ಪುತ್ತೂರು: ಭಾರತದ ಎಲ್ಲಾ ಪ್ರಜೆಗಳು ಒಟ್ಟುಗೂಡಿ ಸಂವಿಧಾನವನ್ನು ರಚನೆ ಮಾಡಿದ್ದಾರೆ. ಇದು ದೇಶ ಎಲ್ಲಾ ಪ್ರಜೆಗಳು ಒಂದೇ ಎಂಬ ಭಾವನೆಯನ್ನು ತೋರಿಸುತ್ತದೆ ಎಂದು ವಿವೇಕಾನಂದ ಕಾಲೇಜಿನ ಪ್ರಾಚಾರ್ಯ ಡಾ. ಪೀಟರ್ ವಿಲ್ಸನ್ ಪ್ರಭಾಕರ್ ಹೇಳಿದರು.
ಅವರು ಇಲ್ಲಿನ ವಿವೇಕಾನಂದ ಕಾಲೇಜಿನ ರಾಜ್ಯಶಾಸ್ತ್ರ ವಿಭಾಗದಿಂದ ಆಯೋಜಿಸಿದ್ದ ‘ಒಂದು ದೇಶ ಒಂದು ಸಂವಿಧಾನ’ ಎಂಬ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಸೋಮವಾರ ಮಾತನಾಡಿದರು. ಭಾರತದ ಸಂವಿಧಾನವು ದೇಶದ ಪ್ರಜೆಗಳ ಜಾತಿ, ಧರ್ಮದ ಒಂದು ಗ್ರಂಥವಾಗಿದೆ. ರಾಷ್ಟ್ರದ ಎಲ್ಲಾ ಪ್ರಜೆಗಳಿಗೆ ನಿಯಮ ಹೇಗೋ ಅದೇ ರೀತಿ ರಾಷ್ಟ್ರೀಯ ಸೇವಾ ಯೋಜನೆಯ ಮೂಲ ಉದ್ದೇಶವೂ ಆಗಿದೆ. ಎನ್ಎಸ್ಎಸ್ ಎಂಬುದು ಬೇರೆ ಬೇರೆಯ ಊರಿನವರನ್ನು ಒಂದೇ ಸೂರಿನಲ್ಲಿ ತಮ್ಮ ಜೀವನ ಶೈಲಿಯನ್ನು ಅರಿತುಕೊಳ್ಳುವಂತೆ ಮಾಡುವುದು ಇದರ ಮುಖ್ಯ ಉದ್ದೇಶವಾಗಿದೆ. ಹಾಗೆಯೇ ಭಾರತ ಸಂವಿಧಾನದ ಉದ್ದೇಶವೂ ಇದೇ ರೀತಿಯದ್ದಾಗಿದೆ ಎಂದು ನುಡಿದರು.
ವೇದಿಕೆಯಲ್ಲಿ ರಾಷ್ಟ್ರೀಯ ಸೇವಾ ಯೋಜನಾಧಿಕಾರಿಯಾದ ಶ್ರೀನಾಥ್ ಉಪಸ್ಥಿತರಿದ್ದರು.
ರಾಜ್ಯ ಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರೊ. ರಮೇಶ್ ಕೆ. ಸ್ವಾಗತಿಸಿದರು. ರಾಷ್ಟ್ರೀಯ ಸೇವಾ ಯೋಜನೆಯ ಸ್ವಯಂ ಸೇವಕಿಯರಾದ ಮೋನಿಷ ವಂದಿಸಿ, ಸುಷೀಯ ಕಾರ್ಯಕ್ರಮ ನಿರೂಪಿಸಿದರು.
“ಅರ್ಧ ಎಕರೆ ಇದ್ದರೂ ಕುಟುಂಬ ಜೀವನ ಮಾಡಬಹುದು” ಎನ್ನುವ ರೈತನ ಮಾತು, ಭೂಮಿ…
ಭಾರತ ಯುವ ದೇಶವಾಗಿದ್ದರೂ ಕೃಷಿಕರ ಸರಾಸರಿ ವಯಸ್ಸು 50–55 ವರ್ಷವಾಗಿದ್ದು, ಗ್ರಾಮೀಣ ಯುವಕರಲ್ಲಿ…
ಹಸು ಕರು ಹಾಕಿದ ಬಳಿಕ ಸಿಗುವ ಪ್ಲಾಸೆಂಟಾ ಅಥವಾ ‘ಮಾಸ’ವನ್ನು ತ್ಯಾಜ್ಯವಾಗಿ ಬಿಸಾಡದೆ,…
ಸೆ.8 ರಿಂದ 10ರವರೆಗೆ ಕರಾವಳಿಯಲ್ಲಿ ಮೋಡ ಹೆಚ್ಚಾಗಿ ಅಲ್ಲಲ್ಲಿ ತುಂತುರು ಅಥವಾ ಸಾಮಾನ್ಯ…
ಉಡುಪಿ ಜಿಲ್ಲೆಯ ಹೆಬ್ರಿ ಸಮೀಪ ಗೋಡಂಬಿ ಸಂಸ್ಕರಣಾ ತ್ಯಾಜ್ಯದಿಂದ ಜೈವಿಕ ಇಂಧನ ಮತ್ತು…
ಮಡಿಕೇರಿ ನಗರಸಭೆ ವ್ಯಾಪ್ತಿಯಲ್ಲಿ ಅಡಿಕೆ ತಟ್ಟೆ, ಪೇಪರ್ ಕಪ್, ಪೇಪರ್ ಪ್ಲೇಟ್ ಸೇರಿದಂತೆ…