ಕಾಣಿಯೂರು: ಶ್ರೀ.ಕ್ಷೇ.ಧ.ಗ್ರಾ.ಯೋಜನೆ ಪುತ್ತೂರು, ತಾಲೂಕು ಭಜನಾ ಪರಿಷತ್ ವತಿಯಿಂದ ಫೆ. 8ರಂದು ನಡೆಯಲಿರುವ ವಿರಾಟ್ ಭಜನೋತ್ಸವ 2020ರ ಕಾರ್ಯಕ್ರಮದ ಪೂರ್ವಭಾವಿ ಸಭೆಯು ಕಾಣಿಯೂರಿನ ಶ್ರೀ ಲಕ್ಷ್ಮೀನರಸಿಂಹ ಭಜನಾ ಮಂದಿರದಲ್ಲಿ ನಡೆಯಿತು.
ಈ ಸಂದರ್ಭದಲ್ಲಿ ವಿರಾಟ್ ಭಜನೋತ್ಸವ ಸಮಿತಿಯ ಅಧ್ಯಕ್ಷ ಧನ್ಯಕುಮಾರ್ ಬಿಳಿಯೂರುಗುತ್ತು, ಪ್ರಧಾನ ಕಾರ್ಯದರ್ಶಿ ಲೋಕೇಶ್ ಬೆತ್ತೋಡಿ, ಕಾರ್ಯದರ್ಶಿ ಅರುಣ್ ಕುಮಾರ್ ಪುತ್ತಿಲ, ತಾಲೂಕು ಭಜನಾ ಪರಿಷತ್ ಅಧ್ಯಕ್ಷ ಸುಬ್ಬಯ್ಯ ರೈ, ಸಮಿತಿ ಸಂಚಾಲಕ ಪದ್ಮನಾಭ ಶೆಟ್ಟಿ, ಕೋಶಾಧಿಕಾರಿ ಚಂದ್ರನ್ ತಲಪ್ಪಾಡಿ, ಶ್ರೀ ಕ್ಷೇ.ಧ.ಗ್ರಾ.ಯೋಜನೆಯ ತಾಲೂಕು ಯೋಜನಾಧಿಕಾರಿ ಜನಾರ್ದನ, ಸಮಿತಿ ಸದಸ್ಯರಾದ ರಾಜದೀಪಕ್ ಜೈನ್,ರಾಕೇಶ್ ರೈ ಕೆಡೆಂಜಿ, ಸವಣೂರು ಜನಜಾಗೃತಿ ವೇದಿಕೆಯ ಅಧ್ಯಕ್ಷ ಮಹೇಶ್ ಕೆ ಸವಣೂರು, ವಲಯಾಧ್ಯಕ್ಷರಾದ ರಾಧಾಕೃಷ್ಣ ರೈ, ವಲಯ ಮೇಲ್ವೀಚಾರಕಿ ಅಶ್ವಿನಿ, ಕಾಣಿಯೂರು ಶ್ರೀ ಲಕ್ಷ್ಮೀನರಸಿಂಹ ಭಜನಾ ಮಂಡಳಿಯ ಅಧ್ಯಕ್ಷ ವಾಸುದೇವ ನಾಯ್ಕ್ ತೋಟ, ಸವಣೂರು ವಲಯ ಭಜನಾ ಪರಿಷತ್, ಜನಜಾಗೃತಿ ವೇದಿಕೆ, ಶ್ರೀ.ಕ್ಷೇ.ಗ್ರಾ.ಯೋಜನೆಯ ಒಕ್ಕೂಟಗಳ ಪದಾಧಿಕಾರಿಗಳು, ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಸೇವಾಪ್ರತಿನಿಧಿಗಳು ಉಪಸ್ಥಿತರಿದ್ದರು.
