ಪುತ್ತೂರು: ವಿವೇಕಾನಂದ ಕಾನೂನು ಕಾಲೇಜಿನ ಕಾನೂನು ನೆರವು ಘಟಕದ ವತಿಯಿಂದ ಕಾನೂನು ಅರಿವು ಕಾರ್ಯಕ್ರಮವು ಅ.18 ರಂದು ಕಾನೂನು ಕಾಲೇಜಿನ ಸಭಾಂಗಣದಲ್ಲಿ ಜರಗಿತು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಪುತ್ತೂರಿನ ವಕೀಲರಾದ, ಶ್ರೀ ಸೂರ್ಯನಾರಾಯಣ ಎನ್. ಕೆ .ಮಾತನಾಡಿದರು. ಅವರು, “ಕಾನೂನಿನ ಅರಿವು ಎಲ್ಲರಿಗೂ ಅತ್ಯಗತ್ಯ. ಆದ್ದರಿಂದ ನಮ್ಮ ಸಂವಿಧಾನದಲ್ಲಿ ಆರ್ಥಿಕವಾಗಿ ಮತ್ತು ಸಾಮಾಜಿಕವಾಗಿ ಹಿಂದುಳಿದವರು, ಉಚಿತ ಕಾನೂನಿನ ನೆರವು ಪಡೆಯಲು ಆರ್ಹರು ಎಂದು ಹೇಳಲಾಗಿದೆ. ಇದಕ್ಕಾಗಿ ನ್ಯಾಯಾಲಯಗಳಲ್ಲಿ ಉಚಿತ ಕಾನೂನು ನೆರವು ಘಟಕಗಳನ್ನು ರಚಿಸಲಾಗಿದೆ. ಆದರೆ ಆರ್ಹರು ಮಾತ್ರಇದರ ಉಪಯೋಗವನ್ನು ಪಡೆದುಕೊಳ್ಳಬೇಕು ಎಂದರು.
ವಿವೇಕಾನಂದ ಕಾನೂನು ಕಾಲೇಜಿನ ಪ್ರಾಂಶುಪಾಲರಾದ ಶ್ರೀಮತಿ ಅಕ್ಷತಾ ಎ. ಪಿ. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕಾನೂನು ನೆರವು ಘಟಕದ ಸಂಯೋಜಕರಾದ ಶ್ರೀಮತಿ ಸಂಗೀತಾ ಎಸ್. ಎಂ ವೇದಿಕೆಯಲ್ಲಿ ಉಪಸ್ಥಿತರಿದ್ದರು. ವಿದ್ಯಾರ್ಥಿಗಳಾದ ಜಗದೀಶ್ ಸ್ವಾಗತಿಸಿ, ಸಿಂಧು ಬಿ. ವಂದಿಸಿದರು. ದೀಪೆನ್ ಉಪ್ರೆಟ್ಟಿ ಕಾರ್ಯಕ್ರಮ ನಿರೂಪಿಸಿದರು.
2026ರಲ್ಲಿ ಎಲ್ನಿನೊ ಅಧಿಕೃತವಾಗಿ ಆರಂಭಗೊಂಡಿದ್ದು, ಇದು ಅತ್ಯಂತ ಪ್ರಬಲ "ಸೂಪರ್ ಎಲ್ನಿನೊ" ಆಗುವ…
ಉತ್ತರ ಪ್ರದೇಶ ಸರ್ಕಾರವು ಭಾರತೀಯ ಸೇನೆಗೆ ದೇಶೀ ಹಸುವಿನ ಹಾಲಿನ ಉತ್ಪನ್ನಗಳನ್ನು ಪೂರೈಸಲು…
ಎಳೆಕಾಯಿ ಹಾಗೂ ಬಲಿತ ಅಡಿಕೆ ಒಡೆದು ಬೀಳುತ್ತಿರುವ ಸಮಸ್ಯೆ ಹಲವು ಭಾಗಗಳಲ್ಲಿ ಕಂಡುಬರುತ್ತಿದೆ.…
ಜಾಗತಿಕ ಮಾರುಕಟ್ಟೆಯಲ್ಲಿ ನೈಸರ್ಗಿಕ ರಬ್ಬರ್ ಬೆಲೆ ಮೊದಲ ಬಾರಿಗೆ ಕೆಜಿಗೆ ₹300 ಗಡಿ…
ಬೇಸಿಗೆಯ ಹಣ್ಣುಗಳನ್ನು ತಿನ್ನುವ ಮೊದಲು ಹರಿಯುವ ನೀರು, ಬೇಕಿಂಗ್ ಸೋಡಾ ಅಥವಾ ವಿನೆಗರ್…
ಮೆಟಾ ಒಡೆತನದ Facebook, Instagram ಮತ್ತು Messenger ಸೇವೆಗಳು ಜಾಗತಿಕ ಮಟ್ಟದಲ್ಲಿ ತಾಂತ್ರಿಕ…