ವಿರಾಜಪೇಟೆಯಲ್ಲಿ ಉತ್ತಮ ಮಳೆ : ಮಡಿಕೇರಿಯಲ್ಲಿ ಕ್ಷೀಣ

June 12, 2019
10:00 AM

ಮಡಿಕೇರಿ : ಕೊಡಗು ಜಿಲ್ಲಾ ವ್ಯಾಪ್ತಿಯಲ್ಲಿ ಮುಂಗಾರಿನ ಆರಂಭಕ್ಕೆ ಪೂರಕವಾಗಿ ಮೋಡ, ಮಂಜಿನೊಂದಿಗೆ ಹನಿಮಳೆಯಾಗುತ್ತಿದ್ದರೆ, ವೀರಾಜಪೇಟೆ ವ್ಯಾಪ್ತಿಯಲ್ಲಿ ಮಂಗಳವಾರ ಬೆಳಗ್ಗಿನಿಂದಲೇ ಭಾರೀ ಮಳೆಯಾಗಿದೆ. ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಸೋಮವಾರದಿಂದಲೇ ಜಿಲ್ಲೆಯ ಬಹುತೇಕ ಭಾಗಗಳಲ್ಲಿ ಸಾಧಾರಣ ಮಳೆಯಾಗಿದ್ದರೆ, ಜಿಲ್ಲಾ ಕೇಂದ್ರ ಮಡಿಕೇರಿಯಲ್ಲಿ ಮಳೆ ಪ್ರಮಾಣ ಕಡಿಮೆ ಇತ್ತು.
ಕಾವೇರಿಯ ಉಗಮ ಸ್ಥಾನವಾದ ತಲಕಾವೇರಿ, ಭಾಗಮಂಡಲ ವ್ಯಾಪ್ತಿಯಲ್ಲಿ ಕಳೆದ 24 ಗಂಟೆಗಳಲ್ಲಿ ಒಂದು ಇಂಚಿನಷ್ಟು ಮಳೆಯಾಗಿದ್ದರೆ, ಕಾವೇರಿನದಿ ಪಾತ್ರದ ನಾಪೋಕ್ಲು, ಮೂರ್ನಾಡು, ಸಿದ್ದಾಪುರ, ಕುಶಾಲನಗರ ವಿಭಾಗಗಳಲ್ಲಿ ಸಾಧಾರಣ ಮಳೆಯಾಗಿರುವ ಬಗ್ಗೆ ವರದಿಯಾಗಿದೆ.

Advertisement
Advertisement

ಮಳೆ ವಿವರ:

ಮಂಗಳವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆಗಳ ಅವಧಿಯಲ್ಲಿ ಕೊಡಗು ಜಿಲ್ಲೆಯಲ್ಲಿ ಸರಾಸರಿ ಮಳೆ 12.47 ಮಿ.ಮೀ. ಕಳೆದ ವರ್ಷ ಇದೇ ದಿನ 104.56 ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗಿನ ಮಳೆ 205.75 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 761.49 ಮಿ.ಮೀ ಮಳೆಯಾಗಿತ್ತು.

ಮಡಿಕೇರಿ ತಾಲೂಕಿನಲ್ಲಿ ಇಂದಿನ ಸರಾಸರಿ ಮಳೆ 19.10 ಮಿ.ಮೀ. ಕಳೆದ ವರ್ಷ ಇದೇ ದಿನ 116.65 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 242.25 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 1056.94 ಮಿ.ಮೀ. ಮಳೆಯಾಗಿತ್ತು.

ವಿರಾಜಪೇಟೆ ತಾಲೂಕಿನಲ್ಲಿ ಇಂದಿನ ಸರಾಸರಿ ಮಳೆ 13.47 ಮಿ.ಮೀ. ಕಳೆದ ವರ್ಷ ಇದೇ ದಿನ 92.90 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 254.43 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 598.07 ಮಿ.ಮೀ. ಮಳೆಯಾಗಿತ್ತು. ಸೋಮವಾರಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 4.83 ಮಿ.ಮೀ. ಕಳೆದ ವರ್ಷ ಇದೇ ದಿನ 104.12 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 120.56 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 629.46 ಮಿ.ಮೀ. ಮಳೆಯಾಗಿತ್ತು.

 ಹಾರಂಗಿ ಜಲಾಶಯದ ನೀರಿನ ಮಟ್ಟ :

ಹಾರಂಗಿ ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳು, ಇಂದಿನ ನೀರಿನ ಮಟ್ಟ 2804.92 ಅಡಿಗಳು, ಕಳೆದ ವರ್ಷ ಇದೇ ದಿನ 2806.80 ಅಡಿ.
ಹಾರಂಗಿಯಲ್ಲಿ ಬಿದ್ದ ಮಳೆ 4.20 ಮಿ.ಮೀ., ಇಂದಿನ ನೀರಿನ ಒಳಹರಿವು 76 ಕ್ಯೂಸೆಕ್, ಇಂದಿನ ನೀರಿನ ಹೊರ ಹರಿವು ನದಿಗೆ 60 ಕ್ಯೂಸೆಕ್. ನಾಲೆಗೆ 50 ಕ್ಯುಸೆಕ್.

 

 

Advertisement
Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮಂಗಳೂರಿನಲ್ಲಿ ಸಮುದ್ರ ಮೀನು ಮರಿ ಉತ್ಪಾದನಾ ಕೇಂದ್ರ ಸ್ಥಾಪನೆಗೆ ಸಂಸದರಿಂದ ಒತ್ತಾಯ
February 14, 2026
7:45 AM
by: ದ ರೂರಲ್ ಮಿರರ್.ಕಾಂ
ಕರಾವಳಿ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ಆಗ್ರಹ | ಕರಾವಳಿ ಜಿಲ್ಲೆಗಳ ಅಭಿವೃದ್ಧಿಗೆ ಸಮಗ್ರ ದೃಷ್ಟಿ ಅಗತ್ಯ
February 13, 2026
10:24 AM
by: ದ ರೂರಲ್ ಮಿರರ್.ಕಾಂ
ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರಿಗೆ ಲಾಭ
February 12, 2026
6:54 AM
by: ದ ರೂರಲ್ ಮಿರರ್.ಕಾಂ
ಜಲಜೀವನ್ ಮಿಷನ್ ವೇಗಕ್ಕೆ ಕಟ್ಟುನಿಟ್ಟಿನ ಗಡಿ : ಉಳಿದ ಕಾಮಗಾರಿಗಳು ತ್ವರಿತ ಪೂರ್ಣಗೊಳಿಸಿ
February 12, 2026
6:47 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror