ಸುದ್ದಿಗಳು

ವಿವಿವಿ ಮೂಲಕ ಭಾರತೀಯ ಶಿಕ್ಷಣಕ್ಕೆ ಹೊಸದಿಕ್ಕು: ರಾಘವೇಶ್ವರ ಶ್ರೀ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಗೋಕರ್ಣ: ದೇಶ ಬೆಳಗಬೇಕು; ಭಾರತೀಯ ವಿದ್ಯೆ ಬೆಳೆಯಬೇಕು ಎಂಬ ಉದ್ದೇಶದಿಂದ ಭಾರತದ ಶಿಕ್ಷಣದಲ್ಲಿ ಭಾರತೀಯತೆಯನ್ನು ತುಂಬುವ ಮಹತ್ಕಾರ್ಯಕ್ಕೆ ಶ್ರೀರಾಮಚಂದ್ರಾಪುರ ಮಠದ ಶ್ರೀವಿಷ್ಣುಗುಪ್ತ ವಿಶ್ವವಿದ್ಯಾಪೀಠ ಮುನ್ನುಡಿ ಬರೆದಿದೆ ಎಂದು ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮೀಜಿ ನುಡಿದರು.

Advertisement

ವಿಷ್ಣುಗುಪ್ತ ವಿಶ್ವವಿದ್ಯಾಪೀಠದ ಗುರುಕುಲಗಳ ಆನ್‍ಲೈನ್ ಶಿಕ್ಷಣಕ್ಕೆ ಚಾಲನೆ ನೀಡಿದ ಸಂದರ್ಭ ಸ್ವಾಮೀಜಿಯವರು ಸ್ವತಃ ಪ್ರಥಮ ಪಾಠ ಬೋಧಿಸಿದರು. ವಿಶ್ವದ ಎಲ್ಲೂ ಸಿಗದ ಪರಿಪೂರ್ಣ, ಅಪೂರ್ವ ಶಿಕ್ಷಣ ನಮ್ಮ ಯುವ ಜನಾಂಗಕ್ಕೆ ಸಿಗಬೇಕು ಎನ್ನುವುದೇ ವಿವಿವಿ ಸ್ಥಾಪನೆಯ ಉದ್ದೇಶ ಎಂದು ಹೇಳಿದರು. ಚಾಣಕ್ಯ ಇಡೀ ಗುರುಕುಲಕ್ಕೆ ಸ್ಫೂರ್ತಿ. ಆದ್ದರಿಂದ ಅವರ ಹೆಸರಲ್ಲಿ ವಿಶ್ವವಿದ್ಯಾಪೀಠ ಸ್ಥಾಪನೆಯಾಗುತ್ತಿದೆ. ಭಾರತಕ್ಕೆ ತಿರುವು ಕೊಡಬಲ್ಲ ಗುರುಕುಲಗಳ ಶುಭಾರಂಭ ಈ ಮಹತ್ವಾರ್ಯಕ್ಕೆ ಪೀಠಿಕೆ ಮಾತ್ರ ಎಂದು ಬಣ್ಣಿಸಿದರು.

ಅನ್ನದಾನ ಶ್ರೇಷ್ಠ; ಆದರೆ ಅನ್ನದಿಂದ ಸಿಗುವ ತೃಪ್ತಿ ಕ್ಷಣಿಕ. ವಿದ್ಯಾದಾನ ಅದಕ್ಕಿಂತ ಶ್ರೇಷ್ಠ ವಿದ್ಯೆ ಕೊಡುವ ಲಾಭ ಶಾಶ್ವತ. ದುಡ್ಡಿಗಿಂತ ದೊಡ್ಡ ಸಂಪತ್ತು ವಿದ್ಯೆ. ಅದನ್ನು ಬಳಸಿದಷ್ಟೂ ಅದು ವೃದ್ಧಿಸುತ್ತದೆ. ಆದ್ದರಿಂದ ಜೀವನಮೌಲ್ಯಗಳೂ ಸೇರಿದ ಅಪೂರ್ವ ಶಿಕ್ಷಣ ಯುವಪೀಳಿಗೆಗೆ ಸಿಗಬೇಕು ಎನ್ನುವುದು ವಿವಿವಿ ಧ್ಯೇಯ ಎಂದು ವಿವರಿಸಿದರು. ಭಾರತದಲ್ಲಿ ವಿದ್ಯೆಯ ಕಲಿಕೆ ವಿದ್ಯಾಬಾಸವಾಗಬಾರದು; ಬದಲಿಗೆ ನಿಜ ಅರ್ಥದಲ್ಲಿ ವಿದ್ಯಾಭ್ಯಾಸವಾಗಬೇಕು. ಮಕ್ಕಳಿಗೆ ಎಳವೆಯಲ್ಲೇ ಉತ್ತಮ ವಿದ್ಯೆ ದೊರಕಬೇಕು. ವಿದ್ಯೆ ಇಲ್ಲದವನು ಪಶು ಸಮಾನ ಎಂದು ಅಭಿಪ್ರಾಯಪಟ್ಟರು.
ವಿದ್ಯಾರ್ಥಿಯಲ್ಲಿ ಶಾಂತಿ, ಸಮಾಧಾನ, ವಿನಯ, ವಿಧೇಯತೆ ಅಗತ್ಯ. ಗರ್ವಿಷ್ಟನಿಗೆ ವಿದ್ಯೆ ಇಲ್ಲ; ಗುರುವಿಗೆ ಶರಣಾಗಬೇಕು; ಶ್ರದ್ಧೆ ಇಲ್ಲದವನಿಗೆ ವಿದ್ಯೆ ಕೈವಶವಾಗದು; ಗುರುವಿನ ಶಾಸನಕ್ಕೆ ಒಳಪಟ್ಟು, ಬದುಕಿಡೀ ಗುರುವಿನ ಸೂಚನೆ ಪಾಲಿಸಬೇಕು ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.
ವಿದ್ಯಾರ್ಥಿಗೆ ಕಾಗೆಯಂಥ ಸೂಕ್ಷ್ಮ ದೃಷ್ಟಿ, ಕೊಕ್ಕರೆಯಂತೆ ಧ್ಯಾನಸ್ಥ ಮನಸ್ಸು ಹಾಗೂ ಸಹನೆ ಅಗತ್ಯ. ಅಕಾಲ ನಿದ್ರೆ, ಅತಿ ಆಹಾರ, ಆಲಸ್ಯ ಬಿಡಬೇಕು. ವಿದ್ಯಾರ್ಜನೆಗೆ ಮನೆಬಿಟ್ಟು ಬರಬೇಕು. ಅಲ್ಪಾಹಾರ, ಗೃಹತ್ಯಾಗ ಮಾಡಿ ಗುರುಕುಲ ಸೇರಿ, ಸಾತ್ವಿಕ, ಪೌಷ್ಟಿಕ ಆಹಾರವನ್ನು ಪ್ರಮಾಣಬದ್ಧವಾಗಿ ಸೇವಿಸಿ ಮನಸ್ಸು, ಆರೋಗ್ಯ ವರ್ಧಿಸಿಕೊಳ್ಳಬೇಕು ಎಂದು ಸಲಹೆ ಮಾಡಿದರು.

ನಿಜವಾದ ವಿದ್ಯೆ ಕೊಡುವುದು ಗುರುಕುಲ. ಶ್ರೀ ರಾಮಕೃಷ್ಣ, ಶ್ರೀ ಶಂಕರರು, ಚಂದ್ರಗುಪ್ತ ಕಲಿತ ವಿದ್ಯೆ ಗುರುಕುಲ ವಿದ್ಯಾರ್ಥಿಗಳಿಗೆ ಲಭ್ಯವಾಗಲಿದೆ. ಶಿಕ್ಷಣ ಕ್ಷೇತ್ರದ ದಿಗ್ಗಜರು ಪಾಠ ಮಾಡಲಿದ್ದಾರೆ. ಕೊರೋನಾ ಪೀಡೆ ತೊಗಲಿ, ಬಲುಬೇಗ ಗುರುಕುಲಕ್ಕೆ ವಿದ್ಯಾರ್ಥಿಗಳು ಬರುವಂತಾಗಲಿ ಎಂದು ಆಶಿಸಿದರು.

