ಪುತ್ತೂರು: ವಿವೇಕಾನಂದ ಕಾನೂನು ಕಾಲೇಜಿನ ಕಾನೂನು ನೆರವು ಘಟಕದ ವತಿಯಿಂದ ಕಾನೂನು ಅರಿವು ಕಾರ್ಯಕ್ರಮವು ಅ.18 ರಂದು ಕಾನೂನು ಕಾಲೇಜಿನ ಸಭಾಂಗಣದಲ್ಲಿ ಜರಗಿತು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಪುತ್ತೂರಿನ ವಕೀಲರಾದ, ಶ್ರೀ ಸೂರ್ಯನಾರಾಯಣ ಎನ್. ಕೆ .ಮಾತನಾಡಿದರು. ಅವರು, “ಕಾನೂನಿನ ಅರಿವು ಎಲ್ಲರಿಗೂ ಅತ್ಯಗತ್ಯ. ಆದ್ದರಿಂದ ನಮ್ಮ ಸಂವಿಧಾನದಲ್ಲಿ ಆರ್ಥಿಕವಾಗಿ ಮತ್ತು ಸಾಮಾಜಿಕವಾಗಿ ಹಿಂದುಳಿದವರು, ಉಚಿತ ಕಾನೂನಿನ ನೆರವು ಪಡೆಯಲು ಆರ್ಹರು ಎಂದು ಹೇಳಲಾಗಿದೆ. ಇದಕ್ಕಾಗಿ ನ್ಯಾಯಾಲಯಗಳಲ್ಲಿ ಉಚಿತ ಕಾನೂನು ನೆರವು ಘಟಕಗಳನ್ನು ರಚಿಸಲಾಗಿದೆ. ಆದರೆ ಆರ್ಹರು ಮಾತ್ರಇದರ ಉಪಯೋಗವನ್ನು ಪಡೆದುಕೊಳ್ಳಬೇಕು ಎಂದರು.
ವಿವೇಕಾನಂದ ಕಾನೂನು ಕಾಲೇಜಿನ ಪ್ರಾಂಶುಪಾಲರಾದ ಶ್ರೀಮತಿ ಅಕ್ಷತಾ ಎ. ಪಿ. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕಾನೂನು ನೆರವು ಘಟಕದ ಸಂಯೋಜಕರಾದ ಶ್ರೀಮತಿ ಸಂಗೀತಾ ಎಸ್. ಎಂ ವೇದಿಕೆಯಲ್ಲಿ ಉಪಸ್ಥಿತರಿದ್ದರು. ವಿದ್ಯಾರ್ಥಿಗಳಾದ ಜಗದೀಶ್ ಸ್ವಾಗತಿಸಿ, ಸಿಂಧು ಬಿ. ವಂದಿಸಿದರು. ದೀಪೆನ್ ಉಪ್ರೆಟ್ಟಿ ಕಾರ್ಯಕ್ರಮ ನಿರೂಪಿಸಿದರು.
ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…
ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…
ಜಾಗತಿಕ ತಾಪಮಾನ ಪ್ರತಿ 1 ಡಿಗ್ರಿ ಏರಿದರೆ ಭಾರತದ ಭತ್ತದ ಇಳುವರಿ ಶೇ.6.6ರಷ್ಟು…
ಹಗಲು ನಿದ್ರೆ ಅನೇಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ರಾಘವೇಶ್ವರ ಶ್ರೀ ಎಚ್ಚರಿಸಿದ್ದಾರೆ.…
ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಭಾರಿ ಮಳೆಯಿಂದ ರಾಜ್ಯ ಹೆದ್ದಾರಿಯಲ್ಲಿ ಭೂಕುಸಿತ ಸಂಭವಿಸಿ ವಾಹನ…
ದಕ್ಷಿಣ ಕನ್ನಡ ಜಿಲ್ಲೆಗೆ ಆಗಸ್ಟ್ 3 ರಂದು ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಭಾರಿ…