Advertisement
MIRROR FOCUS

ವಿಪರೀತ ಬಿಸಿಲಿಗೆ ಬೀಳ್ತಾ ಇದೆ ಅಡಿಕೆ ನಳ್ಳಿ

Share

ಸುಳ್ಯ: ವಿಪರೀತ ಬಿಸಿಲು ಹಾಗೂ ಹವಾಮಾನದ ಏರಿಳಿತದ ಕಾರಣದಿಂದ ನಳ್ಳಿ ಮಾತ್ರವಲ್ಲ ಎಳೆ ಅಡಿಕೆ ಬೀಳ್ತಾ ಇದೆ.  ನೋಡ ನೋಡುತ್ತಿದ್ದಂತೆ ಏನೂ ಮಾಡಲಾಗದ ಸ್ಥಿತಿ ಇದೆ. ಮಳೆಗಾಲ ಕೊಳೆರೋಗವಾಯ್ತು, ಬೇಸಗೆ ಕಾಲ ಬಿಸಿಲಾಗಿ  ನಳ್ಳಿ ಬೀಳುವುದಾಯ್ತು. ಏನೇ ಆದರೂ ಅಡಿಕೆ  ಮಾತ್ರಾ ಕೆಳಗೆ…!

 

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ  ಈಗ ಹವಾಮಾನದ ಏರಿಳಿತ ವಿಪರೀತವಾಗಿದೆ. ಒಂದೇ ದಿನದಲ್ಲಿ  ಬಿಸಿಲು, ಮಳೆ ಹಾಗೂ ಶಾಖ ಗಿಡಗಳ ಮೇಲೆ ಪರಿಣಾಮ ಬೀರ್ತಾ ಇದೆ. ಒಮ್ಮೆಲೇ 38 ಡಿಗ್ರಿಯಿಂದ 40 ಡಿಗ್ರಿಯವರೆಗೆ ತಾಪಮಾನ ಏರುತ್ತದೆ, ಅದೇ ರೀತಿ ಸಂಜೆಯಾಗುತ್ತಿದ್ದಂತೆಯೇ 27 ರಿಂದ 30 ಡಿಗ್ರಿಗೆ ಇಳಿಯುತ್ತದೆ. ಇಂತಹದ್ದೊಂದು ಏರಿಳಿತ ಇತ್ತೀಚೆಗಿನ ವರ್ಷದಲ್ಲಿ ಹೆಚ್ಚಾಗುತ್ತಿದೆ. ಈ ಕಾರಣದಿಂದ ಎಳೆಯ ಅಡಿಕೆ ನಳ್ಳಿ ಬೀಳಲು ಶುರುವಾಗಿದೆ. ಇದಕ್ಕೇನು ಪರಿಹಾರ ಎಂಬ ಚಿಂತೆ ಬೆಳೆಗಾರರನ್ನು  ಕಾಡ್ತಾ ಇದೆ.

 

 

ಮಳೆಗಾಲ ಮಳೆಯ ಕಾರಣದಿಂದ ಕೊಳೆರೋಗ ಬಾಧಿಸಿದರೆ, ಬೇಸಗೆಯಲ್ಲಿ  ವಾತಾವರಣದ ಕಾರಣದಿಂದ ಎಳೆ ನಳ್ಳಿ ಬೀಳುತ್ತಿದೆ.  ಹೀಗಾಗಿ ಅಡಿಕೆ ಬೆಳೆಗಾರಿನಿಗೆ ಸಂಕಷ್ಟದ ಮೇಲೆ ಸಂಕಷ್ಟ ಬರಲಾರಂಭಿಸಿದೆ. ಈ ಬಾರಿ ಕೊಳೆರೋಗದ ಕಾರಣದಿಂದ ಸಾಕಷ್ಟು ಫಸಲು ನಾಶ  ಹೊಂದಿದ ಬೆಳೆಗಾರಿನಿಗೆ ಇದೀಗ ಅರಿವಿಲ್ಲದೆ ಅಡಿಕೆ ಫಸಲು ನಾಶವಾಗುತ್ತಿದೆ. ಇದರ ಫಲಿತಾಂಶ ಸಿಗುವುದು ಮಳೆಗಾಲದ ನಂತರವೇ.

ಜೂನ್ 6 ರ ನಂತರ ಮನಳೆಗಾಲ ಆರಂಭವಾಗುತ್ತದೆ ಎಂದು ಹವಾಮಾನ ಇಲಾಖೆ ಹೇಳಿದೆ. ಅದುವರೆಗೆ ಈ ಏರಿಳಿತ  ಇರುವ ಕಾರಣದಿಂದ ಸಹಿಸಿಕೊಳ್ಳಬೇಕಷ್ಟೇ.

 

 

ಆದರೆ ವೈಜ್ಞಾನಿಕವಾಗಿ ಇನ್ನೊಂದು ಮಾಹಿತಿ ಸಿಗುತ್ತದೆ, ಅಡಿಕೆ ಮರ 25 ಲೀಟರ್ ನಷ್ಟು ನೀರನ್ನು ಭೂಮಿಯಿಂದ ಹೀರಿಕೊಳ್ಳುತ್ತದೆ. ನೀರಿನ ಕೊರತೆ ಉಂಟಾದಾಗ ಸಹಜವಾಗಿಯೇ ಮರವೂ ಅದಕ್ಕೆ ಹೊಂದಿಕೊಳ್ಳುತ್ತದೆ. ವಿಪರೀತ ಬಿಸಿಲಾಗಾದ ಎಳೆ ಅಡಿಕೆಗೆ ಶಕ್ತಿ ಕುಂದಿ ಬೀಳುವುದು ಒಂದು ಭಾಗವಾದರೆ,  ವಿಪರೀತ ಬಿಸಿಲು ಇದ್ದು ಒಂದು ಮಳೆ ಬಂದರೆ ಇದ್ದಕ್ಕಿದ್ದಂತೆ ಮರ  ಒಮ್ಮೆಲೇ  ಹೆಚ್ಚು ನೀರು ಹೀರಿಕೊಂಡು ಅಡಿಕೆ ನಳ್ಳಿ ಮೇಲೆ ಪ್ರಭಾವ ಬೀರುತ್ತದೆ. ಹೀಗಾಗಿಯೂ ಕೆಲವೊಮ್ಮೆ ನಳ್ಳಿ ಉದುರುತ್ತದೆ ಎಂಬ ಮಾಹಿತಿ ಲಭ್ಯವಾಗುತ್ತದೆ.  ಅದಕ್ಕಾಗಿ ಅಡಿಕೆ ಮರಕ್ಕೆ ಒಮ್ಮೆಲೇ ಹೆಚ್ಚು ನೀರುಣಿಸುವುದು ಹಾಗೂ ಒಮ್ಮೆಲೇ ನೀರು ಕಡಿಮೆ ಮಾಡುವುದು  ಅಷ್ಟೊಂದು ಒಳ್ಳೆಯದಲ್ಲ, ಈ ಕಾರಣದಿಂದಲೂ ಅಡಿಕೆ ನಳ್ಳಿ ಉದುರುತ್ತದೆ. ವಾತಾವರಣದ ಕಾರಣದಿಂದಾದರೆ ಏನೂ ಮಾಡಲಾಗದು, ಆದರೆ ನೀರುಣಿಸುವುದರಲ್ಲೂ ಎಚ್ಚರಿಕೆ ವಹಿಸಬೇಕಾಗುತ್ತದೆ.

