Advertisement
MIRROR FOCUS

ವಿಪರೀತ ಬಿಸಿಲಿಗೆ ಬೀಳ್ತಾ ಇದೆ ಅಡಿಕೆ ನಳ್ಳಿ

Share

ಸುಳ್ಯ: ವಿಪರೀತ ಬಿಸಿಲು ಹಾಗೂ ಹವಾಮಾನದ ಏರಿಳಿತದ ಕಾರಣದಿಂದ ನಳ್ಳಿ ಮಾತ್ರವಲ್ಲ ಎಳೆ ಅಡಿಕೆ ಬೀಳ್ತಾ ಇದೆ.  ನೋಡ ನೋಡುತ್ತಿದ್ದಂತೆ ಏನೂ ಮಾಡಲಾಗದ ಸ್ಥಿತಿ ಇದೆ. ಮಳೆಗಾಲ ಕೊಳೆರೋಗವಾಯ್ತು, ಬೇಸಗೆ ಕಾಲ ಬಿಸಿಲಾಗಿ  ನಳ್ಳಿ ಬೀಳುವುದಾಯ್ತು. ಏನೇ ಆದರೂ ಅಡಿಕೆ  ಮಾತ್ರಾ ಕೆಳಗೆ…!

Advertisement

 

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ  ಈಗ ಹವಾಮಾನದ ಏರಿಳಿತ ವಿಪರೀತವಾಗಿದೆ. ಒಂದೇ ದಿನದಲ್ಲಿ  ಬಿಸಿಲು, ಮಳೆ ಹಾಗೂ ಶಾಖ ಗಿಡಗಳ ಮೇಲೆ ಪರಿಣಾಮ ಬೀರ್ತಾ ಇದೆ. ಒಮ್ಮೆಲೇ 38 ಡಿಗ್ರಿಯಿಂದ 40 ಡಿಗ್ರಿಯವರೆಗೆ ತಾಪಮಾನ ಏರುತ್ತದೆ, ಅದೇ ರೀತಿ ಸಂಜೆಯಾಗುತ್ತಿದ್ದಂತೆಯೇ 27 ರಿಂದ 30 ಡಿಗ್ರಿಗೆ ಇಳಿಯುತ್ತದೆ. ಇಂತಹದ್ದೊಂದು ಏರಿಳಿತ ಇತ್ತೀಚೆಗಿನ ವರ್ಷದಲ್ಲಿ ಹೆಚ್ಚಾಗುತ್ತಿದೆ. ಈ ಕಾರಣದಿಂದ ಎಳೆಯ ಅಡಿಕೆ ನಳ್ಳಿ ಬೀಳಲು ಶುರುವಾಗಿದೆ. ಇದಕ್ಕೇನು ಪರಿಹಾರ ಎಂಬ ಚಿಂತೆ ಬೆಳೆಗಾರರನ್ನು  ಕಾಡ್ತಾ ಇದೆ.

 

 

ಮಳೆಗಾಲ ಮಳೆಯ ಕಾರಣದಿಂದ ಕೊಳೆರೋಗ ಬಾಧಿಸಿದರೆ, ಬೇಸಗೆಯಲ್ಲಿ  ವಾತಾವರಣದ ಕಾರಣದಿಂದ ಎಳೆ ನಳ್ಳಿ ಬೀಳುತ್ತಿದೆ.  ಹೀಗಾಗಿ ಅಡಿಕೆ ಬೆಳೆಗಾರಿನಿಗೆ ಸಂಕಷ್ಟದ ಮೇಲೆ ಸಂಕಷ್ಟ ಬರಲಾರಂಭಿಸಿದೆ. ಈ ಬಾರಿ ಕೊಳೆರೋಗದ ಕಾರಣದಿಂದ ಸಾಕಷ್ಟು ಫಸಲು ನಾಶ  ಹೊಂದಿದ ಬೆಳೆಗಾರಿನಿಗೆ ಇದೀಗ ಅರಿವಿಲ್ಲದೆ ಅಡಿಕೆ ಫಸಲು ನಾಶವಾಗುತ್ತಿದೆ. ಇದರ ಫಲಿತಾಂಶ ಸಿಗುವುದು ಮಳೆಗಾಲದ ನಂತರವೇ.

ಜೂನ್ 6 ರ ನಂತರ ಮನಳೆಗಾಲ ಆರಂಭವಾಗುತ್ತದೆ ಎಂದು ಹವಾಮಾನ ಇಲಾಖೆ ಹೇಳಿದೆ. ಅದುವರೆಗೆ ಈ ಏರಿಳಿತ  ಇರುವ ಕಾರಣದಿಂದ ಸಹಿಸಿಕೊಳ್ಳಬೇಕಷ್ಟೇ.

 

 

