ಸುದ್ದಿಗಳು

ವಿವೇಕಾನಂದದಲ್ಲೊಂದು ‘ನಾದಲೋಕ’

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಪುತ್ತೂರು: ಸಂಗೀತಕ್ಕೆ ಹೃನ್ಮನವನ್ನು ಕುಣಿಸುವ ಶಕ್ತಿ ಇದೆ. ಮಧುರ ಸ್ವರವು ಭಾವನಾತ್ಮಕವಾಗಿ ರೋಮಾಂಚನಗೊಳಿಸುತ್ತದೆ. ಸುಸ್ವರ ಗಾಯನಕ್ಕೆ ಅದೈತ ಶಕ್ತಿಯಿದೆ. ಏಕೆಂದರೆ ಮನಸ್ಸನ್ನು ಭಾವತೀವ್ರತೆಯ ದಾರಿಯಲ್ಲಿ ನಡೆಸಿ ತಲ್ಲೀನತೆಗೆ ನೂಕುವ ಪ್ರಖರ ಸಾಧನವೇ ಸಂಗೀತ. ಇಂಪಾದ ಗೀತೆ ಮನ ನಲಿಸಲು ಕಾರಣವಾಗುವ ಅದ್ಭುತ ಕಲೆ.

Advertisement
Advertisement

ಪುತ್ತೂರಿನ ವಿವೇಕಾನಂದ ಕಾಲೇಜಿನಲ್ಲಿ ಆಗಸ್ಟ್ 30 ರಂದು ಸಂಭ್ರಮದ ವಾತಾವರಣ. ಕೊಠಡಿ ಕೊಠಡಿಗಳಲ್ಲಿ ಸಂಗೀತದ ಇಂಚರ ಪ್ರತಿಧ್ವನಿಸುತ್ತಿತ್ತು. ಇಲ್ಲಿ “ನಾದಲೋಕ”ವೆಂಬ ಅಂತರ್ ಕಾಲೇಜು ಮಟ್ಟದ ಸಂಗೀತ ಸ್ಪರ್ಧೆ ಕಳೆಗಟ್ಟಿತ್ತು. ಕಾಲೇಜು ಸಂಗೀತ ಕಲರವದಿಂದ ಅನುರಣಿಸುತ್ತಿತ್ತು. ಗಾನಮಾಧುರ್ಯತೆಯು ಮನದ ಮನೆಯಲ್ಲಿ ನೃತ್ಯವಾಡಿಸುತ್ತಿತ್ತು ಎಂದರೆ ತಪ್ಪಿಲ್ಲ.

ಹೌದು, ಶುಕ್ರವಾರದಂದು ಕಾಲೇಜಿನಲ್ಲಿ ಮಂಗಳೂರು ವಿಶ್ವವಿದ್ಯಾನಿಲಯ, ವಿವಿ ವಿದ್ಯಾರ್ಥಿ ಕ್ಷೇಮಪಾಲನಾ ನಿರ್ದೇಶನಾಲಯ ಹಾಗೂ ವಿವೇಕಾನಂದ ಮಹಾವಿದ್ಯಾಲಯ ಇದರ ಸಹಯೋಗದಲ್ಲಿ ಎರಡು ದಿನದ “ನಾದಲೋಕ”ವೆಂಬ ಅಂತರ್ ಕಾಲೇಜು ಮಟ್ಟದ ಸಂಗೀತ ಸ್ಪರ್ಧೆಯ ಉದ್ಘಾಟನಾ ಸಮಾರಂಭವನ್ನು ಏರ್ಪಡಿಸಲಾಗಿತ್ತು. ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿಗಳಾದ ಪ್ರೊ. ಪಿ.ಎಸ್ ಎಡಪಡಿತ್ತಾಯ ಉದ್ಘಾಟಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಕಾಲೇಜಿನ ನಾಲ್ಕು ಸಭಾಂಗಣದಲ್ಲಿ ಐದು ರೀತಿಯ ಸಂಗೀತ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು. ದಕ್ಷಿಣಕನ್ನಡ, ಉಡುಪಿ, ಕುಂದಾಪುರ, ಕಾರ್ಕಳ ಜಿಲ್ಲೆಗಳ ವಿವಿಧ ಶಿಕ್ಷಣಸಂಸ್ಥೆಗಳಿಂದ ಒಟ್ಟು 275 ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಕಾಲೇಜಿನ ಬೈಂದೂರು ಪ್ರಭಾಕರ್ ರಾವ್ ಸಭಾಂಗಣದಲ್ಲಿ ಶಾಸ್ತ್ರೀಯ ಸಂಗೀತ ಸ್ಪರ್ಧೆಯನ್ನು ಏರ್ಪಡಿಸಿದ್ದು, ವಿದ್ವಾನ್ ರಾಮಕೃಷ್ಣ ಭಟ್, ವಿದುಷಿ ಶಾರದಾ ಹಾಗೂ ಮಂಗಳೂರಿನ ವಿದುಷಿ ಅರುಣಾ ಸರಸ್ವತಿ ತೀರ್ಪುಗಾರರಾಗಿದ್ದರು. ಈ ಸ್ಪರ್ಧೆಯಲ್ಲಿ ಒಟ್ಟು 24 ವಿದ್ಯಾರ್ಥಿಗಳು ಭಾಗವಹಿಸಿದ್ದರು.

Advertisement

ಭಾರತೀಯ ಸಂಗೀತ ಕ್ಷೇತ್ರದಲ್ಲಿ ಶಾಸ್ತ್ರೀಯ ತಾಳವಾದ್ಯಕ್ಕೆ ಅದರದ್ದೇ ಆದ ಪರಂಪರೆಯಿದೆ. ಅದರ ಸಂಗೀತ ಗಂಧರ್ವವು ಇಂದು ಕಾಲೇಜಿನ ಎ.ವಿ. ಸಭಾಂಗಣದಲ್ಲಿ ನೆಲೆಮಾಡಿತ್ತು. ಶಿವನ ರುದ್ರನರ್ತನಕ್ಕೆ ಸಂಬಂಧಿಸಿದಂತೆ ಅನೇಕ ಪ್ರಕಾರದ ತಾಳಮದ್ದಳೆಯು ಸ್ಪರ್ಧೆಯನ್ನು ವಿನೂತನಗೊಳಿಸಿತು. ಈ ಸ್ಪರ್ಧೆಗೆ 20 ವಿದ್ಯಾರ್ಥಿಗಳು ಭಾಗವಹಿಸಿದ್ದು ವಿದ್ವಾನ್ ಆತ್ಮರಾಂ ನಾಯಕ್, ವಿದ್ವಾನ್ ನಿಕ್ಷಿತ್ ಪುತ್ತೂರು ಹಾಗೂ ವಿದುಷಿ ಶ್ರೀಲತಾ ತೀರ್ಪುಗಾರರಿದ್ದರು.

ಅಷ್ಟೇ ಅಲ್ಲದೆ ಕಾಲೇಜಿನ ಸುವರ್ಣ ಮಹೋತ್ಸವ ಸಭಾಂಗಣವು ಲಘುಸಂಗೀತದ ನಿನಾದದಿಂದ ರಂಗುಗೊಂಡಿತ್ತು. ಹೆಸರೇ ಸೂಚಿಸುವಂತೆ ಇಂಪಾದ ಲಘುಸಂಗೀತ ಸ್ಪರ್ಧೆಗೆ 29 ವಿದ್ಯಾರ್ಥಿಗಳು ಭಾಗವಹಿಸಿದ್ದು, ವಿದುಷಿ ಪವಿತ್ರಾ ಶೇಟ್, ವಿದ್ವಾನ್ ಗೋಪಾಲಕೃಷ್ಣ ಸುಳ್ಯ ತೀರ್ಪುಗಾರರಾಗಿದ್ದರು.

 

ಈ ಎಲ್ಲ್ಲಾ ಸಂಗೀತ ಪ್ರಕಾರದ ಮಧ್ಯೆ ಸಮೂಹಗೀತೆಯು ಕಾಲೇಜು ಪರಿಸರವನ್ನು ಸುಮಧುರಗೊಳಿಸಿತ್ತು. ಕೇಶವ ಸಂಕಲ್ಪ ಸಭಾಂಗಣದಲ್ಲಿ ನಡೆದ ಈ ಸ್ಪರ್ಧೆಯಲ್ಲಿ 28 ತಂಡಗಳು ಭಾಗವಹಿಸಿದ್ದವು. ವಿದ್ವಾನ್ ಪ್ರಭಾಕರ್, ವಿದುಷಿ ಶ್ರೀಮತಿ ಪಾರ್ವತಿ ಪದ್ಯಾಣ ಮತ್ತು ವಿದ್ವಾನ್ ಪ್ರಮೋದ್ ಮಂಗಳೂರು ಈ ಸ್ಪರ್ಧೆಗೆ ತೀರ್ಪುಗಾರರಾಗಿ ಆಗಮಿಸಿದ್ದರು.

Advertisement

ಒಂದೊಂದು ಬಗೆಯ ಸಂಗೀತ ಕಲರವವು ಕಾಲೇಜಿನ ಸೌಂದರ್ಯಕ್ಕೆ ಸ್ವರದ ಮುನ್ನುಡಿ ಬರೆದಿತ್ತು. ಆಗಸ್ಟ್ 30ರಂದು ಬೆಳಗ್ಗೆಯಿಂದ ಈ ಸ್ಪರ್ಧೆಯು ಪ್ರಾರಂಭವಾಗಿದ್ದು ಉಳಿದ ನಾಲ್ಕು ಸಂಗೀತ ಸ್ಪರ್ಧೆಯು ಶನಿವಾರವು ಮುಂದುವರೆಯಲಿದೆ. ಆದರೆ ಇಂತಹ ಗಾನ ಮಾಧುರ್ಯತೆಯು ಪ್ರತಿಯೊಬ್ಬ ಶೋತೃಗಳ ಮನಸನ್ನು ಹಿತಕರ ಮಾಡಿದ್ದು ಸುಳ್ಳಲ್ಲ.

 

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬದುಕು ಪುರಾಣ | ‘ಅವನೇನು.. ಹರಿಶ್ಚಂದ್ರನೋ!’

ನುಡಿದಂತೆ ನಡೆದಾತ ‘ರಾಜಾ ಹರಿಶ್ಚಂದ್ರ’. ಸತ್ಯಕ್ಕಾಗಿ ಸರ್ವಸ್ವವನ್ನೂ ತ್ಯಾಗ ಮಾಡಿದ ತ್ಯಾಗಿ. ಅನೃತವನ್ನಾಡದೆ…

3 hours ago

ಗುರು ಆದಿತ್ಯ ರಾಜಯೋಗ | ಯಾರಿಗೆಲ್ಲಾ ಕುಬೇರ ಯೋಗ..?

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

4 hours ago

ಸೆ.30 ವರೆಗೆ ಆಗುಂಬೆ ಘಾಟಿಯಲ್ಲಿ ಭಾರೀ ವಾಹನ ಸಂಚಾರ ನಿರ್ಬಂಧ

ಸಾರ್ವಜನಿಕ ಹಿತದೃಷ್ಠಿಯಿಂದ ಆಗುಂಬೆ ಘಾಟಿಯ ಮೂಲಕ ನಾಳೆಯಿಂದ ಸೆಪ್ಟಂಬರ್ 30 ರವರೆಗೆ ಲಘು…

11 hours ago

ಕೃಷಿ ಸಂಸ್ಕರಣಾ ಘಟಕ | 15 ಲಕ್ಷ ರೂಪಾಯಿ ಸಹಾಯಧನ ನೀಡಲು ಸರ್ಕಾರ  ನಿರ್ಧಾರ

ಕೃಷಿ ಸಂಸ್ಕರಣಾ ಘಟಕ ಸ್ಥಾಪಿಸುವ ರೈತರಿಗೆ ಈ ವರ್ಷದಿಂದ ರಾಜ್ಯ ಸರ್ಕಾರ 9…

11 hours ago

ಚಿಕ್ಕಮಗಳೂರು ಜಿಲ್ಲೆಯಲ್ಲಿ  ಧಾರಾಕಾರ ಮಳೆ | ಧಾರವಾಡ ಜಿಲ್ಲೆಯಲ್ಲಿ 130 ಮನೆಗಳಿಗೆ ಭಾಗಶಃ ಹಾನಿ

ಚಿಕ್ಕಮಗಳೂರು  ಜಿಲ್ಲೆಯಲ್ಲಿ ಸಾಧಾರಣದಿಂದ ಹೆಚ್ಚು ಮಳೆಯಾಗುತ್ತಿದೆ. ಹೆಚ್ಚು ಮಳೆಯಿಂದಾಗಿ  ಜಿಲ್ಲೆಯ ಮುಳ್ಳಯ್ಯನಗಿರಿ ರಸ್ತೆಯೆ…

12 hours ago

ಜೂ. 16-18 ದಾವಣಗೆರೆಯಲ್ಲಿ ಮಾವು ಮೇಳ

ದಾವಣಗೆರೆ ಜಿಲ್ಲಾ ಪಂಚಾಯತ್, ತೋಟಗಾರಿಕೆ ಇಲಾಖೆ ಸಹಯೋಗದೊಂದಿಗೆ ಜೂನ್.16 ರಿಂದ 18  ವರೆಗೆ…

12 hours ago