ವಿರಾಜಪೇಟೆಯಲ್ಲಿ ಉತ್ತಮ ಮಳೆ : ಮಡಿಕೇರಿಯಲ್ಲಿ ಕ್ಷೀಣ

June 12, 2019
10:00 AM

ಮಡಿಕೇರಿ : ಕೊಡಗು ಜಿಲ್ಲಾ ವ್ಯಾಪ್ತಿಯಲ್ಲಿ ಮುಂಗಾರಿನ ಆರಂಭಕ್ಕೆ ಪೂರಕವಾಗಿ ಮೋಡ, ಮಂಜಿನೊಂದಿಗೆ ಹನಿಮಳೆಯಾಗುತ್ತಿದ್ದರೆ, ವೀರಾಜಪೇಟೆ ವ್ಯಾಪ್ತಿಯಲ್ಲಿ ಮಂಗಳವಾರ ಬೆಳಗ್ಗಿನಿಂದಲೇ ಭಾರೀ ಮಳೆಯಾಗಿದೆ. ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಸೋಮವಾರದಿಂದಲೇ ಜಿಲ್ಲೆಯ ಬಹುತೇಕ ಭಾಗಗಳಲ್ಲಿ ಸಾಧಾರಣ ಮಳೆಯಾಗಿದ್ದರೆ, ಜಿಲ್ಲಾ ಕೇಂದ್ರ ಮಡಿಕೇರಿಯಲ್ಲಿ ಮಳೆ ಪ್ರಮಾಣ ಕಡಿಮೆ ಇತ್ತು.
ಕಾವೇರಿಯ ಉಗಮ ಸ್ಥಾನವಾದ ತಲಕಾವೇರಿ, ಭಾಗಮಂಡಲ ವ್ಯಾಪ್ತಿಯಲ್ಲಿ ಕಳೆದ 24 ಗಂಟೆಗಳಲ್ಲಿ ಒಂದು ಇಂಚಿನಷ್ಟು ಮಳೆಯಾಗಿದ್ದರೆ, ಕಾವೇರಿನದಿ ಪಾತ್ರದ ನಾಪೋಕ್ಲು, ಮೂರ್ನಾಡು, ಸಿದ್ದಾಪುರ, ಕುಶಾಲನಗರ ವಿಭಾಗಗಳಲ್ಲಿ ಸಾಧಾರಣ ಮಳೆಯಾಗಿರುವ ಬಗ್ಗೆ ವರದಿಯಾಗಿದೆ.

Advertisement
Advertisement
Advertisement

ಮಳೆ ವಿವರ:

Advertisement

ಮಂಗಳವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆಗಳ ಅವಧಿಯಲ್ಲಿ ಕೊಡಗು ಜಿಲ್ಲೆಯಲ್ಲಿ ಸರಾಸರಿ ಮಳೆ 12.47 ಮಿ.ಮೀ. ಕಳೆದ ವರ್ಷ ಇದೇ ದಿನ 104.56 ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗಿನ ಮಳೆ 205.75 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 761.49 ಮಿ.ಮೀ ಮಳೆಯಾಗಿತ್ತು.

ಮಡಿಕೇರಿ ತಾಲೂಕಿನಲ್ಲಿ ಇಂದಿನ ಸರಾಸರಿ ಮಳೆ 19.10 ಮಿ.ಮೀ. ಕಳೆದ ವರ್ಷ ಇದೇ ದಿನ 116.65 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 242.25 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 1056.94 ಮಿ.ಮೀ. ಮಳೆಯಾಗಿತ್ತು.

Advertisement

ವಿರಾಜಪೇಟೆ ತಾಲೂಕಿನಲ್ಲಿ ಇಂದಿನ ಸರಾಸರಿ ಮಳೆ 13.47 ಮಿ.ಮೀ. ಕಳೆದ ವರ್ಷ ಇದೇ ದಿನ 92.90 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 254.43 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 598.07 ಮಿ.ಮೀ. ಮಳೆಯಾಗಿತ್ತು. ಸೋಮವಾರಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 4.83 ಮಿ.ಮೀ. ಕಳೆದ ವರ್ಷ ಇದೇ ದಿನ 104.12 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 120.56 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 629.46 ಮಿ.ಮೀ. ಮಳೆಯಾಗಿತ್ತು.

 ಹಾರಂಗಿ ಜಲಾಶಯದ ನೀರಿನ ಮಟ್ಟ :

Advertisement

ಹಾರಂಗಿ ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳು, ಇಂದಿನ ನೀರಿನ ಮಟ್ಟ 2804.92 ಅಡಿಗಳು, ಕಳೆದ ವರ್ಷ ಇದೇ ದಿನ 2806.80 ಅಡಿ.
ಹಾರಂಗಿಯಲ್ಲಿ ಬಿದ್ದ ಮಳೆ 4.20 ಮಿ.ಮೀ., ಇಂದಿನ ನೀರಿನ ಒಳಹರಿವು 76 ಕ್ಯೂಸೆಕ್, ಇಂದಿನ ನೀರಿನ ಹೊರ ಹರಿವು ನದಿಗೆ 60 ಕ್ಯೂಸೆಕ್. ನಾಲೆಗೆ 50 ಕ್ಯುಸೆಕ್.

 

Advertisement

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಬರ ಹಿನ್ನೆಲೆ | ಮೈಸೂರು ಜಿಲ್ಲೆಯಲ್ಲಿ ಪಂಪ್‌ಸೆಟ್ ಬಳಸಿ ಕೃಷಿಗೆ ನದಿ ನೀರು ಬಳಕೆ ನಿಷೇಧ |
March 27, 2024
10:01 PM
by: ದ ರೂರಲ್ ಮಿರರ್.ಕಾಂ
ಮಳೆ… ಮಳೆ… | ಕುಕ್ಕೆ ಸುಬ್ರಹ್ಮಣ್ಯ ಸಹಿತ ವಿವಿದೆಡೆ ಉತ್ತಮ ಮಳೆ |
March 23, 2024
7:25 PM
by: ದ ರೂರಲ್ ಮಿರರ್.ಕಾಂ
ಲೋಕಸಭಾ ಚುನಾವಣೆ | ದಕ್ಷಿಣ ಕನ್ನಡ ಜಿಲ್ಲೆಗೆ ಇನ್ನೊಬ್ಬ ಪದವೀಧರ ಅಭ್ಯರ್ಥಿ | ಕಾಂಗ್ರೆಸ್‌ ನಿಂದ ಪದ್ಮರಾಜ್ ಆರ್ |
March 22, 2024
10:32 PM
by: ದ ರೂರಲ್ ಮಿರರ್.ಕಾಂ
ಸುಳ್ಯದ ಕೆಲವು ಕಡೆ ಮಳೆ |
March 22, 2024
8:37 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror