ಮಡಿಕೇರಿ: ಮಳೆಯ ಕಾರಣದಿಂದ ಸೋಮವಾರ ಬೆಳಗ್ಗೆ ವಿರಾಜಪೇಟೆ-ಮಾಕುಟ್ಟ ರಸ್ತೆಯ ಒಂದು ಬದಿ ಭೂ ಕುಸಿತ ಉಂಟಾಗಿದೆ. ಈ ಹಿನ್ನೆಲೆಯಲ್ಲಿ ರಸ್ತೆಯನ್ನುತಾತ್ಕಾಲಿಕವಾಗಿ ದುರಸ್ತಿಪಡಿಸುವ ಉದ್ಧೇಶದಿಂದ ಹಾಗೂ ಸಾರ್ವಜನಿಕರ ಸುರಕ್ಷತೆಯ ದೃಷ್ಟಿಯಿಂದ ಮೂರು ದಿನಗಳವರೆಗೆ ಪೆರುಂಬಾಡಿ ಚೆಕ್ ಪೋಸ್ಟ್ ನಿಂದ ಮಾಕುಟ್ಟ ಚೆಕ್ ಪೋಸ್ಟ್ ವರೆಗಿನ ರಸ್ತೆಯಲ್ಲಿ ಎಲ್ಲಾ ರೀತಿಯ ವಾಹನ ಸಂಚಾರವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.
ರಸ್ತೆಯ ಬದಿ ಕುಸಿತದ ಪ್ರದೇಶಕ್ಕೆ ಕೊಡಗು ಜಿಲ್ಲಾಧಿಕಾರಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಇದೇ ಸಂದರ್ಭ ಸಾರ್ವಜನಿಕರ ಸುರಕ್ಷತೆಯ ದೃಷ್ಟಿಯಿಂದ ಮೂರು ದಿನಗಳವರೆಗೆ ಪೆರುಂಬಾಡಿ ಚೆಕ್ ಪೋಸ್ಟ್ ನಿಂದ ಮಾಕುಟ್ಟ ಚೆಕ್ ಪೋಸ್ಟ್ ವರೆಗಿನ ರಸ್ತೆಯಲ್ಲಿ ಎಲ್ಲಾ ರೀತಿಯ ವಾಹನ ಸಂಚಾರವನ್ನು ಸಂಪೂರ್ಣವಾಗಿ ನಿಷೇಧಿಸಲು ಆದೇಶಿಸಿದರು. ತಾತ್ಕಾಲಿಕವಾಗಿ ರಸ್ತೆಯನ್ನು ದುರಸ್ತಿಗೊಳಿಸಿದ ನಂತರ ರಸ್ತೆಯನ್ನು ಸಾರ್ವಜನಿಕ ಓಡಾಟಕ್ಕೆ ಮುಕ್ತಗೊಳಿಸಿ, ಶಾಶ್ವತವಾಗಿ ರಸ್ತೆಯನ್ನು ದುರಸ್ತಿಗೊಳಿಸಲು ಕ್ರಮ ವಹಿಸಲಾಗುವುದು. ಆದ್ದರಿಂದ ಸಾರ್ವಜನಿಕರು ಸಹಕರಿಸಲು ಜಿಲ್ಲಾಡಳಿತ ಕೋರಿದೆ.
ಮೇ 7 ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆ…
ನಿನ್ನೆ ನನ್ನ ಬಂಧುಗಳ ಮನೆಯ ಸಮಾರಂಭದಲ್ಲಿ ಭಾಗವಹಿಸಿ ಮನೆಗೆ ಮರಳಿ ಬರುವಾಗ ಮಾರ್ಗ…
ಸತತವಾಗಿ ತಾಪಮಾನ 40 ಡಿಗ್ರಿ ದಾಟಿದ ಕಾರಣ ಅಡಿಕೆ ಬೆಳೆಗೆ ಸಮಸ್ಯೆಯಾಗಿದೆ. ಎಳೆ…
ಮೇ 6 ಅಥವಾ 7ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ…
ಮೇ 6 ರಿಂದ ಕೊಡಗು ಹಾಗೂ ದಕ್ಷಿಣ ಕರಾವಳಿ, ಚಿಕ್ಕಮಗಳೂರು ಭಾಗಗಳಲ್ಲಿ ಮತ್ತೆ…
ಕೊಕೋ ಧಾರಣೆಯಲ್ಲಿ ಸ್ವಲ್ಪ ಇಳಿಕೆ ಕಂಡುಬಂದಿದೆ.