ಮಡಿಕೇರಿ: ಮಳೆಯ ಕಾರಣದಿಂದ ಸೋಮವಾರ ಬೆಳಗ್ಗೆ ವಿರಾಜಪೇಟೆ-ಮಾಕುಟ್ಟ ರಸ್ತೆಯ ಒಂದು ಬದಿ ಭೂ ಕುಸಿತ ಉಂಟಾಗಿದೆ. ಈ ಹಿನ್ನೆಲೆಯಲ್ಲಿ ರಸ್ತೆಯನ್ನುತಾತ್ಕಾಲಿಕವಾಗಿ ದುರಸ್ತಿಪಡಿಸುವ ಉದ್ಧೇಶದಿಂದ ಹಾಗೂ ಸಾರ್ವಜನಿಕರ ಸುರಕ್ಷತೆಯ ದೃಷ್ಟಿಯಿಂದ ಮೂರು ದಿನಗಳವರೆಗೆ ಪೆರುಂಬಾಡಿ ಚೆಕ್ ಪೋಸ್ಟ್ ನಿಂದ ಮಾಕುಟ್ಟ ಚೆಕ್ ಪೋಸ್ಟ್ ವರೆಗಿನ ರಸ್ತೆಯಲ್ಲಿ ಎಲ್ಲಾ ರೀತಿಯ ವಾಹನ ಸಂಚಾರವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.
ರಸ್ತೆಯ ಬದಿ ಕುಸಿತದ ಪ್ರದೇಶಕ್ಕೆ ಕೊಡಗು ಜಿಲ್ಲಾಧಿಕಾರಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಇದೇ ಸಂದರ್ಭ ಸಾರ್ವಜನಿಕರ ಸುರಕ್ಷತೆಯ ದೃಷ್ಟಿಯಿಂದ ಮೂರು ದಿನಗಳವರೆಗೆ ಪೆರುಂಬಾಡಿ ಚೆಕ್ ಪೋಸ್ಟ್ ನಿಂದ ಮಾಕುಟ್ಟ ಚೆಕ್ ಪೋಸ್ಟ್ ವರೆಗಿನ ರಸ್ತೆಯಲ್ಲಿ ಎಲ್ಲಾ ರೀತಿಯ ವಾಹನ ಸಂಚಾರವನ್ನು ಸಂಪೂರ್ಣವಾಗಿ ನಿಷೇಧಿಸಲು ಆದೇಶಿಸಿದರು. ತಾತ್ಕಾಲಿಕವಾಗಿ ರಸ್ತೆಯನ್ನು ದುರಸ್ತಿಗೊಳಿಸಿದ ನಂತರ ರಸ್ತೆಯನ್ನು ಸಾರ್ವಜನಿಕ ಓಡಾಟಕ್ಕೆ ಮುಕ್ತಗೊಳಿಸಿ, ಶಾಶ್ವತವಾಗಿ ರಸ್ತೆಯನ್ನು ದುರಸ್ತಿಗೊಳಿಸಲು ಕ್ರಮ ವಹಿಸಲಾಗುವುದು. ಆದ್ದರಿಂದ ಸಾರ್ವಜನಿಕರು ಸಹಕರಿಸಲು ಜಿಲ್ಲಾಡಳಿತ ಕೋರಿದೆ.
ಬಿಹಾರದ ಯುರೆನ್ನಲ್ಲಿ ಪತ್ತೆಯಾದ 5 ಲಕ್ಷಕ್ಕೂ ಹೆಚ್ಚು ಸುಟ್ಟ ಬೀಜಗಳ ಅಧ್ಯಯನವು ಭಾರತದ…
ಶ್ರೀಕೃಷ್ಣನನ್ನು ಕೇವಲ ದೇವರ ಅವತಾರವಾಗಿ ನೋಡುವುದಕ್ಕಿಂತ, ಮನುಷ್ಯರ ನಡುವೆ ನಿಂತು ಉಪದೇಶಿಸಿದ ಮಾನವಶಿಕ್ಷಕನಾಗಿಯೂ…
ಮುಂಗಾರು ದುರ್ಬಲಗೊಂಡಿದ್ದರೂ ಸ್ಥಳೀಯ ಮೋಡಗಳ ಬೆಳವಣಿಗೆಯಿಂದ ಮಲೆನಾಡು ಹಾಗೂ ಒಳನಾಡಿನಲ್ಲಿ ಗುಡುಗು ಸಹಿತ…
2024ರಲ್ಲಿ ಭಾರತದಲ್ಲಿ ರೈತರು ಮತ್ತು ಕೃಷಿ ಕಾರ್ಮಿಕರು ಸೇರಿ 10,546 ಮಂದಿ ಆತ್ಮಹತ್ಯೆಯಿಂದ…
ಕರ್ನಾಟಕದಲ್ಲಿ ಈಗಾಗಲೇ 13,500 ಶಿಕ್ಷಕರ ನೇಮಕಾತಿ ನಡೆದಿದ್ದು, ಶಿಕ್ಷಣ ಇಲಾಖೆಯಲ್ಲಿ ಇನ್ನೂ 16…
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…