Advertisement
MIRROR FOCUS

ವಿವೇಕಾನಂದ ಇಂಜಿನಿಯರಿಂಗ್ ವಿದ್ಯಾರ್ಥಿಗಳಿಂದ ಸುಧಾರಿತ ವೆಂಟಿಲೇಟರ್ ಅಭಿವೃದ್ದಿ

Share

ಪುತ್ತೂರು: ಪುತ್ತೂರಿನ ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನ ಐಒಟಿ ಪ್ರಯೋಗಾಲಯದಲ್ಲಿ ಕಡಿಮೆ ವೆಚ್ಚದ ಉಸಿರಾಟ ನಿಯಂತ್ರಕ “ವಿವೇಕ ಜೀವವರ್ಧಕ” ಎನ್ನುವ ಸ್ವಚ್ಚ ಸ್ವಸ್ಥ ಶ್ವಾಸಕ್ರಿಯಾ ಸಾಧನವನ್ನು (ವೆಂಟಿಲೇಟರ್) ಅಭಿವೃದ್ದಿಪಡಿಸಲಾಗಿದೆ.

ಈ ನೂತನ ಸುಧಾರಿತ ಸಾಧನವನ್ನು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ  ಸಿಂಧೂ.ಬಿ.ರೂಪೇಶ್ ಮತ್ತು ಇತರ ಅಧಿಕಾರಿಗಳ ಸಮ್ಮುಖದಲ್ಲಿ  ಪ್ರಾತ್ಯಕ್ಷಿಕೆ ನೀಡಲಾಯಿತು. ಜಿಲ್ಲಾಧಿಕಾರಿಗಳ ಸೂಚನೆಯ ಮೇರೆಗೆ ಜಿಲ್ಲಾ ಶಸ್ತ್ರಚಿಕಿತ್ಸಾ ತಜ್ಞರ ಪ್ರತಿನಿಧಿಗಳಾಗಿ ಆಗಮಿಸಿದ ಮಂಗಳೂರು ವೆನ್‍ಲಾಕ್ ಆಸ್ಪತ್ರೆಯ ಅರಿವಳಿಕೆ ತಜ್ಞೆ ಡಾ.ಜೆಸಿಂತಾ ಡಿ.ಸೋಜ ಮತ್ತು ವೈದ್ಯ ಡಾ. ವಿಜಯ್ ಕುಮಾರ್ ಈ ಸಾಧನದ ಕಾರ್ಯವೈಖರಿ ಗಮನಿಸಿದರು.  ಈ ಸಂದರ್ಭದಲ್ಲಿ ಕಾಲೇಜು ಆಡಳಿತ ಮಂಡಳಿಯ ಅಧ್ಯಕ್ಷರು, ಸಂಚಾಲಕರು, ನಿರ್ದೇಶಕರು, ಪ್ರಾಂಶುಪಾಲರು ಮತ್ತು ತಂಡದ ಸದಸ್ಯರು ಉಪಸ್ಥಿತರಿದ್ದರು.

ಕೊರೋನಾ ವೈರಸ್‍ನಿಂದ ಹರಡುವ ಕೋವಿದ್-19 ರೋಗವು ವಿಶ್ವಾದ್ಯಂತ ವ್ಯಾಪಿಸಿದೆ. ನೇರವಾಗಿ ಮಾನವನ ಶ್ವಾಸಕೋಶವನ್ನು ಹೊಕ್ಕು ಅಲ್ಲೋಲ ಕಲ್ಲೋಲ ಉಂಟುಮಾಡುವ ಈ ವೈರಸ್ ಕೆಲವೊಮ್ಮೆ ಉಸಿರಾಟ ವ್ಯವಸ್ಥೆಯನ್ನು ಬುಡಮೇಲುಗೊಳಿಸುತ್ತದೆ. ಇಂತಹ ಸಂದರ್ಭದಲ್ಲಿ ರೋಗಿಗೆ ಕೃತಕ ಉಸಿರಾಟದ ವ್ಯವಸ್ಥೆಯನ್ನು ಮಾಡಬೇಕಾಗುತ್ತದೆ. ಪ್ರಸಕ್ತ ಆಸ್ಪತ್ರೆಗಳಲ್ಲಿ ಸೀಮಿತ ಕೃತಕ ಉಸಿರಾಟದ ಪರಿಕರಗಳು ಲಭ್ಯವಿದ್ದು, ಇದರ ವೆಚ್ಚ ಅಧಿಕವಾಗಿರುತ್ತದೆ. ಈ ವಿಷಯಗಳನ್ನು ಗಣನೆಯಲ್ಲಿರಿಸಿಕೊಂಡು ಕಾಲೇಜಿನ ಪ್ರಯೋಗಾಲಯಗಳಲ್ಲಿ ಲಭ್ಯವಿದ್ದ ಪರಿಕರಗಳನ್ನು ಬಳಸಿಕೊಂಡು ಈ ಸಾಧನವನ್ನು ನಿರ್ಮಿಸಲಾಗಿದೆ.

