Advertisement
ಸುದ್ದಿಗಳು

ವಿವೇಕಾನಂದ ಕಾಲೇಜಿನಲ್ಲಿ ಉಪನ್ಯಾಸ ಕಾರ್ಯಕ್ರಮ

Share

ಪುತ್ತೂರು: ಭಾರತದ ಆತ್ಮವೇ ಆಧ್ಯಾತ್ಮಿಕತೆ, ನಂಬಿಕೆ. ಅದನ್ನು ಕಂಡುಕೊಳ್ಳುವ ಪ್ರಯತ್ನವನ್ನು ಇಂದಿನ ಯುವಜನತೆ ಮಾಡಬೇಕು. ಶಿಕ್ಷಣದ ಜೊತೆಗೆ ನೈತಿಕ ಮೌಲ್ಯಗಳನ್ನು ಕೂಡ ವಿದ್ಯಾರ್ಥಿಗಳು ಮೈಗೂಡಿಸಿಕೊಳ್ಳಬೇಕು. ಇಂದು ಮಹಾಪುರುಷರ ಆದರ್ಶಗಳು, ತತ್ವಗಳು ಕೇವಲ ಭಾವಚಿತ್ರಗಳಿಗೆ ಮಾತ್ರ ಸೀಮಿತವಾಗಿದೆ. ಸಾಮಾಜಿಕ ಜಾಲತಾಣಗಳು ಇಂದಿನ ಯುವಸಮೂಹದ ಬದುಕನ್ನೇ ಕಳೆದುಕೊಳ್ಳುವಂತೆ ಮಾಡಿದೆ. ಹೀಗಾಗಿ ಇವುಗಳಿಂದ ಮುಕ್ತಿ ಹೊಂದಿ ಉತ್ತಮ ಚಟುವಟಿಕೆಗಳಲ್ಲಿ ವಿದ್ಯಾರ್ಥಿಗಳು ತಮ್ಮನ್ನು ತಾವು ತೊಡಗಿಸಿಕೊಳ್ಳಬೇಕು ಎಂದು ಬೆಂಗಳೂರಿನ ಮೈತ್ರೇಯ ಗುರುಕುಲದ ಬೌದ್ಧಿಕ, ಮಾನಸಿಕ ಮತ್ತು ಆಧ್ಯಾತ್ಮಿಕ ವಿಭಾಗದ ಮುಖ್ಯಸ್ಥ ದುರ್ಗಾಪರಮೇಶ್ವರ ಅಭಿಪ್ರಾಯಪಟ್ಟರು.

ಅವರು ಇಲ್ಲಿನ ವಿವೇಕಾನಂದ ಪದವಿ ಕಾಲೇಜಿನ ವಾಣಿಜ್ಯ ಮತ್ತು ವ್ಯವಹಾರ ನಿರ್ವಹಣೆ ವಿಭಾಗದ ಆಶ್ರಯದಲ್ಲಿ ಐಕ್ಯುಎಸಿ ಘಟಕ ಮತ್ತು ವಾಣಿಜ್ಯ ಮತ್ತು ನಿರ್ವಹಣ ಸಂಘದ ಸಹಯೋಗದಲ್ಲಿ ಗುರುವಾರ ನಡೆದ ‘ಪ್ಯಾಟ್ರಿಯೋಟಿಸಂ ಇನ್ ಕಾರ್ಪೊರೇಟ್ ಸೋಶಿಯಲ್ ರೆಸ್ಪಾನಿಬಲಿಟಿ’ ಎಂಬ ವಿಷಯದ ಕುರಿತ ಉಪನ್ಯಾಸಕ ಕಾರ್ಯಕ್ರಮದಲ್ಲಿ ಮುಖ್ಯ ಅಥಿತಿಯಾಗಿ ಮಾತಾಡಿದರು. ಇಂದಿನ ಯುವ ಸಮುದಾಯ ತಮ್ಮ ಉನ್ನತಿಗೆ ಏನು ಮಾಡಬೇಕು ಅದನ್ನು ತಿಳಿಯದೆ ಕೇವಲ ಹೊರಪ್ರಪಂಚದ ಆಕರ್ಷಣೆಗೆ ಒಳಗಾಗುತ್ತಿದ್ದಾರೆ. ಇದು ಮಾತ್ರ ಶೋಚನೀಯ. ಉತ್ತಮರ ಸಂಘ ಮಾಡಿದಾಗ ಉತ್ತಮ ವಿಚಾರಗಳು ಹೊರ ಹೊಮ್ಮುತ್ತವೆ ಎಂದು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ. ಅರುಣ್ ಪ್ರಕಾಶ್ ಮಾತನಾಡಿ, ಪ್ರತಿಯೊಬ್ಬರಲ್ಲಿಯೂ ಸಾಮಾಜಿಕ ಜವಾಬ್ದಾರಿ ಇರಬೇಕು. ಜೀವನದಲ್ಲಿ ನೈತಿಕ ಮೌಲ್ಯಗಳನ್ನು ಮತ್ತು ಉತ್ತಮ ಸಂಸ್ಕಾರಗಳನ್ನು ಮೈಗೂಡಿಸಿಕೊಳ್ಳಬೇಕು. ಇಂದಿನ ಯುವಜನತೆಯಲ್ಲಿ ಒಂದು ವಿಷಯದ ಬಗ್ಗೆ ಮಾಹಿತಿ ತುಂಬಾ ಇದೆ. ಆದರೆ ಅವರಲ್ಲಿ ಅದರ ಜ್ಞಾನದ ಕೊರತೆ ಇದೆ. ಇಂದು ಕಾರ್ಪೊರೇಟ್ ಕಂಪೆನಿಗಳು ತಮ್ಮ ಸಾಮಾಜಿಕ ಜವಾಬ್ದಾರಿ ಏನೆಂಬುದನ್ನು ಮೊದಲು ಅರಿಯಬೇಕು ಎಂದು ಹೇಳಿದರು.

