Advertisement
ಕಾರ್ಯಕ್ರಮಗಳು

ವಿವೇಕಾನಂದ ಕಾಲೇಜಿನಲ್ಲಿ ಬೆಂಕಿ ಅವಘಡ: ಮುಂಜಾಗ್ರತಾ ಕ್ರಮಗಳು, ಸುರಕ್ಷತಾ ವಿಧಾನಗಳ ಪ್ರಾತ್ಯಕ್ಷಿಕೆ

Share

ಪುತ್ತೂರು: ಇಲ್ಲಿನ ವಿವೇಕಾನಂದ ಕಾಲೇಜಿನ ವಿಜ್ಞಾನ ಸಂಘದ ಆಶ್ರಯದಲ್ಲಿ ಬೆಂಕಿ ಅಪಘಾತ ತಡೆಯುವ ನಿಟ್ಟಿನಲ್ಲಿ ಮುಂಜಾಗ್ರತಾ ಕ್ರಮಗಳು ಮತ್ತು ಸುರಕ್ಷತಾ ವಿಧಾನಗಳ ಕುರಿತು ಗುರುವಾರ ಕಾರ್ಯಾಗಾರ ನಡೆಯಿತು.

ಮಂಗಳೂರಿನ ಆಲ್ಫಾ ಟೆಕ್ನಿಕಲ್ ಟ್ರೈನಿಂಗ್ ಆ್ಯಂಡ್ ಡೆವಲಪ್‍ಮೆಂಟ್ ಸೆಂಟರ್‍ನ ವ್ಯವಸ್ಥಾಪಕ ಪಾಲುದಾರ ರಾಜೇಶ್ ಶೆಟ್ಟಿ ಬೆಂಕಿ ಅವಘಡಗಳು ಸಂಭವಿಸಿದಾಗ ಸ್ವಯಂ ರಕ್ಷಣೆಯ ವಿಧಾನಗಳ ಬಗ್ಗೆ ಮಾತನಾಡಿದರು. ಬೆಂಕಿಯ ಮೂಲವನ್ನು ಹೊಂದಿಕೊಂಡು ವಿವಿಧ ರೀತಿಯ ಬೆಂಕಿ ಆರಿಸುವ ವಿಧಾನಗಳ ಬಗ್ಗೆ ತಿಳಿಸಿದರು. ಬೆಂಕಿ ಅಪಘಾತಗಳನ್ನು ತಡೆಗಟ್ಟುವ ವಿಧಾನಗಳು, ಅಪಘಾತ ನಡೆದ ನಂತರ ಲಭ್ಯವಿರುವ ವ್ಯವಸ್ಥೆಯಲ್ಲಿ ಹೇಗೆ ಬೆಂಕಿಯ ಪರಿಣಾಮಗಳನ್ನು ಕನಿಷ್ಟ ಮಟ್ಟಕ್ಕೆ ತರಬಹುದು ಎಂಬ ಬಗ್ಗೆ ಮಾಹಿತಿ ನೀಡಿದರು. ಬೆಂಕಿ ಆರಿಸುವ ವಿವಿಧ ರೀತಿಯ ಉಪಕರಣಗಳು ಮತ್ತು ಅವುಗಳನ್ನು ಉಪಯೋಗಿಸುವ ಬಗ್ಗೆ ಹಾಗೂ ಬೆಂಕಿ ಆರಿಸುವ ಉಪಕರಣಗಳ ತಯಾರಿ, ರಿಪೇರಿ ಮತ್ತು ಸಂಬಂಧಿಸಿದ ಕ್ಷೇತ್ರಗಳಲ್ಲಿ ವಿದ್ಯಾರ್ಥಿಗಳಿಗೆ ಲಭ್ಯವಿರುವ ಉದ್ಯೋಗಾವಕಾಶಗಳ ಬಗ್ಗೆ ಮಾಹಿತಿ ನೀಡಿದರು.