ಆದರೆ ವೈಜ್ಞಾನಿಕವಾಗಿ ಇನ್ನೊಂದು ಮಾಹಿತಿ ಸಿಗುತ್ತದೆ, ಅಡಿಕೆ ಮರ 25 ಲೀಟರ್ ನಷ್ಟು ನೀರನ್ನು ಭೂಮಿಯಿಂದ ಹೀರಿಕೊಳ್ಳುತ್ತದೆ. ನೀರಿನ ಕೊರತೆ ಉಂಟಾದಾಗ ಸಹಜವಾಗಿಯೇ ಮರವೂ ಅದಕ್ಕೆ ಹೊಂದಿಕೊಳ್ಳುತ್ತದೆ. ವಿಪರೀತ ಬಿಸಿಲಾಗಾದ ಎಳೆ ಅಡಿಕೆಗೆ ಶಕ್ತಿ ಕುಂದಿ ಬೀಳುವುದು ಒಂದು ಭಾಗವಾದರೆ,  ವಿಪರೀತ ಬಿಸಿಲು ಇದ್ದು ಒಂದು ಮಳೆ ಬಂದರೆ ಇದ್ದಕ್ಕಿದ್ದಂತೆ ಮರ  ಒಮ್ಮೆಲೇ  ಹೆಚ್ಚು ನೀರು ಹೀರಿಕೊಂಡು ಅಡಿಕೆ ನಳ್ಳಿ ಮೇಲೆ ಪ್ರಭಾವ ಬೀರುತ್ತದೆ. ಹೀಗಾಗಿಯೂ ಕೆಲವೊಮ್ಮೆ ನಳ್ಳಿ ಉದುರುತ್ತದೆ ಎಂಬ ಮಾಹಿತಿ ಲಭ್ಯವಾಗುತ್ತದೆ.  ಅದಕ್ಕಾಗಿ ಅಡಿಕೆ ಮರಕ್ಕೆ ಒಮ್ಮೆಲೇ ಹೆಚ್ಚು ನೀರುಣಿಸುವುದು ಹಾಗೂ ಒಮ್ಮೆಲೇ ನೀರು ಕಡಿಮೆ ಮಾಡುವುದು  ಅಷ್ಟೊಂದು ಒಳ್ಳೆಯದಲ್ಲ, ಈ ಕಾರಣದಿಂದಲೂ ಅಡಿಕೆ ನಳ್ಳಿ ಉದುರುತ್ತದೆ. ವಾತಾವರಣದ ಕಾರಣದಿಂದಾದರೆ ಏನೂ ಮಾಡಲಾಗದು, ಆದರೆ ನೀರುಣಿಸುವುದರಲ್ಲೂ ಎಚ್ಚರಿಕೆ ವಹಿಸಬೇಕಾಗುತ್ತದೆ.

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ರಾಜ್ಯದಲ್ಲಿ ಬಿಸಿಲು ಬಿಸಿ ತೀವ್ರ : ಮೈಸೂರಿನಲ್ಲಿ ಸನ್ ಸ್ಟ್ರೋಕ್ ವಾರ್ಡ್ ಆರಂಭಿಸಿದ ಆಸ್ಪತ್ರೆ

ತಾಪಮಾನ ಏರಿಕೆಯಿಂದ ಮೈಸೂರಿನ ಕೆ.ಆರ್. ಆಸ್ಪತ್ರೆಯಲ್ಲಿ 30 ಹಾಸಿಗೆಗಳ ಸನ್ ಸ್ಟ್ರೋಕ್ ವಾರ್ಡ್…

5 hours ago

ರೈತರು ಇಂಧನದಾತರಾಗಬೇಕು – ಭೂಮಿ ಉಳಿಸಿ ಸಮ್ಮೇಳನದಲ್ಲಿ ಸಂದೇಶ

ಭೂಮಿ ಉಳಿಸಿ ಸಮ್ಮೇಳನದಲ್ಲಿ ನಿತಿನ್ ಗಡ್ಕರಿ, ರೈತರು ಇಂಧನ ಉತ್ಪಾದನೆಗೆ ಕೈಜೋಡಿಸಿದರೆ ಮಾಲಿನ್ಯ…

5 hours ago

ರೈತರ ಆದಾಯ ಹೆಚ್ಚಿಸಲು ಸಮಗ್ರ ಕೃಷಿ ಮಾದರಿ ಅಗತ್ಯ

ರೈತರಿಗೆ ಸರಳ ಹಣಕಾಸು ವ್ಯವಸ್ಥೆ ಅಗತ್ಯವಿದ್ದು, ಸಮಗ್ರ ಕೃಷಿ ಮಾದರಿಯಿಂದ ಆದಾಯ ಹೆಚ್ಚಿಸಬಹುದು…

5 hours ago

ಹವಾಮಾನ ವರದಿ | 23-04-2026 | ಏಪ್ರಿಲ್ 25 ರಿಂದ ಮಳೆಯ ಸಾಧ್ಯತೆ ಹೆಚ್ಚು

ರಾಜ್ಯದಲ್ಲಿ ಬಿಸಿಲು ಮುಂದುವರಿದರೂ, ಏಪ್ರಿಲ್ 25ರಿಂದ ಮಳೆಯ ಚಟುವಟಿಕೆ ಹೆಚ್ಚಾಗುವ ಸೂಚನೆ ಇದೆ.…

5 hours ago

ಹವಾಮಾನ ವರದಿ | 22-04-2026 | ಎ.25ರಿಂದ ಮತ್ತೆ ಮಳೆ – ಯಾವ ಭಾಗಕ್ಕೆ ಏನು ಮುನ್ಸೂಚನೆ?

ರಾಜ್ಯದಲ್ಲಿ ಮುಂದಿನ ಎರಡು ದಿನ ಮಳೆಯ ಪ್ರಮಾಣ ಕಡಿಮೆ ಇರಲಿದ್ದು, ಏಪ್ರಿಲ್ 25ರಿಂದ…

1 day ago

ಹವಾಮಾನ ವರದಿ | 21-04-2026 | ಕರಾವಳಿ-ಮಲೆನಾಡಿನಲ್ಲಿ ಮಳೆ ಜೋರಾಗಲಿದೆ, ಉತ್ತರ ಒಳನಾಡಿಗೂ ಗುಡುಗು ಮಳೆ..!

ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಮುಂದುವರಿಯಲಿದ್ದು, ಉತ್ತರ ಒಳನಾಡಿನಲ್ಲಿ ಏಪ್ರಿಲ್ 25ರವರೆಗೆ…

2 days ago