Advertisement
ಸುದ್ದಿಗಳು

ವಿವೇಕಾನಂದ ಕಾಲೇಜಿನಲ್ಲಿ ನಾಯಕತ್ವ ತರಬೇತಿ ಶಿಬಿರ

Share

ಪುತ್ತೂರು: ವಿದ್ಯಾರ್ಥಿಗಳಲ್ಲಿ ನಾಯಕತ್ವಗುಣ ಮುಖ್ಯವಾದುದು. ಏಕೆಂದರೆ ಮುಂದಿನ ವೃತ್ತಿ ಜೀವನದಲ್ಲಿ ಯಾವ ಹುದ್ದೆಯನ್ನು ಪಡೆಯುತ್ತಾರೆ ಎಂಬುವುದನ್ನು ತಿಳಿಯದೆ ಇರುವುದರಿಂದ ಹಾಗೂ ಎಲ್ಲದಕ್ಕೂ ನಾಯಕತ್ವ ಅವಶ್ಯಕವಾದ್ದರಿಂದ ಪ್ರತಿಯೊಬ್ಬ ವಿದ್ಯಾರ್ಥಿಯು ನಾಯಕತ್ವಗುಣ ಬೆಳೆಸಿಕೊಳ್ಳಬೇಕು ಎಂದು ಎಂ. ಆರ್. ಪೈ ಫೌಂಡೇಶನ್‍ನ ತರಬೇತುದಾರ ರಾಜೀವ್ ಕುಮಾರ್ ಲಾವ್ ಹೇಳಿದರು.

ಅವರು  ವಿವೇಕಾನಂದ ಕಾಲೇಜಿನ ಉದ್ಯೋಗ ಮತ್ತು ತರಬೇತಿ ಘಟಕ ಹಾಗೂ ಐಕ್ಯುಎಸಿ ಘಟಕ ಸಹಯೋಗದಲ್ಲಿ ನಡೆದ ನಾಯಕತ್ವ ತರಬೇತಿ ಶಿಬಿರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿ  ಮಾತನಾಡಿದರು. ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣವನ್ನು ಬೆಳೆಸಬೇಕು ಮತ್ತು ಅವರಿಗೆ ಸರಿಯಾದ ಮಾರ್ಗದರ್ಶನವನ್ನು ನೀಡಬೇಕು. ಈ ಉದ್ದೇಶದಿಂದ ಎಂ. ಆರ್. ಪೈ ಪೌಂಡೇಶನ್ ಸ್ಥಾಪನೆಯಾಗಿದೆ ಮತ್ತು ವಿದ್ಯಾರ್ಥಿಗಳಿಗೆ ಪ್ರಬಂಧ, ನಾಯಕತ್ವವನ್ನು ರೂಪಿಸುವ ಶಿಬಿರಗಳನ್ನು ಮಾಡಲಾಗುತ್ತದೆ ಎಂದು ಹೇಳಿದರು. ನಂತರ ವಿದ್ಯಾರ್ಥಿಗಳೊಂದಿಗೆ ವಿಶೇಷ ಸಂವಾದ ಕಾರ್ಯಕ್ರಮವನ್ನು ನಡೆಸಿದರು.

ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಡಾ.ಪೀಟರ್ ವಿಲ್ಸನ್ ಪ್ರಭಾಕರ್ ಮಾತನಾಡಿ, ಸೇನೆಯಲ್ಲಿ ನಾವು ಉತ್ತಮ ನಾಯಕತ್ವ ಗುಣವನ್ನು ಕಾಣಬಹುದು. ಅಂತೆಯೇ ನಾವು ಕೂಡ ಸಮಾಜದಲ್ಲಿ, ಕುಟುಂಬದಲ್ಲಿ ಇನ್ನೊಬ್ಬರ ಜೊತೆ ಸರಿಯಾದ ರೀತಿಯಲ್ಲಿ ಮಾತನಾಡುವ ಮೂಲಕ ನಾಯಕತ್ವಗುಣವನ್ನು ಬೆಳೆಸಿಕೊಳ್ಳಬೇಕು. ಒಂದು ಉತ್ತಮ ನಾಯಕ ಮಾತ್ರ ಯಶಸ್ಸನ್ನು ಸಾಧಿಸಲು ಸಾಧ್ಯವಾಗುತ್ತದೆ. ನಾಯಕತ್ವಗುಣ ಇರುವ ವ್ಯಕ್ತಿಯು ಯಾವಾಗಲು ಸರಿಯಾದ ಯೋಚನೆಯನ್ನು ಮಾಡುತ್ತಾನೆ ಎಂದು ಅವರು ಹೇಳಿದರು.

ವೇದಿಕೆಯಲ್ಲಿ ಎಂ. ಆರ್.ಪೈ ಫೌಂಡೇಶನನ ತರಬೇತುದಾರ ವಿವೇಕ್ ದತ್ತಾತ್ರೇಯ ಪಾಟ್ಕಿ ಮತ್ತು ಕಾಲೇಜಿನ ಉದ್ಯೋಗ ಮತ್ತು ತರಬೇತಿ ಘಟಕದ ಸಂಯೋಜಕಿ ರೇಖಾ ಪಿ. ಉಪಸ್ಥಿತರಿದ್ದರು. ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥೆ ಅನಿತಾ ಕಾಮತ್ ಸ್ವಾಗತಿಸಿ, ಗಣಕÀ ವಿಜ್ಞಾನ ವಿಭಾಗದ ಉಪನ್ಯಾಸಕಿ ಜೀವಿತಾ ವಂದಿಸಿದರು. ವಾಣಿಜ್ಯ ವಿಭಾಗದ ಉಪನ್ಯಾಸಕಿ ಅಕ್ಷತಾ ಕೆ. ನಿರೂಪಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬೇಸಿಗೆಯಲ್ಲಿ ನಿಮ್ಮ ಕಿಡ್ನಿಯನ್ನು ಕಾಪಾಡಿ..! ಮೂತ್ರಪಿಂಡದ ಕಲ್ಲು ಸಮಸ್ಯೆ ಏಕೆ ಹೆಚ್ಚುತ್ತಿದೆ?

ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…

4 days ago

ಮಳೆಗಾಲ ಆರಂಭ- ಜೂನ್‌ 1ರಿಂದ ರಸ್ತೆ, ಗುಡ್ಡ, ಮಣ್ಣು ಅಗೆತ ಕಾಮಗಾರಿಗೆ ನಿರ್ಬಂಧ – ನಗರಪಾಲಿಕೆ ಎಚ್ಚರಿಕೆ

ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್‌ 1ರಿಂದ ಸೆಪ್ಟೆಂಬರ್‌ 30ರವರೆಗೆ ರಸ್ತೆ, ಗುಡ್ಡ…

4 days ago

ಅಸ್ಸಾಂನಲ್ಲಿ ಭಾರೀ ಅಕ್ರಮ ಅಡಿಕೆ ವಶ : ಡಿಆರ್‌ಐ ದಾಳಿ, 60 ಸಾವಿರ ಕೆಜಿ ವಿದೇಶಿ ಅಡಿಕೆ ಜಪ್ತಿ

ಈಶಾನ್ಯ ಭಾರತದಲ್ಲಿ ಡಿಆರ್‌ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…

4 days ago

“ಒಂದು ದಿನ ಅಡಿಕೆ ಮಾರುಕಟ್ಟೆಗೆ ‘ಏಲಿಯನ್ಸ್’ ಬಂದರೆ?” ರೈತನ ಭವಿಷ್ಯದ ಬಗ್ಗೆ ಎಚ್ಚರಿಸುವ ಕಲ್ಪಿತ ಕಥೆ

ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…

5 days ago