ಪ್ರತಿ ಮನುಷ್ಯನಿಗೆ 6 – 10 ಎಂಎಲ್/ಕೆಜಿ ಆಮ್ಲಜನಕ ಅಗತ್ಯವಿದೆ. ಈ ಮಾನದಂಡವನ್ನು ಬಳಸಿಕೊಂಡು ಈ ಯಂತ್ರವನ್ನು ಅಭಿವೃದ್ದಿಪಡಿಸಲಾಗಿದೆ. ಆರ್ಡಿನೋ ತಂತ್ರಜ್ಞಾನವನ್ನು ಇದಕ್ಕೆ ಬಳಸಿಕೊಳ್ಳಲಾಗಿದೆ. ಇಲ್ಲಿ ಆಕ್ಸಿಜನ್ ಸಿಲಿಂಡರಿನಿಂದ ಬರುವ ಆಮ್ಲಜನಕವು ನಿಗದಿತ ಪ್ರಮಾಣದಲ್ಲಿ ಮತ್ತು ನಿರ್ದಿಷ್ಟ ವೇಗದಲ್ಲಿ ಪೂರೈಕೆಯಾಗುವಂತೆ ಮಾಡಿ ರೋಗಿಯ ಉಸಿರಾಟ ಕ್ರಿಯೆಯನ್ನು ನಿಯಂತ್ರಿಸಲಾಗುತ್ತದೆ. ತಜ್ಞ ವೈದ್ಯರ ಸಲಹೆಯಂತೆ ಉಸಿರಾಟದ ತೊಂದರೆ ಇರುವ ರೋಗಿಗಳಿಗೆ ಜೀವರಕ್ಷಕವಾಗಿ ಇದನ್ನು ಬಳಸಬಹುದು. ಈ ಸಾಧನದ ನಿರ್ಮಾಣ ವೆಚ್ಚ ಸುಮಾರು ಹತ್ತು ಸಾವಿರ ರೂಪಾಯಿಗಳಾಗಿರುತ್ತದೆ.

ದೇರಳಕಟ್ಟೆ ಕೆ.ಎಸ್. ಹೆಗ್ಡೆ ಮೆಡಿಕಲ್ ಅಕಾಡೆಮಿಯ ಅರಿವಳಿಕೆ ಮತ್ತು ತುರ್ತು ಆರೈಕೆ ವಿಭಾಗದ ಡಾ.ವರುಣ್ ಭಾಸ್ಕರ್, ಪುತ್ತೂರು ಸಿಟಿ ಆಸ್ಪತ್ರೆಯ ಆಡಳಿತ ನಿರ್ದೇಶಕ ಡಾ.ಭಾಸ್ಕರ್ ಎಸ್, ಕನ್ಸಲ್ಟೆಂಟ್ ಗೈನಕಾಲಜಿಸ್ಟ್ ಡಾ.ಅನಿಲ್ ಬೈಪಾಡಿತ್ತಾಯ ಮತ್ತು ಅರಿವಳಿಕೆ ತಜ್ಞ ಡಾ.ಎಸ್.ಎಂ.ಪ್ರಸಾದ್ ಅವರು ವೈದ್ಯಕೀಯ ಸಲಹೆಗಳನ್ನು ನೀಡಿದ್ದಾರೆ.

ಕಾಲೇಜಿನ ಆಡಳಿತ ಮಂಡಳಿಯ ಸಂಚಾಲಕ  ರಾಧಾಕೃಷ್ಣ ಭಕ್ತ  ಅವರ ವಿಶೇಷ ಮುತುವರ್ಜಿಯಲ್ಲಿ, ಪ್ರಾಂಶುಪಾಲ ಡಾ.ಎಂ.ಎಸ್.ಗೋವಿಂದೇಗೌಡ ಅವರ ಮಾರ್ಗದರ್ಶನದೊಂದಿಗೆ ಇಲೆಕ್ಟ್ರಾನಿಕ್ಸ್ ವಿಭಾಗ ಮುಖ್ಯಸ್ಥ ಪ್ರೊ. ಶ್ರೀಕಾಂತ್ ರಾವ್, ಸಹಾಯಕ ಪ್ರಾಧ್ಯಾಪಕಿ ಪ್ರೊ.ಸೌಮ್ಯಾ ಅನಿಲ್, ಮೆಕ್ಯಾನಿಕಲ್ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಪ್ರೊ..ಸುದರ್ಶನ್.ಎಂ.ಎಲ್, ಪ್ರೊ..ಸತೀಶ್, ಪ್ರೊ..ಭಾಸ್ಕರ್ ಕುಲಕರ್ಣಿ, ತಾಂತ್ರಿಕ ಸಿಬ್ಬಂದಿಗಳಾದ ಶಿವಪ್ರಸಾದ್.ಎಚ್.ಎಸ್ ಮತ್ತು ವೆಂಕಟೇಶ್ ಇವರ ತಂಡವು ಇದನ್ನು ನಿರ್ಮಿಸಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ರಾಜ್ಯದಲ್ಲಿ ಭಾರೀ ಮಳೆ ಆರ್ಭಟ – ಕೆಲವು ಜಿಲ್ಲೆಗಳಲ್ಲಿ ಇಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ರಾಜ್ಯದ ಹಲವೆಡೆ ಭಾರೀ ಮಳೆಯ ಹಿನ್ನೆಲೆಯಲ್ಲಿ ಕೆಲವು ಜಿಲ್ಲೆಗಳಲ್ಲಿ ಶಾಲೆ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.…

5 hours ago

ಆಹಾರ-ನಿದ್ರೆ ಪರಸ್ಪರ ಪೂರಕ; ಉತ್ತಮ ನಿದ್ರೆಗೆ ಹಸಿವು ಅಗತ್ಯ: ರಾಘವೇಶ್ವರ ಶ್ರೀ

ಉತ್ತಮ ಆರೋಗ್ಯಕ್ಕೆ ಸರಿಯಾದ ಆಹಾರ ಮತ್ತು ನಿದ್ರೆ ಎರಡೂ ಅವಿಭಾಜ್ಯ ಎಂದು ಶ್ರೀ…

14 hours ago

ಕೃಷಿಕರ ಮಿತ್ರ ಸಾಯಿಶೇಖರ್‌ ಕರಿಕಳ ಅವರಿಗೆ ರೈತ ರತ್ನ ಪ್ರಶಸ್ತಿ

ಮಳೆ ಮಾಹಿತಿ ಮೂಲಕ ಕೃಷಿಕರಿಗೆ ನೆರವಾಗುತ್ತಿರುವ ಸಾಯಿಶೇಖರ್‌ ಕರಿಕಳ ಅವರಿಗೆ ರೈತ ರತ್ನ…

14 hours ago

ಮಂಗಳೂರಿನಲ್ಲಿ ರಾಷ್ಟ್ರೀಯ ಚೆಸ್ ಚಾಂಪಿಯನ್ ಶಿಪ್‌ಗೆ ಚಾಲನೆ – 28 ರಾಜ್ಯ–ಕೇಂದ್ರಾಡಳಿತ ಪ್ರದೇಶಗಳಿಂದ 644 ಬಾಲಕಿ-ಬಾಲಕಿಯರು

ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್‌-11 ಚೆಸ್ ಚಾಂಪಿಯನ್ಶಿಪ್‌ಗೆ ಭವ್ಯ ಚಾಲನೆ ದೊರೆತಿದ್ದು, ದೇಶದ 28…

15 hours ago

ಹವಾಮಾನ ವರದಿ | 02-08-2026 | ಕರಾವಳಿಯಲ್ಲಿ ಮಳೆ ಇಳಿಮುಖ ..? ರಾಜ್ಯದಲ್ಲಿ ಮುಂಗಾರು ಸ್ಥಿತಿ ಏನು..?

ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆಯ ತೀವ್ರತೆ ಇಳಿಮುಖವಾಗಲಿದ್ದು, ಆಗಸ್ಟ್‌ 3ರಿಂದ ತೋಟದ…

17 hours ago

ಭಾರೀ ಮಳೆಯ ಎಚ್ಚರಿಕೆ : 24 ಗಂಟೆ ಸನ್ನದ್ಧವಾಗಿರಲು ಡಿಸಿ ಸೂಚನೆ, ಭೂಕುಸಿತ ಪ್ರದೇಶಗಳ ಮೇಲೆ ಕಟ್ಟೆಚ್ಚರ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಎಲ್ಲಾ ಇಲಾಖೆಗಳನ್ನು 24…

1 day ago