Advertisement

ಗುರುಕುಲಗಳ ಪಾರಂಪರಿಕ ವಾಹಿನಿಯ ವರಿಷ್ಠಾಚಾರ್ಯ ವಿದ್ವಾನ್ ಸತ್ಯನಾರಾಯಣ ಶರ್ಮಾ ಪ್ರಾಸ್ತಾವಿಕವಾಗಿ ಮಾತನಾಡಿದರು. ವಿದ್ವಾನ್ ಜಗದೀಶ್ ಶರ್ಮಾ ಸಂಪ, ಮತ್ತಿತರರು ಉಪಸ್ಥಿತರಿದ್ದರು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 13-08-2025 | ಆ.21 ರವರೆಗೆ ಮಳೆ ವಿಸ್ತರಣೆ ಎಲ್ಲಿ ? ವಾಯುಭಾರ ಕುಸಿತದ ಕಾರಣದಿಂದ ಮಳೆ ಎಲ್ಲೆಲ್ಲಾ ಇದೆ..?

ಬಂಗಾಳಕೊಲ್ಲಿಯ ಆಂದ್ರಾ ಕರಾವಳಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಒಡಿಸ್ಸಾ ಕರಾವಳಿ ತನಕ ಸಾಗಿ,…

3 hours ago

ತೋಟಗಾರಿಕಾ ಬೆಳೆಗಳ ಅಭಿವೃದ್ಧಿಗೆ ಸಹಾಯಧನ |ವಿವಿಧ ಕಾರ್ಯಕ್ರಮಗಳ ಮೂಲಕ ರೈತರಿಗೆ ನೆರವು

ರಾಜ್ಯದಲ್ಲಿ ತೋಟಗಾರಿಕಾ ಬೆಳೆಗಳ ಅಭಿವೃದ್ಧಿಗೆ ಹಲವು ಕಾರ್ಯಕ್ರಮಗಳನ್ನು ಜಾರಿಗೆ ತಂದಿದ್ದು, ತೋಟಗಾರಿಕಾ ಬೆಳೆಗಳಿಗೆ…

10 hours ago

ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮಳೆ | ಹವಾಮಾನ ಇಲಾಖೆ ಮುನ್ಸೂಚನೆ

ರಾಜ್ಯದ ಕರಾವಳಿಯಲ್ಲಿ ವ್ಯಾಪಕ ಮಳೆಯಾಗಿದೆ. ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಕರಾವಳಿ ಹಾಗೂ ಉತ್ತರ…

10 hours ago

ತುಳುವರ ಆಟಿ ತಿಂಗಳು | ಆಟಿಯ ಕೊನೆಗೆ ಆಟಿಗೊಂದು ಸುತ್ತು….

ತುಳುನಾಡಿನಲ್ಲಿ ಆಟಿ ಬಹಳ ಮಹತ್ವದ ತಿಂಗಳು. ಈ ಸಮಯದಲ್ಲಿ ವಿವಿಧ ಆಚರಣೆಗಳು ಇರುತ್ತವೆ.…

10 hours ago

ಎತ್ತಿನಹೊಳೆ ಯೋಜನೆ ಕಾಮಗಾರಿ ಪೂರ್ಣಕ್ಕೆ ಕ್ರಮ | ವಿಧಾನಸಭೆಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹೇಳಿಕೆ

ಎತ್ತಿನಹೊಳೆ ಯೋಜನೆಯಡಿ ಕಾಮಗಾರಿಗಳನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಿ, ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಮೊದಲ…

21 hours ago

ಅರಣ್ಯ ಸಂರಕ್ಷಿಸುವಂತೆ ಅಧಿಕಾರಿಗಳಿಗೆ ಸೂಚನೆ | ಅರಣ್ಯ ಸಚಿವ ಈಶ್ವರ ಖಂಡ್ರೆ

ಅರಣ್ಯ ಭೂಮಿ ಒತ್ತುವರಿ ಮಾಡಿದರೆ ತೆರವು ಮಾಡಬೇಕಾಗುತ್ತದೆ. ಬೇಲಿ ಹಾಕುವುದರಿಂದ ಅರಣ್ಯ ಭೂಮಿ…

1 day ago