೇ ಮರವೂ ಅದಕ್ಕೆ ಹೊಂದಿಕೊಳ್ಳುತ್ತದೆ. ವಿಪರೀತ ಬಿಸಿಲಾಗಾದ ಎಳೆ ಅಡಿಕೆಗೆ ಶಕ್ತಿ ಕುಂದಿ ಬೀಳುವುದು ಒಂದು ಭಾಗವಾದರೆ,  ವಿಪರೀತ ಬಿಸಿಲು ಇದ್ದು ಒಂದು ಮಳೆ ಬಂದರೆ ಇದ್ದಕ್ಕಿದ್ದಂತೆ ಮರ  ಒಮ್ಮೆಲೇ  ಹೆಚ್ಚು ನೀರು ಹೀರಿಕೊಂಡು ಅಡಿಕೆ ನಳ್ಳಿ ಮೇಲೆ ಪ್ರಭಾವ ಬೀರುತ್ತದೆ. ಹೀಗಾಗಿಯೂ ಕೆಲವೊಮ್ಮೆ ನಳ್ಳಿ ಉದುರುತ್ತದೆ ಎಂಬ ಮಾಹಿತಿ ಲಭ್ಯವಾಗುತ್ತದೆ.  ಅದಕ್ಕಾಗಿ ಅಡಿಕೆ ಮರಕ್ಕೆ ಒಮ್ಮೆಲೇ ಹೆಚ್ಚು ನೀರುಣಿಸುವುದು ಹಾಗೂ ಒಮ್ಮೆಲೇ ನೀರು ಕಡಿಮೆ ಮಾಡುವುದು  ಅಷ್ಟೊಂದು ಒಳ್ಳೆಯದಲ್ಲ, ಈ ಕಾರಣದಿಂದಲೂ ಅಡಿಕೆ ನಳ್ಳಿ ಉದುರುತ್ತದೆ. ವಾತಾವರಣದ ಕಾರಣದಿಂದಾದರೆ ಏನೂ ಮಾಡಲಾಗದು, ಆದರೆ ನೀರುಣಿಸುವುದರಲ್ಲೂ ಎಚ್ಚರಿಕೆ ವಹಿಸಬೇಕಾಗುತ್ತದೆ.

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಭತ್ತದ ಗದ್ದೆಯಿಂದ ಅಡಿಕೆ ತೋಟ | ಮಣ್ಣಿನ ಆರೋಗ್ಯದ ಮೇಲೆ ಪರಿಣಾಮ ಬಿಚ್ಚಿಟ್ಟ ಸಂಶೋಧನೆ

ಅಕ್ಕಿ ಗದ್ದೆಗಳನ್ನು ಅಡಿಕೆ ತೋಟಗಳಾಗಿ ಪರಿವರ್ತಿಸಿದಾಗ ಮಣ್ಣಿನ ನೈಟ್ರೋಜನ್‌ ಲಭ್ಯತೆ ಕಡಿಮೆಯಾಗುತ್ತದೆ ಎಂದು…

3 hours ago

ಹವಾಮಾನ ವರದಿ | 09-03-2026 | ಕರಾವಳಿ–ಮಲೆನಾಡಿನಲ್ಲಿ ಇಂದು ಸಂಜೆ ಗುಡುಗು ಮಳೆಯ ಸಾಧ್ಯತೆ | ಮಾರ್ಚ್ ಮಧ್ಯಭಾಗದಲ್ಲಿ ಮಳೆ ಚಟುವಟಿಕೆ ಹೆಚ್ಚಳ..?

ರ್ನಾಟಕದ ಹಲವು ಜಿಲ್ಲೆಗಳಲ್ಲಿ ಬಿಸಿಲಿನೊಂದಿಗೆ ಮೋಡ ಕವಿದ ವಾತಾವರಣ ಮುಂದುವರಿಯಲಿದ್ದು, ಕರಾವಳಿ ಹಾಗೂ…

11 hours ago

ರೈತರಿಂದ ಉದ್ಯಮಿಗಳವರೆಗೆ : ಕೃಷಿ ಕ್ಷೇತ್ರಕ್ಕೆ ಸರ್ಕಾರದ ಹೊಸ ದೃಷ್ಟಿಕೋನ

ರೈತರನ್ನು ಉದ್ಯಮಿಗಳನ್ನಾಗಿ ಮಾಡಲು ಬೆಳೆ ಮೌಲ್ಯವರ್ಧನೆ ಮತ್ತು ಮಾರುಕಟ್ಟೆ ಸಂಪರ್ಕ ವ್ಯವಸ್ಥೆಗಳನ್ನು ಸರ್ಕಾರ…

18 hours ago

ಎಲೆಚುಕ್ಕಿ ರೋಗದಿಂದ ಅಡಿಕೆ ರೈತರಿಗೆ ಸಂಕಷ್ಟ | ಸಾಲ ಮರುಪಾವತಿ ಒಂದು ವರ್ಷ ಮುಂದೂಡುವ ಪ್ರಸ್ತಾವನೆ..!

ಉತ್ತರ ಕನ್ನಡದಲ್ಲಿ ಎಲೆಚುಕ್ಕಿ ರೋಗದಿಂದ ಸಂಕಷ್ಟದಲ್ಲಿರುವ ಅಡಿಕೆ ಬೆಳೆಗಾರರಿಗೆ ಸಾಲ ಮರುಪಾವತಿ ಅವಧಿ…

19 hours ago

ಕೃಷಿಯ ನಿಜವಾದ ಶಕ್ತಿ ಮಹಿಳೆಯರು : ಭಾರತದಲ್ಲಿ ಮೌನ ಕ್ರಾಂತಿ ಶುರುವಾಗಿದೆ..!

ಭಾರತದ ಕೃಷಿಯಲ್ಲಿ ಮಹಿಳೆಯರ ಪಾತ್ರ ದಿನೇದಿನೇ ಹೆಚ್ಚುತ್ತಿದೆ. ಸಂಪನ್ಮೂಲ ಹಾಗೂ ನಾಯಕತ್ವ ಅವಕಾಶ…

1 day ago

ಹೊಸರುಚಿ | ಮನೆಲ್ಲೇ ಸುಲಭವಾಗಿ ಮಾಡುವ “ಉಪ್ಪು ಸೊಳೆ ಬೋಳು ಬೆಂದಿ”

ಸಾಂಪ್ರದಾಯಿಕ ಗ್ರಾಮೀಣ ತಿನಿಸು ಉಪ್ಪು ಸೊಳೆ ಬೋಳು ಬೆಂದಿ. ಸರಳ ಪದಾರ್ಥಗಳಿಂದ ಸುಲಭವಾಗಿ…

2 days ago