Advertisement
ಸುದ್ದಿಗಳು

ವಿವೇಕಾನಂದ ಕಾಲೇಜಿನಲ್ಲಿ ಒಂದು ದಿನದ ರಾಷ್ಟ್ರೀಯ ವಿಚಾರ ಸಂಕಿರಣ

Share

ಪುತ್ತೂರು: ಯುವಜನರೊಂದಿಗೆ ಪ್ರತಿಯೊಂದು ವಿಷಯದ ಕುರಿತು ವಿಚಾರವಿನಿಮಯ ಮಾಡುವುದರಿಂದ ಆವಿಷ್ಕಾರ ನಡೆಯಲು ಸಾಧ್ಯ. ಇದು ಸಂಶೋಧಕರ ಹಾಗೂ ವಿದ್ಯಾರ್ಥಿಗಳ ನಡುವಿನ ಅಂತರವನ್ನು ದೂರ ಮಾಡುತ್ತದೆ. ವಿಜ್ಞಾನ ಕ್ಷೇತ್ರದಲ್ಲಿ ಸವಾಲುಗಳು ಮತ್ತು ತೊಡಕುಗಳು ಸಾಮಾನ್ಯ ಹಾಗಾಗಿ ಮಾಹಿತಿ ಕಲೆಹಾಕುವುದಕ್ಕಿಂತ ಅರ್ಥಮಾಡಿಕೊಳ್ಳುವುದು ಮುಖ್ಯವಾಗುತ್ತದೆ. ಹಾಗಾದರೆ ಮಾತ್ರ ಹೊಸ ಆವಿಷ್ಕಾರಗಳನ್ನು ಮಾಡಲು ಸಾಧ್ಯ ಎಂದು ಕೇರಳ ವಿಶ್ವವಿದ್ಯಾನಿಲಯದ ರಸಾಯನಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಪ್ರೊ.ಟಿ.ಎಸ್.ಅನಿರುದ್ಧನ್ ಹೇಳಿದರು.

Advertisement
Advertisement

ಅವರು ಬುಧವಾರ  ವಿವೇಕಾನಂದ ಕಾಲೇಜಿನಲ್ಲಿ ಪದವಿ ಹಾಗೂ ಸ್ನಾತಕೋತ್ತರ ಪದವಿ ರಸಾಯನಶಾಸ್ತ್ರ ವಿಭಾಗಗಳು ಕಾಲೇಜಿನ ಐಕ್ಯುಎಸಿ ಘಟಕ ಮತ್ತು ಮಂಗಳೂರು ವಿವಿ ರಸಾಯನಶಾಸ್ತ್ರ ಅಧ್ಯಾಪಕರ ಸಂಘದ ಸಂಯುಕ್ತಾಶ್ರಯದಲ್ಲಿ ಕರೆಂಟ್ ಟ್ರೆಂಡ್ಸ್ ಇನ್ ಕೆಮಿಕಲ್ ರಿಸರ್ಚ್ ಆ್ಯಂಡ್ ಡೆವಲಪ್‍ಮೆಂಟ್ ಎಂಬ ವಿಷಯದ ಕುರಿತು ಆಯೋಜಿಸಲಾದ ಒಂದು ದಿನದ ರಾಷ್ಟ್ರೀಯ ವಿಚಾರ ಸಂಕಿರಣದಲ್ಲಿ ಭಾಗವಹಿಸಿ ದಿಕ್ಸೂಚಿ ಭಾಷಣ ಮಾಡಿದರು.

Advertisement

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಕಾಲೇಜಿನ ಆಡಳಿತ ಮಂಡಳಿ ಸಂಚಾಲಕ ಎಂ.ಟಿ.ಜಯರಾಮ ಭಟ್, ರಸಾಯನಶಾಸ್ತ್ರ ಎನ್ನುವುದು ಕೇವಲ ಪ್ರಯೋಗಾಲಯದೊಳಗೆ ಯಾರೋ ಕೆಲವರು ನಡೆಸುವ ಅಧ್ಯಯನ ಎಂಬ ತಪ್ಪು ಕಲ್ಪನೆ ಅನೇಕರಲ್ಲಿದೆ. ಆದರೆ ಇದು ಎಲ್ಲಾ ರಂಗಗಳಲ್ಲೂ ಅವಶ್ಯಕವೆನಿಸುವ ವಿಷಯವೇ ಆಗಿದೆ. ರಾಷ್ಟ್ರೀಯ ವಿಚಾರ ಸಂಕಿರಣಗಳು ಸಮಾಜಕ್ಕೆ ಕೊಡುಗೆಗಳನ್ನು ನೀಡುವಂತಾಗಬೇಕು ಎಂದು ಹಾರೈಸಿದರು.

ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಚಾರ್ಯ ಡಾ.ಪೀಟರ್ ವಿಲ್ಸನ್ ಪ್ರಭಾಕರ್ ಮಾತನಾಡಿ, ಅಭಿವೃದ್ಧಿಯನ್ನು ಅನೇಕ ಸಂದರ್ಭಗಳಲ್ಲಿ ನಾವು ಸಂಖ್ಯಾತ್ಮಕವಾಗಿ ಗುರುತಿಸುತ್ತೇವೆ. ಆದರೆ ನಿಜವಾಗಿ ಅದು ಗುಣಾತ್ಮಕವಾದದ್ದು. ವಿಷಯವನ್ನು ಅರ್ಥ ಮಾಡಿಕೊಳ್ಳುವುದು ಅದರ ಉಪಯೋಗವನ್ನು ಪಡೆದುಕೊಳ್ಳುವುದು ನಿಜವಾದ ಸಂಶೋಧನೆ ಎನಿಸಿಕೊಳ್ಳುತ್ತದೆ. ರಸಾಯನಶಾಸ್ತ್ರ ವಿಷಯದ ವಿವಿಧ ವಿಭಾಗಗಳಾದ ಆಗ್ರೋ ಕೆಮಿಸ್ಟ್ರಿ, ಗ್ರೀನ್ ಕೆಮಿಸ್ಟ್ರಿ, ಫಾರ್ಮಾಸೆಟಿಕಲ್ ಕೆಮಿಸ್ಟ್ರಿ ಮೊದಲಾದ ವಿಷಯಗಳ ಬಗೆಗೆ ಅಧ್ಯಯನಗಳು ಅವ್ಯಾಹತವಾಗಿ ನಡೆಯುತ್ತಿವೆ ಎಂದು ನುಡಿದರಲ್ಲದೆ ಜ್ಞಾನವನ್ನು ಹಂಚುವುದು ಅತ್ಯಂತ ಅಗತ್ಯವಾದ ವಿಚಾರ ಎಂದು ನುಡಿದರು.

Advertisement

ಈ ಸಂದರ್ಭ ರಸಾಯನಶಾಸ್ತ್ರದ ಕುರಿತಾಗಿ ವಿಶೇಷ ಉಪನ್ಯಾಸ ಕಾರ್ಯಕ್ರಮ ನಡೆಯಿತು. ವಿದ್ಯಾರ್ಥಿನಿಯರಾದ ಜಯಶ್ರೀ ಹಾಗೂ ತೇಜಶ್ರೀ ಪ್ರಾರ್ಥಿಸಿದರು. ಕಾಲೇಜಿನ ಪದವಿ ರಸಾಯನ ಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರೊ.ಕೃಷ್ಣ ಕಾರಂತ ಸ್ವಾಗತಿಸಿದರು. ಸ್ನಾತಕೋತ್ತರ ರಸಾಯನಶಾಸ್ತ್ರ ವಿಭಾಗದ ಉಪನ್ಯಾಸಕಿ ಸವಿತಾ ವಂದಿಸಿದರು. ವಿದ್ಯಾರ್ಥಿನಿ ದಿಶಾ ಕಾರ್ಯಕ್ರಮ ನಿರ್ವಹಿಸಿದರು.

Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಳೆಯ ಜೊತೆಗೆ ಮಲೆನಾಡಲ್ಲಿ ಸಿಡಿಲಬ್ಬರ | ಸುಬ್ರಹ್ಮಣ್ಯದಲ್ಲಿ ಯುವಕ ಬಲಿ | ಮಡಿಕೇರಿಯಲ್ಲಿ ಕಾರ್ಮಿಕ ಗಂಭೀರ |

ಕುಕ್ಕೆ ಸುಬ್ರಹ್ಮಣ್ಯ ಸೇರಿದಂತೆ ಸುಳ್ಯ,ಕಡಬ ತಾಲೂಕಿನ  ಘಟ್ಟದ ತಪ್ಪಲಿನ ಪ್ರದೇಶದಲ್ಲಿ ಗುಡುಗು ಸಿಡಿಲು…

9 hours ago

ವೆದರ್‌ ಮಿರರ್‌ | 03.05.2024 |ಮೇ. 4ರಿಂದ ಮೋಡ| ಮೇ.6 ರಿಂದ ಅಲ್ಲಲ್ಲಿ ಮಳೆ ನಿರೀಕ್ಷೆ

04.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು, ದಕ್ಷಿಣ…

18 hours ago

ವೆದರ್‌ ಮಿರರ್‌ | 2.05.2024 | ಮೋಡದ ವಾತಾವರಣ | ಮತ್ತೆ ದೂರವಾದ ಮಳೆ…!| ಮತ್ತೆ ಹೆಚ್ಚಳವಾಗುತ್ತಿರುವ ತಾಪಮಾನ |

03.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…

2 days ago

ಬಿದಿರು ಕೃಷಿ | ತರಕಾರಿ ಕೃಷಿಯಾಗಿ ಬಿದಿರು

ಬಿದಿರು ಕೃಷಿಯ ಬಗ್ಗೆ ಈಗ ಸಾಕಷ್ಟು ಅಧ್ಯಯನ ನಡೆಯುತ್ತಿದೆ. ಈ ನಡುವೆ ಪುತ್ತೂರು…

2 days ago

ಅಡಿಕೆ ಹಳದಿ ಎಲೆರೋಗ – ಚುನಾವಣೆ

ಅಡಿಕೆ ಕೂಡಾ ಇಂದು ಬಹುಮುಖ್ಯವಾದ ಚುನಾವಣಾ ವಿಷಯ. ಹೀಗಾಗಿ ಅಡಿಕೆ ಹಳದಿ ಎಲೆರೋಗ…

2 days ago

ವಾರದ ಅತಿಥಿ | ಸುಬ್ರಾಯ ಚೊಕ್ಕಾಡಿ ಮಾತು

https://youtu.be/Vh1tYlOKav0?si=M4grG9euj6dXmkE2 ರೂರಲ್ ಮಿರರ್‌ ವಾರದ ಅತಿಥಿಯಾಗಿ ಹಿರಿಯ ಕವಿ ಸುಬ್ರಾಯ ಚೊಕ್ಕಾಡಿ ಅವರು…

2 days ago