ಪುತ್ತೂರು: ವಿದ್ಯಾರ್ಥಿಗಳಲ್ಲಿ ನಾಯಕತ್ವಗುಣ ಮುಖ್ಯವಾದುದು. ಏಕೆಂದರೆ ಮುಂದಿನ ವೃತ್ತಿ ಜೀವನದಲ್ಲಿ ಯಾವ ಹುದ್ದೆಯನ್ನು ಪಡೆಯುತ್ತಾರೆ ಎಂಬುವುದನ್ನು ತಿಳಿಯದೆ ಇರುವುದರಿಂದ ಹಾಗೂ ಎಲ್ಲದಕ್ಕೂ ನಾಯಕತ್ವ ಅವಶ್ಯಕವಾದ್ದರಿಂದ ಪ್ರತಿಯೊಬ್ಬ ವಿದ್ಯಾರ್ಥಿಯು ನಾಯಕತ್ವಗುಣ ಬೆಳೆಸಿಕೊಳ್ಳಬೇಕು ಎಂದು ಎಂ. ಆರ್. ಪೈ ಫೌಂಡೇಶನ್ನ ತರಬೇತುದಾರ ರಾಜೀವ್ ಕುಮಾರ್ ಲಾವ್ ಹೇಳಿದರು.
ಅವರು ವಿವೇಕಾನಂದ ಕಾಲೇಜಿನ ಉದ್ಯೋಗ ಮತ್ತು ತರಬೇತಿ ಘಟಕ ಹಾಗೂ ಐಕ್ಯುಎಸಿ ಘಟಕ ಸಹಯೋಗದಲ್ಲಿ ನಡೆದ ನಾಯಕತ್ವ ತರಬೇತಿ ಶಿಬಿರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿ ಮಾತನಾಡಿದರು. ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣವನ್ನು ಬೆಳೆಸಬೇಕು ಮತ್ತು ಅವರಿಗೆ ಸರಿಯಾದ ಮಾರ್ಗದರ್ಶನವನ್ನು ನೀಡಬೇಕು. ಈ ಉದ್ದೇಶದಿಂದ ಎಂ. ಆರ್. ಪೈ ಪೌಂಡೇಶನ್ ಸ್ಥಾಪನೆಯಾಗಿದೆ ಮತ್ತು ವಿದ್ಯಾರ್ಥಿಗಳಿಗೆ ಪ್ರಬಂಧ, ನಾಯಕತ್ವವನ್ನು ರೂಪಿಸುವ ಶಿಬಿರಗಳನ್ನು ಮಾಡಲಾಗುತ್ತದೆ ಎಂದು ಹೇಳಿದರು. ನಂತರ ವಿದ್ಯಾರ್ಥಿಗಳೊಂದಿಗೆ ವಿಶೇಷ ಸಂವಾದ ಕಾರ್ಯಕ್ರಮವನ್ನು ನಡೆಸಿದರು.
ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಡಾ.ಪೀಟರ್ ವಿಲ್ಸನ್ ಪ್ರಭಾಕರ್ ಮಾತನಾಡಿ, ಸೇನೆಯಲ್ಲಿ ನಾವು ಉತ್ತಮ ನಾಯಕತ್ವ ಗುಣವನ್ನು ಕಾಣಬಹುದು. ಅಂತೆಯೇ ನಾವು ಕೂಡ ಸಮಾಜದಲ್ಲಿ, ಕುಟುಂಬದಲ್ಲಿ ಇನ್ನೊಬ್ಬರ ಜೊತೆ ಸರಿಯಾದ ರೀತಿಯಲ್ಲಿ ಮಾತನಾಡುವ ಮೂಲಕ ನಾಯಕತ್ವಗುಣವನ್ನು ಬೆಳೆಸಿಕೊಳ್ಳಬೇಕು. ಒಂದು ಉತ್ತಮ ನಾಯಕ ಮಾತ್ರ ಯಶಸ್ಸನ್ನು ಸಾಧಿಸಲು ಸಾಧ್ಯವಾಗುತ್ತದೆ. ನಾಯಕತ್ವಗುಣ ಇರುವ ವ್ಯಕ್ತಿಯು ಯಾವಾಗಲು ಸರಿಯಾದ ಯೋಚನೆಯನ್ನು ಮಾಡುತ್ತಾನೆ ಎಂದು ಅವರು ಹೇಳಿದರು.
ವೇದಿಕೆಯಲ್ಲಿ ಎಂ. ಆರ್.ಪೈ ಫೌಂಡೇಶನನ ತರಬೇತುದಾರ ವಿವೇಕ್ ದತ್ತಾತ್ರೇಯ ಪಾಟ್ಕಿ ಮತ್ತು ಕಾಲೇಜಿನ ಉದ್ಯೋಗ ಮತ್ತು ತರಬೇತಿ ಘಟಕದ ಸಂಯೋಜಕಿ ರೇಖಾ ಪಿ. ಉಪಸ್ಥಿತರಿದ್ದರು. ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥೆ ಅನಿತಾ ಕಾಮತ್ ಸ್ವಾಗತಿಸಿ, ಗಣಕÀ ವಿಜ್ಞಾನ ವಿಭಾಗದ ಉಪನ್ಯಾಸಕಿ ಜೀವಿತಾ ವಂದಿಸಿದರು. ವಾಣಿಜ್ಯ ವಿಭಾಗದ ಉಪನ್ಯಾಸಕಿ ಅಕ್ಷತಾ ಕೆ. ನಿರೂಪಿಸಿದರು.
ಮುಂಗಾರು ಹಂಗಾಮಿನ ಭತ್ತ ಸೇರಿದಂತೆ ಬೆಳೆಗಳಿಗೆ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ…
ಕರಾವಳಿ ಕರ್ನಾಟಕದಲ್ಲಿ ಆ.23ರಿಂದ 25ರವರೆಗೆ ಮಳೆಯ ಪ್ರಮಾಣ ಸ್ವಲ್ಪ ಹೆಚ್ಚಾಗುವ ಸಾಧ್ಯತೆಯಿದ್ದು, ಆ.26ರವರೆಗೂ…
ಆಗಸ್ಟ್ 24ರಿಂದ ಒಬ್ಬ ವ್ಯಕ್ತಿಯ ಹೆಸರಿನಲ್ಲಿ 9 ಮೊಬೈಲ್ ಸಂಪರ್ಕಗಳ ಮಿತಿಯನ್ನು ಮೀರಿ…
ಭಾರತದ ತೆಂಗು ವಲಯ ಈಗ ಕಾಯಿ ಮಾರಾಟದಿಂದ ಮೌಲ್ಯವರ್ಧಿತ ಉತ್ಪನ್ನಗಳ ಜಾಗತಿಕ ಮಾರುಕಟ್ಟೆಯತ್ತ…
ಜಾಗತಿಕ ತಾಪಮಾನ ಏರಿಕೆಯಿಂದ ಭಾರತದ ಮಳೆಗಾಲದಲ್ಲೂ ಹೆಚ್ಚಿನ ತೇವಾಂಶದೊಂದಿಗೆ ಅಪಾಯಕಾರಿ ಬಿಸಿ ಒತ್ತಡ…
ಡ್ರ್ಯಾಗನ್ ಫ್ರೂಟ್ಗೆ ಜಾಗತಿಕ ಬೇಡಿಕೆ ಹೆಚ್ಚುತ್ತಿದ್ದರೂ ದಕ್ಷಿಣ ಆಫ್ರಿಕಾದಲ್ಲಿ ಬೆಳೆಗಾರರು ಮಾರುಕಟ್ಟೆ, ಬೆಲೆ,…