ವಿರಾಟ್ ಭಜನೋತ್ಸವ 2020- ಕಾಣಿಯೂರಿನಲ್ಲಿ ಪೂರ್ವಭಾವಿ ಸಭೆ

January 3, 2020
2:50 PM

ಕಾಣಿಯೂರು: ಶ್ರೀ.ಕ್ಷೇ.ಧ.ಗ್ರಾ.ಯೋಜನೆ ಪುತ್ತೂರು, ತಾಲೂಕು ಭಜನಾ ಪರಿಷತ್ ವತಿಯಿಂದ ಫೆ. 8ರಂದು ನಡೆಯಲಿರುವ ವಿರಾಟ್ ಭಜನೋತ್ಸವ 2020ರ ಕಾರ್ಯಕ್ರಮದ ಪೂರ್ವಭಾವಿ ಸಭೆಯು ಕಾಣಿಯೂರಿನ ಶ್ರೀ ಲಕ್ಷ್ಮೀನರಸಿಂಹ ಭಜನಾ ಮಂದಿರದಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ವಿರಾಟ್ ಭಜನೋತ್ಸವ ಸಮಿತಿಯ ಅಧ್ಯಕ್ಷ ಧನ್ಯಕುಮಾರ್ ಬಿಳಿಯೂರುಗುತ್ತು, ಪ್ರಧಾನ ಕಾರ್ಯದರ್ಶಿ ಲೋಕೇಶ್ ಬೆತ್ತೋಡಿ, ಕಾರ್ಯದರ್ಶಿ ಅರುಣ್ ಕುಮಾರ್ ಪುತ್ತಿಲ, ತಾಲೂಕು ಭಜನಾ ಪರಿಷತ್ ಅಧ್ಯಕ್ಷ ಸುಬ್ಬಯ್ಯ ರೈ, ಸಮಿತಿ ಸಂಚಾಲಕ ಪದ್ಮನಾಭ ಶೆಟ್ಟಿ, ಕೋಶಾಧಿಕಾರಿ ಚಂದ್ರನ್ ತಲಪ್ಪಾಡಿ, ಶ್ರೀ ಕ್ಷೇ.ಧ.ಗ್ರಾ.ಯೋಜನೆಯ ತಾಲೂಕು ಯೋಜನಾಧಿಕಾರಿ ಜನಾರ್ದನ, ಸಮಿತಿ ಸದಸ್ಯರಾದ ರಾಜದೀಪಕ್ ಜೈನ್,ರಾಕೇಶ್ ರೈ ಕೆಡೆಂಜಿ, ಸವಣೂರು ಜನಜಾಗೃತಿ ವೇದಿಕೆಯ ಅಧ್ಯಕ್ಷ ಮಹೇಶ್ ಕೆ ಸವಣೂರು, ವಲಯಾಧ್ಯಕ್ಷರಾದ ರಾಧಾಕೃಷ್ಣ ರೈ, ವಲಯ ಮೇಲ್ವೀಚಾರಕಿ ಅಶ್ವಿನಿ, ಕಾಣಿಯೂರು ಶ್ರೀ ಲಕ್ಷ್ಮೀನರಸಿಂಹ ಭಜನಾ ಮಂಡಳಿಯ ಅಧ್ಯಕ್ಷ ವಾಸುದೇವ ನಾಯ್ಕ್ ತೋಟ, ಸವಣೂರು ವಲಯ ಭಜನಾ ಪರಿಷತ್, ಜನಜಾಗೃತಿ ವೇದಿಕೆ, ಶ್ರೀ.ಕ್ಷೇ.ಗ್ರಾ.ಯೋಜನೆಯ ಒಕ್ಕೂಟಗಳ ಪದಾಧಿಕಾರಿಗಳು, ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಸೇವಾಪ್ರತಿನಿಧಿಗಳು ಉಪಸ್ಥಿತರಿದ್ದರು.

ವಲಯ ಸಂಚಾಲಕರ ಆಯ್ಕೆ: ಫೆ 8ರಂದು ನಡೆಯುವ ವಿರಾಟ್ ಭಜನೋತ್ಸವ ಕಾರ್ಯಕ್ರಮದಲ್ಲಿ ಸವಣೂರು ವಲಯದ ವ್ಯಾಪ್ತಿಗಳಿಂದ ಸುಮಾರು 50 ಭಜನಾ ತಂಡಗಳು ಭಾಗವಹಿಸಲಿದ್ದು, ಈ ಭಜನಾ ತಂಡಗಳ ಯಶಸ್ವಿಗಾಗಿ ಸಂಚಾಲಕರನ್ನು ಆಯ್ಕೆ ಮಾಡಲಾಯಿತು. ಸವಣೂರು ವಲಯದ ಸವಣೂರು ವ್ಯಾಪ್ತಿಯಿಂದ ರಾಕೇಶ್ ರೈ ಕೆಡೆಂಜಿ, ಸರ್ವೆ, ಭಕ್ತಕೋಡಿ ವ್ಯಾಪ್ತಿಯಿಂದ ರಾಧಾಕೃಷ್ಣ ರೈ, ಬೆಳಂದೂರು ವ್ಯಾಪ್ತಿಯಿಂದ ವೇಣುಗೋಪಾಲ ಕಳುವಾಜೆ, ಕಾಣಿಯೂರು ವ್ಯಾಪ್ತಿಯಿಂದ ಗಣೇಶ್ ಉದುನಡ್ಕ, ಪುಣ್ಚಪ್ಪಾಡಿ ವ್ಯಾಪ್ತಿಯಿಂದ ಸೇಷಮ್ಮ ಇವರನ್ನು ಆಯ್ಕೆ ಮಾಡಲಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅನ್ನವೇ ಜೀವನ, ಅನ್ನವೇ ಮೃತ್ಯು
August 7, 2026
8:58 PM
by: ದ ರೂರಲ್ ಮಿರರ್.ಕಾಂ
‘ಅನ್ನಂ ಬ್ರಹ್ಮ’ ಭಾವದಿಂದ ಆಹಾರ ಸೇವಿಸಿದರೆ ಮುಕ್ತಿಯ ಸಾಧನ – ರಾಘವೇಶ್ವರ ಶ್ರೀ
August 6, 2026
11:04 PM
by: ದ ರೂರಲ್ ಮಿರರ್.ಕಾಂ
ದೇಹ–ಮನಸ್ಸು–ಆತ್ಮದ ಸಮತೋಲನವೇ ನಿಜವಾದ ಆರೋಗ್ಯ: ಆಯುರ್ವೇದದ ಪರಮ ಗುರಿ ಆತ್ಮಜ್ಞಾನ – ರಾಘವೇಶ್ವರ ಶ್ರೀ
August 5, 2026
8:52 PM
by: ದ ರೂರಲ್ ಮಿರರ್.ಕಾಂ
ಅಕಾಲದ ಹಸಿವು, ಅಸಮಯದ ನಿದ್ದೆ ದೇಹದ ಯಂತ್ರ ಕೆಟ್ಟಿರುವ ಸಂಕೇತ : ರಾಘವೇಶ್ವರ ಶ್ರೀ
August 5, 2026
9:09 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror