Advertisement
ಸುದ್ದಿಗಳು

ವಿರಾಟ್ ವೀರಾವೇಶಕ್ಕೆ ವಿಂಡೀಸ್ ಧೂಳೀಪಟ

Share

ಹೈದರಾಬಾದ್: ಅಂತರಾಷ್ಟ್ರೀಯ ಟ್ವೆಂಟಿ–20 ಕ್ರಿಕೆಟ್‌ನಲ್ಲಿ ವೈಯಕ್ತಿಕ ಶ್ರೇಷ್ಠ ಸ್ಕೋರ್ ದಾಖಲಿಸಿದ ನಾಯಕ ವಿರಾಟ್ ಕೊಹ್ಲಿ (ಔಟಾಗದೆ 94) ಆಟದಿಂದ ಶುಕ್ರವಾರ ರಾಜೀವಗಾಂಧಿ ಕ್ರೀಡಾಂಗಣದಲ್ಲಿ ನಡೆದ ವೆಸ್ಟ್ ಇಂಡೀಸ್ ಎದುರಿನ ಮೊದಲ ಟ್ವೆಂಟಿ–20 ಪಂದ್ಯದಲ್ಲಿ ಭಾರತ ತಂಡವು 6 ವಿಕೆಟ್‌ಗಳಿಂದ ಗೆದ್ದಿತು.

ಆರಂಭಿಕ ಆಟಗಾರ, ಕೆ.ಎಲ್.ರಾಹುಲ್ (62 ರನ್) ಅರ್ಧಶತಕ ಬಾರಿಸಿ ತಂಡದ ಗೆಲುವಿಗೆ ಕಾಣಿಕೆ ನೀಡಿದರು. ಮೊದಲು ಬ್ಯಾಟಿಂಗ್ ಮಾಡಿದ ವಿಂಡೀಸ್ ತಂಡವು 20 ಓವರ್‌ಗಳಲ್ಲಿ 5ಕ್ಕೆ 207 ರನ್ ಗಳಿಸಿತ್ತು. ಈ ಬೃಹತ್ ಮೊತ್ತವನ್ನು ಬೆನ್ನತ್ತಿದ ಭಾರತ ತಂಡವು 18.4 ಓವರ್‌ಗಳಲ್ಲಿ 4 ವಿಕೆಟ್‌ಗಳಿಗೆ 209 ರನ್‌ ಗಳಿಸಿ ಗೆದ್ದಿತು.

ಟಾಸ್ ಗೆದ್ದ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡ ಭಾರತ ತಂಡದ ಬೌಲರ್‌ಗಳಿಗೆ ವಿಂಡೀಸ್ ಬ್ಯಾಟ್ಸ್‌ಮನ್‌ಗಳು ಕಠಿಣ ಸವಾಲೊಡ್ಡಿದ್ದರು. ಎಡಗೈ ಸ್ಪಿನ್ನರ್ ಯಜುವೇಂದ್ರ ಚಾಹಲ್ ಇನಿಂಗ್ಸ್‌ನ ಎರಡನೇ ಓವರ್‌ನಲ್ಲಿಯೇ ಲೆಂಡ್ಲ್ ಸಿಮನ್ಸ್‌ (2 ರನ್)ವಿಕೆಟ್ ಗಳಿಸಿದರು. ಆದರೆ, ಎವಿನ್ ಲೂಯಿಸ್ (40; 17ಎಸೆತ, 3ಬೌಂಡರಿ, 4 ಸಿಕ್ಸರ್) ಮತ್ತು ಬ್ರೆಂಡನ್ ಕಿಂಗ್ (31;23ಎ,3ಬೌಂ, 1ಸಿ) ಎರಡನೇ ವಿಕೆಟ್ ಜೊತೆಯಾಟದಲ್ಲಿ 51 ರನ್‌ ಗಳನ್ನು ಗಳಿಸಿದರು. ಆರು ಓವರ್‌ಗಳು ಮುಗಿಯುವಷ್ಟರಲ್ಲಿಯೇ ತಂಡದ ಸ್ಕೋರ್ 60ರ ಗಡಿ ದಾಟಿತ್ತು. ಆರನೇ ಓವರ್‌ನಲ್ಲಿ ಈ ಜೊತೆಯಾಟವನ್ನು ಮುರಿಯುವಲ್ಲಿ ವಾಷಿಂಗ್ಟನ್ ಸುಂದರ್ ಯಶಸ್ವಿಯಾದರು. ಬಳಿಕ ಕ್ರೀಸ್‌ಗೆ ಬಂದ ಹೆಟ್ಮೆಯರ್ (56; 41ಎ, 2ಬೌಂ, 4 ಸಿ) ಮೆರೆದರು. ಸ್ಪಿನ್ ಮತ್ತು ಸ್ವಿಂಗ್ ಎರಡನ್ನೂ ಲೀಲಾಜಾಲವಾಗಿ ಆಡಿದರು. ಇವರ ಬ್ಯಾಟಿಂಗ್‌ನಲ್ಲಿ ಫೀಲ್ಡರ್‌ಗಳಿಗೆ ಹೆಚ್ಚು ಕೆಲಸವೇ ಇರಲಿಲ್ಲ. ಕಿಂಗ್ ಔಟಾದ ನಂತರ ಹೆಟ್ಮೆಯರ್ ಜೊತೆಗೂಡಿದ ನಾಯಕ ಕೀರನ್ ಪೊಲಾರ್ಡ್‌ ಸಿಡಿಲಬ್ಬರದ ಆಟವಾಡಿದರು.

ಸಂಕ್ಷಿಪ್ತ ಸ್ಕೋರು: ವೆಸ್ಟ್ ಇಂಡೀಸ್: 20 ಓವರ್‌ಗಳಲ್ಲಿ 5ಕ್ಕೆ 207 (ಎವಿನ್ ಲೂಯಿಸ್ 40, ಬ್ರೆಂಡನ್ ಕಿಂಗ್ 31, ಶಿಮ್ರೊನ್ ಹೆಟ್ಮೆಯರ್ 56, ಕೀರನ್ ಪೊಲಾರ್ಡ್ 37, ಜೇಸನ್ ಹೋಲ್ಡರ್ ಔಟಾಗದೆ 24, ದಿನೇಶ್ ರಾಮ್ದಿನ್ ಔಟಾಗದೆ 11 , ಯಜುವೇಂದ್ರ ಚಾಹಲ್ 36ಕ್ಕೆ2)

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಎತ್ತುಗಳಿಂದ ಡ್ರೋನ್‌ವರೆಗೆ… ಇದು ಭಾರತದ ಕೃಷಿಯ 79 ವರ್ಷಗಳ ಪಯಣ..!

ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…

19 hours ago

ತೀವ್ರ ವಿರೋಧದ ಹಿನ್ನೆಲೆ – ರಾಜ್ಯದಲ್ಲಿ ಗುಟ್ಕಾ ನಿಷೇಧ ಹಿಂತೆಗೆದುಕೊಳ್ಳಲು ಸರ್ಕಾರ ನಿರ್ಧಾರ – ಹೊರಬೀಳದ ಅಧಿಕೃತ ಆದೇಶ..!

ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…

20 hours ago

ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?

ಗುಟ್ಕಾ–ಪಾನ್‌ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…

2 days ago

ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…

3 days ago

ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ

ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…

3 days ago

ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?

ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…

3 days ago