ವಲಯ ಸಂಚಾಲಕರ ಆಯ್ಕೆ: ಫೆ 8ರಂದು ನಡೆಯುವ ವಿರಾಟ್ ಭಜನೋತ್ಸವ ಕಾರ್ಯಕ್ರಮದಲ್ಲಿ ಸವಣೂರು ವಲಯದ ವ್ಯಾಪ್ತಿಗಳಿಂದ ಸುಮಾರು 50 ಭಜನಾ ತಂಡಗಳು ಭಾಗವಹಿಸಲಿದ್ದು, ಈ ಭಜನಾ ತಂಡಗಳ ಯಶಸ್ವಿಗಾಗಿ ಸಂಚಾಲಕರನ್ನು ಆಯ್ಕೆ ಮಾಡಲಾಯಿತು. ಸವಣೂರು ವಲಯದ ಸವಣೂರು ವ್ಯಾಪ್ತಿಯಿಂದ ರಾಕೇಶ್ ರೈ ಕೆಡೆಂಜಿ, ಸರ್ವೆ, ಭಕ್ತಕೋಡಿ ವ್ಯಾಪ್ತಿಯಿಂದ ರಾಧಾಕೃಷ್ಣ ರೈ, ಬೆಳಂದೂರು ವ್ಯಾಪ್ತಿಯಿಂದ ವೇಣುಗೋಪಾಲ ಕಳುವಾಜೆ, ಕಾಣಿಯೂರು ವ್ಯಾಪ್ತಿಯಿಂದ ಗಣೇಶ್ ಉದುನಡ್ಕ, ಪುಣ್ಚಪ್ಪಾಡಿ ವ್ಯಾಪ್ತಿಯಿಂದ ಸೇಷಮ್ಮ ಇವರನ್ನು ಆಯ್ಕೆ ಮಾಡಲಾಗಿದೆ.
ರಾಜಸ್ಥಾನದಲ್ಲಿ ಕಳೆದ ಎರಡು ವರ್ಷಗಳಲ್ಲಿ ಕೀಟನಾಶಕ ಬಳಕೆಯಿಂದ 535 ರೈತರು ಮೃತಪಟ್ಟಿರುವುದು ಬಹಿರಂಗವಾಗಿದೆ.…
ಕೊಟ್ಟಿಯೂರು ದೇವಸ್ಥಾನದಲ್ಲಿ ‘ಬಾವಳಿಕೆಟ್ಟು’ ಆಚರಣೆಗೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಹೊಸ ವಿವಾದ ಹುಟ್ಟಿಕೊಂಡಿದೆ.…
ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆಗಳು ಜೂ. 8ರಿಂದ ಮತ್ತಷ್ಟು ಚುರುಕುಗೊಳ್ಳುವ ಲಕ್ಷಣಗಳು ಕಂಡುಬಂದಿದ್ದು, ಕರಾವಳಿ…
ಜೋಯಿಡಾದಲ್ಲಿ ನಡೆದ ಹಲಸು ಉತ್ಸವದಲ್ಲಿ 50ಕ್ಕೂ ಹೆಚ್ಚು ಮೌಲ್ಯವರ್ಧಿತ ಹಲಸಿನ ಉತ್ಪನ್ನಗಳು ಪ್ರದರ್ಶನಗೊಂಡು…
ಕ್ಯಾಂಪ್ಕೋ ಸಂಸ್ಥಾಪಕ ವಾರಣಾಶಿ ಸುಬ್ರಾಯ ಭಟ್ ಅವರ ಜನ್ಮಕ್ಕೆ 99 ವರ್ಷಗಳು ಪೂರ್ಣಗೊಂಡಿದ್ದು,…
ರಾಜ್ಯಕ್ಕೆ ಮುಂಗಾರು ಪ್ರವೇಶಿಸಿದರೂ ಅದರ ಬಲ ಇನ್ನೂ ದುರ್ಬಲವಾಗಿದೆ. ಕರಾವಳಿಯಲ್ಲಿ ಜೂನ್ 8ರಿಂದ…