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಳೆ ಕೊರತೆ ತೀವ್ರ – ಬೆಂಗಳೂರು ಗ್ರಾಮಾಂತರದಲ್ಲಿ ಕೇವಲ ಶೇ. 3 ಬಿತ್ತನೆ; ನೀರಿನ ಬಳಕೆಗೆ ಕಟ್ಟುನಿಟ್ಟಿನ ಕ್ರಮ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶೇಕಡಾ 66 ರಷ್ಟು ಮಳೆ ಕೊರತೆಯಿಂದ ಕೇವಲ ಶೇ.…

2 hours ago

ಹವಾಮಾನ ವರದಿ | 28-07-2026 | ಮುಂದಿನ 10 ದಿನ ಸಾಮಾನ್ಯ ಮಳೆ – ಆಗಸ್ಟ್ ಆರಂಭದಲ್ಲಿ ದಕ್ಷಿಣ ಒಳನಾಡಿನಲ್ಲಿ ಮಳೆ ಚುರುಕು ಸಾಧ್ಯತೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಸಾಮಾನ್ಯ ಮಳೆ ಮುಂದುವರಿಯುವ ನಿರೀಕ್ಷೆಯಿದ್ದು,…

22 hours ago

200 ಹಸುಗಳಿಂದ ₹2 ಕೋಟಿ ವಾರ್ಷಿಕ ಆದಾಯ…! ಗಮನ ಸೆಳೆದ ಉತ್ತರ ಪ್ರದೇಶದ ಮಾದರಿ

ಉತ್ತರ ಪ್ರದೇಶದಲ್ಲಿ 200 ಹಸುಗಳನ್ನು ಆಧರಿಸಿದ ಸಮಗ್ರ ಗೋ ಆರ್ಥಿಕತೆ ಮಾದರಿಯಲ್ಲಿ ಗೋಮಯದಿಂದ…

22 hours ago

ರಬ್ಬರ್ ತೋಟ ಹಸಿರಾಗಿರಬಹುದು… ಆದರೆ ಕಾಡಿಗೆ ಪರ್ಯಾಯವಲ್ಲ…! ಮಲೇಷ್ಯಾ ಅಧ್ಯಯನ ವರದಿ

ರಬ್ಬರ್ ತೋಟಗಳು ಹಸಿರಾಗಿದ್ದರೂ ಅವು ನೈಸರ್ಗಿಕ ಮಳೆಕಾಡಿನ ಜೀವವೈವಿಧ್ಯವನ್ನು ಉಳಿಸಿಕೊಳ್ಳಲು ಸಾಧ್ಯವಿಲ್ಲ ಎಂದು…

1 day ago

ಅಡುಗೆ ಎಣ್ಣೆ ಆಮದು 7% ಏರಿಕೆ – ಭಾರತ ಇನ್ನೂ ಆಮದು ಅವಲಂಬಿತ

ಭಾರತದ ಅಡುಗೆ ಎಣ್ಣೆ ಆಮದು ಎಂಟು ತಿಂಗಳಲ್ಲಿ ಶೇ.7ರಷ್ಟು ಏರಿಕೆಯಾಗಿದೆ. ಜೂನ್‌ನಲ್ಲಿ ಆಮದು…

1 day ago

ಕೇರಳದಲ್ಲಿ ಪ್ರತಿವರ್ಷ ₹1,200 ಕೋಟಿ ಮೌಲ್ಯದ ಹಲಸು ವ್ಯರ್ಥ..! ಮೌಲ್ಯವರ್ಧನೆಗೆ ಸರ್ಕಾರ ಮುಂದಾಗಲಿ ಎಂಬ ಒತ್ತಾಯ

ಕೇರಳದಲ್ಲಿ ಉತ್ಪಾದನೆಯಾಗುವ ಬಹುತೇಕ ಹಲಸು ಬಳಕೆಯಾಗದೆ ವ್ಯರ್ಥವಾಗುತ್ತಿದ್ದು, ವರ್ಷಕ್ಕೆ ಸುಮಾರು ₹1,200 ಕೋಟಿ…

1 day ago