ವಾಣಿಜ್ಯ ವಿಭಾಗದ ಮುಖ್ಯಸ್ಥೆ ಡಾ. ರವಿಕಲಾ, ವಾಣಿಜ್ಯ ಮತ್ತು ನಿರ್ವಹಣ ಸಂಘದ ಅಧ್ಯಕ್ಷ ಅಂಕಿತ್ ಕೆ.ಸಿ., ಕಾರ್ಯದರ್ಶಿ ಶಾಂತನ್ ಉಪಸ್ಥಿತರಿದ್ದರು. ವಿದ್ಯಾರ್ಥಿನಿ ಭಾಗ್ಯಶ್ರೀ ಸ್ವಾಗತಿಸಿದರು. ವಿದ್ಯಾರ್ಥಿನಿ ಶ್ರದ್ಧಾ ವಂದಿಸಿದರು. ಅಕ್ಷತಾ ಕಾರ್ಯಕ್ರಮ ನಿರೂಪಿಸಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಶಿರಾಡಿ ಘಾಟ್‌ನಲ್ಲಿ ಸೋಮವಾರ ಟ್ರಾಫಿಕ್‌ ಸಂಕಷ್ಟದ ಸಾಧ್ಯತೆ – ಮುಂಜಾಗ್ರತಾ ಕ್ರಮ ಅಗತ್ಯ

ಮೂರು ದಿನಗಳ ರಜೆ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಶಿರಾಡಿ ಘಾಟ್‌ನಲ್ಲಿ…

8 hours ago

ಹವಾಮಾನ ವರದಿ |13-09-2026 | ಕರ್ನಾಟಕದಲ್ಲಿ ಮಳೆ ಮತ್ತೆ ಹಂತ ಹಂತವಾಗಿ ಚುರುಕಾಗಬಹುದೇ?

ಕರ್ನಾಟಕದಲ್ಲಿ ಸದ್ಯ ಮಳೆ ಕಡಿಮೆಯಾಗಿದ್ದು, ಬಿಸಿಲು ಹೆಚ್ಚಾಗಿರುವ ನಡುವೆಯೇ ಸೆ.14ರಿಂದ ದಕ್ಷಿಣ ಒಳನಾಡಿನಲ್ಲಿ…

17 hours ago

ರೈತರ ಆದಾಯ ಹೆಚ್ಚಿಸಲು ಬಹುಬೆಳೆ, ಪಶುಸಂಗೋಪನೆ, ಮೀನುಗಾರಿಕೆಗೆ ಒತ್ತು

ನೀರಿನ ಕೊರತೆ ಮತ್ತು ಹವಾಮಾನ ಬದಲಾವಣೆಯ ನಡುವೆ ಭತ್ತ–ಗೋಧಿಯಂತಹ ಹೆಚ್ಚಿನ ನೀರು ಮತ್ತು…

21 hours ago

ಹವಾಮಾನ ವರದಿ | 12.09.2026 | ಸೆ.15ರಿಂದ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮಳೆ ಚುರುಕು? ಕರಾವಳಿ–ಮಲೆನಾಡಿನಲ್ಲಿ ಸದ್ಯ ಬಿಸಿಲಿನ ವಾತಾವರಣ

ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…

2 days ago

ಹಸುವಿನ ಹಾಲಿಗೆ ಬದಲಾಗಿ ‘ಲ್ಯಾಬ್‌ ಹಾಲು’ – ಇನ್ನು ಕೇವಲ ವಿಜ್ಞಾನಕಲ್ಪನೆ ಅಲ್ಲ..! ಹೊಸ ಅಧ್ಯಯನದ ಲೆಕ್ಕಾಚಾರ

ಇಂಪೀರಿಯಲ್ ಕಾಲೇಜ್ ಲಂಡನ್‌ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…

2 days ago

ಅಡಿಕೆಗೆ ಉತ್ತಮ ಬೆಲೆ , ಆದರೂ ಬೆಳೆಗಾರರ ಚಿಂತೆ ಮುಂದುವರಿದಿದೆ – ಕಾರಣವೇನು?

ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…

2 days ago