ಪುತ್ತೂರು: ವಿವೇಕಾನಂದ ಕಾನೂನು ಕಾಲೇಜಿನ ಕಾನೂನು ನೆರವು ಘಟಕದ ವತಿಯಿಂದ ಕಾನೂನು ಅರಿವು ಕಾರ್ಯಕ್ರಮವು ಅ.18 ರಂದು ಕಾನೂನು ಕಾಲೇಜಿನ ಸಭಾಂಗಣದಲ್ಲಿ ಜರಗಿತು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಪುತ್ತೂರಿನ ವಕೀಲರಾದ, ಶ್ರೀ ಸೂರ್ಯನಾರಾಯಣ ಎನ್. ಕೆ .ಮಾತನಾಡಿದರು. ಅವರು, “ಕಾನೂನಿನ ಅರಿವು ಎಲ್ಲರಿಗೂ ಅತ್ಯಗತ್ಯ. ಆದ್ದರಿಂದ ನಮ್ಮ ಸಂವಿಧಾನದಲ್ಲಿ ಆರ್ಥಿಕವಾಗಿ ಮತ್ತು ಸಾಮಾಜಿಕವಾಗಿ ಹಿಂದುಳಿದವರು, ಉಚಿತ ಕಾನೂನಿನ ನೆರವು ಪಡೆಯಲು ಆರ್ಹರು ಎಂದು ಹೇಳಲಾಗಿದೆ. ಇದಕ್ಕಾಗಿ ನ್ಯಾಯಾಲಯಗಳಲ್ಲಿ ಉಚಿತ ಕಾನೂನು ನೆರವು ಘಟಕಗಳನ್ನು ರಚಿಸಲಾಗಿದೆ. ಆದರೆ ಆರ್ಹರು ಮಾತ್ರಇದರ ಉಪಯೋಗವನ್ನು ಪಡೆದುಕೊಳ್ಳಬೇಕು ಎಂದರು.
ವಿವೇಕಾನಂದ ಕಾನೂನು ಕಾಲೇಜಿನ ಪ್ರಾಂಶುಪಾಲರಾದ ಶ್ರೀಮತಿ ಅಕ್ಷತಾ ಎ. ಪಿ. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕಾನೂನು ನೆರವು ಘಟಕದ ಸಂಯೋಜಕರಾದ ಶ್ರೀಮತಿ ಸಂಗೀತಾ ಎಸ್. ಎಂ ವೇದಿಕೆಯಲ್ಲಿ ಉಪಸ್ಥಿತರಿದ್ದರು. ವಿದ್ಯಾರ್ಥಿಗಳಾದ ಜಗದೀಶ್ ಸ್ವಾಗತಿಸಿ, ಸಿಂಧು ಬಿ. ವಂದಿಸಿದರು. ದೀಪೆನ್ ಉಪ್ರೆಟ್ಟಿ ಕಾರ್ಯಕ್ರಮ ನಿರೂಪಿಸಿದರು.
ಭಾರತದಲ್ಲಿ ಸಮಸ್ಯೆ ಕೇವಲ ಉದ್ಯೋಗಗಳ ಕೊರತೆಯಲ್ಲ, ಉದ್ಯೋಗಕ್ಕೆ ಅಗತ್ಯವಾದ ಕೌಶಲ್ಯ ಹೊಂದಿದ ಅಭ್ಯರ್ಥಿಗಳ…
ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…
ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…
ಅಳಿವಿನಂಚಿನಲ್ಲಿದ್ದ ಕೇರಳದ ಪೆರಿಯಾರ್ ಕುಳ್ಳನ್ ಹಸುವಿಗೆ ಭಾರತೀಯ ಕೃಷಿ ಸಂಶೋಧನಾ ಮಂಡಳಿಯ ರಾಷ್ಟ್ರೀಯ…
ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಪರಿಸರ ಸ್ನೇಹಿ ಗಣಪತಿ ಮೂರ್ತಿಗಳನ್ನೇ ಪ್ರತಿಷ್ಠಾಪಿಸಿ ಗಣೇಶೋತ್ಸವ ಆಚರಿಸುವಂತೆ…
ಪಶ್ಚಿಮ ಘಟ್ಟ ಸಂರಕ್ಷಣೆಯ ಹೆಸರಿನಲ್ಲಿ ಕೃಷಿಕರ ಜೀವನೋಪಾಯಕ್ಕೆ ನಿರ್ಬಂಧ ಹೇರಬಾರದು, ಕಸ್ತೂರಿ ರಂಗನ್…