ಮಂಗಳೂರಿನ ಆಲ್ಫಾ ಟೆಕ್ನಿಕಲ್ ಟ್ರೈನಿಂಗ್ ಆ್ಯಂಡ್ ಡೆವಲಪ್‍ಮೆಂಟ್ ಸೆಂಟರ್‍ನ ನಿರ್ದೇಶಕ ಕೃಷ್ಣ ಶ್ರೀನಿವಾಸ ಬಾಬು ಮತ್ತು ಅವರ ತಂಡದವರು ಬೆಂಕಿ ಅವಘಡ ಸಂಭವಿಸಿದಾಗ ಬೆಂಕಿ ಆರಿಸುವ ವಿಧಾನಗಳ ಪ್ರಾತ್ಯಕ್ಷಿಕೆಯನ್ನು ನಡೆಸಿಕೊಟ್ಟರು. ಅನೇಕ ವಿದ್ಯಾರ್ಥಿಗಳು ಇದರ ಸ್ವಯಂ ಅನುಭವ ಪಡೆದುಕೊಂಡರು.

ರಸಾಯನ ಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರೊ. ಕೃಷ್ಣ ಕಾರಂತ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ವಿಜ್ಞಾನ ಸಂಘದ ಸಂಯೋಜಕ ಪ್ರೊ. ಶಿವಪ್ರಸಾದ್ ಸ್ವಾಗತಿಸಿ, ವಂದಿಸಿದರು. ರಸಾಯನಶಾಸ್ತ್ರ ವಿಭಾಗದ ಉಪನ್ಯಾಸಕರು ಮತ್ತು ಬಿಎಸ್ಸಿ, ಎಂಎಸ್ಸಿ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 28-03-2026 | ಎಪ್ರಿಲ್ 4 ರವರೆಗೆ ಕರಾವಳಿ–ಮಲೆನಾಡು ಪ್ರದೇಶಗಳಿಗೆ ಭಾರಿ ಮಳೆ ಸೂಚನೆ..!

ಕರ್ನಾಟಕದಲ್ಲಿ ಗುಡುಗು ಸಹಿತ ಮಳೆ ಮುಂದುವರಿಯಲಿದೆ, ಕರಾವಳಿ ಮತ್ತು ಮಲೆನಾಡಿನಲ್ಲಿ ಏಪ್ರಿಲ್ 4ರವರೆಗೆ…

12 hours ago

ಬೀದಿ ನಾಯಿಗಳ ಸಮಸ್ಯೆ | 27,481 ನಾಯಿ ಕಡಿತ ಪ್ರಕರಣಗಳು ವರದಿ..!

ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಗಣನೀಯವಾಗಿ ಹೆಚ್ಚಳವಾಗಿದೆ. ಈ ಹಿನ್ನೆಲೆ ಪ್ರತಿಯೊಂದು ತಾಲೂಕಿನಲ್ಲಿ…

15 hours ago

ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು! ಮಂಗಳೂರಿನಲ್ಲಿ ಕಠಿಣ ಎಚ್ಚರಿಕೆ

ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು ಮಾಡಲು ಪೊಲೀಸ್…

19 hours ago

ಹವಾಮಾನ ವರದಿ | 27-03-2026 | ಮಾರ್ಚ್ 28 ರಿಂದ ಮಳೆ ಹೆಚ್ಚಳ ಸೂಚನೆ | ರಾಜ್ಯಾದ್ಯಂತ ಗುಡುಗು ಸಹಿತ ಮಳೆಯ ಮುನ್ಸೂಚನೆ

ಮಾರ್ಚ್ 28ರಿಂದ ಕರ್ನಾಟಕದಲ್ಲಿ ಮಳೆಯ ಪ್ರಮಾಣ ಹೆಚ್ಚಾಗುವ ಮುನ್ಸೂಚನೆ ನೀಡಲಾಗಿದೆ. ಕರಾವಳಿ ಮತ್ತು…

2 days ago

ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆ | ಬಿಸಿಲ ಬೇಗೆಯಿಂದ ತಪ್ಪಿಸಿಕೊಳ್ಳಲು ಆರೋಗ್ಯಾಧಿಕಾರಿ ಎಚ್ಚರಿಕೆ

ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…

2 days ago