ಮಡಿಕೇರಿ: ಮಳೆಯ ಕಾರಣದಿಂದ ಸೋಮವಾರ ಬೆಳಗ್ಗೆ ವಿರಾಜಪೇಟೆ-ಮಾಕುಟ್ಟ ರಸ್ತೆಯ ಒಂದು ಬದಿ ಭೂ ಕುಸಿತ ಉಂಟಾಗಿದೆ. ಈ ಹಿನ್ನೆಲೆಯಲ್ಲಿ ರಸ್ತೆಯನ್ನುತಾತ್ಕಾಲಿಕವಾಗಿ ದುರಸ್ತಿಪಡಿಸುವ ಉದ್ಧೇಶದಿಂದ ಹಾಗೂ ಸಾರ್ವಜನಿಕರ ಸುರಕ್ಷತೆಯ ದೃಷ್ಟಿಯಿಂದ ಮೂರು ದಿನಗಳವರೆಗೆ ಪೆರುಂಬಾಡಿ ಚೆಕ್ ಪೋಸ್ಟ್ ನಿಂದ ಮಾಕುಟ್ಟ ಚೆಕ್ ಪೋಸ್ಟ್ ವರೆಗಿನ ರಸ್ತೆಯಲ್ಲಿ ಎಲ್ಲಾ ರೀತಿಯ ವಾಹನ ಸಂಚಾರವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.
ರಸ್ತೆಯ ಬದಿ ಕುಸಿತದ ಪ್ರದೇಶಕ್ಕೆ ಕೊಡಗು ಜಿಲ್ಲಾಧಿಕಾರಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಇದೇ ಸಂದರ್ಭ ಸಾರ್ವಜನಿಕರ ಸುರಕ್ಷತೆಯ ದೃಷ್ಟಿಯಿಂದ ಮೂರು ದಿನಗಳವರೆಗೆ ಪೆರುಂಬಾಡಿ ಚೆಕ್ ಪೋಸ್ಟ್ ನಿಂದ ಮಾಕುಟ್ಟ ಚೆಕ್ ಪೋಸ್ಟ್ ವರೆಗಿನ ರಸ್ತೆಯಲ್ಲಿ ಎಲ್ಲಾ ರೀತಿಯ ವಾಹನ ಸಂಚಾರವನ್ನು ಸಂಪೂರ್ಣವಾಗಿ ನಿಷೇಧಿಸಲು ಆದೇಶಿಸಿದರು. ತಾತ್ಕಾಲಿಕವಾಗಿ ರಸ್ತೆಯನ್ನು ದುರಸ್ತಿಗೊಳಿಸಿದ ನಂತರ ರಸ್ತೆಯನ್ನು ಸಾರ್ವಜನಿಕ ಓಡಾಟಕ್ಕೆ ಮುಕ್ತಗೊಳಿಸಿ, ಶಾಶ್ವತವಾಗಿ ರಸ್ತೆಯನ್ನು ದುರಸ್ತಿಗೊಳಿಸಲು ಕ್ರಮ ವಹಿಸಲಾಗುವುದು. ಆದ್ದರಿಂದ ಸಾರ್ವಜನಿಕರು ಸಹಕರಿಸಲು ಜಿಲ್ಲಾಡಳಿತ ಕೋರಿದೆ.
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…